ದಿನದ ಸುದ್ದಿ
2019 ರ ಚುನಾವಣಾ ತೀರ್ಪು : ಬಲಪಂಥೀಯ ದಾಳಿಯ ಕ್ರೋಡೀಕರಣದ ಸೂಚನೆ

- ಮೋದಿಯವರನ್ನು ಒಬ್ಬ ಬಲಿಷ್ಠ ನಾಯಕನನ್ನಾಗಿ ಬಿಂಬಿಸಿ ಬಿಜೆಪಿ ಪ್ರಚಾರ ನಡೆಸಿದ್ದು ಮತ್ತು ಪುಲ್ವಾಮಾ ನಂತರದ ಪರಿಸ್ಥಿತಿ ಹಾಗೂ ಬಾಲಾಕೋಟ್ ದಾಳಿಯನ್ನು ಬಳಸಿಕೊಂಡು ಕೋಮುವಾದಿ ಛಾಯೆಯ ರಾಷ್ಟ್ರವಾದವನ್ನು ಬಡಿದೆಬ್ಬಿಸಿದ್ದು ಮೋದಿ ಸರಕಾರದ ಅಡಿಯಲ್ಲಿ ಜನರು ಎದುರಿಸಿದ ನೈಜ ಸಮಸ್ಯೆಗಳಾದ ಕೃಷಿ ಬಿಕ್ಕಟ್ಟು, ನಿರುದ್ಯೋಗ, ಹದಗೆಡುತ್ತಿರುವ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಹಾಗೂ ಅಲ್ಪಸಂಖ್ಯಾತರು, ಮಹಿಳೆಯರು ಮತ್ತು ದಲಿತರ ಮೇಲಿನ ನಿರಂತರ ದಾಳಿಗಳು ಇವುಗಳನ್ನು ಮೀರಿ ನಿಲ್ಲುವಲ್ಲಿ ಯಶಸ್ಸನ್ನು ತಂದುಕೊಟ್ಟಿತೆಂದು ಕಾಣಿಸುತ್ತದೆ. 2014ರ ನಂತರ ಬಲಪಂಥೀಯ ದಾಳಿ ಇನ್ನಷ್ಟು ಕ್ರೋಡೀಕರಣಗೊಂಡಿರುವುದನ್ನು ಈ ಫಲಿತಾಂಶ ಸೂಚಿಸುತ್ತದೆ.
17ನೇ ಲೋಕಸಭೆ ಚುನಾವಣೆಯ ಫಲಿತಾಂಶವಾಗಿ ಬಿಜೆಪಿ ಮತ್ತು ಎನ್ಡಿಎ ನಿರ್ಣಾಯಕ ಬಹುಮತವನ್ನು ಪಡೆದು ಮೋದಿ ಸರಕಾರ ಅಧಿಕಾರಕ್ಕೆ ಮರಳಿದೆ. ಬಿಜೆಪಿಯ ಬಹುಮತ ಏರಿಕೆಯಾಗಿದೆ ಹಾಗೂ ಎನ್ಡಿಎಯ ಒಟ್ಟಾರೆ ಸಂಖ್ಯೆಯೂ ಏರಿದೆ.
ಮೋದಿಯವರನ್ನು ಒಬ್ಬ ಬಲಿಷ್ಠ ನಾಯಕನನ್ನಾಗಿ ಬಿಂಬಿಸಿ ಬಿಜೆಪಿ ಪ್ರಚಾರ ನಡೆಸಿದ್ದು ಹಾಗೂ ಪುಲ್ವಾಮಾ ನಂತರದ ಪರಿಸ್ಥಿತಿ ಹಾಗೂ ಬಾಲಾಕೋಟ್ ದಾಳಿಯನ್ನು ಬಳಸಿಕೊಂಡು ಕೋಮುವಾದಿ ಛಾಯೆಯ ರಾಷ್ಟ್ರವಾದವನ್ನು ಬಡಿದೆಬ್ಬಿಸಿದ್ದು ಮೋದಿ ಸರಕಾರದ ಅಡಿಯಲ್ಲಿ ಜನರು ಎದುರಿಸಿದ ನೈಜ ಸಮಸ್ಯೆಗಳಾದ ಕೃಷಿ ಬಿಕ್ಕಟ್ಟು, ನಿರುದ್ಯೋಗ, ಹದಗೆಡುತ್ತಿರುವ ಶಿಕ್ಷಣ ಮತ್ತು ಆರೋಗ್ಯ ಸೌಲಭ್ಯಗಳು ಹಾಗೂ ಅಲ್ಪಸಂಖ್ಯಾತರು, ಮಹಿಳೆಯರು ಮತ್ತು ದಲಿತರ ಮೇಲಿನ ನಿರಂತರ ದಾಳಿಗಳು ಇವುಗಳನ್ನು ಮೀರಿ ನಿಲ್ಲುವಲ್ಲಿ ಯಶಸ್ಸನ್ನು ತಂದುಕೊಟ್ಟಿತೆಂದು ಕಾಣಿಸುತ್ತದೆ.
