ರಾಜಕೀಯ
ಭಾರತದ ಸಂವಿಧಾನದ ಏಕೈಕ ಶಿಲ್ಪಿ, ಸಂವಿಧಾನದ ಪಿತಾಮಹ ಡಾ ಅಂಬೇಡ್ಕರ್

- ಅಲ್ಮೆಯಿಡಾ ಗ್ಲಾಡ್ಸನ್
ಭಾರತದ ಸಂವಿಧಾನದ ಏಕೈಕ ಶಿಲ್ಪಿ, ಸಂವಿಧಾನದ ಪಿತಾಮಹ ಡಾ ಅಂಬೇಡ್ಕರ್ ಮಾತ್ರ ಯಾಕೆಂದರೆ 395 ವಿಧಿಗಳು, 8 ಅನುಚ್ಛೇದಗಳು, 22 ಭಾಗಗಳು, ಒಂದು ಲಕ್ಷಕ್ಕಿಂತಲೂ ಹೆಚ್ಚು ಶಬ್ದಗಳು ಹಾಗೂ ಇನ್ನೂರಕ್ಕಿಂತ ಹೆಚ್ಚು ಪುಟಗಳ ಸಂವಿಧಾನವನ್ನು ರಚಿಸುವಲ್ಲಿ ಡಾ ಅಂಬೇಡ್ಕರ್ ಪಟ್ಟ ಶ್ರಮ, ವ್ಯಯಿಸಿದ ಸಮಯ ಎಲ್ಲರಿಗಿಂತಲೂ ಹೆಚ್ಚು.
ಸಂವಿಧಾನ ಕರಡು ಸಮಿತಿಯ ಸದಸ್ಯರಾಗಿ ಕೃಷ್ಣಸ್ವಾಮಿ ಅಯ್ಯರ್, ಗೋಪಾಲಸ್ವಾಮಿ ಅಯ್ಯಂಗಾರ್, ಕೆ ಎಮ್ ಮುನ್ಶಿಯಂಥ ಘಟಾನುಘಟಿಗಳು ಇದ್ದರೂ, ಸಮಿತಿಯ ಅಧ್ಯಕ್ಷರನ್ನಾಗಿ ಆರಿಸಿದ್ದು ಬಾಬಾಸಾಹೇಬರನ್ನು ಅವರ ಸಾಮರ್ಥ್ಯ ಹಾಗೂ ಅಗಾಧವಾದ ಜ್ಞಾನದಾಧರದಲ್ಲಿ. ಸಂವಿಧಾನ ಕರಡು ಸಮಿತಿಯಲ್ಲಿ ಬಾಬಾಸಾಹೇಬರ ಜೊತೆ ಇನ್ನೂ ಆರು ಜನರಿದ್ದರು. ಆದರೆ ಕಾರಾಣಾಂತರಗಳಿಂದ ಕರಡು ಸಮಿತಿಯ ಹೆಚ್ಚಿನ ಸದಸ್ಯರು ಸಂವಿಧಾನ ರಚನೆಯಲ್ಲಿ ಭಾಗವಹಿಸಲೇ ಇಲ್ಲ. ಒಬ್ಬರು ತೀರಿಹೋದರು, ಇನ್ನೊಬ್ಬರು ಅಮೇರಿಕಾಕ್ಕೆ ಹೋದರೆ, ಮತ್ತೋರ್ವರು ತಮ್ಮ ರಾಜ್ಯದ ವಿಷಯಗಳಲ್ಲೇ ತಲ್ಲೀನರಾದರು. ಇನ್ನಿಬ್ಬರು ಅನಾರೋಗ್ಯದ ನಿಮಿತ್ತ ದೆಹಲಿ ಕಡೆ ಬರಲೇ ಇಲ್ಲ. ಹೀಗಾಗಿ ಇಡೀ ಸಂವಿಧಾನವನ್ನು ರಚಿಸುವ ಸಂಪೂರ್ಣ ಜವಾಬ್ದಾರಿ ಬಾಬಾಸಾಹೇಬರ ಹೆಗಲಿಗೇ ಬಿತ್ತು. ಸುಮಾರು ಎರಡೂವರೆ ವರುಷಗಳ ಕಾಲ ನಡೆದ ಸಂವಿಧಾನ ರಚನೆ, ನವೆಂಬರ್ 26, 1949ರಂದು ಸಂವಿಧಾನ ಸಭೆಯ ಅನುಮೋದನೆ ಪಡೆಯುವ ಮೊದಲು ಸುಮಾರು 2500 ಬಾರಿ ತಿದ್ದುಪಡಿಗೆ ಒಳಗಾಗಿತ್ತು. ಕೊನೆಗೆ ಈ ಸಂವಿಧಾನ ಅನುಮೋದನೆಯಾದಾಗ ಅದು ಜಗತ್ತಿನ ಅತೀ ದೊಡ್ಡ ಸಂವಿಧಾನವೆಂದು ಪರಿಗಣಿಸಲ್ಪಟ್ಟಿತ್ತು. ಸದ್ಯಕ್ಕೆ ನಮ್ಮ ಸಂವಿಧಾನ ಜಗತ್ತಿನ ಎರಡನೆಯ ಅತೀ ದೊಡ್ಡ ಸಂವಿಧಾನ. ಮೊದಲನೆಯ ಸ್ಥಾನದಲ್ಲಿ ಈವಾಗ ಅಲ್ಬೇನಿಯಾದ ಸಂವಿಧಾನ ಇದೆ.
