ರಾಜಕೀಯ
ಹರತಾಳು ಹಾಲಪ್ಪ ಕಂಡಂತೆ ಯಡಿಯೂರಪ್ಪ..!

ಈ ನಿಷ್ಕಲ್ಮಶ ನಗುವಿನಲ್ಲಿ ಅದೆಷ್ಟು ಹೋರಾಟಗಳಿವೆಯೋ, ಅದೆಷ್ಟು ನೋವು- ಅನುಭವಿಸಿದ ಮೋಸಗಳಿವೆಯೋ ಹೇಳತೀರದು. ಗೆದ್ದಲು ಕಟ್ಟಿದ ಹುತ್ತದೊಳಗೆ ಹಾವುಗಳು ಬಂದು ಸೇರಿಕೊಳ್ಳುವಂತೆ ಅನೇಕರು ಕಟ್ಟಿ ಬೆಳೆಸಿದ ಪಕ್ಷದೊಳೆಗೆ ಇನ್ಯಾರೋ ಬಂದು ಅಧಿಕಾರ ಚಲಾಯಿಸುತ್ತಾರೆ.
ದಕ್ಷಿಣ ಭಾರತದಲ್ಲಿ (ಕರ್ನಾಟಕ) ಜನಸಂಘ -ಬಿಜೆಪಿ ಎಂಬ ಸಸಿ ಆಗಿನ್ನೂ ಮೊಳಕೆಯೋಡಿಯುತ್ತಿದ್ದ ಸಮಯದಲ್ಲಿ ಅದಕ್ಕೆ ಸಿಕ್ಕಂತಹ ತಾಯಿಬೇರು ಯಡಿಯೂರಪ್ಪ ಎಂಬ ಹೆಸರಾದರೆ, ಕಾರಣವಾಗಿದ್ದು ಅನಂತ ಕುಮಾರ್. ಕಾರ್ಯಕರ್ತರನ್ನು ಬಡಿದೆಬ್ಬಿಸಿ ಅನ್ಯಾಯ ಕಂಡಲ್ಲಿ ಹೋರಾಟ ಮಾಡುತ್ತಾ ಜನರಿಗೆ ಸ್ಥರ್ಯ ತುಂಬಿ,ನ್ಯಾಯ ದೊರಕಿಸುತ್ತ ಸಹಜ ಹೋರಟಗಾರನಾಗಿ ಜನರ ಮನಸಿನಲ್ಲಿ ಅಚ್ಚಳಿಯದಂತೆ ಉಳಿದ ಹೆಸರು ಬೂಕನಕೆರೆ ಸಿದ್ಧಲಿಂಗಪ್ಪ ಯಡಿಯೂರಪ್ಪ ಎಂಬ ಛಲದಂಕಮಲ್ಲ.
ದೇವರಾಜ್ ಅರಸು, ಗುಂಡುರಾವ್, ರಾಮಕೃಷ್ಣ ಹೆಗ್ಡೆ,ನಿಜಲಿಂಗಪ್ಪ,ಜೆ.ಹೆಚ್.ಪಟೇಲ್,ಬಂಗಾರಪ್ಪ,ದೇವೇಗೌಡ. ಎಂಬ ರಾಜಕೀಯ ಮೇರು ಪರ್ವತಗಳ ಎದುರು ತನ್ನದೆಯಾದ ಕಾರ್ಯಕರ್ತರ ಸಾಮ್ರಾಜ್ಯ ಕಟ್ಟುತ್ತಾ ತಳ ಹಂತದಿಂದ ಪಕ್ಷಕಟ್ಟಿ ಯಾವತ್ತೂ ಅವಕಾಶವಾದಿ ರಾಜಕಾರಣ ಮಾಡದೆ, ಮೊದಲಬಾರಿಗೆ 2 ಅಂಕಿಯಿಂದ ಪ್ರಾರಂಭವಾದ ಬಿಜೆಪಿಯ ಗೆಲುವಿನ ಅಭಿಯಾನ 40ರ ಗಡಿಗೆ ಬಂದು ನಿಂತಾಗ, 