ದಿನದ ಸುದ್ದಿ
‘ಬಸವರಾಜ ಕಟ್ಟಿಮನಿ’ ಕಥೆಗಳನ್ನು ಕುರಿತ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ

ಸುದ್ದಿದಿನ,ಮೈಸೂರು : ಕನ್ನಡದ ಹೆಸರಾಂತ ಪ್ರಗತಿಶೀಲ ಬರಹಗಾರ, ಕಾದಂಬರಿಕಾರ, ಕಥೆಗಾರ ಬಸವರಾಜ ಕಟ್ಟಿಮನಿಯವರ ಜನ್ಮಶತಮಾನೋತ್ಸವ ವರ್ಷದ ಸಂದರ್ಭದಲ್ಲಿ (1919-2019) “ಬಸವರಾಜ ಕಟ್ಟಿಮನಿಯವರ ಸಣ್ಣ ಕಥೆಗಳನ್ನು ಕುರಿತ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ” ಯೊಂದನ್ನು ಏರ್ಪಡಿಸಿದೆ.
ಈ ಸ್ಪರ್ಧೆಯು ಬಸವರಾಜ ಕಟ್ಟಿಮನಿಯವರ ಸಣ್ಣಕಥೆಗಳನ್ನು ಮಾತ್ರ ಕುರಿತದ್ದಾಗಿರುತ್ತದೆ. ಅವರ ಎಲ್ಲ ಕಥೆಗಳನ್ನು, ಅವುಗಳ ವಸ್ತು, ಧೋರಣೆ, ಪಾತ್ರಗಳು, ಕಥಾಸಂವಿಧಾನ, ಒಟ್ಟು ಪರಿಣಾಮ ಮತ್ತು ವರ್ತಮಾನಕ್ಕೆ ಆ ಕಥೆಗಳು ಪ್ರಸ್ತುತವಾಗುವ ರೀತಿ-ಈ ಎಲ್ಲ ಅಂಶಗಳ ಹಿನ್ನೆಲೆಯಲ್ಲಿ ವಿಮರ್ಶಾತ್ಮಕವಾಗಿ ಅವಲೋಕಿಸುವ ಪ್ರಬಂಧ ಇದಾಗಿರಬೇಕು ಮತ್ತು ಪ್ರಬಂಧವು ಸ್ವತಂತ್ರವಾಗಿ ಬರೆದುದಾಗಿರಬೇಕು. ಸ್ಪರ್ಧೆಯಲ್ಲಿ ಯಾರಾದರೂ ಪಾಲ್ಗೊಳ್ಳಬಹುದು.
ಇಲ್ಲಿ ವಯೋಮಾನದ ನಿರ್ಬಂಧವಿಲ್ಲ ಮತ್ತು ಪ್ರವೇಶ ಧನವಿಲ್ಲ. ಪ್ರಬಂಧವು ಕಟ್ಟಿಮನಿಯವರ ಕೆಲವೇ ಕಥೆಗಳನ್ನು ಕುರಿತಾಗಿರದೇ, ಅವರ ಎಲ್ಲ ಕಥೆಗಳನ್ನು ಸಮಗ್ರವಾಗಿ ಅವಲೋಕನ ಮಾಡಿ ಬರೆದುದಾಗಿರಬೇಕು. ಅಂದರೆ ಇಲ್ಲಿ ಅವರ ಎಲ್ಲ ಕಥೆಗಳನ್ನು ಹೆಸರಿಸುವ ಅಗತ್ಯವಿಲ್ಲವಾದರೂ ಅವೆಲ್ಲವುಗಳ ಹಿಂದಿರುವ ಧೋರಣೆಯನ್ನು ಸಮಗ್ರವಾಗಿ ಗ್ರಹಿಸಿ ಒಟ್ಟುನೋಟದ ರೀತಿಯಲ್ಲಿ ಕಟ್ಟಿಕೊಡುವಂತಿರಬೇಕು. ಪ್ರಬಂಧವು 2500 ರಿಂದ 2700 ಶಬ್ದಗಳ ಮಿತಿಯಲ್ಲಿರಬೇಕು ಮತ್ತು ಸ್ಪಷ್ಟವಾಗಿ ಡಿ.ಟಿ.ಪಿ ಮಾಡಿಸಿ, ದೋಷಗಳನ್ನು ತಿದ್ದಿದ ಲೇಖನವನ್ನೇ ಕಳಿಸಬೇಕು.
