ರಾಜಕೀಯ
ಪೌರತ್ವ (ತಿದ್ದುಪಡಿ) ಮಸೂದೆ : ಹೊಸ ವಿಭಜನಕಾರೀ ಅಜೆಂಡಾ

ಪೌರತ್ವ (ತಿದ್ದುಪಡಿ) ಮಸೂದೆ ಅಥವ ಸಿ.ಎ.ಬಿ. ಮುಸ್ಲಿಮೇತರ ವಲಸಿಗರನ್ನು ನಾಗರಿಕರೆಂದು ಕಾನೂನುಬದ್ಧಗೊಳಿಸುವ ದುಷ್ಟತನದಿಂದ ತುಂಬಿರುವ ಶಾಸನವಾದರೆ ಎನ್.ಆರ್.ಸಿ., ಅಂದರೆ, ರಾಷ್ಟ್ರೀಯ ಪೌರರ ನೋಂದಣಿ ಎಂಬುದು ಮುಸ್ಲಿಂ ನುಸುಳುಕೋರರು ಎನ್ನಲಾಗುವವರ ಮೇಲೆ ಗುರಿಯಿಡುತ್ತದೆ.ಬಿಜೆಪಿ ಇಟ್ಟುಕೊಂಡಿರುವ ಗುರಿಯೆಂದರೆ, ಎರಡನೇ ದರ್ಜೆಯ ನಾಗರಿಕರು ಎಂಬೊಂದು ವಿಧವನ್ನು ಸೃಷಿಸುವುದು ಮತ್ತು ಅವರ ಹಕ್ಕುಗಳನ್ನು ತೀವ್ರವಾಗಿ ಮಿತಿಗೊಳಿಸುವುದು.
ಈ ಯೋಚನೆಯ ಹಿಂದೆ ಇರುವುದು ವಿ.ಡಿ.ಸಾವರ್ಕರ್ ಪ್ರತಿಪಾದಿಸಿದ ಎರಡು-ರಾಷ್ಟ್ರಗಳ ಸಿದ್ಧಾಂತ. ಸಿ.ಎ.ಬಿ. ಮತ್ತು ಎನ್.ಆರ್.ಸಿ.ಯ ಎರಡು ಕಡೆಗಳಿಂದ ಸುತ್ತುವರೆಯುವ ತಂತ್ರವನ್ನು ಬಿಜೆಪಿ-ಆರೆಸ್ಸೆಸ್ನ ಸಂಕುಚಿತ ರಾಜಕಾರಣಕ್ಕೆ ಹೊಂದುವಂತೆ ಕೋಮು ಆತಂಕಗಳನ್ನು ಹೆಚ್ಚಿಸಲು ಮತ್ತು ಒಂದು ಹೊಸ ವಿಭಜನಕಾರೀ ಅಜೆಂಡಾವನ್ನು ಸೃಷ್ಟಿಸಲು ಉಪಯೋಗಿಸಲಾಗುತ್ತದೆ.
ಬಿಜೆಪಿಯ ದುಷ್ಟತಂತ್ರಗಳನ್ನು ವಿಫಲಗೊಳಿಸಲು ಈ ಮಸೂದೆಗೆ ಸುಪ್ರಿಂ ಕೋರ್ಟಿನಲ್ಲಿ ಸವಾಲು ಹಾಕುವುದರೊಂದಿಗೇ, ಅವನ್ನು ಬಯಲಿಗೆಳೆಯಲು ವ್ಯಾಪಕವಾದ ಪ್ರಚಾರಾಂದೋಲನವನ್ನು ನಡೆಸಬೇಕು.
- ಪ್ರಕಾಶ ಕಾರಟ್
ಪೌರತ್ವ (ತಿದ್ದುಪಡಿ) ಮಸೂದೆ, 2019(ಸಿ.ಎ.ಬಿ.) ಸಂಸತ್ತಿನ ಒಳಗೂ, ಹೊರಗೂ ಬಲವಾದ ಪ್ರತಿಭಟನೆಗಳ ನಡುವೆ ಅಂಗೀಕಾರಗೊಂಡಿದೆ. ಸಿ.ಎ.ಬಿ. ಸಂವಿಧಾನದ ಮೂಲ ನೀತಿಗಳಿಗೆ ತದ್ವಿರುದ್ಧವಾಗಿರುವ ಒಂದು ಅಪಯಕಾರಿ ಶಾಸನ. ಈ ಮಸೂದೆಯಲ್ಲಿ ವಿಧಿಸಿರುವ ಅಂಶಗಳು ಸಂವಿಧಾನದಲ್ಲಿ ಪ್ರತಿಷ್ಠಾಪಿತಗೊಂಡಿರುವ ಪೌರತ್ವದ ಜಾತ್ಯತೀತ ಪರಿಕಲ್ಪನೆಯನ್ನು ಶಿಥಿಲಗೊಳಿಸುತ್ತವೆ.
