ದಿನದ ಸುದ್ದಿ
ಅಲೆಮಾರಿ ಸಮುದಾಯಗಳ ಅಸ್ಮಿತೆ ಉಳಿಸುವಲ್ಲಿ ಆಳುವ ಸರ್ಕಾರಗಳು ವಿಫಲ : ಬರಗೂರು ರಾಮಚಂದ್ರಪ್ಪ ಕಳವಳ

ಸುದ್ದಿದಿನ, ಬೆಂಗಳೂರು :ಎಸ್ಸಿ ಎಸ್ಟಿ ಅಲೆಮಾರಿ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಸಮನ್ವಯ ಸಮಿತಿಯ ಮೂಲಕ ಹೋರಾಟ ರೂಪಿಸಲು ಪೂರ್ವಭಾವಿ ಸಭೆಯಲ್ಲಿ ಭಾನುವಾರ ನಿರ್ಧಾರ ಮಾಡಲಾಯಿತು.
ನಗರದ ಖಾಸಗಿ ಹೋಟೆಲ್ನಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಅಲೆಮಾರಿ ಅರೆಅಲೆಮಾರಿ ಸಮುದಾಯಗಳ ಚಿಂತನ ಮಂಥನ ಸಭೆಯನ್ನು ಚಿತ್ರನಟರು ಸಮಾಜ ಸೇವಕರು ಚೇತನ್ ಅಹಿಂಸಾ ಅವರು ಆಯೋಜಿಸಿದ್ದರು.
ಸಭೆಯಲ್ಲಿ ಪ್ರಗತಿಪರ ಚಿಂತಕರು ಬರಗೂರು ರಾಮಚಂದ್ರ ಅವರು ಭಾಗವಹಿಸಿ ಮಾತನಾಡುತ್ತಾ ಭಾರತದ ಬಹು ಸಂಸ್ಕೃತಿಯ ಉಳಿವಿಗಾಗಿ ನೆಲ ಮತ್ತು ನೆಲೆಯೇ ಇಲ್ಲದ ಅಲೆಮಾರಿಗಳ ಕೊಡುಗೆ ಅಪಾರವಾಗಿದ್ದು.ಆದರೆ ಈ ಸಮುದಾಯಗಳ ಅಸ್ಮಿತೆಯನ್ನು ಉಳಿಸುವುದರ ಜೊತೆಗೆ ಅವರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಆಳುವ ಸರ್ಕಾರಗಳು ಸಂಪೂರ್ಣವಾಗಿ ವಿಫಲವಾಗಿದ್ದು ಇದರ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಮುಂದಿನ ದಿನಗಳಲ್ಲಿ ಸಾಹಿತ್ಯ ಮತ್ತು ಪ್ರಗತಿಪರ ವಲಯದಲ್ಲಿ ಚರ್ಚಿಸಿ ಸಮನ್ವಯ ಸಮಿತಿಯನ್ನು ರಚಿಸಿಕೊಂಡು ಹೋರಾಟ ರೂಪಿಸುವಂತೆ ಸಲಹೆ ನೀಡಿದರು.
ನಂತರ ಅಲೆಮಾರಿ ಸಮುದಾಯಗಳನ್ನು ಉದ್ದೇಶಿಸಿ ಮಾಜಿ ಸಚಿವರು ಸಾಹಿತಿಗಳು ಆದ ಶ್ರೀಮತಿ ಬಿಟಿ ಲಲಿತ್ ನಾಯಕರವರು ಮಾತನಾಡುತ್ತಾ ಎಪ್ಪತ್ತರ ದಶಕದಲ್ಲಿ ದಲಿತ ವರ್ಗಗಳಿಗೆ ಮೂಡಿದ ಸಾಮಾಜಿಕ ಪ್ರಜ್ಞೆ ಅಲೆಮಾರಿ ಸಮುದಾಯಗಳಿಗೆ ಮೂಡಲಿಲ್ಲ.ಆದ್ದರಿಂದ ಇಂದಿಗೂ ಈ ಸಮುದಾಯಗಳು ಮುಖ್ಯವಾಹಿನಿಗೆ ಬರಲು ಸಾಧ್ಯವಾಗಿಲ್ಲ ಆದರೆ ನಮ್ಮನ್ನಾಳಿದ ಸರ್ಕಾರಗಳು
ಇದುವರೆಗೂ ಈ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಅಲೆಮಾರಿಗಳ ಸಮಗ್ರ ಅಭಿವೃದ್ಧಿಯ ಬಗ್ಗೆ ಕಿಂಚಿತ್ತು ಕಾಳಜಿ ತೋರಿ ಸಿಲ್ಲದಿರುವುದು ಅತ್ಯಂತ ವಿಷಾದಕರ ಸಂಗತಿಯಾಗಿದೆ ಎಂದರು.
ಈಗಿನ ಮೈತ್ರಿ ಸರ್ಕಾರದಲ್ಲಿಯೂ ಸಹ ಕಳೆದ ಬಜೆಟ್ನಲ್ಲಿ ಈ ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಅಲೆಮಾರಿಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ ನೀಡಿಲ್ಲದಿರುವ ಮಲತಾಯಿ ಧೋರಣೆಯನ್ನು ಖಂಡಿಸುತ್ತಾ ಮುಂದಿನ ದಿನಗಳಲ್ಲಿ ಎಲ್ಲ ಪ್ರಗತಿಪರ ಚಿಂತಕರನ್ನು ಒಳಗೊಂಡು ಹೋರಾಟ ರೂಪಿಸುವಂತೆ ಸಲಹೆ ನೀಡಿ ಈ ಹೋರಾಟಕ್ಕೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು.
