ದಿನದ ಸುದ್ದಿ
ಈಗಲಾದರೂ ಮೀನುಗಾರರ ಕುಟುಂಬಗಳು ನ್ಯಾಯ ಪಡೆದುಕೊಳ್ಳಲಿ

ಕಳೆದ ಡಿಸೆಂಬರ್ 15 ರಂದು ನಾಪತ್ತೆಯಾಗಿದ್ದ ಕರ್ನಾಟಕದ ಮೀನುಗಾರರಿದ್ದ ಸುವರ್ಣ ತ್ರಿಭುಜ ದೋಣಿ ಮೊನ್ನೆ ಪತ್ತೆಯಾಗಿದೆ ಎಂದು ನೌಕಾಪಡೆ ದೋಣಿಯ ಫೋಟೋ ಸಮೇತ ಬಹಿರಂಗಪಡಿಸಿದೆ.ಆದರೆ ಮೀನುಗಾರರು ಬದುಕಿ ಉಳಿದಿರುವ ಲಕ್ಷಣಗಳು ತೋರುತ್ತಿಲ್ಲ.
Missing Fishing Boat Wreck Found by #IndianNavy – After an intensive search by ships & aircraft since December 2018, #IndianNavy has located the wreck of fishing vessel Suvarna Tribhuja 33 km WSW of the coast of Malvan. The wreck was found by #INSNireekshak on 01 May 19. 1/2 pic.twitter.com/23ZVJ3XfxZ
— SpokespersonNavy (@indiannavy) May 2, 2019
ಇದೀಗ ಉಡುಪಿ ಶಾಸಕರು ಮತ್ತು ಮಾಜಿ ಸಚಿವರು ನೇರವಾಗಿ ಭಾರತೀಯ ನೌಕಾಪಡೆಯ ಐ ಎನ್ ಎಸ್ ಕೊಚ್ಚಿನ್ ನೌಕೆಯೇ ಮೀನುಗಾರರ ದೋಣಿಗೆ ಹೊಡೆದು ಮುಳಿಗಿಸಿರುವ ಆತಂಕ ವ್ಯಕ್ತಪಡಿಸಿದ್ದಾರೆ.
ಇದೆಲ್ಲ ಸುಳ್ಳಾಗಲಿ, ನಮ್ಮ ಮೀನುಗಾರರು ಬದುಕಿರಲಿ ಎಂದು ಆಶಿಸೋಣ. ಆದರೆ ಅಕಸ್ಮಾತ್ ಇವರು ವ್ಯಕ್ತಪಡಿಸಿರುವ ಅನುಮಾನ ನಿಜವೇ ಆಗಿದ್ದರೆ!? ಆಗ ಕೆಲವು ಗಂಭೀರ ಪ್ರಶ್ನೆಗಳನ್ನು ಕೇಂದ್ರ ಸರ್ಕಾರ ಉತ್ತರಿಸಬೇಕಾಗುತ್ತದೆ.
- ಮೀನುಗಾರರ ಬೋಟು ಪತ್ತೆಯಾಗಿರುವುದು ಮಹಾರಾಷ್ಟ್ರ ಕರಾವಳಿಯಿಂದ ಕೇವಲ 33 ಕಿಲೋಮೀಟರ್ ದೂರದಲ್ಲಿ. ಡಿಸೆಂಬರ್ 13 ರಿಂದ ಇದುವರೆಗೆ ದೇಶದ ಪಶ್ಚಿಮ ಕರಾವಳಿಯಲ್ಲಾಗಲೀ, ಅರಬ್ಬೀ ಸಮುದ್ರದಲ್ಲಾಗಲೀ ಯಾವುದೇ ಹವಾಮಾನ ವೈಪರೀತ್ಯ ಆದ ವರದಿ ಇಲ್ಲ. ಅಂದರೆ ಬೋಟು ಹಾಳಾಗಿಯೋ, ಹಿಡಿತ ತಪ್ಪಿಯೋ ಸಮುದ್ರದಲ್ಲಿ ಮುಳುಗಿದರೆ ಕನಿಷ್ಟ ಸಂದೇಶವನ್ನು ತಲುಪಿಸಲಾರದ ಸ್ಥಿತಿಯಂತೂ ಇರುವುದಿಲ್ಲ. ಹಾಗೆ ಮುಳುಗಿದರೆ ಲೈಫ್ ಜಾಕೆಟ್ ಧರಿಸಿ ಕೆಲವರಾದರೂ ಬದುಕಿ ಉಳಿಯುವ ಸಾಧ್ಯತೆ ಇರುತ್ತದೆ.
- ಬೋಟ್ ಮುಳುಗಿರುವುದು ಹೀಗಲ್ಲವಾದರೆ ಉಳಿಯುವ ಎರಡು ಸಾದ್ಯತೆಗಳೆಂದರೆ ಒಂದು ಶತ್ರುಪಡೆಯ ಯುದ್ಧ ನೌಕೆ ಹೊಡೆದು ಮುಳುಗಿಸಿರುವುದು ಮತ್ತೊಂದು ನಮ್ಮದೇ ನೌಕಾಪಡೆ ಶತ್ರುಗಳ ದೋಣಿ ಎಂದು ಭಾವಿಸಿಯೋ ಅಥವಾ ಬೇರಾವ ಕಾರಣದಿಂದಲೋ ಮೀನುಗಾರರ ದೋಣಿಯನ್ನು ಹೊಡೆದು ಮುಳುಗಿಸಿರುವುದು.
