ಕ್ರೀಡೆ
ಅನಿಲ್ಕುಂಬ್ಳೆ ಆಯ್ಕೆಯ ‘ವಿಶ್ವಕಪ್ ಟೀಂ ಇಂಡಿಯಾ ಆಟಗಾರರು’ ಯಾರ್ಯಾರು ಗೊತ್ತಾ..!

ಸುದ್ದಿದಿನ ಡೆಸ್ಕ್ : ಇಂಗ್ಲೆಂಡ್ನಲ್ಲಿ ಮೇ 30 ರಿಂದ ಆರಂಭವಾಗಲಿರುವ ಪ್ರತಿಷ್ಠಿತ ವಿಶ್ವಕಪ್ ಟೂರ್ನಿಗಾಗಿ ಟೀಮ್ ಇಂಡಿಯಾ ಈಗಾಗಲೇ ಹಲವು ಸಿದ್ಧತೆಗಳನ್ನ ಮಾಡಿಕೊಂಡಿದೆ. ಈ ಮಹಾಸಂಗ್ರಾಮದಲ್ಲಿ ಆಡುವ ಆಟಗಾರರ ತಂಡದ ಆಯ್ಕೆ ಮಾತ್ರ ಆಗಿಲ್ಲ.
ಹೀಗಿದ್ದರೂ ಟೀಮ್ ಇಂಡಿಯಾದ ಹಲವು ಮಾಜಿ ಆಟಗಾರರು ವಿಶ್ವಕಪ್ ತಂಡದಲ್ಲಿ ಆಡಬೇಕಾದ ಆಟಗಾರರನ್ನ ಆಯ್ಕೆ ಮಾಡುತ್ತಿದ್ದಾರೆ. ಈಗ ಟೀಮ್ ಇಂಡಿಯಾ ಮಾಜಿ ಕೋಚ್, ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ಕೂಡ ತಮ್ಮ ಇಷ್ಟದ ವಿಶ್ವಕಪ್ ತಂಡವನ್ನ ಪ್ರಕಟಿಸಿದ್ದಾರೆ.
ಅನಿಲ್ ಕುಂಬ್ಳೆಯ ವಿಶ್ವಕಪ್ ತಂಡ ಹೀಗಿದೆ
ವಿರಾಟ್ ಕೊಹ್ಲಿ ( ನಾಯಕ), ಎಂ.ಎಸ್ ಧೋನಿ, ರೋಹಿತ್ ಶರ್ಮಾ, ಶಿಖರ್ ಧವನ್, ಕೇದಾರ್ ಜಾಧವ್, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಕುಲ್ದೀಪ್ ಯಾದವ್, ಯಜುವೇಂದರ್ ಚಹಾಲ್, ಮಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಖಲೀಲ್ ಅಹ್ಮದ್, ಅಂಬಟಿ ರಾಯುಡು, ರಿಷಬ್ ಪಂತ್, ವಿಜಯ್ ಶಂಕರ್
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ
ದಾವಣಗೆರೆ | ಮಹಿಳಾ ಸೇವಾ ಸಮಾಜ ಪ್ರೌಢ ಶಾಲೆ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಜಿಲ್ಲಾ ಮತ್ತು ರಾಜ್ಯಮಟ್ಟಕ್ಕೆ ಆಯ್ಕೆ

ಸುದ್ದಿದಿನ, ದಾವಣಗೆರೆ : 2022-23 ನೇ ಸಾಲಿನ ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಮಹಿಳಾ ಸೇವಾ ಸಮಾಜ ಪ್ರೌಢಶಾಲೆಯ ವಿದ್ಯಾರ್ಥಿ ಮಣಿಕಂಠ ಆರ್. ಅವರು 100 ಮೀ ಫ್ರೀ ಸ್ಟೈಲ್ 200ಮೀ ಫ್ರೀ ಸ್ಟೈಲ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿಗ ಆಡಳಿತ ಮಂಡಳಿ ಹಾಗೂ ಶಾಲಾ ಸಿಬ್ಬಂದಿವರ್ಗ ಅಭಿನಂದನ ಸಲ್ಲಿಸಿದ್ದಾರೆ.
ಜಿಲ್ಲಾಮಟ್ಟಕ್ಕೆ ಆಯ್ಕೆ
2022-23 ನೇ ಸಾಲಿನ ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ತಾಲ್ಲೂಕುಮಟ್ಟದ ಕ್ರೀಡಾಕೂಟಗಳಲ್ಲಿ ಮಹಿಳಾ ಸೇವಾ ಸಮಾಜ ಪ್ರೌಢಶಾಲೆಯ ವಿದ್ಯಾರ್ಥಿನಿ ಪೂರ್ಣಿಮ ಎಂ ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಕುಮಾರಿ ಬಂಗಾರಿ ಅಂಜಲಿ 3 ಕಿ.ಮೀ ನಡಿಗೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ಹಾಗೂ ಶಾಲಾ ಸಿಬ್ಬಂದಿವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಭಾರತೀಯ ಒಲಂಪಿಕ್ ಸಂಸ್ಥೆಯ ಮೊದಲ ಮಹಿಳಾ ಅಧ್ಯಕ್ಷೆ ಪಿ.ಟಿ. ಉಷಾ ಅವರನ್ನು ಅಭಿನಂದಿಸಿದ ರಾಜ್ಯಸಭಾ ಸಭಾಪತಿ

