ರಾಜಕೀಯ
ಅಚ್ಛೇದಿನ್ಗಳಿಗೆ ವಿದಾಯ : ಮೋಡಗಳಾಚೆಯಿಂದ ಮೋದಿ2.0

2019ರ ಸಾರ್ವತ್ರಿಕ ಚುನಾವಣೆಗಳ ತೀರ್ಪು ಎಲ್ಲರನ್ನೂ ಒಳಗೊಳ್ಳುವ ದೇಶ ನಿರ್ಮಾಣಕ್ಕಾಗಿ ನವಭಾರತದಿಂದ ಬಂದಿರುವ ಜನಾದೇಶ ಎಂದಿರುವ ನರೇಂದ್ರ ಮೋದಿಯವರು ತನ್ನ ಎರಡನೇ ಆಡಳಿತಾವಧಿಯಲ್ಲಿ ದುರುದ್ದೇಶದಿಂದ, ಕೆಟ್ಟ ಆಶಯದಿಂದ ಏನನ್ನೂ ಮಾಡುವುದಿಲ್ಲ, ತಪ್ಪು ಮಾಡಬಹುದು, ಆದರೆ ಎಂದೂ ದುರ್ಭಾವನೆಯಿಂದ ಮಾಡುವುದಿಲ್ಲ ಎಂದು ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡುತ್ತ ಪ್ರತಿಜ್ಞೆ ಕೈಗೊಂಡಿದ್ದಾರೆ. ಅವರು ಇನ್ನೂ ಎರಡು ಪ್ರತಿಜ್ಞೆಗಳನ್ನು ಮಾಡಿದ್ದಾರೆ. ಅವರ ಕೆಲಸವನ್ನು ವಿಮರ್ಶಿಸುವಾಗ ಇವನ್ನು ಗಮನದಲ್ಲಿಟ್ಟು ಕೊಳ್ಳಬೇಕಂತೆ.
ಏಳು ಸುತ್ತುಗಳ ಸಾರ್ವತ್ರಿಕ ಚುನಾವಣೆಗಳು ಮುಗಿಯುತ್ತಿದ್ದಂತೆ ಬಯಲಿಗೆ ಬಂದಿರುವ ಕೆಲವು ಸಂಗತಿಗಳ ಹಿನ್ನೆಲೆಯಲ್ಲಿ ಈ ಪ್ರತಿಜ್ಞೆಗಳನ್ನು ಪರೀಕ್ಷಿಸಬೇಕು ಎಂಬುದು ಅವರ ಆಶಯವಿರಲಿಕ್ಕಿಲ್ಲ. ಇದು ಬಹುಶಃ ಅಚ್ಚೇ ದಿನ್ ಇತ್ಯಾದಿ ಜುಮ್ಲಾಗಳೇ ಇರದ ಮುಂದಿನ ಐದು ವರ್ಷಗಳಿಗೆ ಮಾತ್ರ ಅನ್ವಯವಾಗುವಂತದ್ದು. ಅದೇನೇ ಇರಲಿ, ಆ ಸಂಗತಿಗಳನ್ನು ನೋಡೋಣ. ಒಬ್ಬ ಟ್ವಿಟರಿಗ ಈ ಪಟ್ಟಿಯನ್ನು ತಯಾರಿಸಿದ್ದಾರೆ :
- ಸಿಬಿಐಬೊಫೊರ್ಸ್ಬಗ್ಗೆಕೋರ್ಟಿನಲ್ಲಿಹಾಕಿರುವಅರ್ಜಿಯನ್ನುಹಿಂತೆಗೆದುಕೊಂಡಿದೆ.
- ಮುಲಾಯಂ ಸಿಂಗ್ ಯಾದವ್ ಮತ್ತು ಅಖಿಲೇಶ್ ಯಾದವ್ ವಿರುದ್ಧ ಆದಾಯಕ್ಕೆ ಮೀರಿ ಆಸ್ತಿ ಹೊಂದಿರುವ ಕೇಸುಗಳಲ್ಲಿ ಸಾಕ್ಷ್ಯಾಧಾರಗಳಿಲ್ಲ ಎಂದು ಸಿಬಿಐ ಹೇಳಿದೆ.