ನಮ್ಮ ದೇಶ ಯಾವುದೇ ದೇಶದ ಸಂವಿಧಾನದ ಕಾಪಿ-ಪೇಸ್ಟ್ ಅಲ್ಲ ಸಂಘಿಗಳು ಹೇಳುವಂತೆ. ಹೌದು ಬ್ರಿಟನ್, ಅಮೇರಿಕಾ, ಐರ್ಲೆಂಡ್, ಫ್ರಾನ್ಸ್, ಆಸ್ಟ್ರೇಲಿಯಾ, ಜರ್ಮನಿ, ಯುಎಸ್ಎಸ್ಆರ್ ಮುಂತಾದ ದೇಶಗಳ ಸಂವಿಧಾನಗಳ ಪ್ರಭಾವ ನಮ್ಮ ಸಂವಿಧಾನದ ಮೇಲೂ ಇದೆ. ಆದರೆ ಅಲ್ಲಿಂದ ಕಾಪಿಯಾಗಿಲ್ಲ ಬದಲಾಗಿ ಅವುಗಳ ಕೆಲ ಆಶಯಗಳನ್ನು ಮೂಲಾಧಾರವಾಗಿಟ್ಟು, ಭಾರತದ ಸಾಮಾಜಿಕ, ಆರ್ಥಿಕ, ಧಾರ್ಮಿಕ, ಸಾಂಸ್ಕೃತಿಕ, ಭೌಗೋಳಿಕ, ಭಾಷಿಕಾ ವಿವಿಧತೆಗಳಿಗೆ ಅನುಸಾರವಾಗಿ ಭಾರತದ ಸಂವಿಧಾನವನ್ನು ರಚಿಸಲಾಗಿದೆ.
ಸಂವಿಧಾನ ಕರಡು ಸಮಿತಿಯ ಸದಸ್ಯರಾಗಿದ್ದವರು ಬಾಬಾಸಾಹೇಬ್ ಅಂಬೇಡ್ಕರ್, ಗೋಪಾಲಸ್ವಾಮಿ ಅಯ್ಯಂಗಾರ್, ಕೃಷ್ಣಸ್ವಾಮಿ ಅಯ್ಯರ್, ಕೆಎಮ್ ಮುನ್ಶಿ, ಸಯ್ಯದ್ ಮಹಮೂದ್ ಸಾ’ದುಲ್ಲಾ, ಬಿ ಎಲ್ ಮಿಟ್ಟರ್, ಡಿ ಪಿ ಖೈತಾನ್. (ಮಿಟ್ಟರ್ ಅವರ ಅನಾರೋಗ್ಯದ ಕಾರಣದಿಂದ ಸಮಿತಿಯಿಂದ ಹೊರಗುಳಿದಾಗ ನಮ್ಮ ಮೈಸೂರಿನ ಮಾಧವ ರಾವ್ ಅವರ ಜಾಗಕ್ಕೆ ಆಯ್ಕೆಯಾಗಿದ್ದರೆ, ಡಿ ಪಿ ಖೈತಾನ್ 1948ರಲ್ಲಿ ತೀರಿಹೋದ ಕಾರಣ ಅವರ ಜಾಗಕ್ಕೆ ಟಿ ಟಿ ಕೃಷ್ಣಮಾಚಾರಿ ಆಯ್ಕೆಯಾಗಿದ್ದರು). ಭಾರತದ ಸಂವಿಧಾನ ನವೆಂಬರ್ 26, 1949ರಂದು ಸಂವಿಧಾನ ಸಭೆಯ ಅನುಮೋದನೆ ಪಡೆದಾಗ ಸಂವಿಧಾನ ಸಭೆಯನ್ನುದ್ದೇಶಿಸಿ ಮಾತಾನಾಡಿದ ಟಿ ಟಿ ಕೃಷ್ಣಮಾಚಾರಿ ಹೀಗೆಂದಿದ್ದಾರೆ “ಕರಡು ರಚನಾ ಸಮಿತಿಗೆ ಈ ಸಂವಿಧಾನ ಸಭೆ ಏಳು ಜನರನ್ನು ನೇಮಿಸಿತ್ತು. ಅದರಲ್ಲಿ ಒಬ್ಬರು ರಾಜೀನಾಮೆ ಕೊಟ್ಟಾಗ ಅವರ ಜಾಗಕ್ಕೆ ಇನ್ನೋರ್ವರ ಆಯ್ಕೆಯಾಯಿತು. ಒಬ್ಬರು ತೀರಿಹೋದರು, ಒಬ್ಬರು ಅಮೇರಿಕಾಕ್ಕೆ ಹೋದರೆ, ಮತ್ತೊಬ್ಬ ಸದಸ್ಯರು ತಾವು ಪ್ರತಿನಿಧಿಸುತ್ತಿದ್ದ ರಾಜ್ಯದ ವಿಷಯಗಳಲ್ಲೇ ತಲ್ಲೀನರಾಗಿದ್ದರೆ, ಇನ್ನಿಬ್ಬರು ದೆಹಲಿಯಿಂದ ದೂರವಿದ್ದು, ಅವರ ಅನಾರೋಗ್ಯದ ಕಾರಣದಿಂದ ಸಂವಿಧಾನ ರಚನೆಯಲ್ಲಿ ಭಾಗವಹಿಸಲಿಲ್ಲ. ಹೀಗಾಗಿ ಸಂವಿಧಾನವನ್ನು ರಚಿಸುವ ಸಂಪೂರ್ಣ ಜವಾಬ್ದಾರಿ ಡಾ ಅಂಬೇಡ್ಕರ್ ಅವರ ಹೆಗಲಿಗೆ ಬಿತ್ತು. ಈ ಜವಾಬ್ದಾರಿಯನ್ನು ಸಮರ್ಪಕವಾಗಿ ಹಾಗೂ ಪ್ರಶಂಸನೀಯ ರೀತಿಯಲ್ಲಿ ನಿಭಾಯಿಸಿದಕ್ಕಾಗಿ ನಾವೆಲ್ಲರೂ ಅವರಿಗೆ ಋಣಿಯಾಗಿರಬೇಕೆಂದು ನನ್ನ ಅಭಿಪ್ರಾಯ.”
ಭಾರತದ ಪ್ರಪ್ರಥಮ ರಾಷ್ಟ್ರಪತಿ ರಾಜೇಂದ್ರ ಪ್ರಸಾದ್ ಸಂವಿಧಾನ ಸಭೆಯ ಡಿಬೇಟ್ನಲ್ಲಿ ಒಂದೊಮ್ಮೆ ಹೀಗೆಂದಿದ್ದರು. “ಅಧ್ಯಕ್ಷನ ಸ್ಥಾನದಲ್ಲಿದ್ದು ಕರಡು ರಚನೆ ಸಮಿತಿಯ ದೈನಂದಿನ ಕೆಲಸಗಳನ್ನು ನಾನು ಬಲು ಹತ್ತಿರದಿಂದ ನೋಡಿದ್ಡೇನೆ. ಹಾಗಾಗಿ ಬೇರೆಯರವರಿಗಿಂತ ಹೆಚ್ಚಾಗಿ ಸಂವಿಧಾನ ಕರಡು ರಚನೆ ಸಮಿತಿಯ ಸದಸ್ಯರು ಹಾಗೂ ಪ್ರತ್ಯೇಕವಾಗಿ ಸಮಿತಿ ಅಧ್ಯಕ್ಷರು ಎಷ್ಟೊಂದು ಶೃದ್ಧೆ ಹಾಗೂ ಚೈತನ್ಯದಿಂದ ಈ ಸಂವಿಧಾನವನ್ನು ರಚಿಸಿದ್ದಾರೆ ಎಂದು ನನಗೆ ತಿಳಿದಿದೆ. ಅಂಬೇಡ್ಕರ್ ಅವರನ್ನು ಕರಡು ಸಮಿತಿಗೆ ಆಯ್ಕೆ ಮಾಡಿ, ತದನಂತರ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದಕ್ಕಿಂತ ಹೆಚ್ಚಿನ ಒಳ್ಳೆಯ ಕೆಲಸವನ್ನು ನಾವು ಮಾಡಿಲ್ಲ.”
