ದಿನದ ಸುದ್ದಿ
ಕಾರು ಬೈಕ್ ಗೆ ಡಿಕ್ಕಿ : ದಾವಣಗೆರೆ ವಿವಿ ವಿದ್ಯಾರ್ಥಿನಿ ಸಾವು

ಸುದ್ದಿದಿನ,ದಾವಣಗೆರೆ: ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ದಾವಣಗೆರೆ ವಿಶ್ವವಿದ್ಯಾಲಯ ವಿದ್ಯಾರ್ಥಿನಿ ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ದಾವಣಗೆರೆ ವಿಶ್ವವಿದ್ಯಾಲಯ ಮುಂಭಾಗದಲ್ಲಿ ಶನಿವಾರ ನಡೆದಿದೆ.
ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಗಣಿತ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಶೈಲಜಾ (23) ಮೃತ ವಿದ್ಯಾರ್ಥಿನಿ. ಶನಿವಾರ ಮಧ್ಯಾಹ್ನ ವೇಳೆ ಕಾಲೇಜ್ ಮುಗಿಸಿ ತನ್ನ ದ್ವಿಚಕ್ರ ವಾಹನದಲ್ಲಿ ದಾವಣಗೆರೆ ವಿವಿಯ ಮುಖ್ಯ ಗೇಟ್ ನಿಂದ ಹೊರ ಹೋಗುವಾಗ ಅತೀವೇಗವಾಗಿ ಬಂದ ಕಾರು ಬೈಕ್ ಡಿಕ್ಕಿ ಹೊಡೆದಿದೆ.
ಡಿಕ್ಕಿಯಾದ ತಕ್ಷಣ ಶೈಲಜಾ ತಲೆಗೆ ಬಲವಾಗಿ ಹೊಡೆತ ಬಿದ್ದು ರಕ್ತ ಸ್ರಾವ ಆಗಿದೆ. ತಕ್ಷಣ ಆಸ್ಪತ್ರೆಗೆ ಕರೆದೊಯುವ ವೇಳೆ ರಸ್ತೆ ಮಾರ್ಗದಲ್ಲಿ ಸಾವನ್ನಪ್ಪಿದ್ದಾಳೆ.
ವಿದ್ಯಾರ್ಥಿಗಳ ಆಕ್ರೋಶ
ಬೀರೂರು ಸಮ್ಮಸಗಿ ರಾಜ್ಯ ಹೆದ್ದಾರಿ ಕಾಲೇಜ್ ಮುಂಭಾಗದಲ್ಲಿ ಹಾದು ಹೋಗಿದ್ದು ವಾಹನಗಳ ದಟ್ಟನೆ ಹೆಚ್ಚಾಗಿದೆ. ಅತ್ಯಂತ ವೇಗದಲ್ಲಿ ವಾಹನಗಳನ್ನು ಚಲಾಯಿಸಲಾಗುತ್ತಿದೆ. ವಿದ್ಯಾರ್ಥಿಗಳು ರಸ್ತೆಯನ್ನು ದಾಟ್ಟುವಾಗ ಸಾಕಷ್ಟು ಅಪಘಾತಗಳಾಗಿವೆ. ಯಾವುದೇ ಸೂಚನೆ ಫಲಕಗಳಿಲ್ಲ.
ಹಾಗೂ ತಕ್ಷಣ ವಿವಿ ಮುಂಭಾಗದಲ್ಲಿ ವಾಹನಗಳು ನಿಧಾನ ಗತಿಯಲ್ಲಿ ಸಂಚಾರಿಸುವಂತೆ ಕ್ರಮ ವಹಿಸಬೇಕು. ರಸ್ತೆ ಅಪಘಾತದಲ್ಲಿ ಮೃತ ಪಟ್ಟಿರುವ ವಿದ್ಯಾರ್ಥಿನಿ ಶೈಲಜಾ ಸಾವಿಗೆ ರಾಜ್ಯ ರಸ್ತೆ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳ ಬೇಜವಾಬ್ದಾರಿ ಕಾರಣ ಎಂದು ವಿವಿ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243

-
ನಿತ್ಯ ಭವಿಷ್ಯ7 days ago
ಸೋಮವಾರ- ರಾಶಿ ಭವಿಷ್ಯ ಜನವರಿ-23,2023 : ಈ ರಾಶಿಯವರಿಗೆ ಸಾಡೇ ಸಾತಿ ಶನಿಯಿಂದ ಮುಕ್ತಿ,ಎಲ್ಲಾ ನಿಮ್ಮ ಕೆಲಸಗಳು ನೆರವೇರಲಿ
-
ದಿನದ ಸುದ್ದಿ5 days ago
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ
-
ದಿನದ ಸುದ್ದಿ19 hours ago
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
-
ದಿನದ ಸುದ್ದಿ18 hours ago
ನಟ ಮನದೀಪ್ ರಾಯ್ ನಿಧನ