ದಿನದ ಸುದ್ದಿ
ಭಾರತದ ಏರ್ಸ್ಟ್ರೈಕ್ : ಬಾಲ ಸುಟ್ಟ ಬೆಕ್ಕಿನಂತಾದ ಪಾಕಿಸ್ತಾನ

ಸುದ್ದಿದಿನ, ಡೆಸ್ಕ್ : ಭಾರತದ ಏರ್ಸ್ಟ್ರೈಕ್ ನಂತರ ಬಾಲ ಸುಟ್ಟ ಬೆಕ್ಕಿನಂತಾಗಿದೆ ಪಾಕಿಸ್ತಾನ. ಭಾರತೀಯ ಸೇನೆ ನಡೆಸಿದ ಏರ್ ಸ್ಟ್ರೈಕ್ನಿಂದ ಕಂಗಲಾದ ಪಾಕಿಸ್ತಾನದ ಮಾದ್ಯಮಗಳು ಭಾರತದ ವಿರುದ್ಧ ಮುಗಿಬೀಳುತ್ತಿದ್ದು, ಪ್ರಧಾನಿ ಮೋದಿ ವಿರುದ್ಧ ವಿಡಂಬನಾತ್ಮಕ ಸುದ್ದಿ ಮಾಡುತ್ತಿವೆ.
ಭಾರತದ ವಾಯುದಾಳಿಗೆ ಪಾಕಿಸ್ತಾನ ಗಢಗಢ
ವಾಯುಸೇನೆ ದಾಳಿ ಬಗ್ಗೆ ಮೊದಲ ಪ್ರತಿಕ್ರಿಯೆ ಕೊಟ್ಟ ಪಾಕಿಸ್ತಾನವು, ಭಾರತೀಯ ದಾಳಿಯ ಬಗ್ಗೆ ನಮಗೆ ಮೊದಲೇ ಮಾಹಿತಿ ಇತ್ತು
ಭಾರತೀಯ ದಾಳಿಯನ್ನ ನಿರೀಕ್ಷಿಸಿದ್ದೆವು ಎಂದ ಪಾಕಿಸ್ತಾನ ಪ್ರಧಾನಿ ಬೆಳಗ್ಗೆಯಿಂದಲೂ ತುರ್ತು ಸಭೆ ನಡೆಸುತ್ತಿದ್ದಾರೆ.
ಪಾಪಿ ಪಾಕ್ಗೆ ತಕ್ಕ ಪಾಠ ಕಲಿಸಿದ ಭಾರತೀಯ ಸೇನೆಯು ಮಿಡ್ನೈಟ್ನಲ್ಲಿ ನಡೆಸಿದ ಮಹಾ ಏರ್ ಸ್ಟ್ರೈಕ್ ಇದಾಗಿದೆ. ವಾರ್ಗೂ ಮುನ್ನ ಪಾಕ್ಗೆ ಸ್ಪಷ್ಟ ಎಚ್ಚರಿಕೆ ನೀಡಿದ ಭಾರತವು
ಪ್ರತೀಕಾರದ ದಾಳಿಗೆ ಪಾಕ್ ಉಗ್ರನೆಲೆಗಳು ಉಡೀಸ್ ಆಗಿವೆ. ಸಾವಿರ ಕೆಜಿ ಬಾಂಬ್ ಬಳಸಿ ಜೈಷ್-ಎ- ಮಹಮ್ಮದ್ ನೆಲೆಗಳನ್ನ ಪೀಸ್ ಪೀಸ್ ಮಾಡಿದಿ ಸೇನೆ.
ಮಿರಾಜ್-2000 ಯುದ್ಧ ವಿಮಾನ ಬಳಸಿ ಕಾರ್ಯಾಚರಣೆಯನ್ನು ಮುಂಜಾನೆ 3.30 ರ ಸುಮಾರಿಗೆ ಬಾಲ್ಕೋಟ್ನ ಉಗ್ರ ನೆಲೆ ಮೇಲೆ ದಾಳಿ ನಡೆಸಿದೆ. IAF ಫೈಟರ್ ಜೆಟ್ ಮೂಲಕ ದಾಳಿ ನಡೆಸಿದ ಭಾರತೀಯ ಸೇನೆ ಟೆರರ್ ಕ್ಯಾಂಪ್ಗಳ ಮೇಲೆ ಎಡೆಬಿಡದೇ ಬಾಂಬ್ ದಾಳಿ ಮಾಡಿದೆ. 12 ಮಿರಾಜ್ ಫ್ಲೈಟ್ಗಳಿಂದ ನಡೆದ ಭಾರಿ ಏರ್ ಸ್ಟ್ಕೈಕ್ ಪಾಕ್ ಆಕ್ರಮಿತ ಕಾಶ್ಮೀರದ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದೆ.
