ದಿನದ ಸುದ್ದಿ
ಮೋದಿ ಸರ್ಕಾರದ ಮುಂದಿರುವ ಸವಾಲುಗಳು…!

ಸ್ನೇಹಿತರೆ,
ಕೇಂದ್ರದಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು ಸಿಕ್ಕಿದ್ದು ಆಯ್ತು ಮೋದಿ ಎರಡನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದು ಆಯಿತು. ಆದರೆ ಈ ಸರ್ಕಾರದ ಮುಂದಿರುವ ಸವಾಲುಗಳು ಆದರೂ ಏನು ಅನುವ ಬಗ್ಗೆ ಒಂದು ಸರಿ ಗಮನ ಹರಿಸೋಣ. ಅಂದಹಾಗೆ ಈ ವಿಷಯವನ್ನು ಓದುವಾಗ ನಿಮ್ಮ ಮನಸ್ಸು ಒಳಗಿನ ರಾಗದ್ವೇಷ ಭಕ್ತಿಭಾವಗಳನ್ನು ಒಂದು ಸ್ವಲ್ಪ ಪಕ್ಕಕ್ಕಿಟ್ಟು ಪ್ರಾಕ್ಟಿಕಲ್ ಆಗಿ ಯೋಚನೆ ಮಾಡುತ್ತ ಓದಿರಿ ಹಾಗು ಮಾಡೋದಕ್ಕೆ ಸಾಧ್ಯ ಆಗದೇ ಇದ್ದರೆ ದಯವಿಟ್ಟು ಈ ವಿಷಯವನ್ನು ಓದುವುದಕ್ಕೆ ಹೋಗಬೇಡಿ.
ಮೋದಿ ಸರ್ಕಾರ ಪೂರ್ಣ ಬಹುಮತದಿಂದ ಅಧಿಕಾರಕ್ಕೇರಿದ ನಂತರ ಜನರ ನಿರೀಕ್ಷೆಗಳು ಹೆಚ್ಚಾಗಿವೆ ಭಾರತದಲ್ಲಿನ ಎಲ್ಲಾ ಸಮಸ್ಯೆಗಳನ್ನು ಮೋದಿ ನಿವಾರಿಸಿ ಬಿಡುತ್ತಾರೆ ಅನ್ನೋ ಆಸೆ ನಿರೀಕ್ಷೆ ಕೋಟಿ ಕೋಟಿ ಜನರ ಮನಸ್ಸಲ್ಲಿದೆ.
ರಾಮಮಂದಿರ ನಿರ್ಮಾಣ, ಆರ್ಟಿಕಲ್ ತ್ರೀ ಸೆವೆಂಟಿ, ಸಮಾನ ನಾಗರಿಕ ಸಂಹಿತೆ, ಹಿಂದೂ ರಾಷ್ಟ್ರದ ನಿರ್ಮಾಣ, ಇವತ್ತು ಭಾರತ ಸರ್ಕಾರದ ಮುಂದಿನ ಆದ್ಯತೆಗಳೇನು ಮೋದಿ ಸಚಿವ ಸಂಪುಟದ ಎದುರು ಸವಾಲುಗಳೇನು ಅನ್ನೋದಷ್ಟೇ ನಾವು ಗಮನಿಸಿದರೆ ಮೊಟ್ಟಮೊದಲನೆಯದಾಗಿ ಮತ್ತು ಭಯಾನಕವಾಗಿ ಈ ದೇಶವನ್ನು ಕಾಡುತ್ತಿರುವ ನಿರುದ್ಯೋಗ ಸಮಸ್ಯೆ!
