ದಿನದ ಸುದ್ದಿ
ನಡೆದಾಡುವ ದೇವರು ನನ್ನ ಪಾಲಿಗೆ ‘ನಡೆದಾಡುತ್ತಿದ್ದ ಬಸವಣ್ಣ’ : ಸಿದ್ದರಾಮಯ್ಯ

ಸುದ್ದಿದಿನ ಡೆಸ್ಕ್ : ಡಾ.ಶ್ರೀ ಶಿವಕುಮಾರ ಸ್ವಾಮಿಗಳ ಲಿಂಗೈಕ್ಯದಿಂದ ನಾನು ಆಘಾತಕ್ಕೀಡಾಗಿದ್ದೇನೆ. ಇತ್ತೀಚಿನ ಕೆಲವು ದಿನಗಳಲ್ಲಿ ಅವರ ಆರೋಗ್ಯದಲ್ಲಿ ನಡೆಯುತ್ತಿದ್ದ ಏರುಪೇರು ನಮ್ಮೆಲ್ಲರನ್ನೂ ಆತಂಕಕ್ಕೀಡುಮಾಡಿತ್ತು. ಇಂತಹದ್ದೊಂದು ದಿನ ಎದುರಾಗಬಹುದೆಂಬ ನಮ್ಮ ಭಯ ನಿಜವಾಗಿದೆ. ಸಾಧನೆಯ ಮೂಲಕ ಲೋಕವನ್ನೇ ಗೆದ್ದಿರುವ ಸ್ವಾಮಿಗಳು ಕೊನೆಗೂ ಸಾವನ್ನು ಗೆಲ್ಲಲಾಗದೆ ಶರಣಾಗಿ ನಮ್ಮನ್ನು ಅನಾಥರಾಗಿಸಿದ್ದಾರೆ.
ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ತುಂಬಿದ ಹೃದಯದಿಂದ ಹಾರೈಸುತ್ತೇನೆ. ದು:ಖದಲ್ಲಿರುವ ಸಮಸ್ತ ಭಕ್ತಾಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ನಾವು ಬಸವಣ್ಣನವರನ್ನು ಕಣ್ಣಾರೆ ನೋಡಿಲ್ಲ, ನಾನು ಡಾ.ಶಿವಕುಮಾರ ಸ್ವಾಮೀಜಿಗಳಲ್ಲಿ ಬಸವಣ್ಣನನ್ನು ಕಾಣುತ್ತಿದ್ದೆ. ಅವರನ್ನು ‘’ನಡೆದಾಡುವ ದೇವರು’’ ಎನ್ನುತ್ತಾರೆ. ನನ್ನ ಪಾಲಿಗೆ ಅವರು ‘’ನಡೆದಾಡುತ್ತಿದ್ದ ಬಸವಣ್ಣ’’ ಆಗಿದ್ದರು. ಅಂತಹದ್ದೊಂದು ಆದರ್ಶ ಬದುಕನ್ನು ಅವರು ಬದುಕಿ ತೋರಿಸಿ ನಮಗೆ ಮಾದರಿಯಾಗಿ ಬಿಟ್ಟು ಹೋಗಿದ್ದಾರೆ. ಆ ದಾರಿಯಲ್ಲಿ ನಡೆಯುವುದೇ ಸ್ವಾಮೀಜಿಗಳಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿಯಾಗಿದೆ.
ವೈಯಕ್ತಿಕ ಮತ್ತು ರಾಜಕೀಯ ಜೀವನದಲ್ಲಿ ಬಸವಣ್ಣ ನನ್ನ ನಾಯಕ. ಇದಕ್ಕಾಗಿಯೇ ಬಸವ ಜಯಂತಿಯಂದೇ ನಾನು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದವನು. ಸ್ವಾಮೀಜಿಗಳು ಬಸವಣ್ಣನವರ ತತ್ವಕ್ಕೆ ನೂರಕ್ಕೆ ನೂರರಷ್ಟು ಬದ್ಧರಾಗಿ ಬದುಕಿದವರು. ಹಸಿದವರಿಗೆ ಅನ್ನ, ಮಕ್ಕಳಿಗೆ ಶಿಕ್ಷಣ ಮತ್ತು ವಸತಿ ಕಲ್ಪಿಸಲು ತಮ್ಮ ಜೀವವನ್ನೇ ತೇದ ಸ್ವಾಮೀಜಿಯವರ ಬದುಕು ಮತ್ತು ಸಾಧನೆ ನಮಗೆಲ್ಲ ಮಾದರಿ.
