ದಿನದ ಸುದ್ದಿ
ಕೆಲವು ಕೆ.ಎಸ್.ಆರ್.ಟಿ.ಸಿ ಬಸ್ ಗಳಲ್ಲಿ ‘ವಿದ್ಯಾರ್ಥಿ ಪಾಸ್’ ಗಳಿಗೆ ಮಾನ್ಯತೆ ಇಲ್ಲವೆ..?

ಸುದ್ದಿದಿನ, ವಿಜಯಪುರ: ಇಂಡಿ ತಾಲ್ಲೂಕಿನ ಹೀರೆರೂಗಿ, ಬೊಳೆಗಾವಂ, ತಡವ್ಲಗಾ, ಗುಂಡುತಾಂಡಾ, ಅಥರ್ಗಾ, ನಾಗಠಾಣ, ಹಾಗೂ ಅಲೀಯಾಬಾದದ ವಿದ್ಯಾರ್ಥಿಗಳು, ಜೀಲ್ಲಾ ಮಟ್ಟದಲ್ಲಿ ಉನ್ನತ ಗುಣಮಟ್ಟದ ವಿದ್ಯಾಭ್ಯಾಸ ಮಾಡಬೇಕೆಂದು ಬಯಸುವವರು ಪ್ರತಿದಿನದ ರೊದನೆ ಅನುಭವಿಸುವಂತಾಗಿದೆ.
ನಮ್ಮ ಘನ ಸರ್ಕಾರ ವಿದ್ಯಾರ್ಥಿಗಳಿಗಾಗಿಯೆ ವಿಶೇಷ ಕ್ರಮಗಳನ್ನು ಜಾರಿಗೆಗೊಳ್ಳಿಸುತ್ತಿದೆ. ವಿದ್ಯಾರ್ಥಿಗಳು ದೂರದ ಶಾಲಾ-ಕಾಲೇಜಿಗೆ ಹೋಗಿ ತಮ್ಮ ಶಿಕ್ಷಣವನ್ನು ಮುಂದುವರಿಬೇಕೆಂದು ಕಡಿಮೆ ದರದಲ್ಲಿ ವಿದ್ಯಾರ್ಥಿಪಾಸ್ ಗಳನ್ನು ಕಲ್ಪಿಸ ಬೇಕೆಂದು ಆದೇಶ ನೀಡಿದೆ, ವಿದ್ಯಾರ್ಥಿ ಪಾಸ್ ಎಲ್ಲ ಬಸ್ ಗಳಲ್ಲಿ ಅನುಮತಿ ಇದೆ ಎಂದು ಹೇಳಿದೆ. ಆದರೆ ಇಂಡಿ ವಿಜಯಪುರ ಮಾರ್ಗವಾಗಿ ಸಂಚರಿಸುವ ಏಷ್ಟೊ ಬಸ್ಗಳಲ್ಲಿ ವಿದ್ಯಾರ್ಥಿ ಪಾಸ್ ಗಳಿಗೆ ಅನುಮತಿ ಇಲ್ಲ.
ಯಾಕೆಂದರೆ ಬಸ್ ಗಳಲ್ಲಿ ಭೀಮಾ ಸಾರಿಗೆ (ವಿದ್ಯಾರ್ಥಿಗಳ ಪಾಸಿಗೆ ಅನುಮತಿ ಇಲ್ಲ) ಎನ್ನುವ ನಾಮಫಲಕಗಳೆ ರಾರಾಜಿಸುತ್ತಿವೆ. ಇದರ ವಿಷಯವಾಗಿ ಬಸ್ ನಿರ್ವಾಹರನ್ನು ವಿಚಾರಿಸಿದರೆ ಕೇಲವರು ಎಲ್ಲಾ ಬಸ್ ಗಳಲ್ಲಿವು ವಿದ್ಯಾರ್ಥಿಪಾಸ್ ಗಳಿಗೆ ಅನುಮತಿ ಇವೆ ಅಂದರೆ, ಇನ್ನೂ ಕೇಲವರು ವ್ಯಂಗ್ಯವಾಗಿ ಮಾತನಾಡಿ, ಅಸಭ್ಯವಾಗಿ ವರ್ತಿಸುತ್ತಾರೆ, ಸ್ವತಃ ಚಕರ್ ಹೇಳಿರುವ ಹೇಳಿಕೆ ಇದು. ತೆರಿಗೆ ಕಟ್ಟಬೇಕು ಆದ ಕಾರಣ ಭೀಮಾ ಸಾರಿಗೆ ನಾಮಫಲಕಗಳನ್ನು ಹಾಕಿದ್ದೇವೆ ಅಂದರು.
