ದಿನದ ಸುದ್ದಿ
ಸಿಲ್ವರ್ ಸ್ಟಾರ್ ಇಂಡಿಯಾ ಪ್ರೆಸೆಂಟ್ಸ್ ಮಿಸ್ಟರ್ ಅಂಡ್ ಮಿಸ್ ಇಂಡಿಯಾ ಸೂಪರ್ ಮಾಡೆಲ್-2019 ಸೀಸನ್-8

ಸುದ್ದಿದಿನ, ಬೆಂಗಳೂರು: ಕಳೆದ ಹತ್ತು ವರ್ಷಗಳಿಂದ ಸಿಲ್ವರ್ ಸ್ಟಾರ್ ಇಂಡಿಯಾ ಪ್ರತಿ ವರ್ಷವೂ ಫ್ಯಾಷನ್ ಲೋಕಕ್ಕೆ ತಮ್ಮದೇ ಆದ ಕೊಡುಗೆ ನೀಡಿದೆ. ಈ ಬಾರಿಯೂ ನವಯುಗದ 2019ರ ಮೊದಲನೇ ಬೆಂಗಳೂರಿನ ಫ್ಯಾಷನ್ ಶೋ ಇದಾಗಿದ್ದೂ ಇದರಲ್ಲಿ 16 ಯುವತಿಯರು 13 ಯುವಕರು ಸ್ಪರ್ಧಿಯಾಗಿದ್ದಾರೆ.
ಈ 29ರಲ್ಲಿ ಸ್ಪರ್ಧಿಗಳಲ್ಲಿ ಯುವತಿಯರ ತಂಡದಿಂದ 3 ಹಾಗೂ ಯುವಕರ ತಂಡದಿಂದ 3 ಸೂಪರ್ ಮಾಡೆಲ್ಗಳು ತಮ್ಮ ಮುಡಿಗೆ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಇದರ ಜೊತೆ ಸ್ಯಾಂಡಲ್ವುಡ್ನ ಹೆಸರಾಂತ ನಾಯಕ ಹಾಗೂ ನಾಯಕಿಯರು ಪಾಲ್ಗೊಂಡಿದ್ದರು.
ಪಾಲ್ಗೊಂಡಿದ್ದ ಚಲನಚಿತ್ರರಂಗದ ನಟ ನಟಿಯರಿವರು : ನಟ ಯಶಸ್ ಸೂರ್ಯ, ನಟಿ ಸಾಕ್ಷಿ, ನಟ ಸಂಚಾರಿ ವಿಜಯ್, ನಟ ಧನು ಗೌಡ, ನಟಿ ನಿಮಿಕಾ ರತ್ನಾಕರ್, ಶುಭಾ ರಕ್ಷಾ, ನಿರ್ದೇಶಕಿ ರಿಶಿಕಾ ಶರ್ಮ, ನಟ ನಿಹಾಲ್ , ಕಲಾವಿದ ರವಿ ರೆಡ್ಡಿ ಹಾಗೂ ರಾಣಿ ರಿಯಾ, ಸೇರಿದಂತೆ ಮುಂತಾದವರು ಭಾಗವಹಿಸಿದರು.
ಈ ಬಾರಿಯ ಫ್ಯಾಷನ್ ಶೋ ಗೋಕುಲ ಎಕ್ಸ್ಟೆಕ್ಷನ್ನಲ್ಲಿರುವ ಗೋಕುಲ ಗ್ರ್ಯಾಂಡ್ ಹೋಟೆಲ್ ಮತ್ತಿಕೆರೆ(ಯಶವಂತಪುರ) ಆಯೋಜಿಸಲಾಗಿತ್ತು. ಸಂಜೆ 6 ಗಂಟೆಯಿಂದ ಪ್ರಾರಂಭವಾದ ಫ್ಯಾಷನ್ ಶೋ ಅದ್ಧೂರಿಯಾಗಿ ಮೆರಗು ಮೂಡಿತ್ತು. ಇದರ ಬಗ್ಗೆ ಮಾತನಾಡಿದ ಆಯೋಜಕ ರವಿ “ಸತತವಾಗಿ ಹತ್ತು ವರ್ಷಗಳಿಂದ ಸಿಲ್ವರ್ ಸ್ಟಾರ್ಸ್ ಸಂಸ್ಥೆಯೂ ಚಿತ್ರರಂಗಕ್ಕೆ ಹಾಗೂ ಫ್ಯಾಷನ್ ಲೋಕಕ್ಕೆ ತಮ್ಮದೇ ಆದ ಕೊಡುಗೆ ನೀಡಿದ ಹೆಗ್ಗಳಿಕೆಗೆ ಪಾತ್ರವಾಗಿದೆ. 2019ರ ಮೊದಲ ಫ್ಯಾಷನ್ ಶೋ ಇದಾಗಿದ್ದೂ, ವರ್ಷಾಂತ್ಯದ ಒಳಗೆ ನಾಲ್ಕಕ್ಕೂ ಅಧಿಕ ಫ್ಯಾಷನ್ ಶೋಗಳನ್ನು ಆಯೋಜಿಸಲಿದ್ದೇವೆ ನಮ್ಮಲ್ಲಿ ಗೆದ್ದಂತಹ ಮಾಡೆಲ್ಗಳಿಗೆ ಸಿನಿಮಾ ಮಾಡುವ ಯೋಜನೆಯನ್ನು ಹೊಂದಿದ್ದೇವೆ.
ಯುವತಿಯರು
ವಿನ್ನರ್: ಅಸ್ಮಿತಾ ಸಿಂಗ್-ಮಿಸ್ ಇಂಡಿಯಾ ಸೂಪರ್ ಮಾಡೆಲ್-2019 ಆಗಿ ಕಿರೀಟವನ್ನು ಮುಡಿಗೇರಿಸಿಕೊಂಡರು.
ರಿಮ್ಜಿಂಮ್ ಗುಪ್ತ- ಫಸ್ಟ್ ರನ್ನರ್ ಅಪ್
ಸಪ್ನ ಸಿಂಗ್ -ಸೆಕೆಂಡ್ ರನ್ನರ್ ಅಪ್
ಯುವಕರು
ಜಗದೀಶ್-ಮಿಸ್ಟರ್ ಇಂಡಿಯಾ ಸೂಪರ್ ಮಾಡೆಲ್-2019 ಆಗಿ ಕಿರೀಟವನ್ನು ಮುಡಿಗೇರಿಸಿಕೊಂಡರು.
ಅಭಿಷೇಕ್ -ಫಸ್ಟ್ ರನ್ನರ್ ಅಪ್
ವಿಕ್ರಮ್-ಸೆಕೆಂಡ್ ರನ್ನರ್ ಅಪ್
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:9035313303
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
