ದಿನದ ಸುದ್ದಿ
ಬಂಡೀಪುರ ಅರಣ್ಯದಲ್ಲಿ ಸುಟ್ಟು ಕರಕಲಾಗಿರುವ ಪ್ರಾಣಿಗಳ ಫೋಟೋಗಳಲ್ಲ ಇವು ; ಸತ್ಯ ಮಾಹಿತಿ ಒಳಗಿದೆ ತಪ್ಪದೆ ಓದಿ..!

ಸುದ್ದಿದಿನ ಡೆಸ್ಕ್ : ಕಳೆದ ಮೂರು ದಿನಗಳಿಂದ ಬಂಡೀಪುರ ಅರಣ್ಯದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡ ಪರಿಣಾಮ ಗೋಪಾಲ ಸ್ವಾಮಿ ಬೆಟ್ಟದ ವಲಯದ ಸುಮಾರು 2ಸಾವಿರ ಹೆಕ್ಟೇರ್ ಅರಣ್ಯ ಸಂಪತ್ತು ಅಕ್ಷರಶಃ ಸುಟ್ಟು ಭಸ್ಮವಾಗಿದೆ.
ಈ ಕಾಡ್ಗಿಚ್ಚಿನ ಸುದ್ದಿ ಕೂಡ ಇಡೀ ಕರ್ನಾಟಕವನ್ನೆ ಬೆಚ್ಚಿ ಬೀಳಿಸಿದೆ. ಹಾಗೆಯೇ ಸಾಮಾಜಿಕ ಜಾಲತಾಣಗಳಲ್ಲಿ ಅರಣ್ಯ ಸಂಪತ್ತು, ಪ್ರಾಣಿಗಳು ಸುಟ್ಟು ಕರುಕಲಾಗಿರುವ ಮನಕರಗುವ ಫೋಟೋಗಳೂ ಕೂಡ ಕಾಡ್ಗಿಚ್ಚಿನಂತೆ ಹಬ್ಬಿಕೊಂಡಿದೆ. ಆದರೆ ಈ ಫೋಟೋಗಳ್ಯಾವುವೂ ಬಂಡೀಪುರ ಅರಣ್ಯದ ಕಾಡ್ಗಿಚ್ಚಿಗೆ ಸಿಲುಕಿ ಬೆಂದು ಹೋದ ಪ್ರಾಣಿಗಳಲ್ಲ.
ಹೌದು ಬಂಡೀಪುರ ಅರಣ್ಯದಲ್ಲಿ ಕಾಡ್ಗಿಚ್ಚು ರುದ್ರನರ್ತನ ಮಾಡುತ್ತಾ ಕರುಣೆಯೇ ಇಲ್ಲದೆ ತನ್ನ ಕೆನ್ನಾಲಿಗೆ ಚಾಚಿದೆ. ಮುಗಿಲೆತ್ತರಕ್ಕೆ ಬೆಳೆದ ಅಚ್ಚಹಸಿರು ಮರಗಳೆಲ್ಲ ಸುಟ್ಟು ಬೂದಿಯಾಗಿವೆ. ಆದರೆ ಅರಣ್ಯದ ವನ್ಯಜೀವಿಗಳಿಗೆಲ್ಲ ಯಾವುದೇ ಪ್ರಾಣಾಪವಾಗಿಲ್ಲ ಎಂಬ ಮಾಹಿತಿಯನ್ನು ಖಾಸಗಿ ಮಾದ್ಯಮವೊಂದಕ್ಕೆ ಅರಣ್ಯ ವನ್ಯಜೀವಿ ಸಂರಕ್ಷಣಾ ಅಧಿಕಾರಿ ಪುನ್ನತಿ ಶ್ರೀಧರ್ ಅವರು ನೀಡಿದ್ದಾರೆ.
ಕಾಡ್ಗಿಚ್ಚಿನಿಂದ ಅರಣ್ಯ ನಾಶವಾಗಿದ್ದು, ಯಾವುದೇ ಪ್ರಾಣಿಗಳು ಬೆಂಕಿ ಅನಾಹುತಕ್ಕೆ ತುತ್ತಾಗಿರುವ ಬಗ್ಗೆ ಮಾಹಿತಿ ಇಲ್ಲ. ವನ್ಯ ಜೀವಿಗಳು ಬೆಂಕಿಯ ಶಾಖ ಮುಟ್ಟುತ್ತಿದ್ದಂತೆ ಓಡಿ ಹೋಗುತ್ಗವೆ ಎಂದಿದ್ದಾರೆ.
No wild animal death is reported so far in forest fire at BNP. News and photographs of charred animals circulated in the social media and other media are far from truth. No dead animals are seen so far during fire fighting operations.#karnataka #forest #wildlife #bandipur
— Karnataka Forest Department (@aranya_kfd) February 25, 2019
ಬೆಂಕಿಗೆ ಹಾವೊಂದು ಸುಟ್ಟು ಕರುಕಲಾಗಿರು ಹಾವಿನ ಫೋಟೋವು 2015 ಏಪ್ರಿಲ್ 24 ರಂದು ವಾಯುವ್ಯ ಕೊಲಂಬಿಯಾದಲ್ಲಿ ಆ್ಯಂಡಿಕ್ಯೂ ನದ್ದಾಗಿದೆ.
ಕಾಡ್ಗಿಚ್ವಿಗೆ ಸುಟ್ಟು ಕರಕಲಾಗಿರುವ ಮೊಲದ ಫೋಟೋವು 2018 ರಲ್ಲಿ ಅಮೆರಿಕದ ಕ್ಯಾಲಿಫೋರ್ನಿಯಾದ ಮಲಿಬುನದ್ದಾಗಿದೆ.
ಲಿಂಕ್ ಮೇಲೆ ಕ್ಲಿಕ್ ಮಾಡಿ
ಗೊರಿಲ್ಲಾ ರೀತಿ ಕಾಣುವ ಒರಾಕುಟನ್ ಜಾತಿಗೆ ಸೇರಿದ ಈ ಪ್ರಾಣಿಯ ಚಿತ್ರವನ್ನು ಒರಾಗುಟನ್ ಸಂರಕ್ಷಣಾ ಕೇಂದ್ರ 2016ರಲ್ಲಿ ಬಿಡುಗಡೆ ಮಾಡಿತ್ತು. ಅಲ್ಲದೇ ಈ ಪ್ರಭೇದದ ಒರಾಕುಟನ್ ಬಂಡಿಪುರದಲ್ಲಿ ಕಂಡು ಬರುವುದಿಲ್ಲ ಇದು ಕೇವಲ ಬೋರೆನಾ ಸುಮಾತ್ರದಲ್ಲಿ ಕಂಡು ಬರುವ ಪ್ರಾಣಿ ಪ್ರಬೇಧ.
ಲಿಂಕ್ ಮೇಲೆ ಕ್ಲಿಕ್ ಮಾಡಿ
https://en.m.wikipedia.org/wiki/Orangutan
ಕ್ಯಾಲಿಫೋರ್ನಿಯಾದ ಕಾಡ್ಗಿಚ್ವಿಗೆ ಸುಟ್ಟು ಬೆಂದಿರುವ ಜಿಂಕೆ, ಮತ್ತು ಇತರೆ ಪ್ರಾಣಿಗಳ ಫೊಟೋ ವಿಡಿಯೋ 2017 ರದ್ದಾಗಿದೆ.
ವಿಡಿಯೋ ನೋಡಿ
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