ಸುದ್ದಿದಿನ ಡೆಸ್ಕ್ : ಭಾರತೀಯ ಒಲಂಪಿಕ್ ಸಂಸ್ಥೆಯ ಮೊದಲ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಾಜ್ಯಸಭಾ ಸದಸ್ಯೆ ಪಿ.ಟಿ. ಉಷಾ ಅವರನ್ನು ರಾಜ್ಯಸಭಾ ಸಭಾಪತಿ ಜಗದೀಪ್ ಧನಕರ್ ಅಭಿನಂದಿಸಿದ್ದಾರೆ.
ಸದನ ಇಂದು ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿಯವರು ಮಾತನಾಡಿ, ದೇಶದಲ್ಲಿ ಮನೆಮಾತಾಗಿರುವ ಪಿ.ಟಿ. ಉಷಾ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಗಳಿಸಿದ್ದಾರೆ. ಅತ್ಯುನ್ನತ ಅರ್ಜುನ ಮತ್ತು ಪದ್ಮಶ್ರೀ ಪುರಸ್ಕೃತರಾದ ಅವರು ಸದ್ಯ ಕ್ರೀಡೆಗಳನ್ನು ಮತ್ತು ಕ್ರೀಡಾ ಶಿಕ್ಷಣವನ್ನು ಉತ್ತೇಜಿಸುತ್ತಿದ್ದಾರೆ. ಕ್ರೀಡಾ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ ಎಂದು ಬಣ್ಣಿಸಿದರು.
Thank you Hon, Chairman Sir and all my fellow Rajya Sabha members for the kind words, and the good wishes. I look forward to the responsibilities at hand with utmost sincerity! 🙏🏽 https://t.co/6qb1NcaCgD
— P.T. USHA (@PTUshaOfficial) December 12, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್ ಶಿಪ್ ; ಕರ್ನಾಟಕ ರಾಜ್ಯ ತಂಡಕ್ಕೆ ದಾವಣಗೆರೆ ಜಿಲ್ಲೆಯಿಂದ ಎನ್. ಜಿತೇಂದ್ರ ತೋಳಹುಣಸೆ ಆಯ್ಕೆ

ಸುದ್ದಿದಿನ,ದಾವಣಗೆರೆ : ಇದೇ ನವೆಂಬರ್ 17 ರಿಂದ 20 ರ ವರೆಗೆ ನಡೆಯಲಿರುವ ಉತ್ತರಕಾಂಡ ರಾಜ್ಯದ ಹರಿದ್ವಾರದಲ್ಲಿ 48ನೇ ಬಾಲಕರ ವಿಭಾಗದ ಜೂನಿಯರ್ ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್ ಶಿಪ್ಗೆ ಕರ್ನಾಟಕ ರಾಜ್ಯ ತಂಡಕ್ಕೆ ದಾವಣಗೆರೆ ಜಿಲ್ಲೆಯಿಂದ ಎನ್. ಜಿತೇಂದ್ರ ತೋಳಹುಣಸೆ ಇವರು ಆಯ್ಕೆಯಾಗಿರುತ್ತಾರೆ.
ಇವರಿಗೆ ದಾವಣಗೆರೆ ಜಿಲ್ಲಾ ಅಮೆಚೂರ್ ಕಬಡ್ಡಿ ಸಂಸ್ಥೆಯ ಅಧ್ಯಕ್ಷರು ಹಾಗೂ ರಾಜ್ಯ ಅಮೆಚೂರ್ ಕಬಡ್ಡಿ ಸಂಸ್ಥೆಯ ಜಂಟಿ ಕಾರ್ಯದರ್ಶಿ ಯು ಆದ ಎಂ ನಾಗರಾಜ್ ಮತ್ತು ಚೇರ್ಮನ್ ಬಿ.ಜಿ .ಅಜಯ್ ಕುಮಾರ್ .ಪ್ರಧಾನ ಕಾರ್ಯದರ್ಶಿ ಎಂ. ನಾರಾಯಣಸ್ವಾಮಿ, ಕಾರ್ಯಾಧ್ಯಕ್ಷರು ಎಚ್. ನಿಜಗುಣ, ಗೌರವಾಧ್ಯಕ್ಷರು ಹಾಗೂ ಸೈಯದ್ ನಿಸಾರ್ ತರಬೇತುದಾರರಾದ ಬೇತುರೊಡಿ ನ ಡಿ .ರಾಜು ಹಾಗೂ ಸಿ.ಎಚ್ .ಪುಟ್ಟರಾಜ. ಕಬಡ್ಡಿಯ ಕ್ರೀಡಾಪಟುಗಳು, ಅಭಿಮಾನಿಗಳು ಶುಭ ಹಾರೈಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