ಮುಂದಿನ 20 20 ರ ಹೊತ್ತಿಗೆ ಭಾರತದಲ್ಲಿನ ನಿರುದ್ಯೋಗಿಗಳ ಸಂಖ್ಯೆ 44% ಏರುತದ್ದೆ, ಇದು ವಿದ್ಯಾವಂತ ನಿರುದ್ಯೋಗಿಗಳ ಕಥೆ ಇನ್ನು ಗ್ರಾಮೀಣ ಭಾಗದಿಂದ ವಲಸೆ ಬರುತ್ತಿರುವ ಕೃಷಿ ನಿರಾಶ್ರಿತರನ್ನು ಸೇರಿಸಿಲ್ಲ ಅದು ಲೆಕ್ಕಕ್ಕೆ ಸಿಗುವುದಿಲ್ಲ. ಸರ್ಕಾರದ ಮುಂದಿರುವ ಚಾಲೆಂಜ್ ಗಳು ಅಂದರೆ ಗ್ರಾಮೀಣ ವಲಸೆಯನ್ನು ತಡೆದು ಕೃಷಿ ಹಾಗೂ ಕೃಷಿ ಆಧಾರಿತ ಕೈಗಾರಿಕೆ ಗಳನ್ನು ಉತ್ತೇಜಿಸುವ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವುದು ಜೊತೆಗೆ ಭಾರತದಲ್ಲಿ ಹೆಚ್ಚುತ್ತಿರುವ ಹಣದುಬ್ಬರವನ್ನು ತಗ್ಗಿಸಿ ಜಿಡಿಪಿಯನ್ನು ಹೆಚ್ಚಿಸಬೇಕು. ಜವಾಬ್ದಾರಿ ಸರ್ಕಾರದ ಮೇಲಿದೆ ಡಾಲರ್ ಎದುರು ರೂಪಾಯಿ ಬೆಲೆ ಕುಸಿದು ಹೋಗುತ್ತಿರುವುದು ನಮಗೂ ತಡೆಯಬೇಕಿದೆ .
ಇವತ್ತಿನವರೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವುದಕ್ಕೆ ಸಾಧ್ಯವಾಗಿಲ್ಲ ಆದರೆ ಈ ಕೂಡಲೇ ಸರಿಪಡಿಸಬೇಕಿದೆ. ಭಾರತ ಕೃಷಿ ಪ್ರಧಾನ ದೇಶ ಆದರೆ ದುರಂತ ಅಂದ್ರೆ ಇಲ್ಲಿ ಅನ್ನ ಕೊಡುವ ರೈತನಿಗೆ ಹೊಟ್ಟೆ ತುಂಬಾ ಊಟ ಸಿಗದ ಪರಿಸ್ಥಿತಿ. ಇದು ಬಿಜೆಪಿ ಸರ್ಕಾರದ ವಿಷಯಕ್ಕೆ ಬರೋದಾದ್ರೆ, ಶ್ರೀಮಂತರು ಹಾಗೂ ಉದ್ಯಮಿಗಳ ಸರ್ಕಾರ ಅನ್ನೋ ಆರೋಪವೂ ಇದೆ.
ಮುಂದಿನ ಐದು ವರ್ಷಗಳಲ್ಲಿ ಕೃಷಿ ಕ್ಷೇತ್ರದ ಚೇತರಿಕೆಗೆ ಆದ್ಯತೆಯನ್ನು ಕೊಡಬೇಕು ಅದು ವರ್ಷಕ್ಕೆ rs.6000 ಕೊಡುವುದರಿಂದ ಅಥವಾ ಸಾಲಮನ್ನಾ ಮಾಡುವ ಘೋಷಣೆಗಳಿಂದ ಕೃಷಿಕ್ಷೇತ್ರ ಸುಧಾರಣೆ ಆಗೋದಿಲ್ಲ. ರೈತರಿಗೆ ಕರೆಂಟು ನೀರು ಸೂಕ್ತ ಬೆಳೆ ಕುರಿತಾದ ಮಾಹಿತಿ ತಂತ್ರಜ್ಞಾನ ಕೊಡಬೇಕಾಗಿದೆ .