ಅದೇ ರೀತಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊಫೆಸರ್ ಎಸ್ ಜಿ ಸಿದ್ದರಾಮಯ್ಯನವರು ಮಾತನಾಡುತ್ತಾ ದೇಶದಲ್ಲಿ ಅಸಂಘಟಿತ 749 ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಗಳ ಸುಮಾರು 11 ಕೋಟಿ ಜನರ ಬದುಕು ಮೂರಾಬಟ್ಟೆಯಾಗಿ ಅವರು ಇಂದಿಗೂ ಬೀದಿಯಲ್ಲಿ ಬಿದ್ದಿದ್ದಾರೆ ಕಾರಣ ಇದುವರೆಗೂ ಆಳಿದ ಸರ್ಕಾರ ಮತ್ತು ಜನಪ್ರತಿನಿಧಿಗಳು ಈ ಬಗ್ಗೆ ಇಚ್ಛಾಶಕ್ತಿಯ ಕೊರತೆಯಿಂದ ಬಹುಸಂಖ್ಯಾತ ಮೂಲನಿವಾಸಿಗಳು ಇಂದಿಗೂ ಅವಕಾಶ ವಂಚಿತರಾಗಿ ಅಲೆಮಾರಿಗಳಾಗಿದ್ದಾರೆ ಎಂದರು.
ಆದ್ದರಿಂದ ಎಲ್ಲ ಅಲೆಮಾರಿ ನಾಯಕರು ತಮ್ಮ ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿರಿಸಿ ಮುಂದಿನ ಹೋರಾಟವನ್ನು ರೂಪಿಸಲು ಶೀಘ್ರವೇ ಎಲ್ಲ ಪ್ರಗತಿಪರ ಚಿಂತಕರು ಬುದ್ಧಿಜೀವಿಗಳು ಹಿರಿಯ ಸಾಹಿತಿಗಳನ್ನು ಒಳಗೊಂಡಂತೆ ಅಲೆಮಾರಿಗಳ ಅಭಿವೃದ್ಧಿಗಾಗಿ ಅಲೆಮಾರಿ ಸಮುದಾಯಗಳ ಹೋರಾಟ ಸಮನ್ವಯ ಸಮಿತಿಯನ್ನು ರಚಿಸಿ ಹೋರಾಟ ರೂಪಿಸುವುದಾಗಿ ತಿಳಿಸುತ್ತಾ ಮೈತ್ರಿ ಸರ್ಕಾರದ ಜೊತೆಯಲ್ಲಿ ಎಸ್ಸಿ ಎಸ್ಟಿ ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿಶೇಷ ಅನುದಾನ ಬಿಡುಗಡೆಯ ಬಗ್ಗೆ ಮಾತುಕತೆ ನಡೆಸುವುದಾಗಿ ಭರವಸೆ ನೀಡಿದರು.
ಸಭೆಯನ್ನು ಆಯೋಜಿಸಿದ ಚಿತ್ರನಟರಾದ ಚೇತನ್ ಅಹಿಂಸ ಅವರು ಮಾತನಾಡುತ್ತಾ ಕನಿಷ್ಠ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿರುವ ಅಲೆಮಾರಿ ಸಮುದಾಯಗಳಿಗೆ ವಸತಿ ಶಿಕ್ಷಣ ಮತ್ತು ಮೂಲಭೂತ ಸೌಕರ್ಯಗಳನ್ನು ದಕ್ಕಿಸಿಕೊಡಲು ಮುಂದಿನ ಸಭೆಯಲ್ಲಿ ಚರ್ಚೆ ನಡೆಸಲಾಗುವುದು ಎಂದರು.
ಅಲೆಮಾರಿ ಅರೆ ಅಲೆಮಾರಿ ವಿಮುಕ್ತ ಬುಡಕಟ್ಟು ಒಕ್ಕೂಟದ ಅಧ್ಯಕ್ಷರಾದ ಭಾಸ್ಕರ ದಾಸ್ ಎಕ್ಕಾರು, ಅಲೆಮಾರಿ ಬುಡಕಟ್ಟು ಮಹಾಸಭಾದ ಮುಖಂಡರು ಹಾಗೂ ಚಿಂತಕರು ಆದ ಡಾ. ಬಾಲಗುರುಮೂರ್ತಿ, ಡಾ. ಗೋವಿಂದಸ್ವಾಮಿ ,ಶೇಷಪ್ಪ, ರಂಗಪ್ಪ ಹಾಗೂ BAMCEF ಸುಭಾಷ್ ಶೀಲವಂತ ಅಜೀಜ್ ಪಿಂಡಾರಿ ಡಾಕ್ಟರ್ ಭಾನುಪ್ರಕಾಶ್ ಹಾಗೂ ಸುಮಾರು 51 ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗದ ಅಲೆಮಾರಿ ಸಮುದಾಯಗಳ ಮುಖಂಡರಾದ ಬಿ.ಎಸ್. ಅನಂದ್ ಕುಮಾರ್ ಏಕಲವ್ಯ, ಬಿ.ಎಚ್. ಮಂಜುನಾಥ್, ಎಸ್,ಗೋವಿಂದು, ಕಿರಣ್ ಕುಮಾರ್ ಕೊತ್ತಿಗೆರೆ,
ಲೋಹಿತಾಕ್ಷ,ಬಿ.ಟಿ. ದಾಸರ್ ಮಹೇಂದ್ರರಾವ್ ಸಾಸ್ನಕ್ ಮತ್ತಿತರೆ ಅಲೆಮಾರಿ ಸಮುದಾಯಗಳ ನೂರಾರು ಮುಖಂಡರು ಈ ಒಂದು ಅಲೆಮಾರಿ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
