ದಿನದ ಸುದ್ದಿ
ಪ್ರಧಾನಿ ಮೋದಿ ಸಂಪುಟದಲ್ಲಿ ಸಚಿವ ಸ್ಥಾನ ಗಿಟ್ಟಿಸಿಕೊಂಡವರು

ಸುದ್ದಿದಿನ,ನವದೆಹಲಿ: ದೇಶದ 16 ನೇ ಪ್ರಧಾನಿಯಾಗಿ ನರೇಂದ್ರ ಮೋದಿ ಗುರುವಾರ ಪ್ರಮಾಣ ವಚನ ಸ್ವೀಕಾರ ಮಾಡಿದರು. ಮೋದಿ ಜೊತೆ ಒಟ್ಟು 58 ಸಂಸದರು ಪ್ರತಿಜ್ಞಾವಿಧಿ ಸ್ವೀಕಾರ ಮಾಡಿದರು. 25 ಸಂಪುಟ ದರ್ಜೆ ಸಚಿವರಾಗಿ, 9 ಸ್ವತಂತ್ರ ಖಾತೆ, 24 ರಾಜ್ಯ ಖಾತೆ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ರು. ಯಾರ್ಯಾರು ಮೋದಿ ಟೀಂ ಸೇರಿಕೊಂಡರು ಅನ್ನೋದರ ವಿವರ ಹೀಗಿದೆ.
- ನರೇಂದ್ರ ಮೋದಿ
- ರಾಜನಾಥ್ ಸಿಂಗ್
- ಅಮಿತ್ ಶಾ
- ನಿತಿನ ಗಡ್ಕರಿ
- ಸದಾನಂದಗೌಡ
- ನಿರ್ಮಲಾ ಸೀತಾರಾಮನ್
- ರಾಮ್ ವಿಲಾಸ್ ಪಾಸ್ವಾನ್
- ನರೇಂದ್ರ ಸಿಂಗ್ ತೋಮರ್
- ರವಿಶಂಕರ್ ಪ್ರಸಾದ್
- ಹರ್ಸಿಮ್ರತ್ ಕೌರ್
- ಥಾವರ್ ಚಂದ್ ಗೆಲ್ಹೋಟ್
- ಸುಬ್ರಮಣಿಯನ್ ಜಯಶಂಕರ್
- ಡಾ. ರಮೇಶ್ ಪೋಖ್ರಿಯಾಲ್
- ಅರ್ಜನ್ ಮುಂಡಾ
- ಸ್ಮೃತಿ ಇರಾನಿ
- ಡಾ.ಹರ್ಷವರ್ಧನ್
- ಪ್ರಕಾಶ್ ಜಾವ್ಡೇಕರ್
- ಪಿಯೂಷ್ ಗೋಯಲ್
- ಧರ್ಮೇಂದ್ರ ಪ್ರಧಾನ್
- ಮುಕ್ತಾರ್ ಅಬ್ಬಾಸ್ ನಖ್ವಿ
- ಪ್ರಹ್ಲಾದ್ ಜೋಶಿ
- ಮಹೇಂದ್ರನಾಥ್ ಪಾಂಡೆ
- ಡಾ.ಅರವಿಂದ್ ಗಣಪತ್ ಸಾವಂತ್
- ಗಿರಿರಾಜ್ ಸಿಂಗ್
- ಗಜೇಂದ್ರ ಸಿಂಗ್ ಸೇಖಾವತ್
- ಸಂತೋಷ್ ಕುಮಾರ್ ಗಂಗ್ವಾರ್
- ಇಂದ್ರಜಿತ್ ಸಿಂಗ್
- ಶ್ರೀಪಾದ್ ಯಶೋನಾಯಕ್
- ಡಾ.ಜಿತೇಂದ್ರ ಸಿಂಗ್
- ಕಿರಣ್ ರಿಜಿಜು
- ಪ್ರಹ್ಲಾದ್ ಸಿಂಗ್ ಪಟೇಲ್
- ರಾಜ್ ಕುಮಾರ್ ಸಿಂಗ್
- ಹರ್ದೀಪ್ ಸಿಂಗ್ ಪೂರಿ
- ಮನ್ ಸುಖ್ ಮಾಂಡವ್ಯ
- ಫಗನ್ ಸಿಂಗ್
- ಅಶ್ವಿನ್ ಕುಮಾರ್ ಚೌಬೆ
- ಅರ್ಜುನ್ ರಾಮ್ ಮೇಘವಾಲ್
- ಜನರಲ್ ವಿ.ಕೆ.ಸಿಂಗ್
- ಕೃಷ್ಣಪಾಲ್ ಗುರ್ಜರ್
- ರಾಮ್ ಸಾಹೇಬ್ ದಾದಾರಾವ್
- ಕಿಶನ್ ರೆಡ್ಡಿ
- ಪುರುಷೋತ್ತಮ್ ರೂಪಾಲ
- ರಾಮ್ ದಾಸ್ ಅಠಾವಳೆ
- ಸಾಧ್ವಿ ನಿರಂಜನ್ ಜ್ಯೋತಿ
- ಬಾಬುಲ್ ಸುಪ್ರಿಯೋ
- ಡಾ.ಸಂಜೀವ್ ಕುಮಾರ್ ಬಾಲಿಯಾನ್
- ಸಂಜಯ್ ಬಲ್ಯಾನ್
- ಅನುರಾಗ್ ಸಿಂಗ್ ಠಾಕೂರ್
- ಸುರೇಶ್ ಅಂಗಡಿ
- ನಿತ್ಯಾನಂದ್ ರಾಯ್
- ರತನ್ ಲಾಲ್ ಕಟಾರಿಯ
- ವಿ.ಮುರಳಿಧರನ್
- ರೇಣುಕಾ ಸಿಂಗ್ ಸರೂತ್
- ಸೋಮ ಪ್ರಕಾಶ್
- ರಾಮೇಶ್ವರ್ ತೇರಿ
- ಪ್ರತಾಪ್ ಚಂದ್ರ ಸಾರಂಗಿ
- ಕೈಲಾಶ್ ಚೌಧರಿ
- ದೇಬಶ್ರೀ ಚೌಧರಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