ಕೃಷಿ ಕ್ಷೇತ್ರದಲ್ಲಿ ಹೊಸ ಹೂಡಿಕೆಗಳು ಬೆಲೆ ನಿಯಂತ್ರಣ ಕೃಷಿ-ಆಧಾರಿತ ಉದ್ದಿಮೆಗಳು ಹೀಗೆ ಇನ್ನೇನೋ ಆಗಬೇಕಿದೆ. ಇವತ್ತು ಸೇನೆಯನ್ನು ಬಲಪಡಿಸಲು ಬೇಕಾಗಿರುವುದು ,ಭಾರತದಲ್ಲಿ ಶಸ್ತ್ರಾಸ್ತ್ರ ತಯಾರಿಕೆ ಘಟಕಗಳು ಸ್ಥಾಪನೆಗೊಳ್ಳಬೇಕಿದೆ. ಆ ಮೂಲಕ ಸ್ಥಳೀಯ ಯುವಕರಿಗೆ ಉದ್ಯೋಗ ಸಿಗುತ್ತೆ ಸಾಕಷ್ಟು ಚಿಕ್ಕ ಕೈಗಾರಿಕೆಗಳು ಹುಟ್ಟುವುದಕ್ಕೆ ಸಾಧ್ಯವಾಗುತ್ತೆ ನಿರುದ್ಯೋಗ ನಿವಾರಣೆಗೆ ಕೂಡ ಆಗುತ್ತೆ ಹಾಗೆ ಪೆಟ್ರೋಲಿಯಂ ಮೇಲಿನ ಅತಿಯಾದ ಆಮದು ಮಾಡುವುದನ್ನು ನಿಲ್ಲಿಸಿ
ಪರ್ಯಾಯ ಮಾರ್ಗ ಹುಡುಕ ಬೇಕಾದ ಅನಿವಾರ್ಯತೆ ಕೂಡ ಸರ್ಕಾರದ ಮೇಲಿದೆ.
ಆಂತರಿಕ ಭದ್ರತೆ ಹಾಗೂ ಬಾಹ್ಯ ಶಕ್ತಿಗಳ ನಿಯಂತ್ರಣ ಭಯೋತ್ಪಾದನೆ ನಿರ್ಮೂಲನೆ ಬಡತನದ ವಿರುದ್ಧ ಹೋರಾಟ ಕಡಿಮೆ ಏನು ?
ಅಮೇರಿಕಾ ಮೊನ್ನೆ ತಾನೇ ಭಾರತವನ್ನು ಅಭಿವೃದ್ಧಿ ರಾಷ್ಟ್ರಗಳ ಪಟ್ಟಿಯಿಂದ ತೆಗೆದುಹಾಕಿದೆ.
ಆದರಿಂದ ಭಾರತ ಅಮೇರಿಕಾದಿಂದ ಆಮದು ಮಾಡುತಿದ್ದ ಸುಮಾರು ೨೦೦೦ ವಸ್ತುಗಳ ಮೇಲೆ ತೆರಿಗೆ ಬೀಳಲಿದೆ, ಇದರಿಂದ ಭಾರತಕ್ಕೆ ಆಗುವ ನಷ್ಟ ಕಡಿಮೆ ಏನಿಲ್ಲ .
ನಾವು ಗಮನಿಸಿದರೆ ಭಾರತ ವಿದೇಶಾಂಗ ನೀತಿಯನ್ನು ರೂಪಿಸುವಾಗ ಎಚ್ಚರಿಕೆವಹಿಸಬೇಕಾಗಿದೆ ಅನ್ನೋದು ಸ್ಪಷ್ಟ. ಚೀನಾ ಹಾಗೂ ಪಾಕಿಸ್ತಾನಗಳ ಕಂಟ್ರೋಲ್ ಮಾಡಿದ ಮೋದಿ ಸರ್ಕಾರ ಈ ಬಾರಿನೂ ಅಷ್ಟೇ ಪ್ರಭಾವಿಯಾಗಿ ಚೀನಾ ಅನ್ನೋ ಶತ್ರುವನ್ನು ನಿಯಂತ್ರಿಸುತ್ತಾ ಅದನ್ನು ಮಾಡೋದಕ್ಕೆ ಅಮೆರಿಕಾದ ಬೆಂಬಲ ಬೇಕೇ ಬೇಕು ಅಂತ ಸ್ನೇಹವನ್ನ ಕಳೆದುಕೊಳ್ಳುವುದಕ್ಕೆ ಆಗೋದಿಲ್ಲ.