- ಚುನಾವಣಾ ಆಯೋಗದ ಒಬ್ಬ ಆಯುಕ್ತರು ಬಹಿರಂಗವಾಗಿ ಭಿನ್ನಮತ ವ್ಯಕ್ತಪಡಿಸಿದ್ದಾರೆ.
- ಪೆಟ್ರೋಲ್ ಬೆಲೆಗಳು ಕೊನೆಯ ಸುತ್ತಿನ ನಂತರ ಮತ್ತೆಏರುತ್ತಿವೆ.
- ನಮೋ ಟಿವಿ ಕಾಣೆಯಾಗಿದೆ.
- ಎಲ್ಲಕ್ಕೂ ಮಿಗಿಲಾಗಿ ಭಾರತೀಯ ವಾಯುಪಡೆ ತನ್ನದೇ ಹೆಲಿಕಾಪ್ಟರನ್ನು ಹೊಡೆದು ಉರುಳಿಸಿರುವುದಾಗಿ ಪರೋಕ್ಷವಾಗಿ ಒಪ್ಪಿಕೊಂಡಿದೆ.
ಈ ಕೊನೆಯದ್ದು ಈ ಚುನಾವಣೆಗಳಲ್ಲಿ ಪ್ರಮುಖ ಪಾತ್ರ ವಹಿಸಿದಂತೆ ಕಾಣುತ್ತಿರುವ ಫುಲ್ವಾಮ, ಬಾಲಾಕೋಟ್ ಮತ್ತು ರಾಷ್ಟ್ರೀಯ ಭದ್ರತೆಯ ಮಾತುಗಳ ಸಂದರ್ಭದಲ್ಲಿ ಗಮನಾರ್ಹ(ಸಬ್ರಂಗ್, ಮೇ 22).
ಫೆಬ್ರುವರಿ 27ರಂದು, ಅಂದರೆ ಫುಲ್ವಾಮ ಭಯೋತ್ಪಾದಕ ದಾಳಿಗೆ ಉತ್ತರವಾಗಿ ಭಾರತೀಯ ವಾಯುಪಡೆಯ ವಿಮಾನಗಳು ಬಾಲಾಕೋಟ್ ಮೇಲೆ ಪ್ರಹಾರ ನಡೆಸಿದ ಮರುದಿನ ಕಾಶ್ಮೀರದ ಬುಡ್ಗಾಮ್ನಲ್ಲಿ ವಾಯುಪಡೆಯ ಹೆಲಿಕಾಪ್ಟರ್ ಒಂದು ಕ್ಷಿಪಣಿ ದಾಳಿಗೆ ಗುರಿಯಾಗಿ. ಅದರಲ್ಲಿದ್ದ ಆರು ಸಿಬ್ಬಂದಿ ಮತ್ತು ಒಬ್ಬ ಭಾರತೀಯ ನಾಗರಿಕ ಮೃತಪಟ್ಟರು. ಆ ವೇಳೆಗೆ ಪಾಕಿಸ್ತಾನೀ ವಾಯುಪಡೆಯ ಎಫ್-೧೬ ವಿಮಾನವನ್ನು ಹೊಡೆದುರುಳಿಸಿದ್ದು ಮತ್ತು ವಿಂಗ್ ಕಮಾಂಡರ್ ಅಭಿನಂದನ್ ವಾಪಸಾತಿಯ ಅಬ್ಬರದ ನಡುವೆ ಈ ಸುದ್ದಿ ಮುಚ್ಚಿ ಹೋಯಿತು. ಆದರೆ ಆಗಲೇ ಈ ದುರ್ಘಟವೆ ಫ್ರೆಂಡ್ಲಿ ಪ್ರಹಾರದಿಂದ ಆಗಿರಬಹುದು ಎಂದು ಮಾಜಿ ಜಮ್ಮು -ಕಾಶ್ಮೀರ ಮುಖ್ಯಮಂತ್ರಿ ಹಾಗೂ ಕೆಲವು ಪತ್ರಿಕೆಗಳು ಗುಮಾನಿ ವ್ಯಕ್ತಪಡಿಸಿದ್ದರು. ಅದರೆ ವಾಯುಪಡೆ ಮತ್ತು ಸರಕಾರ ಈ ಬಗ್ಗೆ ಪ್ರತಿಕ್ರಿಯಿಸಲಿಲ್ಲ.
