ದಿನದ ಸುದ್ದಿ
ಮೋದಿ ‘ಸರ್ಜಿಕಲ್ ಸ್ಟ್ರೈಕ್’ ಅನ್ನು ಬಡತನ, ನಿರುದ್ಯೋಗದ ವಿರುದ್ಧ ಮಾಡಬೇಕಿತ್ತು : ಕಪಿಲ್ ಸಿಬಲ್ ಕಿಡಿ

ಸುದ್ದಿದಿನ, ಬೆಂಗಳೂರು : ನರೇಂದ್ರ ಮೋದಿಯವರು ಸರ್ಜಿಕಲ್ ಸ್ಟ್ರೈಕ್ ಬಡತನದ ವಿರುದ್ಧ ಮಾಡಬೇಕಿತ್ತು. ನಿರುದ್ಯೋಗ ಸಮಸ್ಯೆ ವಿರುದ್ಧ ಮಾಡಬೇಕಿತ್ತು. ನಮ್ಮದೇ ದೇಶದಲ್ಲಿ ಸಾಕಷ್ಟು ಸಮಸ್ಯೆಗಳಿವೆ ಅವುಗಳ ಬಗ್ಗೆ ಚಿಂತಿಸಲು ಅವರಿಗೆ ಸಮಯವಿಲ್ಲ. ಆದರೆ ಕೇವಲ ಪಾಕಿಸ್ತಾನದ ಬಗ್ಗೆ ಮಾತನಾಡುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದರು.
ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಮಾಧ್ಯಮ ಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಣಾಳಿಕೆಯನ್ನು ದೇಶದ ಅಭಿವೃದ್ಧಿ ದೃಷ್ಟಿಯಿಂದ ಅರ್ಥ ಶಾಸ್ತ್ರಜ್ಞರ ಸಲಹೆ ಸೂಚನೆ ಮೇರೆಗೆ ಸಿದ್ಧಪಡಿಸಲಾಗಿದ್ದು ಯುಪಿಎ ಅವಧಿಯಲ್ಲಿ ಹಲವು ಖಾತೆಗಳನ್ನು ನಿಭಾಯಿಸಿದ ಕಪಿಲ್ ಸಿಬಲ್ ಅವರು ಪ್ರಣಾಳಿಕೆಯನ್ನು ಪ್ರಸ್ತುತ ಪಡಿಸಿ ಮಾತನಾಡಿದರು.
ಮೋದಿ ಸರ್ಕಾರದ ಕೆಟ್ಟ ಆರ್ಥಿಕ ಕ್ರಮಗಳಿಂದಾಗಿ ಇಂದು ದೇಶವು ನ್ಯಾಯ ಪಥದಿಂದ ಅನ್ಯಾಯದ ಪಥದ ಕಡೆಗೆ ಸಾಗಿದೆ. ಅಚ್ಚೇದಿನ್ ತರುವುದು, 15 ಲಕ್ಷ ನೀಡುವುದು, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವ ಮೋದಿಯವರ ಭರವಸೆಯು ಸುಳ್ಳಿಗೆ ನೀಡಬಹುದಾದ ಉದಾಹರಣೆಯಾಗಿ ಮಾರ್ಪಾಡಾಗಿವೆ.ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುವಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಗುಂಪು ಹಲ್ಲೆ, ದಲಿತರ ಮೇಲಿನ ದೌರ್ಜನ್ಯ ದಂತಹ ಘಟನೆಗಳು, ಆಂತರಿಕ ಭದ್ರತೆಯು ಆತಂಕಕಾರಿ ಸ್ಥಿತಿ ತಲುಪಿದೆ ಎಂದು ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
ಈ ಸ್ಥಿತಿಯನ್ನು ಕಾಂಗ್ರೆಸ್ ಬದಲಾಯಿಸಿ, ಸಾಮಾಜಿಕ ನ್ಯಾಯವನ್ನ ಎತ್ತಿ ಹಿಡಿಯಲಿದೆ. ಕಾಂಗ್ರೆಸ್ಸಿನ ನ್ಯಾಯ ಯೋಜನೆಯನ್ನು ಅತ್ಯಂತ ಯೋಜಿತವಾಗಿ ರೂಪಿಸಲಾಗಿದೆ.ಇದಕ್ಕಾಗಿ ಪೂರಕವಾಗ ಆರ್ಥಿಕ ಸ್ಥಿತಿಯನ್ನು ಅದ್ಯಯನ ಮಾಡಿ, ಅದರ ಸಾದಕ ಬಾದಕಗಳನ್ನ ಚರ್ಚಿಸಿ ಆ ಬಳಿಕ ಈ ಯೋಜನೆಯನ್ನು ಘೋಷಿಸಲಾಗಿದೆ. ಈ ಯೋಜನೆಯನ್ನು ನಾವು ನಿಶ್ಚಿತವಾಗಿ ಜಾರಿಗೆ ತರುತ್ತೇವೆ ಎಂದರು.
