ದಿನದ ಸುದ್ದಿ
ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ : ‘ಪ್ರಭಾರ ಭತ್ಯೆ’ ಶೇ.7.5ರಿಂದ ಶೇ.15ಕ್ಕೆ ಹೆಚ್ಚಳ

ಸುದ್ದಿದಿನ,ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಒಂದು ಹುದ್ದೆಯ ಕರ್ತವ್ಯದ ಜೊತೆಗೆ, ಬೇರೊಂದು ಹುದ್ದೆಯ ಹೆಚ್ಚಿನ ಪ್ರಭಾರಿ ಹುದ್ದೆಯ ಜವಾಬ್ದಾರಿಯನ್ನು ನೀಡಲಾಗುತ್ತಿತ್ತು. ಇಂತಹ ಪ್ರಭಾರಿ ಹುದ್ದೆ ನಿರ್ವಹಿಸುತ್ತಿದ್ದ ನೌಕರರ ಪ್ರಭಾರಿ ಹುದ್ದೆಯ ಭತ್ಯೆಯಾಗಿ ಈ ಮೊದಲು ಶೇ.7.5ರ ದರದಲ್ಲಿ ನೀಡಲಾಗುತ್ತಿತ್ತು. ಆದ್ರೇ ಈ ದರವನ್ನು ಇದೀಗ ಶೇ.15ರ ದರಕ್ಕೆ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಹೆಚ್ಚಿ ಪ್ರಭಾರ ಹುದ್ದೆ ನಿರ್ವಹಿಸುವ ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿಯನ್ನು ನೀಡಿದೆ.
ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳ ನಿಯಮ 32 ಮತ್ತು 68ರ ಅಡಿಯಲ್ಲಿ ಸರ್ಕಾರಿ ನೌಕರರನ್ನು ಸ್ವತಂತ್ರ ಪ್ರಭಾರದಲ್ಲಾಗಲೀ ಅಥವಾ ತಮ್ಮ ಹುದ್ದೆಯ ಕರ್ತವದ ಜೊತೆ ಬೇರೊಂದು ಹುದ್ದೆಯ ಹೆಚ್ಚಿನ ಪ್ರಭಾರದಲ್ಲಿರಿಸಿದಾಗ ಆ ಹುದ್ದೆಯ ವೇತನ ಶ್ರೇಣಿಯ ಕನಿಷ್ಠ ಹಂತದಲ್ಲಿ ಮೊದಲ ಮೂರು ತಿಂಗಳವರೆಗೆ ಶೇ.7.5 ದರದಲ್ಲಿ, ಆ ನಂತ್ರದ ಮೂರು ತಿಂಗಳಿಗಿಂತ ಹೆಚ್ಚಿನ ಅವಧಿಗೆ ಶೇ.15ರ ದರದಲ್ಲಿ ಪ್ರಭಾರ ಭತ್ಯೆಯ ದರವನ್ನು ನಿಗಧಿ ಪಡಿಸಿ ಆದೇಶ ಹೊರಡಿಸಿದೆ.
ಅಂದಹಾಗೇ, ಮೂರು ತಿಂಗಳಿಗಿಂತ ಹೆಚ್ಚಿನ ಅವಧಿಗೆ ನಿಗಧಿ ಪಡಿಸಿರುವ ಪ್ರಭಾರ ಭತ್ಯೆಯ ದರಗಳನ್ನು ಶೇ.15ರ ದರದಲ್ಲಿ ಹೆಚ್ಚುಮಾಡಿ ಆದೇಶಿಸಿದೆ. ಹೀಗಾಗಿ ಪ್ರಭಾರದಲ್ಲಿರಿಸಿದ ಸರ್ಕಾರಿ ನೌಕರರು ಮೊದಲ ಮೂರು ತಿಂಗಳವರೆಗಿನ ಅವಧಿಗೆ ಶೇ.7.5ರ ದರದಲ್ಲಿ ಮೂರು ತಿಂಗಳ ಅವಧಿಯಯು ಮುಕ್ತಾಯ ಗೊಂಡ ತರುವಾಯದ ದಿನಾಂಕದಿಂದ ಶೇ.15ರಷ್ಟು ದರದಲ್ಲಿ ಪ್ರಭಾರ ಭತ್ಯೆಯನ್ನು ನೀಡಲಿದೆ.