ಈಗ, ಈ ಬಗ್ಗೆ ತನಿಖೆ ನಡೆದಿದ್ದು, ಈ ದುರ್ಘಟನೆ ನಮ್ಮ ವಾಯುಪಡೆಯ ಲೋಪದಿಂದಲೇ ನಡೆದಿದೆ ಎಂದು ದೃಢ ಪಟ್ಟಿದ್ದರೂ, ಈ ಬಗ್ಗೆ ಚುನಾವಣೆಗಳು ಮುಗಿಯುವ ವರೆಗೆ ನಿಧಾನವಾಗಿ ಮುಂದುವರೆಯಬೇಕು ಎಂದು ‘ಮೇಲಿನಿಂದ’ ಆದೇಶವಿದ್ದುದಾಗಿ ರಕ್ಷಣಾ ವಿಶ್ಲೇಷಕರೊಬ್ಬರು ಹೇಳಿರುವುದಾಗಿ ವರದಿಯಾಗಿದೆ.
ಭಾರತೀಯ ವಾಯುಪಡೆ ಈ ವಿಷಯದಲ್ಲಿ ತನ್ನ ಕೆಲವು ಅಧಿಕಾರಿಗಳ ಮೇಲೆ ‘ಕೊಲೆಯೆಂದಾಗದ ದಂಡನೀಯ ನರಹತ್ಯೆ’ಯ ಆರೋಪ ಹಾಕಲಿರುವುದಾಗಿ ಮೇ 21ರಂದು ಅಂದರೆ ಕೊನೆಯ ಸುತ್ತಿನ ಮತದಾನದ ಎರಡು ದಿನಗಳ ನಂತರ ವರದಿ ಮಾಡಿದವು. ಈಗಾಗಲೇ ಇಬ್ಬರು ಹಿರಿಯ ಅಧಿಕಾರಿಗಳ ಮೇಲೆ ಶಿಸ್ತುಕ್ರಮಗಳನ್ನು ಕೈಗೊಳ್ಳಲಾಗಿದೆಯಂತೆ. ಚುನಾವಣಾ ಸಮರದಲ್ಲಿ, ಆಚಾರ ಸಂಹಿತೆಯನ್ನು ಉಲ್ಲಂಘಿಸಿಲ್ಲ ಎಂಬ ಚುನಾವಣಾಆಯೋಗದಕ್ಲೀನ್ ಚಿಟ್ಗಳೊಂದಿಗೆ ಬಾಲಾಕೋಟ್ ಕಾರ್ಯಾಚರಣೆ ಮತ್ತು ಎಫ್-16 ವಿಮಾನ ಹೊಡೆದುರುಳಿಸಿದ ‘ಎದೆಗಾರಿಕೆ’ಯ ಪ್ರಚಾರ ಬಾಚಿಕೊಂಡವರಿಗೆ ಮುಜುಗರವಾಗದಿರಲಿ ಎಂದು ಈ ಸುದ್ದಿ ವಿಳಂಬವಾಗಿ ಬೆಳಕಿಗೆ ಬಂದಿದೆ ಎಂದು ಹೇಳಲಾಗುತ್ತಿದೆ.
ಇದಲ್ಲದೆ ಚುನಾವಣಾ ಪ್ರಚಾರ ಭರದಿಂದ ಸಾಗುತ್ತಿದ್ದಾಗಲೇ, ಅಂದರೆ ಮಾದರಿ ಆಚಾರ ಸಂಹಿತೆ ಜಾರಿಯಲ್ಲಿದ್ದಾಗಲೇ ಪರಿಸರ ರಕ್ಷಣೆಯ ಉದ್ದೇಶದಿಂದ ಪ್ರಕಟಿಸಿದ್ದ ‘ಪರಿಸರ ಪರಿಣಾಮ ನಿರ್ಧಾರಣೆ ಅಧಿಸೂಚನೆ, 2016’ರಲ್ಲಿ ಕೈಯಾಡಿಸಿ ಅದನ್ನು ಉದ್ದಿಮೆದಾರರ ಪರವಾಗಿ ಬದಲಿಸುವ ಕಸರತ್ತು ನಡೆದಿದೆ ಎಂದು ವರದಿಯಾಗಿದೆ(ಸ್ಕ್ರಾಲ್.ಇನ್, ಮೇ 24).