ಉದ್ಯೋಗ ಸೃಷ್ಟಿಸಲು ಸಂಪೂರ್ಣವಾಗಿ ವಿಫಲವಾಗಿರುವ ಮೋದಿ ಸರ್ಕಾರವು ಯುವಕರಿಗೆ ನೀಡಿದ ಭರವಸೆಯನ್ನು ಈಡೇರಿಸಿದೆ ಅವರನ್ನು ವಂಚಿಸಿದೆ. ಕಾಂಗ್ರೆಸ್ ಪ್ರಣಾಳಿಕೆಯು ಉದ್ಯೋಗ ಸಮಸ್ಯೆಯ ಗಂಭೀರತೆ ಅರಿತಿದ್ದು ಸಣ್ಣ, ಮಧ್ಯಮ ಪ್ರಮಾಣದ ಕೈಗಾರಿಕೆಗಳನ್ನು ಅಭಿವೃದ್ಧಿ ಪಡಿಸಿ ಉದ್ಯೋಗ ಸಮಸ್ಯೆಗೆ ಪರಿಹಾರ ನೀಡಲಿದೆ ಎಂದರು
ಶ್ರೀಮಂತರು ಶ್ರೀಮಂತರಾಗಿ ಇರುವ, ಬಡವರು ಬಡವರಾಗಿ ಉಳಿಯುವ ವ್ಯವಸ್ಥೆಯನ್ನು ಕಾಂಗ್ರೆಸ್ ಬೆಂಬಲಿಸುವುದಿಲ್ಲ. 70 ರಿಂದ 80 ಕೋಟಿ ಜನರು 10000ರೂಕ್ಕಿಂತ ಕಡಿಮೆ ಆದಾಯ ಇರುವ ಜನರು ಇದ್ದಾರೆ. ಇವರ ಆರ್ಥಿಕ ಸ್ಥಿತಿ ಸುಧಾರಿಸಲು ಮೋದಿ ಸರ್ಕಾರ ಯಾವುದೇ ಕಾರ್ಯಕ್ರಮಗಳನ್ನು ಮಾಡಲಿಲ್ಲ
ಕಾಂಗ್ರೆಸ್ ಈ ಅಂತರವನ್ನು ಸರಿ ಮಾಡುತ್ತದೆ.ಕಾಂಗ್ರೆಸ್ ಈ ಹಿಂದೆ ಶಿಕ್ಷಣದ ಕಡ್ಡಾಯ ಹಕ್ಕನ್ನು ಜಾರಿಗೊಳಿಸಿತು. ಇನ್ನು ಮುಂದೆಯೂ 12 ನೇ ತರಗತಿಯವರೆಗೆ ಉಚಿತ ಶಿಕ್ಷಣವನ್ನು ನೀಡುವ ಬದ್ಧತೆಯನ್ನು ಕಾಂಗ್ರೆಸ್ ಪಕ್ಷವು ಹೊಂದಿದೆ. ಶಿಕ್ಷಣದ ಮೇಲಿನ ಅನುದಾನವನ್ನು 6% ಜಿಡಿಪಿಗೆ ಹೆಚ್ಚಿಸುವ ಮೂಲಕ ಶಿಕ್ಷಣದ ಮೇಲಿನ ವೆಚ್ಚವನ್ನು ಕಡಿಮೆ ಮಾಡಲಿದ್ದೇವೆ ಎಂದು ಹೇಳಿದರು.
ಕೇಂದ್ರ ಸರ್ಕಾರದ ಹುದ್ದೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ನೀಡುವ ಕುರಿತು ಕಾಂಗ್ರೆಸ್ ಪಕ್ಷವು ಚಿಂತಿಸಿದ್ದು ಇದು ಭಾರತದ ಇತಿಹಾಸದಲ್ಲೇ ಮಹತ್ವದ ಬೆಳವಣಿಗೆ ಆಗಿದೆ.ನ್ಯಾಯಾಂಗ ವ್ಯವಸ್ಥೆಯನ್ನು ಬಲ ಪಡಿಸಲು ಇನ್ನಷ್ಟು ನ್ಯಾಯಾಧೀಶರನ್ನು ನೇಮಕ ಮಾಡಿ 6 ಪ್ರಾಂತೀಯ ಕೋರ್ಟ್ ಗಳನ್ನು ಸ್ಥಾಪಿಸಿ ಅನ್ಯಾಯಕ್ಕೆ ಒಳಗಾದವರಿಗೆ ಶೀಘ್ರ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು. GST ಸಮಿತಿಯನ್ನು ರಚಿಸಿ ಎಲ್ಲರಿಗೂ ಅನುಕೂಲವಾಗುವಂತೆ ಅದನ್ನು ಸರಳೀಕರಿಸಲಾಗುವುದು. ಮೋದಿಯವರು GST, MGNREGA ಹಾಗೂ ಇನ್ನೂ ಹಲವಾರು ಕಾಂಗ್ರೆಸ್ ಯೋಜನೆಗಳ ಜಾರಿಗೆ ವಿರೋಧಿಸಿದ್ದು ನಂತರದಲ್ಲಿ ತಾವೇ ಅದನ್ನು ಲೋಪಭರಿತ ಅನುಷ್ಠಾನದಿಂದ ಜನತೆಗೆ ತೊಂದರೆ ನೀಡಿದರು ಎಂದು ನುಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