ಸಂವಿಧಾನದ ಕಲಮು 14, ಭಾರತದ ಪ್ರದೇಶದ ಒಳಗೆ ಯಾವುದೇ ವ್ಯಕ್ತಿಗೆ ಕಾನೂನಿನ ಎದುರು ಸಮಾನತೆ ಅಥವ ಕಾನೂನಿನ ಸಮಾನ ರಕ್ಷಣೆಯನ್ನು ನಿರಾಕರಿಸಲಾಗದು ಎಂದು ವಿಧಿಸಿದೆ. ಸಂವಿಧಾನವು ಮತ, ಜಾತಿ, ಪಂಥ ಅಥವ ಲಿಂಗದ ಆಧಾರದಲ್ಲಿ ತಾರತಮ್ಯವನ್ನು ಕೂಡ ನಿಷೇದಿಸಿದೆ.
ಸಿ.ಎ.ಬಿ. ಕೆಲವು ವಿಭಾಗಗಳ ಜನರನ್ನು ಪೌರತ್ವ ನೀಡಿಕೆಗೆ ಪರಿಶೀಲಿಸುವಾಗ ಒಂದು ಮತೀಯ ಮಾನದಂಡವನ್ನು ಸೇರಿಸಿದೆ. ಈ ತಿದ್ದುಪಡಿಯ ಪ್ರಕಾರ ಡಿಸೆಂಬರ್ 31, 2014ರ ಮೊದಲು ಅಫಘಾನಿಸ್ತಾನ, ಬಾಂಗ್ಲಾದೇಶ್ ಅಥವ ಪಾಕಿಸ್ತಾನದಿಂದ ಬಂದಿರುವ ಹಿಂದೂಗಳು, ಸಿಖ್ಖರು, ಔದ್ಧರು, ಜೈನರು, ಪಾರ್ಸಿಗಳು ಅಥವ ಕ್ರಿಶ್ಚಿಯನ್ನರನ್ನು ಕಾನೂನುಬಾಹಿರ ವಲಸಿಗರು ಎಂದು ಕಾಣುವುದಿಲ್ಲ.
ಅವರು ಭಾರತದಲ್ಲಿ ಕನಿಷ್ಟ ಐದು ವರ್ಷಗಳನ್ನು ಕಳೆದಿದ್ದರೆ,ಸಹಜೀಕರಣ(ನೆಚುರಲೈಸೇಶನ್)ದಿಂದ ಪೌರತ್ವಕ್ಕೆ ಅರ್ಹರಾಗಬಹುದು. ಈ ಮೊದಲು ಸಹಜೀಕರಿಸಲು ಸಮಯಮಿತಿ ಹನ್ನೊಂದು ವರ್ಷಗಳಾಗಿದ್ದವು. ಅಂದರೆ ಈ ಮಿತಿಯನ್ನು ಸಡಿಲಿಸಲಾಗುತ್ತಿದೆ.
ಅದರೆ ಇದು ಈ ಮೂರು ದೇಶಗಳಿಂದ ಬಂದಿರುವ ಮುಸ್ಲಿಮರಿಗೆ ಅನ್ವಯಿಸುವುದಿಲ್ಲ. ಅವರನ್ನು ಕಾನೂನುಬಾಹಿರ ವಲಸಿಗರೆಂದು ಪರಿಗಣಿಸಲಾಗುತ್ತದೆ. ಮತೀಯ ಆಧಾರದಲ್ಲಿ ಈ ತಾರತಮ್ಯವೇ ಪೌರತ್ವದ ಕಾಯ್ದೆಗೆ ಈ ತಿದ್ದುಪಡಿಯನ್ನು ಅಸಂವಿಧಾನಿಕ ಮತ್ತು ಕಾನೂನುಬಾಹಿರಗೊಳಿಸುತ್ತದೆ.