ಈ ಪ್ರಬಂಧ ಸ್ಪರ್ಧೆಯಲ್ಲಿ ಮೊದಲ, ಎರಡನೆಯ ಹಾಗೂ ಮೂರನೆಯ ಸ್ಥಾನ ಪಡೆಯುವ ವಿಮರ್ಶಾತ್ಮಕ ಪ್ರಬಂಧಗಳಿಗೆ ಪ್ರತಿಷ್ಠಾನವು ಕ್ರಮವಾಗಿ, ರೂ. 10,000/-, ರೂ. 7000/- ಹಾಗೂ ರೂ. 5000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ಕೊಡಲಾಗುವುದು. ಈ ಬಹುಮಾನಗಳನ್ನು ಹೊರತುಪಡಿಸಿ, ಬಂದ ಪ್ರಬಂಧಗಳಲ್ಲಿ ನಿರ್ಣಾಯಕರು ಸೂಕ್ತವೆಂದು ಪರಿಗಣಿಸುವ ಇನ್ನೂ ಎರಡು ಅಥವಾ ಮೂರನ್ನು ಆಯ್ಕೆ ಮಾಡಿ ಅವುಗಳಿಗೆ ತಲಾ 2,500/- ರೂಪಾಯಿಗಳ ಬಹುಮಾನವನ್ನು ಕೊಡಲಾಗುವುದು. ಆಯ್ಕೆಯಾದ ಪ್ರಬಂಧಗಳನ್ನು ಪ್ರತಿಷ್ಠಾನದಿಂದ ಗ್ರಂಥರೂಪದಲ್ಲಿ ಪ್ರಕಟಿಸಲಾಗುವುದು.
ಲೇಖಕರು ದಿನಾಂಕ: 30-6-2019ರ ಒಳಗೆ ತಮ್ಮ ವಿಮರ್ಶಾತ್ಮಕ ಪ್ರಬಂಧಗಳನ್ನು“ಅಧ್ಯಕ್ಷರು, ಬಸವರಾಜ ಕಟ್ಟಿಮನಿ ಪ್ರತಿಷ್ಠಾನ, ಕುಮಾರ ಗಂಧರ್ವ ರಂಗಮಂದಿರ, ಬೆಳಗಾವಿ-590016”ಈ ವಿಳಾಸಕ್ಕೆ ನೊಂದಾಯಿತ ಅಂಚೆಯ ಮೂಲಕ ಕಳಿಸಬೇಕು. ನಂತರ ಬಂದ ಪ್ರಬಂಧಗಳನ್ನು ಸ್ವೀಕರಿಸಲಾಗುವುದಿಲ್ಲ. ಹೆಚ್ಚಿನ ವಿವರಗಳಿಗೆ 0831-2474648 ದೂರವಾಣಿಯನ್ನು ಸಂಪರ್ಕಿಸಬಹುದು ಎಂದು ಪ್ರತಿಷ್ಠಾನದ ಅಧ್ಯಕ್ಷ ಪ್ರೊ. ಮಲ್ಲಿಕಾರ್ಜುನ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243

-
ನಿತ್ಯ ಭವಿಷ್ಯ6 days ago
ಸೋಮವಾರ- ರಾಶಿ ಭವಿಷ್ಯ ಜನವರಿ-23,2023 : ಈ ರಾಶಿಯವರಿಗೆ ಸಾಡೇ ಸಾತಿ ಶನಿಯಿಂದ ಮುಕ್ತಿ,ಎಲ್ಲಾ ನಿಮ್ಮ ಕೆಲಸಗಳು ನೆರವೇರಲಿ
-
ದಿನದ ಸುದ್ದಿ4 days ago
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ
-
ದಿನದ ಸುದ್ದಿ11 hours ago
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
-
ದಿನದ ಸುದ್ದಿ10 hours ago
ನಟ ಮನದೀಪ್ ರಾಯ್ ನಿಧನ