ದಿನದ ಸುದ್ದಿ
‘ಕೈ’ ಜೋಡಿಸಿದ ಶತ್ರುಘ್ನ ಸಿನ್ಹಾ ‘ಪ್ರಜಾಪ್ರಭುತ್ವ ಚಿರಾಯುವಾಗಲಿ’ ಅಂದ್ರು..!

ಸುದ್ದಿದಿನ ಡೆಸ್ಕ್ : ಬದಲಾವಣೆ ಗಾಳಿ ಬಲವಾಗಿ ಬೀಸುತ್ತಿದೆ.ಮೋದಿ ನಿರ್ಗಮನಕ್ಕೆ ದೇಶ ಕಾಯುತ್ತಿದೆ. ಬಿಜೆಪಿಯನ್ನು ತೊರೆಯುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಭರವಸೆಯ ನಾಯಕ ರಾಹುಲ್ ಗಾಂಧಿ ಯವರ ನಾಯಕತ್ವ ಜಗವೇ ಮೆಚ್ಚುತ್ತಿದೆ ಎಂದು ಕಾಂಗ್ರೆಸ್ ಹೇಳಿದೆ.
ಬಿಜೆಪಿ ಸಂಸದ ಶತ್ರುಘ್ನ ಸಿನ್ಹಾ ಇಂದು ಕಾಂಗ್ರೆಸ್ ಸೇರ್ಪಡೆಗೊಂಡರು. ಬಿಜೆಪಿ ಸಂಸ್ಥಾಪನಾ ದಿನವಾದ ಇಂದು (ಏಪ್ರಿಲ್ 6) ಬಿಜೆಪಿ ತೊರೆದು ಕಾಂಗ್ರಸ್ ಗೆ ಕೈ ಜೋಡಿಸಿರುವ ಅವರು ” ನಾನು ತುಂಬಾ ದುಃಖ ಮತ್ತು ನೋವಿನಿಂದ ನನ್ನ ಹಳೆಯ ಪಕ್ಷಕ್ಕೆ ವಿದಾಯವನ್ನು ಹೇಳುತ್ತಿದ್ದೇನೆ. ಇಂದು ಆಪಕ್ಷದ ಸಂಸ್ಥಾಪನಾ ದಿನವಾಗಿರುವುದರಿಂದ ನನ್ನವರೇ ಆಗಿದ್ದ ಪಕ್ಷದ ಯಾರಿಗೂ ನಾನು ನೋಯಿಸುವುದಿಲ್ಲ.
ನಾನು ಈಗ ಸೇರ್ಪಡೆಯಾಗುತ್ತಿರುವ ಮಹಾನ್ ರಾಷ್ಟ್ರೀಯ ಪಕ್ಷವು ನನಗೆ, ಜನತೆಗೆ, ದೇಶಕ್ಕೆ ಮತ್ತು ಸಮಾಜಕ್ಕೆ ಸೇವೆ ಸಲ್ಲಿಸಲು ಪ್ರಗತಿ, ಸಮಗ್ರತೆ, ದೇಶದ ಐಕ್ಯತೆ, ಅಭಿವೃದ್ಧಿಯನ್ನು ಸಾಧಿಸಲು ಪಕ್ಷವು ಒಳ್ಳೆಯ ಅವಕಾಶಗಳನ್ನು ನೀಡುತ್ತದೆಂಬ ವಿಶ್ವಾಸವಿಟ್ಟಿದ್ದೇನೆ.
ದೇಶದ ಮಹಾನ್ಯ ವ್ಯಕ್ತಿಗಳಾದ ಮಹಾತ್ಮ ಗಾಂಧೀಜಿ, ನೆಹರೂ, ಪಟೇಲ್ ರಂತಹ ದಿಗ್ಗಜರು ಕಟ್ಟಿದ ಪಕ್ಷವಿದಾಗಿದೆ. ಸಮರ್ಥರು, ಡೈನಮಿಕ್, ಅನುಭವಿಯಾಗಿರುವ ರಾಹುಲ್ ಗಾಂಧಿಯವರು ಇಂದಿನ ಮತ್ತು ಮುಂದಿನ ಯಶಸ್ವೀ ನಾಯಕತ್ವದ ಮುಖಲಕ್ಷಣವಿರುವ ಇವರ ಅಧ್ಯಕ್ಷತೆಯಲ್ಲಿ ಪಕ್ಷವು ಸರಿಯಾದ ಮಾರ್ಗದಲ್ಲಿ ನಡೆಯುತ್ತದೆ ಎಂಬ ಸಂಪೂರ್ಣ ಭರವಸೆ ನನಗಿದೆ.
ಪ್ರಜಾಪ್ರಭುತ್ವವು ಚಿರಾಯುವಾಗಲಿ ಹಾಗೂ ಕಾಂಗ್ರೆಸ್ ಪಕ್ಷ ಮತ್ತು ಆರ್ ಜೆ ಡಿಯು ಲಾಲು ಮತ್ತು ತೇಜಸ್ವಿ ಮೈತ್ರಿಗೆ ಜಯವಾಗಲಿ ಮಹಾನ್ ಭಾರತ ಚಿರಾಯುವಾಗಲಿ, ಜೈ ಹಿಂದ್” ಎಂದು ತಮ್ಮ ಸರಣಿ ಟ್ವೀಟ್ ಮಾಡಿದ್ದಾರೆ.
It's with a heavy heart and immense pain that I finally bid adieu to my old party, for reasons best known to all of us, on 6th April, which also happens to be the Sansthapna Diwas of BJP.
I don't hold any ill will for our people as they were like my family and I was groomed in— Shatrughan Sinha (@ShatruganSinha) April 6, 2019
this party with the guidance and blessings of the stalwarts like Bharat Ratna Nanaji Deshmukh, late and great PM #atalbiharivajpayee and of course, our friend philosopher, ultimate leader, guru & guide, Sri. L.K #Advani. I would like to include some of those who've not lived up
— Shatrughan Sinha (@ShatruganSinha) April 6, 2019
to the expectations, to those who are responsible for the injustice and for turning Lok Shahi into Tana Shahi. I forgive and forget at this juncture. The differences I have with some of the present people and policies of the party, leave me with no option but to part ways with it
— Shatrughan Sinha (@ShatruganSinha) April 6, 2019
. I'm hopeful that the Grand Old National Party which I'm stepping into, will provide me with opportunities to serve our people, society and nation in terms of unity, prosperity, progress, development, and glory. This is a party of great nation builders and luminaries like
— Shatrughan Sinha (@ShatruganSinha) April 6, 2019
Mahatma Gandhi, Nehru, Patel and many others.
Under the present President of Congress the very dynamic, able, tried, tested and successful face of today and tomorrow's India, @RahulGandhi, I hope, wish and pray that I'm heading into a better direction. Long live democracy and the— Shatrughan Sinha (@ShatruganSinha) April 6, 2019
…..Congress party, along with the alliance of Lalu and Tejasvi's RJD. Long live our great India. Jai Hind.
— Shatrughan Sinha (@ShatruganSinha) April 6, 2019
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
