ದಿನದ ಸುದ್ದಿ
ಎಂಟಿಬಿ ನಾಗರಾಜ್ ಪಕ್ಷ ಬಿಡಲು ಅಕ್ರಮ ದುಡ್ಡಿನ ಹೆದರಿಕೆಯಾ? : ಸಿದ್ದರಾಮಯ್ಯ

ಸುದ್ದಿದಿನ, ಹೊಸಕೋಟೆ : ಹೊಸಕೋಟೆ ವಿಧಾನಸಭಾ ಕ್ಷೇತ್ರದ ನಂದಗುಡಿಯಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮಾವತಿ ಸುರೇಶ್ ಅವರ ಪರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ ಯಾಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹೊಸಕೋಟೆಯಲ್ಲಿ ನಡೆಯುತ್ತಿರುವ ಉಪಚುನಾವಣೆಯನ್ನು ಇಲ್ಲಿನ ಯಾವ ಮತದಾರನೂ ಬಯಸಿರಲಿಲ್ಲ. ಎಂ.ಟಿ.ಬಿ ನಾಗರಾಜ್ ನಮ್ಮ ಪಕ್ಷಕ್ಕೆ ದ್ರೋಹಮಾಡಿ, ಬಿಜೆಪಿ ಸೇರಿದ್ದರ ಫಲ ಕ್ಷೇತ್ರ ಮತ್ತೊಂದು ಚುನಾವಣೆ ಎದುರಿಸುವಂತಾಗಿದೆ. ನಾಗರಾಜ್ ಅವರಿಗೆ ಹೊಸಕೋಟೆ ಕ್ಷೇತ್ರದಲ್ಲಿ 4 ಬಾರಿ ಪಕ್ಷ ಟಿಕೆಟ್ ನೀಡಿತ್ತು, ನಾನು ಮುಖ್ಯಮಂತ್ರಿಯಾಗಿದ್ದಾಗ ನಿಗಮ ಮಂಡಳಿ ಅಧ್ಯಕ್ಷ ಮಾಡಿದ್ದೆ, ಸಮ್ಮಿಶ್ರ ಸರ್ಕಾರದಲ್ಲಿ ಮಂತ್ರಿ ಮಾಡಿದ್ದೆವು. ಇದರ ನಂತರವೂ ಪಕ್ಷ ಬಿಡಲು ಕಾರಣವೇನು? ಅಕ್ರಮ ದುಡ್ಡಿನ ಹೆದರಿಕೆಯಾ? ಈ ಬಗ್ಗೆ ಮತದಾರರು ಅವರನ್ನು ಪ್ರಶ್ನಿಸಬೇಕು ಎಂದರು.
ಪಕ್ಷ ಬಿಡುವ ಮೊದಲು ನಾಗರಾಜ್ ನಮ್ಮನೆಗೆ ಬಂದಿದ್ದರು, ಯಾಕೆ ಪಕ್ಷ ಬಿಡ್ತೀಯಪ್ಪ? ಎಂದು ಕೇಳಿದ್ದೆ. ಅದಕ್ಕೆ ಪಕ್ಷ ಬಿಟ್ಟು ನಿಮ್ಮ ಜೊತೆ ಬರುತ್ತೇನೆ ಎಂದು ಶಾಸಕ ಸುಧಾಕರ್ಗೆ ಮಾತುಕೊಟ್ಟಿದ್ದೀನಿ ಎಂದಿದ್ದರು. ಪಕ್ಷ ಬಿಡುವ ಮುನ್ನ ಜನರನ್ನು ಕೇಳಿದ್ದರೋ? ಇವರನ್ನು ಗೆಲ್ಲಿಸಿದ್ದು ಸುಧಾಕರ್ರೋ ಅಥವಾ ಹೊಸಕೋಟೆ ಜನತೆಯೋ? ಸ್ವಾರ್ಥಕ್ಕಾಗಿ ನಂಬಿದವರ ಬೆನ್ನಿಗೆ ಚೂರಿ ಹಾಕುವವರಿಗೆ ಮತ ನೀಡಿದರೆ ಅಂಥವರು ಜನರ ಪರವಾಗಿ ಕೆಲಸ ಮಾಡುವರೇ? ರಾಜಕೀಯ ಪಕ್ಷಗಳು ಉಳಿದಿರುವುದು ಜನರಿಂದ, ಕಾರ್ಯಕರ್ತರಿಂದಲೇ ಹೊರತು ನಾಯಕರುಗಳಿಂದ ಅಲ್ಲ. ಸಾವಿರ ಪಕ್ಷಗಳನ್ನು ಉಳಿಸುವ, ಬೆಳೆಸುವ ಶಕ್ತಿ ಇರುವುದು ಮತದಾರರಲ್ಲಿ ಮಾತ್ರ ಎಂಬುದನ್ನು ಮರೆಯಬಾರದು ಎಂದು ಮನವಿಮಾಡಿದರು.