ಮೋದಿ ಯುದ್ಧಕೋರ ರಾಷ್ಟ್ರವಾದ ಮತ್ತು ಅದರ ಜತೆಗೆ ರಾಷ್ಟ್ರವಾದದ ಮುಸುಕಿನಲ್ಲಿ ಬಹುಸಂಖ್ಯಾತತ್ವದ ಭಾವನೆಗಳನ್ನು ಬಡಿದೆಬ್ಬಿಸುವ ಉದ್ದೇಶವನ್ನೇ ಹೊಂದಿದ ಕೋಮುವಾದಿ ಅಜೆಂಡಾವನ್ನು ಬೆರೆಸಿದ ಪ್ರಚಾರದ ನೇತೃತ್ವವನ್ನು ವಹಿಸಿದ್ದರು. ಚುನಾವಣೆ ಪ್ರಚಾರದ ಎಲ್ಲಾ ರಂಗಗಳಲ್ಲಿ ಅಭೂತಪೂರ್ವ ರೀತಿಯಲ್ಲಿ ಹಣಬಲದ ಬಳಕೆಯಾಯಿತು. ಸಾಮಾಜಿಕ ಮಾಧ್ಯಮ ಪ್ರಚಾರಕ್ಕೆ ಬಿಜೆಪಿ ನೂರಾರು ಕೋಟಿ ರೂಪಾಯಿಗಳನ್ನು ವ್ಯಯಿಸಿತು. ಮೋದಿ ಒಬ್ಬ ನಿರ್ಣಾಯಕ ನಾಯಕ ಎಂಬ ಸಂದೇಶ ಹಾಗೂ ಅಂತಾರ್ರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಒಂದು ಗೌರವಯುತ ದೇಶವನ್ನಾಗಿ ಅವರು ಮಾಡಿದರು ಮತ್ತು ಪಾಕಿಸ್ತಾನದಿಂದ ನಡೆಯುವ ಭಯೋತ್ಪಾದನೆಯನ್ನು ಎದುರಿಸಿದರು ಎಂದು ವಾಟ್ಸ್ಆಪ್ ಮತ್ತು ಇತರೆ ಸಾಮಾಜಿಕ ಮಾಧ್ಯಮಗಳ ಮೂಲಕ ವ್ಯಾಪಕವಾಗಿ ಬಿಂಬಿಸಲಾಯಿತು.
2014ರ ಚುನಾವಣೆ ನಂತರ ಹರಿಬಿಡಲಾದ ಬಲಪಂಥೀಯ ದಾಳಿ ಇನ್ನಷ್ಟು ಕ್ರೋಡೀಕರಣಗೊಂಡಿರುವುದನ್ನು ಈ ಚುನಾವಣೆ ಫಲಿತಾಂಶ ಸೂಚಿಸುತ್ತದೆ. ಬಿಜೆಪಿ-ಆರ್ಎಸ್ಎಸ್ ಕೂಟ ಸ್ಥಾಪಿಸಿರುವ ರಾಜಕೀಯ ಮತ್ತು ಸೈದ್ಧಾಂತಿಕ ಪ್ರಾಬಲ್ಯದ ವಿರುದ್ಧ ಪರಿಣಾಮಕಾರಿ ಸವಾಲನ್ನು ಎಸೆಯಲು ಎಡ ಪಕ್ಷಗಳೂ ಸೇರಿದಂತೆ ಜಾತ್ಯತೀತ ಪ್ರತಿಪಕ್ಷಗಳಿಗೆ ಸಾಧ್ಯವಾಗಲಿಲ್ಲ ಎನ್ನುವುದು ವಾಸ್ತವ ಸಂಗತಿ.
ಚುನಾವಣೆ ಆಯೋಗ ತಾನು ಮಾಡಬೇಕಾದ್ದನ್ನು ಮಾಡದೆ, ಮಾಡಬಾರದ್ದನ್ನು ಮಾಡುವ ಮೂಲಕ ಬಿಜೆಪಿಗೆ ನೆರವು ನೀಡುತ್ತ ವಹಿಸಿದ ಪಾತ್ರವೂ ಈ ಚುನಾವಣೆಯ ಒಂದು ಕಳವಳಕಾರಿ ಸಂಗತಿಯಾಗಿದೆ. ಪ್ರತಿಪಕ್ಷಗಳಿಗೆ ಸಮಾನ ನೆಲೆಯಲ್ಲಿ ಸ್ಪರ್ಧಿಸುವ ಅವಕಾಶವನ್ನು ಖಾತ್ರಿಗೊಳಿಸುವಲ್ಲಿ ಚುನಾವಣೆ ಆಯೋಗ ವಿಫಲವಾಗಿದ್ದು ಮಾತ್ರವೇ ಅಲ್ಲದೆ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಕೋಮುವಾದಿ ಹಾಗು ಜಗಳಗಂಟಿ ಭಾಷಣಗಳನ್ನು ನ್ಯಾಯಸಮ್ಮತಗೊಳಿಸಿತು ಕೂಡ.