ಹೀಗಾಗಿ ಬಾಬಾಸಾಹೇಬ್ ಕೊಟ್ಟ ಸಂವಿಧಾನದ ಕಾರಣದಿಂದಲೇ ಇವತ್ತು ಐಎಎಸ್ ಆಫೀಸರ್ ಆಗಿರುವ ಶಿಕ್ಷಣಾ ಇಲಾಖೆಯ ಅಧಿಕಾರಿ ಉಮಾಶಂಕರ್ ಸಂವಿಧಾನ ರಚನೆಯ ಬಗ್ಗೆ ಹೊರಡಿಸಿರುವ ಸುತ್ತೋಲೆಯಲ್ಲಿ ಆಗಿರುವುದು ಪ್ರಮಾದವಲ್ಲ ಬಟ್ ಅಪರಾಧ. ಸಂವಿಧಾನದ ಕಾರಣದಿಂದಲೇ ಇಂಥ ಉನ್ನತ ಹುದ್ದೇಗೇರಿರುವ ವ್ಯಕ್ತಿಗಳು ಮನಸ್ಸಿನಲ್ಲಿ ಇಷ್ಟೊಂದು ಕೊಳಕನ್ನು ಹಾಗೂ ನೀಚತನವನ್ನು ತುಂಬಿಸಿಕೊಂಡಿದ್ದಾರೆಂದರೆ ಅವರು ಸಂವಿಧಾನದ ಪಾಲಕರಾಗಿರಲು ಸಾಧ್ಯವೇ ಇಲ್ಲ. ಇವರನ್ನು ಕೇವಲ ಅಮಾನತ್ತುಗೊಳಿಸಿದರೆ ಸಾಕಾಗೋಲ್ಲ ಬದಲಾಗಿ ಅವರನ್ನು ಸೇವೆಯಿಂದ ವಜಾ ಮಾಡಬೇಕು. ಸಂವಿಧಾನದ ನೆರಳಿನಡಿಯಲ್ಲಿ ಕುಳಿತು ತಮ್ಮ ರಾಜಕೀಯ ಹಾಗೂ ವ್ಯಯಕ್ತಿಕ ಸಿದ್ದಾಂತಗಳನ್ನು ಪ್ರತಿಪಾದಿಸುವ ಬದಲು ನೇರವಾಗಿ ಸೇವೆಗೆ ರಾಜೀನಾಮೆ ಕೊಟ್ಟು ಹೊರಬಂದು ತಮಗೆ ಬೇಕಾದ ರಾಜಕೀಯ ಪಕ್ಷವನ್ನು ಸೇರಲಿ. ಹಾಗಾಗಿ ಉಮಾಶಂಕರ್ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವ ತನಕ ಪಟ್ಟು ಸಡಿಲಿಸದೆ ಹೋರಾಡಬೇಕು. ನಮ್ಮ ಬ್ಯೂರೋಕ್ರಸಿಯಲ್ಲಿ ತುಂಬಿರುವ ಇಂಥ ನೀಚರನ್ನು ಗುರುತಿಸಿ ಹೊರಗಟ್ಟಿಲ್ಲವೆಂದರೆ ಮುಂದೊಂದು ದಿನ ಇವರೇ ಇಡೀ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡೋಡು ಗ್ಯಾರಂಟಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243

ದಿನದ ಸುದ್ದಿ
ರಾಷ್ಟ್ರೀಯ ಯುವ ದಿನದ ಪ್ರಯುಕ್ತ ನಾಳೆ ರಾಜಾಜಿನಗರ ವಿಧಾನ ಸಭಾ ಕ್ಷೇತ್ರದಲ್ಲಿ ಬೈಕ್ ರ್ಯಾಲಿ : ಭವ್ಯ ನರಸಿಂಹಮೂರ್ತಿ