ದೇಶದ ಸರ್ವೋಚ್ಛ ನ್ಯಾಯಾಲಯವೇ ನಾಗರಾಜ್ ಅವರನ್ನು ಅನರ್ಹ ಎಂದು ಹೇಳಿದೆ. ಮತ್ತೆ ಯಾವ ಮುಖ ಹೊತ್ತುಕೊಂಡು ಜನರ ಬಳಿ ಮತ ಕೇಳಲು ಬರುತ್ತಾರೆ. ಪಕ್ಷಾಂತರ ಮಾಡಿದವರೆಲ್ಲ ರಾಜಕೀಯದಲ್ಲಿ ಇರಲು ನಾಲಾಯಕ್ ಎಂದು ಸುಪ್ರೀಂ ಕೋರ್ಟೇ ಹೇಳಿದ ಮೇಲೆ ಜನತೆ ಅವರಿಗೆ ಮತ ನೀಡಬೇಕೆ? ದೇಶಕ್ಕಾಗಿ ಕಾಂಗ್ರೆಸ್ ಏನು ಮಾಡಿದೆ ಎಂದು ಕೇಳುತ್ತಲೇ ಕಾಂಗ್ರೆಸ್ ಸ್ಥಾಪಿಸಿದ ಬಿ.ಎಸ್.ಎನ್.ಎಲ್, ಬಿ.ಇ.ಎಮ್.ಎಲ್, ಹೆಚ್.ಎಂ.ಟಿ, ಏರ್ ಇಂಡಿಯಾ ಸಂಸ್ಥೆಗಳನ್ನು ಒಂದೊಂದಾಗಿ ಬಾಗಿಲು ಹಾಕಿಸುತ್ತಿದ್ದಾರೆ. ಹೀಗೇ ಆದರೆ ಕಾಂಗ್ರೆಸ್ ಸ್ಥಾಪಿಸಿದ ಸಂಸ್ಥೆಗಳ ಬಾಗಿಲು ಹಾಕಿಸಿದ್ದೊಂದೇ ಪ್ರಧಾನಿ ನರೇಂದ್ರ ಮೋದಿಯವರ ಸಾಧನೆಯಾಗಲಿದೆ ಎಂದು ವ್ಯಂಗ್ಯವಾಡಿದರು.
ನಮ್ಮದು ಸಹೋದರತ್ವ, ಸಹಬಾಳ್ವೆಯ ಸಿದ್ಧಾಂತವನ್ನು ನಂಬಿರುವ ಪಕ್ಷ, ನಾಗರಾಜ್ ಸೇರಿರುವುದು ಸಮಾಜ ಒಡೆಯುವ ಕೋಮುವಾದಿ ಪಕ್ಷವನ್ನು. ಸಮಾಜ ಕಟ್ಟುವ ಕೈ ಬೆಂಬಲಿಸಬೇಕೋ ಅಥವಾ ಸಮಾಜ ಒಡೆಯುವ ಕೈ ಬೆಂಬಲಿಸಬೇಕೋ ಎಂದು ಯೋಚಿಸಿ ಮತ ನೀಡಿ. ಅನರ್ಹರನ್ನು ಸೋಲಿಸಿ, ಅರ್ಹರನ್ನು ಗೆಲ್ಲಿಸುವ ಮೂಲಕ ಪ್ರಜಾಪ್ರಭುತ್ವವನ್ನು ಉಳಿಸಿ ಎಂದು ಮನವಿ ಮಾಡುತ್ತೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
