ದಿನದ ಸುದ್ದಿ
ಡಿ.21ರಂದು ಉದ್ಯೋಗ ಮೇಳ

ಸುದ್ದಿದಿನ,ಮಂಡ್ಯ : ಕಳೆದ ಬಾರಿ ನಡೆದ ಎರಡು ಉದ್ಯೋಗ ಮೇಳವು ಬಹಳ ಯಶಸ್ವಿಯಾಗಿ ನಡೆಯುವುದರ ಮೂಲಕ 700 ಕುಟುಂಬಗಳಿಗೆ ದಾರಿ ದೀಪವಾಗಿದೆ. ಅದರಂತೆ ಈ ಬಾರಿ ಆಯೋಜಿಸಲಿರುವ ಉದ್ಯೋಗ ಮೇಳದಲ್ಲಿ ಕನಿಷ್ಠ 2 ಸಾವಿರ ಜನರಿಗೆ ಉದ್ಯೋಗ ಕಲ್ಪಿಸಿಕೊಡಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ.ಎಂ.ವಿ.ವೆಂಕಟೇಶ್ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಮತ್ತು ನಗರಸಭೆ ಮಂಡ್ಯ ಇವರ ವತಿಯಿಂದ ಡಿಸೆಂಬರ್ 21 ರಂದು ನಗರದ ಸರ್ಕಾರಿ ಮಹಾವಿದ್ಯಾಲಯ(ಸ್ವಾಯತ್ತ) ಮಂಡ್ಯ ಇಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಿರುವ ಹಿನ್ನೆಲೆಯಲ್ಲಿ ನಗರದ ಜಿಲ್ಲಾಧಿಕಾರಿಗಳ ಕಾರ್ಯಲಯ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಮಂಡ್ಯ, ಮೈಸೂರು, ಬಿಡದಿ, ರಾಮನಗರ, ಹಾಸನ, ಶ್ರೀರಂಗಪಟ್ಟಣ ಮತ್ತು ಬೆಂಗಳೂರು ಸೇರಿದಂತೆ ಇನ್ನಿತರ ಪ್ರದೇಶಗಳಿಂದ ಹೆಚ್ಚು ಕಂಪನಿಗಳನ್ನು ಕರೆತನ್ನಿ. ಈ ಮೂಲಕ ಯುವಕರು, ನಿರುದ್ಯೋಗಿಗಳು, ಮಹಿಳೆಯರು ಮತ್ತು ಅಂಗವಿಕಲರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಒಂದು ವೇದಿಕೆಯನ್ನು ನಿರ್ಮಿಸೋಣ ಎಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯ ಉದ್ಯೋಗಾಧಿಕಾರಿ ಕೆ.ಶಿವಮೂರ್ತಿ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಉದ್ಯೋಗ ಮೇಳದಲ್ಲಿ ಜೆ.ಕೆ ಟೈರ್ಸ್, ರಾಣಿ ಮದ್ರಾಸ್, ಗಿಲ್ವುಡ್, ಗೋಕುಲ್ದಾಸ್, ಶಾಹಿ ಗ್ರೂಪ್ಸ್, ಅಕ್ವೇರಲ್ ಪ್ರೈ.ಲಿ, ಗಿರೀಶ್ ಎಕ್ಸಪೋರ್ಟ್, ಚೋಳ ಪೀಪಲ್ ಅಂಡ್ ಮಾರ್ಕೆಟಿಂಗ್ ಸರ್ವಿಸಸ್, ಇಕ್ವಿಟಾಸ್ ಸ್ಮಾಲ್ ಪೈನಾನ್ಸ್, ಹೆಚ್.ಡಿ.ಬಿ ಪೈನಾನ್ಸ್, ಲೈಟ್ನಿಂಗ್, ವಿಧಾತ್ರ್ರಿ ಮೋಟರ್ಸ್ ಅರಸ್ ಟಾಟಾ ಮೋಟರ್ಸ್, ಅಪೋಲೊಹೋಮ್ ಹೆಲ್ತ್ಕೇರ್ ಲಿಮಿಟೆಡ್, ಉಬರ್ .
ವುಡ್ ಲ್ಯಾಂಡ್, ಹಿಂದುಜಾ ಗ್ಲೋಬಲ್ ಸಲ್ಯೂಷನ್ಸ್, ಟ್ರುವಿಷನ್, ದಿಶಾ ಮೆನೆಜ್ಮೆಂಟ್, ರುಡ್ರೆಡ್, ಹೆಚ್.ಡಿ.ಎಫ್.ಸಿ, ಜಸ್ಟ್ ಡಯಲ್, ಎಮ್ಸ್, ಎಸ್.ಬಿ.ಐ ಲೈಪ್ ಇನ್ಶೂರೆನ್ಸ್, ಜಿ4ಎಸ್, ಯುರೇಖಾಫೋಬ್ಸ್, ನವಭಾರತ್ಫರ್ಟಿಲೈಸರ್ಸ್, ಫ್ರೆಂಡ್ಲಿಮೋಟಾರ್ಸ್, ಬಿ.ಎಸ್.ಎಲ್, ಪಿಎಂಕೆಕೆ, ಜೆಟ್ಕಿಂಗ್(ರಾಜಾಜಿನಗರ), ಕುಂಬಿಟೆಕ್ನಾಲಜಿ, ಹೆಚ್ಜಿಎಸ್.
ಸಮರ್ಥನಂ(ವಿಕಲಚೇತನರಿಗಾಗಿ)ಶಬರಿಗ್ರೂಪ್ಸ್, ಸುರಭಿ ಪ್ಲಾನೆಟೆಕ್ಸ್, ಅರಸ್ಕಾರ್ಸ್ಸರ್ವೀಸ್ ಸೆಂಟರ್ ಪ್ರೈ ಯಂಗ್ ಇಂಡಿಯಾ ಪ್ರೈ.ಲಿ ಮೈಸೂರು ಲಿ.,ಬಿ.ಬಿ.ಮೋಟರ್ಸ್, ಸಿಪೆಟ್, ಸಾತಿಯ, ಯಂಗ್ ಇಂಡಿಯ,ಬಿ.ಬಿ ಮೋಟರ್ಸ್,ಸಿಪೆಟ್, ಸಾತಿಯ ಹಾಗೂ ಇನ್ನಿತರ 50 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದೆ.
ಕಂಪನಿಯವರು ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ, ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಎಲ್ಲಾ ಮೂಲ ಪ್ರಮಾಣ ಪತ್ರಗಳು, ಸ್ವ ವಿವರ (ಖesume) ಪತ್ರ, 2 ಭಾವ ಚಿತ್ರಗಳು ಹಾಗು ವಿದ್ಯಾರ್ಹತೆಯ ಪ್ರಮಾಣ ಪತ್ರಗಳ ಜೆರಾಕ್ಸ್ ಮತ್ತು ಆಧಾರ್ ಕಾರ್ಡ್ ಪ್ರತಿಯ ಜೊತೆಗೆ ಭಾಗವಹಿಸಬಹುದಾಗಿದೆ.
ಕನಿಷ್ಠ ವಿದ್ಯಾರ್ಹತೆ ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ,ಬಿಎಸ್ಸಿ(ನರ್ಸಿಂಗ್),ಬಿ.ಇ., ಮತ್ತು ಚಾಲಕರ ಹುದ್ದೆಗಳಿಗೆ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ: 08232-220126 ಹಾಗೂ 9986263695 ಗೆ ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