ಬಿಜೆಪಿ ಈ ಮೊದಲೇ ಹಿಂದಿನ ಲೋಕಸಭೆಯಲ್ಲಿ ಈ ಮಸೂದೆಯನ್ನು ಪಾಸುಮಾಡಿಕೊಂಡಿತ್ತು. ಆದರೆ ರಾಜ್ಯಸಭೆಯಲ್ಲಿ ಬಹುಮತವಿಲ್ಲದ್ದರಿಂದ ಪಾಸಾಗಲಿಲ್ಲ. ಈ ಮಸೂದೆಯ ಉದ್ದೇಶ ಬಾಂಗ್ಲಾದೇಶದಿಂದ ಅಸ್ಸಾಂಗೆ ಬಂದಿರುವ ಹಿಂದೂ ವಲಸಿಗರಿಗೆ ಪೌರತ್ವವನ್ನು ಖಾತ್ರಿಪಡಿಸುತ್ತಲೇ, ಆ ದೇಶದಿಂದ ಬರುವ ಯಾವುದೇ ಮುಸ್ಲಿಂ ವಲಸಿಗರನ್ನು ಹೊರಗಿಡುವ ಕೋಮುವಾದಿ ಅಜೆಂಡಾ. ಅಸ್ಸಾಂನಲ್ಲಿ ಎನ್.ಆರ್.ಸಿ. ಪ್ರಕ್ರಿಯೆ ಮಾರ್ಚ್ 24, 1971ರ ನಂತರ ಪ್ರವೇಶಿಸಿರುವ ಎಲ್ಲರನ್ನೂ ಹೊರಗಿಡುವುದರಿಂದಾಗಿ ಈ ಕ್ರಮ ಅಗತ್ಯವಾಗಿತ್ತು.
ಅಸ್ಸಾಂನಲ್ಲಿ ರಾಷ್ಟ್ರೀಯ ಪೌರರ ನೋಂದಣಿ(ಎನ್.ಆರ್.ಸಿ.)ಯ ಅಂತಿಮ ಪಟ್ಟಿಯನ್ನು ಈ ವರ್ಷ ಆಗಸ್ಟ್ 31ರಂದು ಸಿ.ಎ.ಬಿ.ಯನ್ನು ಜಾರಿಗೊಳಿಸುವ ಮೊದಲು ಪ್ರಕಟಿಸಲಾಯಿತು. ಇದರ ಫಲಿತಾಂಶವಾಗಿ ಬಾಂಗ್ಲಾದೇಶದಿಂದ ಬಂದು ಹಿಂದೂಗಳನ್ನೂ ದೊಡ್ಡ ಸಂಖ್ಯೆಯಲ್ಲಿ ಹೊರಗಿಡಲಾಗಿದೆ. ಆದ್ದರಿಂದಲೇ ಅಸ್ಸಾಂನ ಬಿಜೆಪಿ ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರ ಎನ್.ಆರ್.ಸಿ. ಪಟ್ಟಿಯನ್ನು ವಿರೋಧಿಸಿವೆ.
ಹೀಗೆ ಮೋದಿ ಸರಕಾರಕ್ಕೆ ಇಡೀ ದೇಶಕ್ಕೆ ಎನ್.ಆರ್.ಸಿ. ಯನ್ನು ಸಿದ್ದಪಡಿಸುವ ಕೆಲಸಕ್ಕೆ ಕೈಹಾಕುವ ಮೊದಲು ಸಿ.ಎ.ಬಿ.ಯನ್ನು ಅಂಗೀಕರಿಸುವ ತುರ್ತು ಬಂದಿತು. ಗೃಹಮಂತ್ರಿ ಅಮಿತ್ ಷಾ ಕಪಟತನದಿಂದ ಅಸ್ಸಾಂನಲ್ಲಿ ಎನ್.ಆರ್.ಸಿ. ಯನ್ನು ಇಡೀ ದೇಶದ ಜತೆಗೆ ಮತ್ತೊಮ್ಮೆ ಮಾಡಲಾಗುವುದು ಎಂದು ಪ್ರಕಟಿಸಿದ್ದಾರೆ.