ಅಚ್ಛೇ ದಿನ್ಗಳ ಅವಧಿಯಲ್ಲಿ ಪರಿಸರ ಕಾಯ್ದೆಗಳನ್ನು ದುರ್ಬಲಗೊಳಿಸುವ ಪ್ರಯತ್ನಗಳು ಸತತವಾಗಿ ನಡೆದಿವೆ ಎಂದೂ ಹೇಳಲಾಗುತ್ತಿತ್ತು. ಇದು ಅರಣ್ಯವಾಸಿಗಳ, ಬುಡಕಟ್ಟು ಜನಗಳ ಮತ್ತು ಅಂಚಿನಲ್ಲಿರುವ ರೈತರ ಹಿತಗಳನ್ನು ಬಲಿಗೊಟ್ಟು ಉದ್ದಿಮೆದಾರರ ಲಾಭಗಳನ್ನು ಹೆಚ್ಚಿಸುವ ಪ್ರಯತ್ನಗಳು ಎಂದು ಬೇರೆ ಹೇಳಬೇಕಾಗಿಲ್ಲ. ಅರಣ್ಯ ಹಕ್ಕುಗಳ ಕಾಯ್ದೆಯನ್ನು ಸುಪ್ರಿಂ ಕೋರ್ಟಿನಲ್ಲಿ ಪಟ್ಟಭದ್ರರ ಪರವಾಗಿ ಪ್ರಶ್ನಿಸುತ್ತಿದ್ದಾಗ ಸರಕಾರೀ ವಕೀಲರ ಗೈರುಹಾಜರಿಯಿಂದಾಗಿ ಲಕ್ಷಾಂತರ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸಲಾರಂಭಿಸಿದ್ದು, ಅದಕ್ಕೆ ತೀವ್ರ ಪ್ರತಿಭಟನೆಯ ನಂತರ ಸರಕಾರ ಎಚ್ಚೆತ್ತುಕೊಂಡು ಸುಪ್ರಿಂ ಕೊರ್ಟಿಗೆ ಧಾವಿಸಿದ್ದು ತೀರಾ ಹಳೆಯ ಸುದ್ದಿಯೇನೂ ಅಲ್ಲ.
ಈ ವಿಷಯ ಮತ್ತೆ ವಿಚಾರಣೆಗೆ ಬರಲಿದೆ. ಜತೆಗೆ ರಫೇಲ್ ವ್ಯವಹಾರದ ಕುರಿತ ಮೊಕದ್ದಮೆಯಲ್ಲಿ ಸರಕಾರ ನ್ಯಾಯಾಲಯವನ್ನು ತಪ್ಪುದಾರಿಗೆಳೆದಿದೆ ಎಂಬುದೂ ವಿಚಾರಣೆಗೆ ಬರಲಿದೆ, ಜತೆಗೆ ರಾಜಕೀಯ ಪಕ್ಷಗಳಿಗೆ ದೇಣಿಗೆಗಳನ್ನು ಪಾರದರ್ಶಕಗೊಳಿಸುವ ಹೆಸರಿನಲ್ಲಿ ತಂದ ಅಪಾರದರ್ಶಕ ಚುನಾವಣಾ ಬಾಂಡು ಎಂಬ ಕ್ರಮದ ವಿಚಾರಣೆಯೂ ಬರಲಿದೆ. ಈ ಎಲ್ಲ ಸಂದರ್ಭಗಳಲ್ಲೂ ಪ್ರಧಾನಿಗಳ ಮೇಲೆ ಹೇಳಿದ ಪ್ರತಿಜ್ಞೆ(ಗಳು) ಹೇಗೆ ಕೆಲಸ ಮಾಡಬಹುದು ಎಂಬುದು ಕುತೂಹಲಕಾರಿ.