ಮುಖ್ಯಮಂತ್ರಿಯಾಗಿದ್ದಾಗ ನಾನು ಅನುಷ್ಠಾನಗೊಳಿಸಿದ್ದ ಅನ್ನಭಾಗ್ಯ, ಕ್ಷೀರಭಾಗ್ಯ, ವಿದ್ಯಾಸಿರಿ ಮೊದಲಾದ ಅನೇಕ ಕಾರ್ಯಕ್ರಮಗಳಿಗೆ ಸ್ವಾಮೀಜಿಯವರ ಸೇವಾ ಕಾರ್ಯಕ್ರಮಗಳೂ ಕೂಡಾ ಸ್ವೂರ್ತಿಯಾಗಿತ್ತು.
ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಅನನ್ಯವಾದುದು. ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೆ ಅನೇಕ ಸಂಸ್ಥೆಗಳನ್ನು ಕಟ್ಟಿ ಮುನ್ನಡೆಸಿದ್ದ ಸ್ವಾಮೀಜಿಗಳು ಕೊನೆಯ ವರೆಗೂ ಶಿಕ್ಷಣವನ್ನು ಸೇವೆಯೆಂದೇ ತಿಳಿದಿದ್ದರೆ ಹೊರತು ಅದನ್ನು ವ್ಯಾಪಾರ-ಉದ್ಯಮ ಮಾಡಲು ಹೋಗಲೇ ಇಲ್ಲ. ಶಿಕ್ಷಣ ಕ್ಷೇತ್ರವೇ ಉದ್ಯಮವಾಗುತ್ತಿರುವ ಹಿನ್ನೆಲೆಯಲ್ಲಿ ಸ್ವಾಮೀಜಿಯವರ ಈ ಸಂದೇಶವನ್ನು ನಾವೆಲ್ಲರೂ ಅರಿತುಕೊಳ್ಳಬೇಕಾಗಿದೆ ಮತ್ತು ಶಿಕ್ಷಣೋದ್ಯಮಿಗಳು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ.
ಉದ್ಧಾನ ಸ್ವಾಮೀಜಿಗಳಿಂದ ಪ್ರಾರಂಭವಾಗಿದ್ದ ಅನ್ನ-ಅರಿವುಗಳ ದಾಸೋಹವನ್ನು ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳು ಸರ್ವರನ್ನೂ ಒಳಗೊಂಡ ದಾಸೋಹವನ್ನಾಗಿ ವಿಸ್ತರಿಸಿದರು. ಸ್ವಾಮೀಜಿಗಳ ತುಮಕೂರಿನ ಸಿದ್ದಗಂಗಾ ಮಠ ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳ ನೇತೃತ್ವದಲ್ಲಿ ಒಂದು ವಿಶ್ವವಿದ್ಯಾಲಯವೇ ಯಾಕೆ, ಒಂದು ಸರ್ಕಾರವೇ ಮಾಡಬೇಕಾಗಿರುವ ಕೆಲಸವನ್ನು ಮಾಡುತ್ತಾ ಬಂದಿದೆ.