ಈ ಸಿ.ಎ.ಬಿ. ಗೆ ಅಸ್ಸಾಂ ಮತ್ತು ಈಶಾನ್ಯ ಭಾರತದ ಜನಗಳಿಂದ ಕೋಪಾವೇಶದ ಪ್ರತಿಕ್ರಿಯೆ ಎದುರಾಗಿದೆ. ಅಸ್ಸಾಂನ ಜನರು ಈ ಶಾಸನ ಅಸ್ಸಾಂ ಒಪ್ಪಂದದಲ್ಲಿ ನೀಡಿದ ವಚನಕ್ಕೆ ಮಾಡಿರುವ ವಿಶ್ವಾಸದ್ರೋಹ ಎಂದು ಕಾಣುತ್ತಿದ್ದಾರೆ. ಏಕೆಂದರೆ ಆ ಒಪ್ಪಂದದ ಪ್ರಕಾರ ಮಾರ್ಚ್ 1971ರ ನಂತರ ಅಸ್ಸಾಂ ಪ್ರವೇಶಿಸಿದವರಿಗೆ ಪೌರತ್ವವನ್ನು ಕೊಡಲಾಗುವುದಿಲ್ಲ.
ಸಿ.ಎ.ಬಿ. ಈ ಸಮಯಮಿತಿಯನ್ನು ಡಿಸೆಂಬರ್ 31, 2014 ರ ವರೆಗೆ ವಿಸ್ತರಿಸಿ ಕಾನೂನುಬಾಹಿರ ವಲಸಿಗರನ್ನು ಕಾನೂನುಬದ್ಧಗೊಳಿಸಿ, 1985ರಲ್ಲಿ ಅಸ್ಸಾಂ ಒಪ್ಪಂದದ ಮೂಲಕ ಏರ್ಪಟ್ಟಿರುವ ಜಾಗರೂಕತೆಯಿಂದ ಸಮತೋಲಗೊಳಿಸಿದ್ದ ಒಡಂಬಡಿಕೆಯನ್ನು ತಲೆಕೆಳಗಾಗಿಸಿದೆ.
ಈಶಾನ್ಯ ಭಾರತದ ಎಲ್ಲ ರಾಜ್ಯಗಳಲ್ಲಿ ಅಲ್ಲಿಯ ಮೂಲನಿವಾಸಿಗಳ ಅಸ್ಮಿತೆಗಳು ಹೊಸದಾಗಿ ಪೌರತ್ವ ಪಡೆಯುವ ಜನಗಳು ದೊಡ್ಡಪ್ರಮಾಣದಲ್ಲಿ ಬಂದು ಸೇರುವುದರಿಂದಾಗಿ ಮುಳುಗಿ ಹೋಗಬಹುದು ಎಂಬ ಭಯ ಮೂಡಿದೆ.
ಸಂವಿಧಾನದ ಆರನೇ ಶೆಡ್ಯೂಲಿನ ಅಡಿಯಲ್ಲಿ ಬರುವ ಬುಡಕಟ್ಟು ಪ್ರದೇಶಗಳಿಗೆ ಮತ್ತು ಇನ್ನರ್ ಲೈನ್(ಒಳಗಣ ರೇಖೆ) ಇರುವ ಪ್ರದೇಶಗಳಿಗೆ ಈ ಸಿ.ಎ.ಬಿ.ಯಿಂದ ವಿನಾಯ್ತಿ ಕೊಟ್ಟು ಅವರನ್ನು ಸಮಾಧಾನ ಪಡಿಸುವ ಮೋದಿ ಸರಕಾರದ ಪ್ರಯತ್ನ ವಿಫಲವಾಗಿದೆ. ಈ ಸುರಕ್ಷಿತ ಕ್ಷೇತ್ರಗಳು ಹೊರಗಿಂದ ಅಲ್ಲಿಯೇ ನೆಲೆಸಲು ಬರುವ ಜನಗಳಿಂದ ಸತತವಾಗಿ ಒತ್ತಡಗಳನ್ನು ಎದುರಿಸುತ್ತಲೇ ಇರುವುದರಿಂದಾಗಿ ಮೋದಿ ಸರಕಾರದ ಈ ಪ್ರಯತ್ನ ಫಲ ಕೊಟ್ಟಿಲ್ಲ.