ಸುದ್ದಿದಿನ, ಬೆಂಗಳೂರು : ರಾಷ್ಟ್ರೀಯ ಯುವ ದಿನದ ಪ್ರಯುಕ್ತ ನಾಳೆ ರಾಜಾಜಿನಗರ ವಿಧಾನ ಸಭಾ ಕ್ಷೇತ್ರದಲ್ಲಿ ಬೈಕ್ ರ್ಯಾಲಿ ಹಮ್ಮಿಕೊಂಡಿದ್ದು ಸ್ವಾಮಿ ವಿವೇಕಾನಂದರ 160ನೇ ಜನ್ಮದಿನದ ಅಂಗವಾಗಿ ಅವರ ತತ್ವ ಆದರ್ಶಗಳು ಹಾಗೂ ಯುವ ಜನತೆಗೆ ನೀಡಿರುವ ಸಂದೇಶಗಳನ್ನು ರಾಜಾಜಿನಗರ ವಿಧಾನ ಸಭಾ ಕ್ಷೇತ್ರದ ಎಲ್ಲಾ ಜನತೆಗೆ ತಲುಪುವಂತೆ ಮಾಡುವುದು ಇದರ ಉದ್ದೇಶವಾಗಿದೆ ಎಂದು ರಾಜಾಜಿನಗರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಆಕಾಂಕ್ಷಿ ಭವ್ಯ ನರಸಿಂಹಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೈಕ್ ರ್ಯಾಲಿ ಬೆಳಿಗ್ಗೆ 09-00 ಕ್ಕೆ ರಾಜಾಜಿನಗರ Entrance Bridge ಇಂದ ಪ್ರಾರಂಭವಾಗಿ ನವರಂಗ ಚಿತ್ರಮಂದಿರ – ಶಂಕರ್ ಮಠ – ಹಾವನೂರ್ ಸರ್ಕಲ್ – ಹೌಸಿಂಗ್ ಬೋರ್ಡ್ – ಕಾಮಾಕ್ಷಿಪಾಳ್ಯ ಬಸ್ ಸ್ಟಾಂಡ್ – ಹಾವನೂರ್ – ಅಕ್ಷಯ ಉಪಹಾರ – ಮೋದಿ ಹಾಸ್ಪಿಟಲ್ – ನವರಂಗ ಬ್ರಿಡ್ಜ್ – ಗಿರಿಯಾಸ್ ಸಿಗ್ನಲ್ – 6th ಬ್ಲಾಕ್ – ಕೊನೆಯದಾಗಿ 12 ಗಂಟೆಗೆ ಭಾಷ್ಯಮ್ ಸರ್ಕಲ್ ನಲ್ಲಿ ಕೊನೆಗೊಳ್ಳುತ್ತದೆ.
ದಾರಿಯಲ್ಲಿ 4 ಕಡೆ ಸ್ವಾಮಿ ವಿವೇಕಾನಂದರಿಗೆ ಪೂಜೆ ಹಮ್ಮಿಕೊಳ್ಳಲಾಗಿದೆ. ಪೂಜೆಯ ನಂತರ ವಿವೇಕಾನಂದರ ತತ್ವ ಆದರ್ಶಗಳನ್ನೊಳಗೊಂಡ ಹತ್ತು ಸಾವಿರ ಪುಸ್ತಕಗಳನ್ನು ಕ್ಷೇತ್ರದಾದ್ಯಂತ ಉಚಿತವಾಗಿ ಹಂಚಲಾಗುವುದು ಹಾಗೂ ಅನ್ನ ಸಂತರ್ಪಣೆ ಏರ್ಪಡಿಸಲಾಗಿರುತ್ತದೆ ಎಂದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ನಿತ್ಯ ಭವಿಷ್ಯ6 days ago
ಸೋಮವಾರ- ರಾಶಿ ಭವಿಷ್ಯ ಜನವರಿ-23,2023 : ಈ ರಾಶಿಯವರಿಗೆ ಸಾಡೇ ಸಾತಿ ಶನಿಯಿಂದ ಮುಕ್ತಿ,ಎಲ್ಲಾ ನಿಮ್ಮ ಕೆಲಸಗಳು ನೆರವೇರಲಿ
-
ದಿನದ ಸುದ್ದಿ4 days ago
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ
-
ದಿನದ ಸುದ್ದಿ3 hours ago
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
-
ದಿನದ ಸುದ್ದಿ2 hours ago
ನಟ ಮನದೀಪ್ ರಾಯ್ ನಿಧನ