2004 ರಲ್ಲಿ ಬಂಗಾರಪ್ಪ ನವರು ಬಿಜೆಪಿ ಸೇರ್ಪಡೆಯಾದಾಗ 79 ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರಿತ್ತು. ಆ 79 ಶಾಸಕರಲ್ಲಿ ನಾನು ಒಬ್ಬನಾಗಿದ್ದೆ ಬಂಗಾರಪ್ಪ ನವರು ಬಿಜೆಪಿ ಪಕ್ಷ ತೊರೆದಾಗ ಇನ್ನೇನು ಬಿಜೆಪಿ ಸ್ಥಿತಿ ಡೋಲಾಯಮಾನವಾಗಿ ಹೋಯ್ತು, ಇನ್ನು ಬಿಜೆಪಿ ನೆಲ ಕಚ್ಚಿತ್ತು ಎಂಬ ಮಾತುಗಳು ಆರಂಭವಾದಾಗ,
ಸಮಿಶ್ರ ಸರ್ಕಾರದ ಭಾಗವಾಗಿ ಉಪಮುಖ್ಯಮಂತ್ರಿ ಗಳಾದ ಯಡಿಯೂರಪ್ಪ ನವರು, ನಂತರ 20-20 ಸರ್ಕಾರದ ಕೊನೆ ಅವಧಿಗೆ ಮುಖ್ಯಮಂತ್ರಿ ಗಳಾದರು ಜೆಡಿಎಸ್ ನವರ ಮೋಸಕ್ಕೆ ಬೇಸತ್ತು ಮೈತ್ರಿಯಿಂದ ಹೊರಬಂದು ಪಕ್ಷಕ್ಕೆ ಯಾವುದೇ ಕುಂದು ಬಾರದಂತೆ ಪಕ್ಷವನ್ನು ತನ್ನ ಸದೃಢ ನಾಯಕತ್ವದಲ್ಲಿ ಮುನ್ನೆಡೆಸಿ 2008 ರ ಚುನಾವಣೆಯಲ್ಲಿ 110 ಸ್ಥಾನಗಳನ್ನು ಗೆಲ್ಲಿಸಿಕೊಳ್ಳುವ ಮೂಲಕ ತನ್ನ ರಾಜಕೀಯ ಚಾಣಾಕ್ಷತೆ, ತನ್ನ ಸಾಮರ್ಥ್ಯವನ್ನು ನಿರೂಪಿಸಿ, ಸರ್ಕಾರ ಸುಭದ್ರವಾಗಲು ಮತ್ತೆ ನೆಡೆದ ಉಪಚುನಾವಣೆಗಳಲ್ಲಿ ಗೆದ್ದು ಬಹುಮತದ ಸರ್ಕಾರ ರಚಿಸಿದರು.
ತಮ್ಮ ಸಂಪುಟದಲ್ಲಿ ನನ್ನನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಮಂತ್ರಿಯನ್ನಾಗಿಸಿದ್ದು ಯಡಿಯೂರಪ್ಪ ನವರ ಜಾತ್ಯತೀತ ನಿಲುವಿಗೆ ಹಾಗೂ ಸಣ್ಣ ಸಮುದಾಯಗಳನ್ನು ಮುನ್ನೆಲೆಗೆ ತರುವ ರಾಜಕೀಯ ಇಚ್ಛಾಶಕ್ತಿ ಗೆ ಹಿಡಿದ ಕೈಗನ್ನಡಿಯಾಗಿದೆ.