ಸಿ.ಎ.ಬಿ. ಮತ್ತು ಎನ್.ಆರ್.ಸಿ. ಯನ್ನು ಒಟ್ಟಾಗಿ ಕಾಣಬೇಕು. ಸಿ.ಎ.ಬಿ. ಮುಸ್ಲಿಮೇತರ ವಲಸಿಗರನ್ನು ನಾಗರಿಕರೆಂದು ಕಾನೂನುಬದ್ಧಗೊಳಿಸಿದರೆ, ಎನ್.ಆರ್.ಸಿ. ಮುಸ್ಲಿಂ ನುಸುಳುಕೋರರು ಎನ್ನಲಾಗುವವರ ಮೇಲೆ ಗುರಿಯಿಡುತ್ತದೆ. ಬಿಜೆಪಿ ಇಟ್ಟುಕೊಂಡಿರುವ ಗುರಿಯೆಂದರೆ, ಎರಡನೇ ದರ್ಜೆಯ ನಾಗರಿಕರು ಎಂಬೊಂದು ವಿಧವನ್ನು ಸೃಷಿಸುವುದು ಮತ್ತು ಅವರ ಹಕ್ಕುಗಳನ್ನು ತೀವ್ರವಾಗಿ ಮಿತಿಗೊಳಿಸುವುದು. ಈ ಯೋಚನೆಯ ಹಿಂದೆ ಇರುವುದು ವಿ.ಡಿ.ಸಾವರ್ಕರ್ ಪ್ರತಿಪಾದಿಸಿದ ಎರಡು-ರಾಷ್ಟ್ರಗಳ ಸಿದ್ಧಾಂತ.
ಸಿ.ಎ.ಬಿ. ಮತ್ತು ಎನ್.ಆರ್.ಸಿ.ಯ ಎರಡು ಕಡೆಗಳಿಂದ ಸುತ್ತುವರೆಯುವ ತಂತ್ರವನ್ನು ಬಿಜೆಪಿ-ಆರೆಸ್ಸೆಸ್ನ ಸಂಕುಚಿತ ರಾಜಕಾರಣಕ್ಕೆ ಹೊಂದುವಂತೆ ಕೋಮು ಆತಂಕಗಳನ್ನು ಹೆಚ್ಚಿಸಲು ಮತ್ತು ಒಂದು ಹೊಸ ವಿಭಜನಕಾರೀ ಅಜೆಂಡಾವನ್ನು ಸೃಷ್ಟಿಸಲು ಉಪಯೋಗಿಸಲಾಗುತ್ತದೆ.
ಈ ಪೌರತ್ವ ತಿದ್ದುಪಡಿ ಮಸೂದೆಗೆ ಸುಪ್ರಿಂ ಕೋರ್ಟಿನಲ್ಲಿ ಸವಾಲು ಹಾಕಬೇಕು. ಹಾಗೆ ಮಾಡುತ್ತಲೇ, ಸಿ.ಎ.ಬಿ.-ಎನ್.ಆರ್.ಸಿ.ಗೆ ಸಂಬಂಧಪಟ್ಟಂತೆ ಬಿಜೆಪಿಯ ದುಷ್ಟತಂತ್ರಗಳನ್ನು ಬಯಲಿಗೆಳೆಯಲು ವ್ಯಾಪಕವಾದ ಪ್ರಚಾರಾಂದೋಲನವನ್ನು ನಡೆಸಬೇಕು.