ಅದಕ್ಕೆ ವಿದ್ಯಾರ್ಥಿಗಳು 103,ಮತ್ತು105 ಎರಡೆ ಬಸ್ ಗಳಿಗೆ ಮಾತ್ರ ಪಾಸ್ ಅನುಮತಿ ಇಲ್ಲ ಅಂತ ಗೋತ್ತು, ಆದರು ಬೇರೆ ಬಸ್ ಗಳಿಗೆ ಭೀಮಾ ಸಾರಿಗೆ ಎಂಬ ನಾಮಫಲಕಗಳು ಯಾಕೆ ಅಂತ ವಿದ್ಯಾರ್ಥಿಗಳು ಪ್ರಶ್ನೇ ಮಾಡಿದರೆ, ಅದಕ್ಕೆ ನೀವು ವಿದ್ಯಾರ್ಥಿಗಳು ಓದುವದನ್ನು ಮೋದಲು ಮಾಡಿ ಅದನ್ನು ಬಿಟ್ಟು ಬೇರೆ ಕೆಲಸ ಮಾಡ ಬೇಡಿ, ನಮ್ಮ ಕೆಲಸ ನಮಗೆ ತಿಳಿದಿದೆ ನೀವು ಹೇಳುವ ಅವಶ್ಯಕತೆ ಇಲ್ಲ ಎಂದು ವ್ಯಂಗ್ಯವಾಗಿ ಚಕರ್ ಮಾತನಾಡಿದರು.
ಚಕರ್ ಹೀಗೆ ಮಾತನಾಡಿದರು ಅಂತ ಕೇಂದ್ರ ಬಸ್ ನಿಲ್ದಾಣದ ಅಧೀಕಾರಿಯಾದ ಬಿಸ್ನಾಳರಿಗೆ ತಿಳಿಸಿದರೆ, ವಿದ್ಯಾರ್ಥಿ ಪಾಸ್ ಗಳು ಎಲ್ಲ ಬಸ್ ಗಳಿಗು ಅನುಮತಿ ಇದೆ, ಯಾರು ಅನುಮತಿ ಇಲ್ಲ ಅನ್ನುವರೋ ಅವರನ್ನು ಬಸ್ ನ ಜೋತೆಗೆ ಕರೆದುಕೊಂಡು ಹೋಗಿ ಪೊಲೀಸ ಠಾಣೆಯಲ್ಲಿ ದೂರು ದಾಖಲಿಸಿರಿ ಎಂದು ಅವರು ಹೇಳುತ್ತಾರೆ. ದೂರು ದಾಖಲಿಸುವುದು ದೊಡ್ಡಸ್ಥೀಕೆ ಅಲ್ಲ. ಅದರಲ್ಲು ಹಳ್ಳಿಯ ಜನರು ಕೇಸು, ಕೋರ್ಟುಗಳಿಗೆಲ್ಲ ಭಯಪಡುತ್ತಾರೆ. ಆದ ಕಾರಣ ಯಾರು ಏನು ಹೇಳುತ್ತಿಲ್ಲ. ವಿದ್ಯಾರ್ಥಿಗಳು ಕೇಳಿದರೆ ವ್ಯಂಗ್ಯವಾಗಿ, ಅಸಬ್ಯವಾಗಿ ವರ್ತಿಸುತ್ತಾರೆ. ಇದರಿಂದಾಗಿ ವಿದ್ಯಾರ್ಥಿಗಳು ಬೇಸತ್ತಿದ್ದಾರೆ.