ಆನಂತರ ನೆಡೆದ ರಾಜಕೀಯ ವಿಪ್ಲವಗಳಿಂದ ಮನನೊಂದು ತಾನು ಬೆವರು ಸುರಿಸಿ ಬೆಳೆಸಿದ ಪಕ್ಷದಿಂದ ಹೊರಬಂದು ಕೆ.ಜೆ.ಪಿ ಸ್ಥಾಪಿಸಿ ಕೆಲ ತಿಂಗಳುಗಳಲ್ಲಿ ನೆಡೆದ ಚುನಾವಣೆಯಲ್ಲಿ ಶೇ 10% ಮತಗಳನ್ನು ಪಡೆದು ತನ್ನ ಸಾಮರ್ಥ್ಯವನ್ನು ನಿರೂಪಿಸಿದನ್ನು ರಾಜಕೀಯ ಎನ್ನುವ ಪುಸ್ತಕದಲ್ಲಿ ಬರೆದಿಡುವಂತಹ ಸಾಧನೆ ಮಾಡಿದ್ದು ವಿರೋಧಿಗಳ ಎದೆಯಲ್ಲಿ ಇನ್ನು ಮಾಸದಂತೆ ಅಚ್ಚುಳಿದಿದೆ. ನಂತರ ಬಿಜೆಪಿ ಸೇರ್ಪಡೆಯಾಗಿ 2014 ರ ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲಿಸಿಕೊಡುವ ಮೂಲಕ ಮೋದಿಯ ನಾಯಕತ್ವವೇ ಸೂಕ್ತ ಎಂದು ಮೊಟ್ಟ ಮೊದಲು ಉಚ್ಚರಿಸಿದ ನಾಯಕ BSY.
76 ರ ಹರೆಯದಲ್ಲಿ ಯುವಕರು ನಾಚಿಸುವಂತ ಓಡಾಟ ಸದಾ ಅಭಿವೃದ್ಧಿ ಪರ ಚಿಂತನೆಗಳು, ರೈತ ಪರ ನಿಲುವುಗಳು 2018 ರ ಚುನಾವಣೆಯಲ್ಲಿ ಮತ್ತೆ ಯಡಿಯೂರಪ್ಪ ನವರನ್ನು ಮುಖ್ಯಮಂತ್ರಿ ಯನ್ನಾಗಿ ನೋಡಬೇಕೆನ್ನುವ ಜನರು ಹಂಬಲಿಸುತ್ತಿದ್ದರು. ತನ್ನನ್ನು ನಂಬಿದವರನ್ನು ಎಂದು ಕೈಬಿಡದ ಯಡಿಯೂರಪ್ಪ ನವರು ಸಾಗರ ಕ್ಷೇತ್ರದಲ್ಲಿ ನಾನು ಗೆಲ್ಲುತ್ತೇನೆ ಎಂದು ವಿಶ್ವಾಸವಿಟ್ಟು ಹಲವರ ವಿರೋದದ ನಡುವೆ ಟಿಕೆಟ್ ನೀಡಿ ನನ್ನ ಕೈ ಹಿಡಿದರು. ರಾಜ್ಯದಲ್ಲಿ ಅಂದಿನ ಚುನಾವಣಾ ಫಲಿತಾಂಶ ಬಿಜೆಪಿಯನ್ನು ಅದಿಕಾರದ ಹೊಸ್ತಿಲಿಗೆ ತಂದು ನಿಲ್ಲಿಸಿತು. ( ಯಡಿಯೂರಪ್ಪ ನವರಿಗೆ ಸಂಪೂರ್ಣ ಜವಾಬ್ದಾರಿ ನೀಡಿದ್ದಾರೆ ಒಂದೂವರೆ ವರ್ಷ ವಿರೋಧಪಕ್ಷದಲ್ಲಿ ಕೂರುವ ಸ್ಥಿತಿ ಬರುತ್ತಿರಲಿಲ್ಲ )