ಅಲ್ಲಿನ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದು ವಿವಿಧ ಕ್ಷೇತ್ರಗಳಲ್ಲಿ ಉನ್ನತ ಹುದ್ದೆಗಳಲ್ಲಿರುವವರು ಇಂದು ವಿಶ್ವದಾದ್ಯಂತ ಇದ್ದಾರೆ. ಸ್ವಾಮೀಜಿಗಳು ಎಂದೂ ಹೆಚ್ಚು ಮಾತನಾಡಿದವರಲ್ಲ, ಮಾತಿಗಿಂತ ಮೌನದಲ್ಲಿಯೇ ಸಾಧನೆ ಮಾಡಿದವರು. ಅವರು ನುಡಿದಂತೆಯೇ ನಡೆದವರು. ಕಾಯಕಪ್ರಜ್ಞೆಯನ್ನು ಬಾಳಿ ಬದುಕಿದವರು. ಕೊನೆಗೂ ಡಾ.ಶ್ರೀ ಶಿವಕುಮಾರ ಸ್ವಾಮೀಜಿಯವರಿಗೆ ಅವರೇ ಸಾಟಿ ಹೊರತು ಆ ಸ್ಥಾನದಲ್ಲಿ ಭವಿಷ್ಯದಲ್ಲಿಯೂ ಇನ್ನೊಬ್ಬರನ್ನು ಊಹಿಸುವುದು ಕಷ್ಟ.
ಸ್ವಾಮೀಜಿಗಳ ಲಿಂಗೈಕದಿಂದ ರಾಜ್ಯ,ದೇಶಕ್ಕೆ ಮಾತ್ರವಲ್ಲ ಇಡೀ ಮನುಕುಲಕ್ಕೆ ಆಗಿರುವ ನಷ್ಟವನ್ನು ಶಬ್ದಗಳಿಂದ ಹೇಳಿಕೊಳ್ಳಲು ಸಾಧ್ಯ ಇಲ್ಲ. ನಮ್ಮಿಂದ ಮರೆಯಾದ ಸ್ವಾಮೀಜಿಗಳು ಒಂದು ದೊಡ್ಡ ನಿರ್ವಾತವನ್ನು ಬಿಟ್ಟು ಹೋಗಿದ್ದಾರೆ, ಅದನ್ನು ತುಂಬಲು ಬಹುಷ: ಮುಂದೆಯೂ ಯಾರಿಗೂ ಸಾಧ್ಯವಾಗಲಾರದು. ಸ್ವಾಮೀಜಿಯವರಿಗೆ ದೇಶದ ಅತ್ಯುನ್ನತ ಗೌರವವಾದ ಭಾರತ ರತ್ನ ನೀಡಬೇಕೆಂದು ನಾನು ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದೆ. ಸ್ವಾಮೀಜಿಗಳು ಇಂತಹ ಪ್ರಶಸ್ತಿ-ಪಾರಿತೋಷಕಗಳನ್ನು ಮೀರಿ ಬದುಕಿದವರು. ಆದರೆ ಆ ಗೌರವ ಸ್ವಾಮೀಜಿಯವರಿಗೆ ಸಂದಿದ್ದರೆ ಆ ಪ್ರಶಸ್ತಿಯ ಗೌರವ ಹೆಚ್ಚಾಗುತ್ತಿತ್ತು.
https://www.facebook.com/595111904167609/posts/807113292967468/
ಸುದ್ದಿದಿನ.ಕಾಂ|ವಾಟ್ಸಾಪ್| 9986715401

ದಿನದ ಸುದ್ದಿ
ದಾವಣಗೆರೆ | ತುಕ್ಕು ಹಿಡಿಯುತ್ತಿವೆ ವಾಹನಗಳು, ಪರಿಕರಗಳು : ಮಹಾನಗರ ಪಾಲಿಕೆ ವಿರುದ್ಧ ಎಸ್. ಮಂಜುನಾಥ್ ಗಡಿಗುಡಾಳ್ ಆಕ್ರೋಶ