(ಈ ವಾರದ ಜನಶಕ್ತಿ ವಾರ ಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243

ದಿನದ ಸುದ್ದಿ
ರಾಷ್ಟ್ರೀಯ ಯುವ ದಿನದ ಪ್ರಯುಕ್ತ ನಾಳೆ ರಾಜಾಜಿನಗರ ವಿಧಾನ ಸಭಾ ಕ್ಷೇತ್ರದಲ್ಲಿ ಬೈಕ್ ರ್ಯಾಲಿ : ಭವ್ಯ ನರಸಿಂಹಮೂರ್ತಿ

ಸುದ್ದಿದಿನ, ಬೆಂಗಳೂರು : ರಾಷ್ಟ್ರೀಯ ಯುವ ದಿನದ ಪ್ರಯುಕ್ತ ನಾಳೆ ರಾಜಾಜಿನಗರ ವಿಧಾನ ಸಭಾ ಕ್ಷೇತ್ರದಲ್ಲಿ ಬೈಕ್ ರ್ಯಾಲಿ ಹಮ್ಮಿಕೊಂಡಿದ್ದು ಸ್ವಾಮಿ ವಿವೇಕಾನಂದರ 160ನೇ ಜನ್ಮದಿನದ ಅಂಗವಾಗಿ ಅವರ ತತ್ವ ಆದರ್ಶಗಳು ಹಾಗೂ ಯುವ ಜನತೆಗೆ ನೀಡಿರುವ ಸಂದೇಶಗಳನ್ನು ರಾಜಾಜಿನಗರ ವಿಧಾನ ಸಭಾ ಕ್ಷೇತ್ರದ ಎಲ್ಲಾ ಜನತೆಗೆ ತಲುಪುವಂತೆ ಮಾಡುವುದು ಇದರ ಉದ್ದೇಶವಾಗಿದೆ ಎಂದು ರಾಜಾಜಿನಗರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಆಕಾಂಕ್ಷಿ ಭವ್ಯ ನರಸಿಂಹಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೈಕ್ ರ್ಯಾಲಿ ಬೆಳಿಗ್ಗೆ 09-00 ಕ್ಕೆ ರಾಜಾಜಿನಗರ Entrance Bridge ಇಂದ ಪ್ರಾರಂಭವಾಗಿ ನವರಂಗ ಚಿತ್ರಮಂದಿರ – ಶಂಕರ್ ಮಠ – ಹಾವನೂರ್ ಸರ್ಕಲ್ – ಹೌಸಿಂಗ್ ಬೋರ್ಡ್ – ಕಾಮಾಕ್ಷಿಪಾಳ್ಯ ಬಸ್ ಸ್ಟಾಂಡ್ – ಹಾವನೂರ್ – ಅಕ್ಷಯ ಉಪಹಾರ – ಮೋದಿ ಹಾಸ್ಪಿಟಲ್ – ನವರಂಗ ಬ್ರಿಡ್ಜ್ – ಗಿರಿಯಾಸ್ ಸಿಗ್ನಲ್ – 6th ಬ್ಲಾಕ್ – ಕೊನೆಯದಾಗಿ 12 ಗಂಟೆಗೆ ಭಾಷ್ಯಮ್ ಸರ್ಕಲ್ ನಲ್ಲಿ ಕೊನೆಗೊಳ್ಳುತ್ತದೆ.
ದಾರಿಯಲ್ಲಿ 4 ಕಡೆ ಸ್ವಾಮಿ ವಿವೇಕಾನಂದರಿಗೆ ಪೂಜೆ ಹಮ್ಮಿಕೊಳ್ಳಲಾಗಿದೆ. ಪೂಜೆಯ ನಂತರ ವಿವೇಕಾನಂದರ ತತ್ವ ಆದರ್ಶಗಳನ್ನೊಳಗೊಂಡ ಹತ್ತು ಸಾವಿರ ಪುಸ್ತಕಗಳನ್ನು ಕ್ಷೇತ್ರದಾದ್ಯಂತ ಉಚಿತವಾಗಿ ಹಂಚಲಾಗುವುದು ಹಾಗೂ ಅನ್ನ ಸಂತರ್ಪಣೆ ಏರ್ಪಡಿಸಲಾಗಿರುತ್ತದೆ ಎಂದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ನಿತ್ಯ ಭವಿಷ್ಯ7 days ago
ಸೋಮವಾರ- ರಾಶಿ ಭವಿಷ್ಯ ಜನವರಿ-23,2023 : ಈ ರಾಶಿಯವರಿಗೆ ಸಾಡೇ ಸಾತಿ ಶನಿಯಿಂದ ಮುಕ್ತಿ,ಎಲ್ಲಾ ನಿಮ್ಮ ಕೆಲಸಗಳು ನೆರವೇರಲಿ
-
ದಿನದ ಸುದ್ದಿ5 days ago
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ
-
ದಿನದ ಸುದ್ದಿ20 hours ago
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
-
ದಿನದ ಸುದ್ದಿ19 hours ago
ನಟ ಮನದೀಪ್ ರಾಯ್ ನಿಧನ