ಈಗಾಗಲೇ ಒಂದು ಸಮಸ್ಯೆ ಶುರುವಾಗಿದೆ,
ದೊಡ್ಡಣ್ಣನ ಸ್ನೇಹ ವಹಿಸುವುದಕ್ಕೆ ಭಾರತ ತನ್ನ ಹಳೆಯ ಮಿತ್ರ ದೇಶ ಇರಾನ್ ಜೊತೆಗಿನ ಪೆಟ್ರೋಲಿಯಂ ವ್ಯವಹಾರವನ್ನು ನಿಲ್ಲಿಸಿದೆ.
ಇದೀಗ ಭಾರತ ತನ್ನ ವಿದೇಶ ವ್ಯವಹಾರವನ್ನು ಯೋಚಿಸಿ ಹೆಜ್ಜೆಯಿಡ ಬೇಕಾಗಿದೆ.
ಈಗ ನಾವು ಕಾದು ನೋಡಬೇಕಿದೆ ರಾಮಮಂದಿರ ಅದನ್ನ ನ್ಯಾಯಾಲಯ ನಿರ್ಧಾರ ಮಾಡುತ್ತೆ ,ಆರ್ಟಿಕಲ್ 370, ಸಮಾನ ನಾಗರಿಕ ಸಂಹಿತೆ ಇದೆಲ್ಲ ಬಿಜೆಪಿಗೆ ಮತ ತಂದುಕೊಟ್ಟ ಅಂಶಗಳಾಗಿವೆ. ನಿರುದ್ಯೋಗ ಹಣದುಬ್ಬರ ಆರ್ಥಿಕ ಅಭಿವೃದ್ಧಿ ಇವುಗಳಿಗೆ ಹೋಲಿಸಿದರೆ ಮೋದಿ ಸರ್ಕಾರದ ಆದ್ಯತೆ ಸಶಕ್ತ ಭಾರತದ ನಿರ್ಮಾಣಕ್ಕಾಗಿ ಒಂದಾಗಿದೆ.
ಇದು ಮೋದಿ ಸರ್ಕಾರದ ಮುಂದಿರುವ ಪ್ರಮುಖ ಸವಾಲುಗಳು. ಇವೆಲ್ಲವನ್ನ ನರೇಂದ್ರ ಮೋದಿಯವರ ಸಚಿವ ಸಂಪುಟ ಹೇಗೆ ನಿಭಾಯಿಸುತ್ತದೆ ಎಂದು ಕಾದುನೋಡಬೇಕು.
ಜೈ ಹಿಂದ್ ಜೈ ಕರ್ನಾಟಕ
–ಮನನ್ ಜೈನ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243

-
ನಿತ್ಯ ಭವಿಷ್ಯ7 days ago
ಸೋಮವಾರ- ರಾಶಿ ಭವಿಷ್ಯ ಜನವರಿ-23,2023 : ಈ ರಾಶಿಯವರಿಗೆ ಸಾಡೇ ಸಾತಿ ಶನಿಯಿಂದ ಮುಕ್ತಿ,ಎಲ್ಲಾ ನಿಮ್ಮ ಕೆಲಸಗಳು ನೆರವೇರಲಿ
-
ದಿನದ ಸುದ್ದಿ5 days ago
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ
-
ದಿನದ ಸುದ್ದಿ19 hours ago
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
-
ದಿನದ ಸುದ್ದಿ18 hours ago
ನಟ ಮನದೀಪ್ ರಾಯ್ ನಿಧನ