ಸುದ್ದಿದಿನ,ದಾವಣಗೆರೆ: ಸರ್ಕಾರದ ಅನುದಾನದಿಂದ ಬಂದಿರುವ ಕೋಟ್ಯಂತರ ರೂಪಾಯಿ ವೆಚ್ಚದ ವಾಹನಗಳು ಹಾಗೂ ಪರಿಕರಗಳು ತುಕ್ಕು ಹಿಡಿಯುತ್ತಿದ್ದು, ಮಹಾನಗರ ಪಾಲಿಕೆ ಆಡಳಿತ ವರ್ಗದ ನಿರ್ಲಕ್ಷ್ಯಕ್ಕೆ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಹಾಗೂ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಲೆಕ್ಟ್ರಿಕಲ್ ಆಟೋಗಳು, ಮುಕ್ತಿವಾಹಿನಿ, ಮಿನಿ ಹಿಟಾಚಿ ಕೊಂಡೊಯ್ಯುವ ಲಾರಿ, ಜಟ್ಟಿಂಗ್ ಸ್ಪ್ರೇ, ಕಸ ತುಂಬುವ ಕಾಂಪ್ಯಾಕ್ಟರ್, ತಳ್ಳು ಗಾಡಿಗಳು, ಕಾರ್ಡನ್ ಡಸ್ಟ್ ಸೇರಿದಂತೆ ಪರಿಕರಗಳು ಮಹಾನಗರ ಪಾಲಿಕೆಗೆ ಬಂದಿವೆ. ಆದರೆ ಬಳಕೆ ಮಾಡುವುದನ್ನು ಬಿಟ್ಟು ಪಾಲಿಕೆಯಲ್ಲಿ ಇಟ್ಟಿರುವುದು ಆಡಳಿತ ನಡೆಸುತ್ತಿರುವ ಬಿಜೆಪಿ ಬೇಜಾವಾಬ್ದಾರಿತನಕ್ಕೆ ಸಾಕ್ಷಿ ಎಂದು ಆರೋಪಿಸಿದ್ದಾರೆ.
ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಜಿ. ಎಸ್. ಗಡಿಗುಡಾಳ್ ಮಂಜುನಾಥ್, ಪಾಲಿಕೆ ಸದಸ್ಯ ಎ. ನಾಗರಾಜ್, ಸ್ಥಾಯಿ ಸಮಿತಿ ಅಧ್ಯಕ್ಷ ಉದಯಕುಮಾರ್, ಕಾಂಗ್ರೆಸ್ ಮುಖಂಡರಾದ ಜಗದೀಶ್, ಕೊಟ್ರಯ್ಯ, ಇಟುಗುಡಿ ಮಂಜುನಾಥ್, ಜಾಕಿರ್ ಆಲಿ, ಪಂಡಿತ್ ನೇತೃತ್ವದ ತಂಡ ಈ ಬಗ್ಗೆ ಪರಿಶೀಲಿಸಿದಾಗ ಬೆಳಕಿಗೆ ಬಂದಿದೆ.
ಮುಕ್ತಿ ವಾಹಿನಿ ಬಂದು ಆರು ತಿಂಗಳಾಗಿದೆ. ಒಂದು ವಾಹನ ಒಳಗಡೆ ನಿಲ್ಲಿಸಿದ್ದು ಧೂಳು ಹಿಡಿದು ತುಕ್ಕು ಹಿಡಿಯುವ ಪರಿಸ್ಥಿತಿ ಬಂದಿದೆ. ಮಿನಿ ಹಿಟಾಚಿ ತೆಗೆದುಕೊಂಡು ಹೋಗುವ ಲಾರಿ ಹಾಳಾಗಿದೆ. ಇದನ್ನು ಸರಿಪಡಿಸಲು ಆಗುತ್ತಿಲ್ಲ. ಕೇವಲ ಎರಡು ಸಾವಿರ ರೂಪಾಯಿ ಖರ್ಚು ಮಾಡಿ ದುರಸ್ತಿ ಮಾಡಿಸಲು ಆಗಿಲ್ಲ.