- ದೋಣಿ ಪತ್ತೆಯಾಗಿರುವುದು ಭಾರತದ ಸಾಗರ ಗಡಿಯೊಳಗೆ ಆಗಿರುವುದರಿಂದ ಇದು ಶತ್ರುಪಡೆಯ ಕೆಲಸ ಅಲ್ಲ ಎಂದು ಹೇಳಬಹುದು. ಕೊನೆಯ ಸಾಧ್ಯತೆ ನಮ್ಮದೇ ನೌಕಾಪಡೆ ದಿಡೀರ್ ದಾಳಿ ನಡೆಸಿ ಸುವರ್ಣ ತ್ರಿಭುಜ ದೋಣಿಯನ್ನು ಮುಳುಗಿಸಿರುವುದು.
- ಇದು ಹೀಗೇ ಆಗಿದ್ದ ಪಕ್ಷದಲ್ಲಿ ನಾಲ್ಕು ತಿಂಗಳ ಕಾಲ ಮಾಹಿತಿಯನ್ನು ಮುಚ್ಚಿಡಲಾಗಿದೆ. ಇದಕ್ಕೆ ಕಾರಣ ಲೋಕಸಭಾ ಚುನಾವಣೆ.
- ಕೇಂದ್ರ ಸರ್ಕಾರಕ್ಕೆ ಸರಿಯಾದ ಮಾಹಿತಿ ಇದ್ದ ಕಾರಣದಿಂದಲೇ ಈ ನಾಲ್ಕು ತಿಂಗಳ ಕಾಲ ತೋರಿಕೆಯ ಹುಡುಕಾಟ ನಡೆಸುತ್ತಿದ್ದುದನ್ನು ಗಮನಿಸಬಹುದು.
- ಇಲ್ಲಿ ನೌಕಾಪಡೆ ತಿಳಿದೋ ತಿಳಿದೆಯೋ ಮೀನುಗಾರರ ದೋಣಿಯನ್ನು ಮುಳುಗಿಸರಬಹುದು. ಆದರೆ ಕೇಂದ್ರ ಸರ್ಕಾರ ಮಾತ್ರ ಉದ್ದೇಶಪೂರ್ವಕವಾಗಿ ಸತ್ಯವನ್ನು ಮುಚ್ಚಿಟ್ಟಿದೆ ಎನಿಸುತ್ತದೆ. ಇದು ನಿಜವಾಗಿದ್ದರೆ ಮೀನುಗಾರರ ಕುಟುಂಬಗಳ ದೃಷ್ಟಿಯಿಂದ ಅಕ್ಷಮ್ಯ ಅಪರಾಧವೇ ಸರಿ.
- ಸಚಿವ ಪ್ರಮೋದ್ ಮಧ್ವರಾಜ್, ಮೀನುಗಾರ ಸಮುದಾಯದ ಮುಖಂಡ ಜಿ ಶಂಕರ್ ಮೊದಲಾದವರು ಆಗ್ರಹಿಸಿರುವ ರೀತಿ ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸುವುದೇ ಸೂಕ್ತ.
- ಸತ್ಯವನ್ನು ಮುಳುಗಿಸಲು ಆಸ್ಪದ ನೀಡಲಾಗದು. ಮೀನುಗಾರರ ದೋಣಿ ಹೇಗೆ ಮುಳುಗಿತು, ಎಲ್ಲಿ ಮುಳಿಗಿತು? ಯಾರಿಂದ ಮುಳುಗಿತು, ಮೀನುಗಾರರು ಏನಾದರು? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಗಲೇಬೇಕು.
ಈ ಪ್ರಶ್ನೆಗಳಿಗೆ ಉತ್ತರ ಪಡೆಯಲು ಕೇಂದ್ರ ಸರ್ಕಾರ ಹಿಂದೆ ಮುಂದೆ ಯೋಚಿಸಿದರೆ ಅದು ಕರಾವಳಿಯ ಮೀನುಗಾರ ಸಮುದಾಯಕ್ಕೆ ದೊಡ್ಡ ದ್ರೋಹವಾಗಲಿದೆ. ಕನಿಷ್ಟ ಈಗಲಾದರೂ ಮೀನುಗಾರರ ಕುಟುಂಬಗಳು ನ್ಯಾಯ ಪಡೆದುಕೊಳ್ಳಲಿ.
The wreck was found through Side Scan Sonar operations and confirmed today by Naval Divers undertaking saturation diving at a depth of 60 metres.2/2 pic.twitter.com/SuVFNEpOnz
— SpokespersonNavy (@indiannavy) May 2, 2019
– ಹರ್ಷಕುಮಾರ್ ಕುಗ್ವೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