ಅನಂತರ ನೆಡೆದ ರಾಜಕೀಯ ಪಗಡೆಯಾಟದಲ್ಲಿ #ವಾಚಾಮಗೋಚರವಾಗಿ ಬೈದಾಡಿಕೊಂಡಿದ್ದವರು ಸರ್ಕಾರ ರಚಿಸಿ ಜನರ ಭಾವನೆಗಳಿಗೆ ಧಕ್ಕೆ ತಂದರು. ಇವರ ಉಪಟಳಗಳನ್ನು ಸಹಿಸದ ಕೆಲ ಶಾಸಕರು ಬಂಡಾಯವೇದ್ದು ಸರ್ಕಾರ ಕೆಡವಿದರು. ತನ್ನ ಅವಕಾಶವಾಧಿ ರಾಜಕಾರಣದಿಂದ ಸ್ವಯಂ ಘೋಷಿತ ಸಭ್ಯಸ್ತರು ಅನರ್ಹರು ಎಂಬ ಹಣೆಪಟ್ಟಿ ನೀಡಿದರು. ನಂತರದ ಘಟನೆಗಳು ಜನರ ಕಣ್ಮುಂದಿದೆ, 4ನೇ ಬಾರಿ ಮುಖ್ಯಮಂತ್ರಿಯಾಗಿ ಎದುರಿಸಿದ 15 ಕ್ಷೇತ್ರಗಳ ಉಪಚುನಾವಣೆಯಲ್ಲಿ 12 ಕ್ಷೇತ್ರಗಳಲ್ಲಿ ಗೆದ್ದು ವಿರೋಧಿಗಳನ್ನು ರಾಜ್ಯದ ಜನತೆ ಎದುರು ಬೆತ್ತಲೆ ನಿಲ್ಲಿಸಿ ಇತಿಹಾಸ ನಿರ್ಮಿಸಿದ ಕೀರ್ತಿ ಯಡಿಯೂರಪ್ಪ ನವರದ್ದು …ಗಾಡ್ ಫಾದರ್ ಇಲ್ಲದೆ ಬೆಳೆದು ಬಂದು, ನನ್ನಂತಹ ಅನೇಕ ರಾಜಕಾರಣಿಗಳ ಬಾಳಿಗೆ ಗಾಡ್ ಆದ ಯಡಿಯೂರಪ್ಪ ನವರ ಯಶಸ್ಸಿನ ಜೀವನ ಘಾತೆ.
2009ರ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಬಿಜೆಪಿ ಕಳಪೆ ಪ್ರದರ್ಶನ ಮಾಡಿದ್ದಾಗ ಕರ್ನಾಟಕದಿಂದ 19 ಸಂಸದರನ್ನು ಕಳುಹಿಸಿ ಕೊಟ್ಟಿದ್ದ ಯಡಿಯೂರಪ್ಪನವರಿಗೆ ಅಂದು ಶ್ರೀ ಲಾಲ್ ಕೃಷ್ಣ ಅಡ್ವಾಣಿಯವರಿಂದ ತುಂಬಿದ ಸಭೆಯಲ್ಲಿ
ಪುಷ್ಪಗುಚ್ಚ ನೀಡಿ ವಿಶೇಷ ಸನ್ಮಾನಿಸಿದ್ದರ.
2019 ರ ಲೋಕಸಭೆಯಲ್ಲಿ 25 ಹಾಗೂ ವಿಧಾನಸಭಾ ಉಪಚುನಾವಣೆಯಲ್ಲಿ ಒಂಟಿಯಾಗಿ ಸಮರ್ಥ ನಾಯಕತ್ವದಲ್ಲಿ 12 ಸ್ಥಾನ ಗೆಲ್ಲಿಸಿದಕ್ಕಾಗಿ ಇಂದು ನರೇಂದ್ರ ಮೋದಿಯವರಿಂದ “ಸ್ಟ್ಯಾಂಡಿಂಗ್ ಓವೇಷನ್”, ಮೂಲಕ ಯಡಿಯೂರಪ್ಪನವರಿಗೆ ಎಲ್ಲಾ ಸಂಸದರು ಎದ್ದು ನಿಂತು ಚಪ್ಪಾಳೆ ತಟ್ಟಿ ಗೌರವಿಸಿದ್ದಾರೆ. ಈಗ ಹೇಳಿ ರಾಜ್ಯ ಆಳೋಕೆ ವಯಸ್ಸು ಬೇಡ, ಸಮರ್ಥ ನಾಯಕತ್ವ ಸಂಘಟನೆ ಚತುರತೆ ಇದ್ದರೆ ಸಾಕು.
ಇನ್ನಾದರೂ ವಿರೋಧಿಸುವವರು,ವಿಪಕ್ಷಗಳು, ದುರಹಂಕಾರಿ ಮಾತುಗಳಾಡುವವರು ಅರಿತು ನೆಡೆದರೆ ಒಳ್ಳೆಯದು.