ಈ ಹಿನ್ನೆಲೆಯಲ್ಲಿ ಎರಡು ಹಿಟಾಚಿಗಳು ಸಮರ್ಪಕವಾಗಿ ಬಳಕೆ ಆಗುತ್ತಿಲ್ಲ. ಇವು ಹಾಳಾಗುವ ಹಂತ ತಲುಪಿವೆ. ಇನ್ನು ನಾಲ್ಕು ಜಟ್ಟಿಂಗ್ ಸ್ಪ್ರೇ ಇದ್ದು, ಕೊರೊನಾ ಬಂದಾಗ ಸ್ಪ್ರೇ ಮಾಡಿಸಿದ್ದು ಬಿಟ್ಟರೆ ಈಗ ಬಳಸುತ್ತಿಲ್ಲ. ಸ್ಲಂ ಪ್ರದೇಶಗಳು ಹಾಗೂ ಚರಂಡಿಗಳಲ್ಲಿ ಸೊಳ್ಳೆ ನಿಯಂತ್ರಣ ಮಾಡುವ ಇವುಗಳನ್ನು ಹಾಗೆಯೇ ಇಡಲಾಗಿದೆ. ಕೇಳಿದರೆ ಕೆಮಿಕಲ್ ಇಲ್ಲ ಎಂಬ ಉಡಾಫೆ ಉತ್ತರ ಸಿಗುತ್ತಿದೆ. ಟೆಂಡರ್ ಆಗಿಲ್ಲ, ಎರಡು ಮಾತ್ರ ಬಳಕೆ ಮಾಡಲಾಗುತ್ತಿದೆ, ಇನ್ನೆರಡನ್ನು ಉಪಯೋಗಿಸುತ್ತಿಲ್ಲ ಎಂದು ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಜಿ. ಎಸ್. ಮಂಜುನಾಥ್ ಗಡಿಗುಡಾಳ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕರ್ನಾಟಕದ ಪಪಥಮ ರೋಲ್ಬಾಲ್ ಆಟದ ತರಬೇತುದಾರರಾಗಿ ಪೃಥ್ವಿಕಾಂತ್ ಎಸ್. ಕೊಟಗಿ ಆಯ್ಕೆ

ಸುದ್ದಿದಿನ,ದಾವಣಗೆರೆ : ರೋಲರ್ ಸ್ಟೇಟಿಂಗ್ ಸೆಂಟರ್ ತರಬೇತುದಾರರಾದ ಪೃಥ್ವಿಕಾಂತ್’ ಎನ್.ಕೆ. ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ರೋಲ್ ಬಾಲ್ ಆಟದ ಕರ್ನಾಟಕದಿಂದ ಪ್ರಪ್ರಥಮವಾಗಿ ವೈಸ್ ಕ್ಯಾಪ್ಟನ್ ಆಗಿ ಆಯ್ಕೆಗೊಂಡಿರುತ್ತಾರೆ.
2005ರಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ರೋಲ್ಬಾಲ್ ಆಟದ ಕೋಚ್ ಆಗಿದ್ದರು. 2022ರ ಮೇ ಮತ್ತು ಜೂನ್ ತಿಂಗಳಿನಲ್ಲಿ 6 ವಾರಗಳ ಕಾಲ ನಡೆದ ರೋಲ್ ಬಾಲ್ ಆಟದ ತರಬೇತಿಯಲ್ಲಿ ಸ್ಪರ್ಧಿಸಿದ್ದು, ಇವರು ಎನ್ಐಎಸ್ ಎಸ್ಐ (NIS, SAI) ಪಟಿಯಾಲ ಈ (ಪಂಜಾಬ್)ದಿಂದ ಅಧಿಕೃತವಾಗಿ ಪ್ರಪ್ರಥಮ ಕೋಚ್ ಆಗಿ ನೇಮಕಗೊಂಡಿರುತ್ತಾರೆ. ಇವರ ಅತೀ ದೊಡ್ಡ ಸಾಧನೆಯಾಗಿದ್ದು ದಾವಣಗೆರೆ ನಗರಕ್ಕೆ ಕೀರ್ತಿತಂದಿದ್ದಾರೆ.