ಪ್ರತಿ ದಿನವು 9ಗಂಟೆಗೆಲ್ಲ ಶಾಲಾ-ಕಾಲೇಜಿನಲ್ಲಿ ಇರಬೇಕು, ಇಲ್ಲವಾದರೆ ಶಾಲೆ-ಕಾಲೇಜುಗಳಲ್ಲಿ ಗುರುಗಳ ಕಡೆಯಿಂದ ಬೈಯಿಸಿಕೊಳ್ಳ ಬೇಕು, ಅವರು ಕೋಡುವ ಶಿಕ್ಷೆನಾ ಅನುಭವಿಸ ಬೇಕು.ಕೇಲವೊಂದು ದಿನ ಪರೀಕ್ಷೆಗಳು, ಶಾಲಾ-ಕಾಲೇಜುಗಳಲ್ಲಿ ಪ್ರಮುಖವಾದ ಕಾರ್ಯಕ್ರಮಗಳು, ಹಾಗೂ ವಿಶೇಷವಾದ ತರಗತಿಗಳು ಇರುತ್ತವೆ. ತಡವಾಗಿ ಹೋಗಬೇಕಾಗುತ್ತದೆ. ಹೀಗೆ ಮಾಡಿದರೆ ಅವುಗಳಿಂದ ಹಿಂದೆ ಉಳಿಯ ಬೇಕಾಗುತ್ತದೆ.
ಆದ ಕಾರಣ ನಮ್ಮ ವಿಜಯಪುರ ಜಿಲ್ಲೆಯ ಮಾನ್ಯ ಜೀಲ್ಲಾಧೀಕಾರಿಗಳು ವಿದ್ಯಾರ್ಥಿಗಳ ಮೇಲೆ ಪ್ರೀತಿ, ಕಾಳಜಿ, ಧಯೆ, ಕರುಣೆ ಇಟ್ಟು, ವಿದ್ಯಾರ್ಥಿಗಳಿಗೆ ತೋಂದರೆ, ಮೋಸ ಆಗದಂತೆ ಸರಿಯಾದ ರೀತಿಯಲ್ಲಿ ಸೂಕ್ತ ಕ್ರಮವನ್ನು ತೆಗೆದುಕೊಳ್ಳ ಬೇಕಾಗಿ ಕಳಕಳಿಯಿಂದ ಇಂಡಿ ತಾಲ್ಲೂಕು ಹಾಗೂ ಇಂಡಿ ತಾಲ್ಲೂಕಿನ ಹೀರೆರೂಗಿ, ಬೊಳೆಗಾವಂ, ತಡವ್ಲಗಾ, ಗುಂಡುತಾಂಡಾ, ಅಥರ್ಗಾ, ನಾಗಠಾಣ, ಹಾಗೂ ಅಲೀಯಾಬಾದ ಗ್ರಾಮದ ಮಾರ್ವಗವಾಗಿ ಸಂಚರಿಸುವ ಎಲ್ಲಾ ವಿದ್ಯಾರ್ಥಿಗಳು ಕೇಳಿಕೊಳ್ಳುತ್ತಿದ್ದಾರೆ.
ಹೇಳಿಕೆಗಳು
“ನಾನು ಅಥರ್ಗಾ ಗ್ರಾಮದ ವಿದ್ಯಾರ್ಥಿನಿ ನಾನು ಪಿ.ಯು.ಸಿಯಿಂದನು ಅಂದರೆ ಸತತವಾಗಿ 4ವರ್ಷಗಳಿಂದಾನು ಅಥರ್ಗಾ ವಿಜಯಪುರದ ಮಾರ್ಗವಾಗಿ ಸಂಚರಿಸುತ್ತಿದ್ದೆನೆ ಪ್ರತಿ ದಿನವು ಇದೆ ರೀತಿಯ ಗೋಳ್ಳಾಟ ನಡೆದಿದೆ. ಪ್ರತಿ ದಿನ ಬೆಳ್ಳಗೆ 6ರಿಂದ 7:30 ರ ವರೆಗೆ ಮಾತ್ರ ಬಿಡುವಿಲ್ಲದ ಹಾಗೆ ಭೀಮಾಸಾರಿಗೆ ನಾಮಫಲಕಗಳು ರಹಿತ ಬಸ್ ಗಳು ಸಂಚರಿಸುತ್ತವೆ. ಕೇಲವು ಬಾರಿ ಸ್ವಲ್ಪ ತಡಮಾಡಿದರೆ 7:30ರ ಬಸ್ ಹೋರಟು ಹೋಗಿರುತ್ತದೆ. ನಂತರ 7:30 ರಿಂದ 8:15 ವರೆಗೆ ಬಸ್ ಗಳಿಲ್ಲ. ಇದ್ದರು ಸತತವಾಗಿ 3 ಬಸ್ ಗಳು ಭೀಮಾ ಸಾರಿಗೆ ನಾಮಫಲಕಗಳೊಂದಿಗೆ ಬರುತ್ತವೆ. ಆದ್ದ ಕಾರಣ ಇದಕ್ಕೆ ಸಂಭಂದ ಪಟ್ಟ ಅಧೀಕಾರಿಗಳು ಅಥವಾ ಮಾನ್ಯ ಜೀಲ್ಲಾಧೀಕಾರಿಗಳು ಈ ಸಮಸ್ಯೆಯನ್ನು ಬಗೆ ಹರಿಸುತ್ತಾರೆ ಎಂದು ನಂಬಿದ್ದೇವೆ.