–ಹೆಚ್.ಹಾಲಪ್ಪ ಹರತಾಳು
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243

ದಿನದ ಸುದ್ದಿ
ರಾಷ್ಟ್ರೀಯ ಯುವ ದಿನದ ಪ್ರಯುಕ್ತ ನಾಳೆ ರಾಜಾಜಿನಗರ ವಿಧಾನ ಸಭಾ ಕ್ಷೇತ್ರದಲ್ಲಿ ಬೈಕ್ ರ್ಯಾಲಿ : ಭವ್ಯ ನರಸಿಂಹಮೂರ್ತಿ

ಸುದ್ದಿದಿನ, ಬೆಂಗಳೂರು : ರಾಷ್ಟ್ರೀಯ ಯುವ ದಿನದ ಪ್ರಯುಕ್ತ ನಾಳೆ ರಾಜಾಜಿನಗರ ವಿಧಾನ ಸಭಾ ಕ್ಷೇತ್ರದಲ್ಲಿ ಬೈಕ್ ರ್ಯಾಲಿ ಹಮ್ಮಿಕೊಂಡಿದ್ದು ಸ್ವಾಮಿ ವಿವೇಕಾನಂದರ 160ನೇ ಜನ್ಮದಿನದ ಅಂಗವಾಗಿ ಅವರ ತತ್ವ ಆದರ್ಶಗಳು ಹಾಗೂ ಯುವ ಜನತೆಗೆ ನೀಡಿರುವ ಸಂದೇಶಗಳನ್ನು ರಾಜಾಜಿನಗರ ವಿಧಾನ ಸಭಾ ಕ್ಷೇತ್ರದ ಎಲ್ಲಾ ಜನತೆಗೆ ತಲುಪುವಂತೆ ಮಾಡುವುದು ಇದರ ಉದ್ದೇಶವಾಗಿದೆ ಎಂದು ರಾಜಾಜಿನಗರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಆಕಾಂಕ್ಷಿ ಭವ್ಯ ನರಸಿಂಹಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೈಕ್ ರ್ಯಾಲಿ ಬೆಳಿಗ್ಗೆ 09-00 ಕ್ಕೆ ರಾಜಾಜಿನಗರ Entrance Bridge ಇಂದ ಪ್ರಾರಂಭವಾಗಿ ನವರಂಗ ಚಿತ್ರಮಂದಿರ – ಶಂಕರ್ ಮಠ – ಹಾವನೂರ್ ಸರ್ಕಲ್ – ಹೌಸಿಂಗ್ ಬೋರ್ಡ್ – ಕಾಮಾಕ್ಷಿಪಾಳ್ಯ ಬಸ್ ಸ್ಟಾಂಡ್ – ಹಾವನೂರ್ – ಅಕ್ಷಯ ಉಪಹಾರ – ಮೋದಿ ಹಾಸ್ಪಿಟಲ್ – ನವರಂಗ ಬ್ರಿಡ್ಜ್ – ಗಿರಿಯಾಸ್ ಸಿಗ್ನಲ್ – 6th ಬ್ಲಾಕ್ – ಕೊನೆಯದಾಗಿ 12 ಗಂಟೆಗೆ ಭಾಷ್ಯಮ್ ಸರ್ಕಲ್ ನಲ್ಲಿ ಕೊನೆಗೊಳ್ಳುತ್ತದೆ.
ದಾರಿಯಲ್ಲಿ 4 ಕಡೆ ಸ್ವಾಮಿ ವಿವೇಕಾನಂದರಿಗೆ ಪೂಜೆ ಹಮ್ಮಿಕೊಳ್ಳಲಾಗಿದೆ. ಪೂಜೆಯ ನಂತರ ವಿವೇಕಾನಂದರ ತತ್ವ ಆದರ್ಶಗಳನ್ನೊಳಗೊಂಡ ಹತ್ತು ಸಾವಿರ ಪುಸ್ತಕಗಳನ್ನು ಕ್ಷೇತ್ರದಾದ್ಯಂತ ಉಚಿತವಾಗಿ ಹಂಚಲಾಗುವುದು ಹಾಗೂ ಅನ್ನ ಸಂತರ್ಪಣೆ ಏರ್ಪಡಿಸಲಾಗಿರುತ್ತದೆ ಎಂದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