ಸರ್ಕಾರ ಆದೇಶಿಸಿ ಜಾರಿಗೊಳಿಸಿರು ಪ್ರಭಾರ ಭತ್ಯೆಯ ದರಗಳು ಸರ್ಕಾರಿ ನೌಕರರಿಗೆ 30-04-2019ರ ದಿಂದಲೇ ಜಾರಿಗೆ ಬರಲಿದೆ. ಆದ್ರೇ 30-04-2019ಕ್ಕಿಂತ ಹಿಂದಿನ ಪ್ರಭಾರದ ಅವಧಿಗೆ ಸಂಬಂಧಿಸಿದಂತೆ ಎಷ್ಟೇ ಅವಧಿಯು ಒಳಗೊಂಡಿದ್ದರೂ, ಹಿಂದಿನ ದರದಲ್ಲಿಯೇ ಅಂದ್ರೇ ಶೆ.7.5ರ ದರದಲ್ಲಿಯೇ ಪ್ರಭಾರ ಭತ್ಯೆಯನ್ನು ನೀಡಲು ಆದೇಶದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಓಬವ್ವ ಆತ್ಮ ರಕ್ಷಣಾ ಕಲೆ ಕರಾಟೆ ಯೋಜನೆಗೆ 18 ಕೋಟಿ ರೂಪಾಯಿ ಮೀಸಲು

ಸುದ್ದಿದಿನ,ಯಾದಗಿರಿ : ರಾಜ್ಯ ವಸತಿ ಶಾಲೆಗಳ ಹೆಣ್ಣು ಮಕ್ಕಳ ಆತ್ಮರಕ್ಷಣೆಗಾಗಿ ರೂಪಿಸಿರುವ ಓಬವ್ವ ಆತ್ಮರಕ್ಷಣಾ ಕಲೆ ಕರಾಟೆ ಯೋಜನೆಯ ಅನುಷ್ಠಾನಕ್ಕಾಗಿ 18 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದರು.
ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ಬೆಂಡೆಬೆಂಬಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲಾ ವಿದ್ಯಾರ್ಥಿಗಳು ನಡೆಸಿಕೊಟ್ಟ ಕರಾಟೆ ಪ್ರದರ್ಶನ ವೀಕ್ಷಿಸಿ ಮಾತನಾಡಿದ ಅವರು, ಹೆಣ್ಣು ಮಕ್ಕಳಿಗೆ ಆತ್ಮರಕ್ಷಣೆ ಕಲೆ ಅಗತ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ಓಬವ್ವ ಆತ್ಮರಕ್ಷಣಾ ಕಲೆ ಕರಾಟೆ ಯೋಜನೆಯನ್ನು ರಾಜ್ಯದ ಎಲ್ಲ ವಸತಿ ಶಾಲೆಗಳಲ್ಲಿ ಆರಂಭಿಸಿದೆ. ಈಗಾಗಲೇ ಒಂದು ಸಾವಿರ ಕರಾಟೆ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಮಕ್ಕಳ ಕರಾಟೆ ಕಲೆ ಹಾಗೂ ಸಮವಸ್ತ್ರಕ್ಕಾಗಿ 18 ಕೋಟಿ ರೂಪಾಯಿ ವೆಚ್ಚ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಬಡವರು, ಆರ್ಥಿಕವಾಗಿ ಹಿಂದುಳಿದವರು, ಅಲೆಮಾರಿಗಳ ಮಕ್ಕಳೇ ವಿಶೇಷವಾಗಿ ಈ ವಸತಿ ಶಾಲೆಗಳಿಗೆ ದಾಖಲಾಗುತ್ತಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಬದ್ಧವಾಗಿದೆ. ಈ ಹಿನ್ನೆಲೆಯಲ್ಲಿ ವಸತಿ ಶಾಲೆಗಳನ್ನು ಮತ್ತುಷ್ಟು ಬಲಪಡಿಸಲು ಕ್ರಮ ವಹಿಸಲಾಗುವುದು ಎಂದು ಸಚಿವರು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