|ಅಥರ್ಗಾ ಗ್ರಾಮದ ನೊಂದ ವಿದ್ಯಾರ್ಥಿನಿ
“ನಮ್ಮ ಮಗಳು ಶಿಕ್ಷಣಕ್ಕಾಗಿ ಇಂಡಿಗೆ ಹೋಗುತ್ತಾಳೆ. ಕೇಲವು ದಿನಗಳ ಹಿಂದೆ ಶಾಲೆಯಿಂದ ಮರಳಿ ಬರುವಾಗ ಗೋತ್ತಿಲ್ಲದೆ ಭೀಮಾ ಸಾರಿಗೆ ಎರಿದ್ದಳು, ಎರುವಾಗ ಸುಮ್ಮನಿದ್ದ ನಿರ್ವಾಹಕ ರಸ್ತೆಯ ಮಧ್ಯದಲ್ಲಿ ಇಳಿಸಿದರು. ಆ ದಿನ ರಸ್ತೆ ಮಧ್ಯದಲ್ಲಿ ಇಳಿಸಿದಕ್ಕಾಗಿ ಮತ್ತೆ ನಡೆದು ಕೊಂಡು ಇಂಡಿಗೆ ಹೋಗಿ ಬೇರೆ ಬಸ್ ಹಿಡಿದು ಬರಬೇಕಾದರೆ ರಾತ್ರೆ 8:30 –ಕ್ಕೂ ಅಧಿಕ ಸಮಸವಾಗಿತ್ತು. ನಂತರ ಮರುದಿನ ಇಂಡಿ ಡೀಪುಗೆ ಹೋಗಿ ವಿಚಾರಣೆ ಮಾಡಿದೆವು. ಅಂದಿನಿಂದ ನಮ್ಮ ಮಗಳು ವಿದ್ಯಾರ್ಥಿಗಳ ನಿಲಯದಲ್ಲಿ ಉಳಿದು ವಿದ್ಯಾಭ್ಯಾಸ ಮಾಡುತ್ತಿದ್ದಾಳೆ.
|ಅಥರ್ಗಾ ಗ್ರಾಮದ ಪೋಷಕರು
–ಕಾಂಚನಾ. ಬಸವರಾಜ. ಪೂಜಾರಿ
ಪ್ರಥಮ ಸೆಮಿಸ್ಟರ್ ವಿದ್ಯಾರ್ಥಿನಿ
ಪತ್ರಿಕೊಧ್ಯಮ ಮತ್ತು ಸಮೂಹ ಸಂವಹನ ವಿಭಾಗ
ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ತೊರವಿ, ವಿಜಯಪುರ
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಮೈಸೂರು ವಿ.ವಿಯಲ್ಲಿ ಬುದ್ಧಪೀಠ ಸ್ಥಾಪನೆ : ಜಾಗ ನೀಡುವ ಭರವಸೆ ಕೊಟ್ಟ ಕುಲಪತಿ

ಸುದ್ದಿದಿನ, ಮೈಸೂರು : ಸಂಸದ ಶ್ರೀನಿವಾಸ ಪ್ರಸಾದ್ ಅವರ ಮನವಿಗೆ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಸ್ಪಂದಿಸಿ, ಪೀಠ ಸ್ಥಾಪನೆಗೆ ಜಾಗ ನೀಡುವ ಭರವಸೆ ನೀಡಿದ್ದಾರೆ. ಬುದ್ಧ ಪೂರ್ಣಿಮೆ ಅಂಗವಾಗಿ ಮೈಸೂರಿನಲ್ಲಿಂದು ಸಮಕಾಲೀನ ಜಗತ್ತಿಗೆ ಬುದ್ಧನ ಚಿಂತನೆಗಳು ಎಂಬ ವಿಷಯ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಸದ ಶ್ರೀನಿವಾಸ ಪ್ರಸಾದ್ ಮಾತನಾಡಿದರು.