ಇವರು ಎನ್ ಐಐಟಿಯ ಸಾಘವೇರ್ ತರಬೇತುದಾರರೂ ಕೂಡ = ಆಗಿರುತ್ತಾರೆ. ಇವರಿಗೆ ತಂದೆ ನೀಲಕಾಂತ್, ತಾಯಿ ಶೈಲ ನೀಲಕಾಂತ್ ಸೇರಿದಂತೆ ಸ್ನೇಹಿತರು, ನಗರದ ಹಿರಿಯರು ಅಭಿನಂದಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪಂ.ಪುಟ್ಟರಾಜ ಸಾಹಿತ್ಯ ಪುರಸ್ಕಾರಕ್ಕೆ ಪುಸ್ತಕ ಆಹ್ವಾನ

ಸುದ್ದಿದಿನ ಡೆಸ್ಕ್ : ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯು ಪುಸ್ತಕ ಪ್ರಶಸ್ತಿಗಾಗಿ 2021-22 ಸಾಲಿನಲ್ಲಿ ಪ್ರಕಟವಾದ, ಕನ್ನಡ, ಹಿಂದಿ ಮತ್ತು ಸಂಸ್ಕೃತ ಭಾಷೆಯ ಸಾಹಿತ್ಯದ ಎಲ್ಲಾ ಪ್ರಕಾರಗಳ ಕೃತಿಗಳನ್ನು ಆಹ್ವಾನಿಸಲಾಗಿದೆ.
ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯು, ‘ತ್ರಿಭಾಷಾ ಕವಿ’ ಗುರು ಪುಟ್ಟರಾಜರ ಸಾಹಿತ್ಯ ಸೇವೆಯನ್ನು ಸ್ಮರಿಸಿಕೊಳ್ಳುವ ಘನ ಉದ್ದೇಶದಿಂದ, ಕಳೆದ 22 ವರ್ಷಗಳಿಂದಲೂ ‘ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರ ರಾಜ್ಯ ಪ್ರಶಸ್ತಿ’ ನೀಡುತ್ತಾ ಬಂದಿದೆ. ಅದರಂತೆ ಈ ವರ್ಷವೂ ಕೂಡಾ ಈ ಆದರೇ, ಈ ಪ್ರಶಸ್ತಿಗೆ ಕನ್ನಡದ ಕೃತಿಗಳನ್ನು ಮಾತ್ರ ಆಯ್ಕೆ ಮಾಡಲಾಗುವುದು ಹಿಂದಿ ಮತ್ತು ಸಂಸ್ಕೃತ ಕೃತಿಗಳಲ್ಲಿ ಉತ್ತಮ ಕೃತಿ ಆಯ್ಕೆಮಾಡಿ ಉತ್ತಮ ಕೃತಿ ಕರ್ತರಿಗೆ ಪುಟ್ಟರಾಜ ಸಾಹಿತ್ಯ ಸಮ್ಮಾನ ನೀಡಲಾಗುವದು.
ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರ ‘ರಾಜ್ಯ ಪ್ರಶಸ್ತಿಯು 5 ಸಾವಿರ ರೂ ನಗದು, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ. ಪ್ರಶಸ್ತಿಗೆ ಆಯ್ಕೆಯಾದ ಕೃತಿ ಕರ್ತರಿಗೆ ಡಾ. ಪಂ. ಪುಟ್ಟರಾಜ ಸಾಹಿತ್ಯೋತ್ಸವದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸೇವಾ ಸಮಿತಿಯ ರಾಜ್ಯ ಸಂಚಾಲಕಿ ಎಂ.ಜಿ.ಶಶಿಕಲಾ ಮೂರ್ತಿ ನಲ್ಕುದುರೆ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರಶಸ್ತಿಗೆ ಸಮೀಪದ ಪ್ರತಿಸ್ಪರ್ಧಿಯಾದ ವಿವಿದ ಪ್ರಕಾರದ 10 ಕೃತಿಗಳನ್ನು ಗುರುತಿಸಿ ವರ್ಷದ ಶ್ರೇಷ್ಠ ಕೃತಿ ಸಮ್ಮಾನ ನೀಡಿ ಗೌರವಿಸಲಾಗುವುದು. ಆಸಕ್ತ ಲೇಖಕರು ತಮ್ಮ 3 ಕೃತಿಗಳೊಂದಿಗೆ 27 ಜುಲೈ 2022 ರ ಒಳಗಾಗಿ ತಲುಪುವಂತೆ ಕಳಿಸಿಕೊಡಲು ಕೋರಲಾಗಿದೆ.