ಸಿಪಿಐ (ಎಂ) ಮತ್ತು ಎಡ ಪಕ್ಷಗಳು ತೀವ್ರ ಸೋಲನ್ನು ಅನುಭವಿಸಿವೆ. ಪಶ್ಚಿಮ ಬಂಗಾಳ ಮತ್ತು ತ್ರಿಪುರಾದಲ್ಲಿ ಸಿಪಿಐ (ಎಂ) ಭಾರೀ ಅಡ್ಡಿ ಆತಂಕಗಳಲ್ಲದೆ ಭಯೋತ್ಪಾದನೆ, ಹಿಂಸೆ ಮತ್ತು ದಾಳಿಗಳ ನಡುವೆ ಈ ಚುನಾವಣೆಗಳನ್ನು ಎದುರಿಸಿತು. ಸರ್ವ ಪ್ರಯತ್ನಗಳನ್ನು ಮಾಡಿದರೂ ಯಾವುದೇ ಯಶಸ್ಸನ್ನು ಸಾಧಿಸಲು ಪಕ್ಷಕ್ಕೆ ಸಾಧ್ಯವಾಗಲಿಲ್ಲ. ಕೇರಳದಲ್ಲಿ ಎಲ್ಡಿಎಫ್ ಭಾರೀ ಸೋಲನ್ನು ಅನುಭವಿಸಿದ್ದು ನಿರಾಶಾದಾಯಕ ಹಾಗೂ ದೊಡ್ಡ ಹಿನ್ನಡೆಯಾಗಿದೆ. ತಮಿಳುನಾಡಿನಲ್ಲಿ ಮಾತ್ರ ಪಕ್ಷ ಉತ್ತಮ ಫಲಿತಾಂಧ ಪಡೆದಿದೆ. ಅಲ್ಲಿ ಡಿಎಂಕೆ ನೇತೃತ್ವದ ಮೈತ್ರಿಯ ಭಾಗವಾಗಿ ಸ್ಪರ್ಧಿಸಿದ್ದ ಎರಡೂ ಕ್ಷೇತ್ರಗಳಲ್ಲಿ ಸಿಪಿಐ (ಎಂ) ಜಯ ಸಾಧಿಸಿದೆ.
ಈ ಗಂಭೀರ ಚುನಾವಣಾ ಹಿನ್ನಡೆಯ ಬಗ್ಗೆ ಪಕ್ಷವು ಸ್ವಯಂಟೀಕಾತ್ಮಕ ಪರೀಕ್ಷಣೆಯನ್ನು ನಡೆಸಲಿದೆ. ಆ ಮೂಲಕ ಸರಿಯಾದ ಪಾಠವನ್ನು ಕಲಿತು ಪಕ್ಷದ ರಾಜಕೀಯ, ಸೈದ್ಧಾಂತಿಕ ಮತ್ತು ಸಂಘಟನಾತ್ಮಕ ಕಾರ್ಯವನ್ನು ನವೀಕರಿಸಲು ಮತ್ತು ಬಲಪಡಿಸಲು ಒಂದು ಸಮಗ್ರ ಕಾರ್ಯತಂತ್ರವನ್ನು ಅಂಗೀಕರಿಸಲಾಗುವುದು.
–ಪ್ರಕಾಶ್ ಕಾರಟ್
ಲೇಖನ ಕೃಪೆ : ಜನಶಕ್ತಿ ಮೀಡಿಯಾ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243

-
ನಿತ್ಯ ಭವಿಷ್ಯ7 days ago
ಸೋಮವಾರ- ರಾಶಿ ಭವಿಷ್ಯ ಜನವರಿ-23,2023 : ಈ ರಾಶಿಯವರಿಗೆ ಸಾಡೇ ಸಾತಿ ಶನಿಯಿಂದ ಮುಕ್ತಿ,ಎಲ್ಲಾ ನಿಮ್ಮ ಕೆಲಸಗಳು ನೆರವೇರಲಿ
-
ದಿನದ ಸುದ್ದಿ5 days ago
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ
-
ದಿನದ ಸುದ್ದಿ1 day ago
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
-
ದಿನದ ಸುದ್ದಿ23 hours ago
ನಟ ಮನದೀಪ್ ರಾಯ್ ನಿಧನ