ಮೈಸೂರು ವಿಶ್ವವಿದ್ಯಾಲಯದಲ್ಲಿ ಬುದ್ಧಪೀಠ ಸ್ಥಾಪಿಸಬೇಕೆಂಬ ಸಂಸದ ಶ್ರೀನಿವಾಸ ಪ್ರಸಾದ್ ಅವರ ಮನವಿಗೆ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಸ್ಪಂದಿಸಿ, ಪೀಠ ಸ್ಥಾಪನೆಗೆ ಜಾಗ ನೀಡುವ ಭರವಸೆ ನೀಡಿದ್ದಾರೆ.
ಬುದ್ಧ ಪೂರ್ಣಿಮೆ ಅಂಗವಾಗಿ ಮೈಸೂರಿನಲ್ಲಿ ಸೋಮವಾರ ಸಮಕಾಲೀನ ಜಗತ್ತಿಗೆ ಬುದ್ಧನ ಚಿಂತನೆಗಳು ಎಂಬ ವಿಷಯ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಸದ ಶ್ರೀನಿವಾಸ ಪ್ರಸಾದ್ ಮಾತನಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಯಲುಸೀಮೆ ಭಾಗಕ್ಕೆ ಶಾಶ್ವತ ನೀರಾವರಿ ಸೌಲಭ್ಯ : ಸಚಿವ ಜೆ.ಸಿ ಮಾಧುಸ್ವಾಮಿ

ಸುದ್ದಿದಿನ, ಚಿಕ್ಕಮಗಳೂರು : ಬಯಲುಸೀಮೆ ಭಾಗಕ್ಕೆ ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಭಕ್ತನಕಟ್ಟೆ ಗ್ರಾಮದಲ್ಲಿ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಭಾಗದಲ್ಲಿ ಮಳೆಯಾಧಾರಿತ ಬೆಳೆ ಬೆಳೆಯುವ ಬಯಲುಸೀಮೆ ಭಾಗಗಳಿಗೆ ಶಾಶ್ವತ ನೀರಾವರಿ ಸೌಲಭ್ಯ ಒದಗಿಸಲು ಚಿಂತಿಸಲಾಗಿದೆ ಎಂದರು.
ರಾಜ್ಯದಲ್ಲಿ ಅಗಾಧ ನೀರಿನ ಸಂಪತ್ತು ಇದ್ದರೂ ಸದ್ಬಳಕೆಯಾಗುತ್ತಿಲ್ಲ. ಈ ನಿಟ್ಟಿನಲ್ಲಿ ಇಲಾಖೆ ಹಲವು ಯೋಜನೆಗಳನ್ನು ಜಾರಿಗೆ ತರಲು ರೂಪುರೇಷೆ ಸಿದ್ಧಪಡಿಸುತ್ತಿದೆ. ತಾವು ಮಂತ್ರಿಯಾದ ನಂತರ ಸಣ್ಣ ನೀರಾವರಿ ಇಲಾಖೆಗೆ 8 ಸಾವಿರ ಕೋಟಿ ರೂಪಾಯಿ ಅನುದಾನ ನೀಡಲಾಗಿದೆ ಎಂದು ಸಚಿವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಾಜ್ಯಾದ್ಯಂತ ಶಾಲೆಗಳು ಆರಂಭ : ಪಠ್ಯ, ಸಮವಸ್ತ್ರ ಪೂರೈಕೆಗೆ ಕ್ರಮ : ಸಿಎಂ ಬೊಮ್ಮಾಯಿ

ಸುದ್ದಿದಿನ, ಬೆಂಗಳೂರು : ಶಾಲಾ ವಿದ್ಯಾರ್ಥಿಗಳಿಗೆ ಅಗತ್ಯ ಪಠ್ಯಪುಸ್ತಕ, ಸಮವಸ್ತ್ರ ಮತ್ತು ಸೈಕಲ್ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಜೊತೆ ಮಾತನಾಡಿದ ಅವರು, ಮಕ್ಕಳಿಗೆ ಶಿಕ್ಷಣ ಬಹಳಮುಖ್ಯ ಒಳ್ಳೆಯ ವಾತಾವರಣದಲ್ಲಿ ಶಾಲೆಗಳು ಆರಂಭವಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದರು.