ಲೇಸರ್ ಗೈಡಿಡ್ ಬಾಂಬ್
ಉಗ್ರರ ನೆಲೆ ಮೇಲೆ ಲೇಸರ್ ಗೈಡಿಡ್ ಬಾಂಬ್ಗಳನ್ನ ಬಳಸಿದ್ದು, ಭಾರತದ ಕಣಿವೆ ರಾಜ್ಯಕ್ಕೆ ಮತ್ತೆ ಉಗ್ರರನ್ನ ನುಗ್ಗಿಸಲು ರೆಡಿಯಾಗಿದ್ದ ಪಾಪಿ JEM POK ಯ ಗಡಿ ಅಂಚಿನಲ್ಲಿ ಉಗ್ರರು ಇರುವ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದೆ. ಸುಮಾರು 200 ರಿಂದ 300 ಕ್ಕೂ ಹೆಚ್ಚು ಉಗ್ರ ನೆಲೆಗಳನ್ನ ಸರ್ವನಾಶ ಮಾಡಿದ ಭಾರತೀಯ ಸೇನೆಮುಂಜಾನೆ 3.30 ರಿಂದ ಸುಮಾರು 15 ನಿಮಿಷಗಳ ಕಾಲ ಏರ್ ಸ್ಟ್ರೈಕ್ ನಡೆದಿದೆ. 12 ಮಿರಾಜ್ ಯುದ್ಧ ವಿಮಾನಗಳ ಮೂಲಕ ಬಾಂಬ್ ದಾಳಿ ನಡೆಸಿದೆ ಭಾರತೀಯ ಸೇನೆ.
ವಾಯುಸೇನೆಯಿಂದ ಸುದ್ದಿಗೋಷ್ಠಿ
ಪಾಪಿ ಪಾಕ್ ಮೇಲೆ ಭಾರತೀಯ ಸೇನೆಯಿಂದ ಏರ್ ಅಟ್ಯಾಕ್ ನಡೆಸಿದ ನಂತರ, ಇಂದು ಬೆಳಗ್ಗೆ ಭಾರತೀಯ ವಾಯುಸೇನೆಯಿಂದ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಭಾರತೀಯ ವಾಯುಸೇನೆ ಮುಖ್ಯಸ್ಥರು ಉಗ್ರ ನೆಲೆಗಳ ಮೇಲಿನ ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಿದ್ದಾರೆ.
POKಯಲ್ಲಿ ಉಗ್ರರ ನಾಲ್ಕು ಲಾಂಚಿಂಗ್ ಪ್ಯಾಡ್ಗಳು ಉಡೀಸ್ ಮಾಡಿರುವ ಭಾರತೀಯ ಸೇನೆ, ಪಾಕ್ ಆಕ್ರಮಿತ ಬಾಲ್ಕೋಟ್ನಲ್ಲಿದ್ದ ಲ್ಯಾಂಚಿಂಗ್ ಪ್ಯಾಡ್ಗಳು,ಜೈಷ್-ಎ-ಮಹಮ್ಮದ್ ಉಗ್ರ ಸಂಘಟನೆಗೆ ಸೇರಿದ್ದ ಲಾಂಚ್ ಪ್ಯಾಡ್ಗಳ ಮೇಲೆ
ಸಾವಿರ ಕೆಜಿ ಲೇಸರ್ ಬಾಂಬ್ಗಳನ್ನ ಬಳಸಿದ್ದ IAF ಉಗ್ರರ 3 ಕಂಟ್ರೋಲ್ ರೂಂಗಳನ್ನ ಸರ್ವ ನಾಶ ಮಾಡಿರುವ ಭಾರತೀಯ ಸೇನೆಯು
ಮತ್ತಷ್ಟು ದಾಳಿಗೆ ಸಜ್ಜಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