(ಈ ವಾರದ ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243

ದಿನದ ಸುದ್ದಿ
ರಾಷ್ಟ್ರೀಯ ಯುವ ದಿನದ ಪ್ರಯುಕ್ತ ನಾಳೆ ರಾಜಾಜಿನಗರ ವಿಧಾನ ಸಭಾ ಕ್ಷೇತ್ರದಲ್ಲಿ ಬೈಕ್ ರ್ಯಾಲಿ : ಭವ್ಯ ನರಸಿಂಹಮೂರ್ತಿ

ಸುದ್ದಿದಿನ, ಬೆಂಗಳೂರು : ರಾಷ್ಟ್ರೀಯ ಯುವ ದಿನದ ಪ್ರಯುಕ್ತ ನಾಳೆ ರಾಜಾಜಿನಗರ ವಿಧಾನ ಸಭಾ ಕ್ಷೇತ್ರದಲ್ಲಿ ಬೈಕ್ ರ್ಯಾಲಿ ಹಮ್ಮಿಕೊಂಡಿದ್ದು ಸ್ವಾಮಿ ವಿವೇಕಾನಂದರ 160ನೇ ಜನ್ಮದಿನದ ಅಂಗವಾಗಿ ಅವರ ತತ್ವ ಆದರ್ಶಗಳು ಹಾಗೂ ಯುವ ಜನತೆಗೆ ನೀಡಿರುವ ಸಂದೇಶಗಳನ್ನು ರಾಜಾಜಿನಗರ ವಿಧಾನ ಸಭಾ ಕ್ಷೇತ್ರದ ಎಲ್ಲಾ ಜನತೆಗೆ ತಲುಪುವಂತೆ ಮಾಡುವುದು ಇದರ ಉದ್ದೇಶವಾಗಿದೆ ಎಂದು ರಾಜಾಜಿನಗರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಆಕಾಂಕ್ಷಿ ಭವ್ಯ ನರಸಿಂಹಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೈಕ್ ರ್ಯಾಲಿ ಬೆಳಿಗ್ಗೆ 09-00 ಕ್ಕೆ ರಾಜಾಜಿನಗರ Entrance Bridge ಇಂದ ಪ್ರಾರಂಭವಾಗಿ ನವರಂಗ ಚಿತ್ರಮಂದಿರ – ಶಂಕರ್ ಮಠ – ಹಾವನೂರ್ ಸರ್ಕಲ್ – ಹೌಸಿಂಗ್ ಬೋರ್ಡ್ – ಕಾಮಾಕ್ಷಿಪಾಳ್ಯ ಬಸ್ ಸ್ಟಾಂಡ್ – ಹಾವನೂರ್ – ಅಕ್ಷಯ ಉಪಹಾರ – ಮೋದಿ ಹಾಸ್ಪಿಟಲ್ – ನವರಂಗ ಬ್ರಿಡ್ಜ್ – ಗಿರಿಯಾಸ್ ಸಿಗ್ನಲ್ – 6th ಬ್ಲಾಕ್ – ಕೊನೆಯದಾಗಿ 12 ಗಂಟೆಗೆ ಭಾಷ್ಯಮ್ ಸರ್ಕಲ್ ನಲ್ಲಿ ಕೊನೆಗೊಳ್ಳುತ್ತದೆ.
ದಾರಿಯಲ್ಲಿ 4 ಕಡೆ ಸ್ವಾಮಿ ವಿವೇಕಾನಂದರಿಗೆ ಪೂಜೆ ಹಮ್ಮಿಕೊಳ್ಳಲಾಗಿದೆ. ಪೂಜೆಯ ನಂತರ ವಿವೇಕಾನಂದರ ತತ್ವ ಆದರ್ಶಗಳನ್ನೊಳಗೊಂಡ ಹತ್ತು ಸಾವಿರ ಪುಸ್ತಕಗಳನ್ನು ಕ್ಷೇತ್ರದಾದ್ಯಂತ ಉಚಿತವಾಗಿ ಹಂಚಲಾಗುವುದು ಹಾಗೂ ಅನ್ನ ಸಂತರ್ಪಣೆ ಏರ್ಪಡಿಸಲಾಗಿರುತ್ತದೆ ಎಂದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