ಈ ನಡುವೆ ರಾಜ್ಯಾದ್ಯಂತ ಇಂದಿನಿಂದ ಶಾಲೆಗಳು ಆರಂಭವಾಗಿದ್ದು, ಶಾಲಾ ಆವರಣದಲ್ಲಿ ಚಿಣ್ಣರ ಕಲರವ ಕೇಳಿ ಬರುತ್ತಿದ್ದು, ವಿದ್ಯಾರ್ಥಿಗಳಲ್ಲಿ ಹೊಸ ಹುಮ್ಮಸ್ಸು, ಸಂಚಲನ ಮೂಡಿಸಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ನೆರವೇರಿತು. ಊರಿನ ಗಣ್ಯರು, ಶಿಕ್ಷಕರು ಮಕ್ಕಳಿಗೆ ಆರತಿ ಬೆಳಗಿ, ಹೂ ನೀಡಿ ಸ್ವಾಗತಿಸಿದರು.
ಜಿಲ್ಲೆಯ ಪುಂಜಾಲಕಟ್ಟೆ ಶಾಲೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಶಾಲಾ ಆರಂಭಕ್ಕೆ ಚಾಲನೆ ನೀಡಿದರು. ಬಳಿಕ ಅವರು ಮಾತನಾಡಿ, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಅವರನ್ನು ಸತ್ಪ್ರಜೆಗಳನ್ನಾಗಿ ರೂಪಿಸುವುದು ಎಲ್ಲರ ಕರ್ತವ್ಯ ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶಾಲೆಗಳನ್ನು ಸ್ವಚ್ಛಗೊಳಿಸಿ, ತಳಿರು ತೋರಣಗಳೊಂದಿಗೆ ಸಿಂಗರಿಸಲಾಗಿತ್ತು. ಮಕ್ಕಳಿಗೆ ಹೂ ಹಾಗೂ ಸಿಹಿ ನೀಡಿ ಸ್ವಾಗತಿಸಲಾಯಿತು. ಜಿಲ್ಲೆಯ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಮಕ್ಕಳಿಗೆ ಹೂ ಹಾಗೂ ಸಿಹಿ ನೀಡಿ ಸ್ವಾಗತಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಪ್ರಾಥಮಿಕ ಮತು ಪ್ರೌಢಶಾಲೆಗಳು ಇಂದು ಆರಂಭವಾಗಿವೆ. ಮಕ್ಕಳ ಸ್ವಾಗತಕ್ಕೆ ಶಾಲೆಗಳನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಮಕ್ಕಳು ಶಾಲಾ ಅಂಗಳಕ್ಕೆ ಬರುತ್ತಿದ್ದಂತೆಯೆ ಶಿಕ್ಷಕರು ಸಿಹಿತಿನಿಸು ಮತ್ತು ಹೂಗಳನ್ನು ನೀಡಿ ಸ್ವಾಗತಿಸಿದರು.