ಪುಸ್ತಕಗಳನ್ನು ಕಳಿಸಿಕೊಡುವ ವಿಳಾಸ
ಸಿ. ಕೆ. ಹಿರೇಮಠ ಪಂ. ಪುಟ್ಟರಾಜ ಸಾಹಿತ್ಯ ಪುರಸ್ಕಾರ ಪ್ರಶಸ್ತಿ ಆಯ್ಕೆ ಸಮಿತಿ ‘ಶ್ರೀಗಿರಿ ಬಿಲ್ಡಿಂಗ’ ಪಂಚಾಕ್ಷರಿ ನಗರ ೪ ನೆಯ ಅಡ್ಡರಸ್ತೆ ಗದಗ-582101
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ರಾಜಕೀಯ4 days ago
ಮಹಾರಾಷ್ಟ್ರ ಸರ್ಕಾರ ಉರುಳಲು ಬಿಜೆಪಿ ಕುತಂತ್ರ ಕಾರಣ, ಇದು ದೇಶಕ್ಕೆ ಮಾರಕ : ಮಲ್ಲಿಕಾರ್ಜುನ ಖರ್ಗೆ
-
ನಿತ್ಯ ಭವಿಷ್ಯ6 days ago
ಗುರುವಾರ ರಾಶಿ ಭವಿಷ್ಯ-ಜೂನ್-30,2022 : ಈ ರಾಶಿಯವರು ನಿಮ್ಮ ಸಂಗಾತಿಗೆ ಹೃದಯದಲ್ಲಿ ಅಡಿಗಿರುವ ಸತ್ಯಾಂಶ ಬಹಿರಂಗಪಡಿಸುವ ದಿನ
-
ನಿತ್ಯ ಭವಿಷ್ಯ5 days ago
ಶುಕ್ರವಾರ- ರಾಶಿ ಭವಿಷ್ಯ ಜುಲೈ-1,2022 : ಈ ರಾಶಿಯವರಿಗೆ ಇಷ್ಟ ಇರದ ಮದುವೆ! ಆದರೆ ಈ ರಾಶಿಯವರಿಗೆ ಇಷ್ಟ ಇರದ ಉದ್ಯೋಗ!
-
ದಿನದ ಸುದ್ದಿ4 days ago
ಅಕ್ರಮ ಹಣ ವರ್ಗಾವಣೆ ಕೇಸ್ : ಡಿ.ಕೆ ಶಿವಕುಮಾರ್’ಗೆ ಜಾಮೀನು ಅರ್ಜಿ ವಿಚಾರಣೆ ಜುಲೈ 30 ಕ್ಕೆ ಮುಂದೂಡಿಕೆ
-
ದಿನದ ಸುದ್ದಿ4 days ago
ನೇರ ಪಾವತಿ ಪೌರಕಾರ್ಮಿಕರ ಸೇವೆ ಕಾಯಂಗೆ ಸರ್ಕಾರದ ಒಪ್ಪಿಗೆ : ಸಿಎಂ ಬಸವರಾಜ ಬೊಮ್ಮಾಯಿ
-
ದಿನದ ಸುದ್ದಿ4 days ago
ಶಿಕ್ಷಕನೋರ್ವ ಮಕ್ಕಳ ಬಿಸಿಯೂಟದ ತೊಗರಿ ಬೇಳೆ ಕದ್ದು ಮಾರುತ್ತಿರುವ ವಿಡಿಯೋ ವೈರಲ್.!
-
ದಿನದ ಸುದ್ದಿ7 days ago
ಉದಯಪುರ ಹತ್ಯೆ ಭಯೋತ್ಪಾದಕ ಕೃತ್ಯ ; ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಖಂಡನೆ
-
ದಿನದ ಸುದ್ದಿ4 days ago
ಬಿಜೆಪಿಯ ನೂಪುರ್ ಶರ್ಮಾ’ಗೆ ಸುಪ್ರೀಂಕೋರ್ಟ್ ತರಾಟೆ