ಜಿಲ್ಲೆಯಲ್ಲಿ 587 ಕಿರಿಯ ಪ್ರಾಥಮಿಕ, 947 ಹಿರಿಯ ಪ್ರಾಥಮಿಕ ಮತ್ತು 503 ಪ್ರೌಢಶಾಲೆಗಳು ಸೇರಿದಂತೆ ಒಟ್ಟಾರೆ 2ಸಾವಿರದ 960 ಶಾಲೆಗಳು ಆರಂಭಗೊಂಡಿವೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಆರ್.ತಿಪ್ಪೇಶಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯಲ್ಲೂ ಶಾಲೆಗಳ ಆವರಣದಲ್ಲಿ ಹಬ್ಬದ ಸಡಗರ-ಸಂಭ್ರಮ ಮನೆ ಮಾಡಿದೆ. 2 ವರ್ಷಗಳ ನಂತರ ಶಾಲೆ ಪುನಾರಂಭಗೊಂಡ ಹಿನ್ನೆಲೆಯಲ್ಲಿ ಶಿಕ್ಷಕರು, ಮಕ್ಕಳಿಗೆ ಹೂ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಶಾಲೆಗಳು ಆರಂಭವಾಗಿದ್ದು ನಗರದ ಬಸವನಹಳ್ಳಿ ಬಾಲಕಿಯರ ಶಾಲೆಯಲ್ಲಿ ಶಿಕ್ಷಣ ಅಧಿಕಾರಿಗಳು ಶಾಲಾ ಸಿಬ್ಬಂದಿ ಮಕ್ಕಳಿಗೆ ಹೂಗಳನ್ನು ನೀಡಿ ಸ್ವಾಗತಿಸಿದರು.
ಗದಗ ಜಿಲ್ಲೆಯಲ್ಲಿ ಇಂದಿನಿಂದ 1ಸಾವಿರದ 381ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭಗೊಂಡಿವೆ. ಲಕ್ಕುಂಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಶಾಲಾ ಮಕ್ಕಳಿಗೆ ಸಿಹಿವಿತರಿಸಿ, ಹೂ ನೀಡುವ ಮೂಲಕ ಶಾಲೆಯ ಆರಂಭಕ್ಕೆ ಚಾಲನೆ ನೀಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಸಿನಿ ಸುದ್ದಿ7 days ago
ವಿದ್ಯುತ್ ಶಾಕ್ ನಿಂದ ಜೂ.ರವಿಚಂದ್ರನ್ ಖ್ಯಾತಿಯ ಲಕ್ಷ್ಮಿನಾರಾಯಣ್ ಸಾವು
-
ದಿನದ ಸುದ್ದಿ7 days ago
ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ : ಆಯೋಗದಿಂದ ವೇಳಾಪಟ್ಟಿ ಪ್ರಕಟ
-
ನಿತ್ಯ ಭವಿಷ್ಯ7 days ago
ಈ ರಾಶಿಯ ನವದಂಪತಿಗಳಿಗೆ ಘರ್ಷಣೆ ಸಾಧ್ಯತೆ! ಈ ರಾಶಿಯ ಉದ್ಯೋಗಿಗಳು ಎದುರಾಳಿಯ ಪಿತೂರಿಗಳು ಎದುರಿಸಬೇಕಾಗುವುದು! ಬುಧವಾರ ರಾಶಿ ಭವಿಷ್ಯ-ಮೇ-11,2022
-
ದಿನದ ಸುದ್ದಿ6 days ago
ಸಮೀಕ್ಷೆ ಆಧಾರದಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ರೂಪಿಸಿ ; ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಅವಕಾಶ ಕೊಡಿ : ಸಿಎಂ ಬೊಮ್ಮಾಯಿ ಗೆ ಸಿದ್ದರಾಮಯ್ಯ ಆಗ್ರಹ
-
ದಿನದ ಸುದ್ದಿ6 days ago
ದಾವಣಗೆರೆ | ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ-ಮನೆ ಭೇಟಿ
-
ದಿನದ ಸುದ್ದಿ6 days ago
ಶ್ರೀಲಂಕಾ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸ ಭಾರತಕ್ಕೆ ಪಲಾಯನ ಕುರಿತ ವರದಿ ನಿರಾಧಾರ : ಕೊಲಂಬೊದ ಭಾರತೀಯ ರಾಯಭಾರಿ ಕಚೇರಿ ಸ್ಪಷ್ಟನೆ
-
ದಿನದ ಸುದ್ದಿ6 days ago
15 ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ; ಆದೇಶ ಪಾಲಿಸಲು ಕ್ರಮ : ಸಿಎಂ ಬೊಮ್ಮಾಯಿ
-
ದಿನದ ಸುದ್ದಿ7 days ago
ಅತ್ಯುನ್ನತ ಸಾಧನೆ ಮೆರೆದ ಸೇನಾಪಡೆ ಅಧಿಕಾರಿಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಶೌರ್ಯ ಪದಕ ಪ್ರದಾನ