ದಿನದ ಸುದ್ದಿ
ಜಮೀನು ತೆರವುಗೊಳಿಸುವ ಕಾರ್ಯ ವಿರೋಧಿಸಿ, “ಶಿವಕುಳೆನೂರುನಿಂದ ಚನ್ನಗಿರಿಯವರೆಗೆ ಪಾದಯಾತ್ರೆ ನಡೆಸಲು ಕರ್ನಾಟಕ ರಣಧೀರ ಪಡೆ ನಿರ್ಧಾರ”
ಸುದ್ದಿದಿನ,ಚನ್ನಗಿರಿ : ಶಿವಕುಳೆನೂರು ಗ್ರಾಮದ ರೈತರಿಗೆ ನಾಯ್ಯ ಕೊಡಿಸಲು ಗ್ರಾಮದಿಂದ ಚನ್ನಗಿರಿಯವರೆಗೆ ಬೈಹತ್ ಪಾದಯಾತ್ರೆ ನಡೆಸಲು ಕರ್ನಾಟಕ ರಣಧೀರ ಪಡೆ ಸಮಿತಿ ತೀರ್ಮಾನಿಸಿದೆ ಎಂದು ಜಿಲ್ಲಾಧ್ಯಕ್ಷ ರಾಘು ದೊಡ್ಡಮನಿ ಹೇಳಿದರು.
ಸಂತೆಬೆನ್ನೂರು ಹೋಬಳಿ ವ್ಯಾಪ್ತಿಯಲ್ಲಿ ಬರುವಂತಹ ಶಿವಕುಳೆನೂರ ಗ್ರಾಮಕ್ಕೆ ಬೇಟಿ ನೀಡಿ ರೈತರ ಕಷ್ಟಸುಖಗಳನ್ನು ಗಮನಿಸಿ ಬಳಿಕ ಮಾತನಾಡಿದ ಅವರು, ಗ್ರಾಮದ ರೈತರು ಸುಮಾರು 70/80 ವರ್ಷಗಳ ಕಾಲ ಉಳುಮೆ ಮಾಡುತ್ತಾ ಜೀವನ ಸಾಗಿಸುತ್ತಿದ್ದ ಜಮೀನುಗಳನ್ನು ಅಮೃತ್ ಮಹಲ್ ಪಶು ಸಂಗೋಪನೆ ಸಂರ್ವಧನ ಸಮಿತಿಯವರಿಗೆ ಲೋಕಾಯುಕ್ತ ನ್ಯಾಯಾಲಯ ವಶಪಡಿಸಿಕೊಳ್ಳುವಂತೆ ಆದೇಶ ಮಾಡಿರುವ ಹಿನ್ನೆಲೆಯಲ್ಲಿ ಕಂದಾಯ ಅಧಿಕಾರಿಗಳು ನ್ಯಾಯಲಯದ ಆದೇಶದಂತೆ ಪೊಲೀಸ್ ಇಲಾಖೆ ಸಮ್ಮುಖದಲ್ಲಿ ಜಮೀನುಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಿರುವುದು ಸರಿಯಾದ ಕ್ರಮವಲ್ಲ, ರೈತರ ಕಣ್ಣಿರಿಗಿಂತ ದೊಡ್ಡ ಕಾನೂನು ಯಾವುದು ಇಲ್ಲ, ಒಂದು ವೇಳೆ ಅವರ ಜಮೀನುಗಳನ್ನು ತೆರವುಗೊಳಿಸುವುದಾದರೆ ಮೊದಲು ಪರ್ಯಾಯವಾಗಿ ಅವರಿಗೆ ಭೂಮಿಯನ್ನು ನೀಡಿ ನಂತರ ತಮ್ಮ ಕಾರ್ಯಕ್ಕೆ ಚಾಲನೆ ನೀಡಬೇಕಾಗಿದೆ ಎಂದರು.
ಇಲ್ಲವಾದರೆ ಈ ವಾರದ ಅಂತ್ಯದೊಳಗೆ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ವಿವಿಧ ಮಠಾಧೀಶರುಗಳು ಮತ್ತು ಹೋರಾಟಗಾರರುಗಳ ಚರ್ಚೆ ನಡೆಸಿ ಈ ವಾರದಲ್ಲೇ ಶಿವಕುಳೆನೂರು ಗ್ರಾಮದಿಂದ ಚನ್ನಗಿರಿ ತಾಲ್ಲೂಕು ಕಚೇರಿಯವರೆಗೆ ಬೃಹತ್ ಪಾದಯಾತ್ರೆ ನಡೆಸಿ ಬಳಿಕ ತಾಲ್ಲೂಕು ಕಚೇರಿಯನ್ನು ಮುತ್ತಿಗೆ ಹಾಕಲು ನಮ್ಮ ಕರ್ನಾಟಕ ರಣಧೀರ ಪಡೆ ನಿರ್ಣಯ ಮಾಡಿದ್ದು. ಅದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಮತ್ತೋಮ್ಮೆ ಸಭೆ ಕರೆದು ಗ್ರಾಮಸ್ಥರಿಗೆ ಅನುಕೂಲವಾಗುಂತೆ ಕ್ರಮ ಕೈಗೊಳ್ಳಬೇಕಾಗಿದೆ ಎಂದರು.
ತಾಲ್ಲೂಕು ಅದ್ಯಕ್ಷ ಟಿ.ರುದ್ರೇಶ್ ಮಾತನಾಡಿ ಕರ್ನಾಟಕ ರಣಧೀರ ಪಡೆ ಸಂಘಟನೆಯೂ ಶಿವಕುಳೆನೂರು ಗ್ರಾಮದ ರೈತರಿಗೆ ನ್ಯಾಯ ಸಿಗುವವರೆಗೂ ನಿಮ್ಮ ಜೊತೆ ಕೈ ಜೋಡಿಸುವತಹ ಕೆಲಸ ಮಾಡಲಿದ್ದು, ಯಾರು ಕೂಡ ಭಯ ಪಡುವ ಅಗತ್ಯವಿಲ್ಲ ಅಧಿಕಾರಿಗಳು ಸೂಕ್ತ ನ್ಯಾಯ ನೀಡದೆ ಹೊದರೆ ನಾವುಗಳು ಕಾನೂನು ಚೌಕಟ್ಟಿನಲ್ಲಿ ವಿವಿಧ ಸಂಘಸಂಸ್ಥೆಗಳು, ಮಠಾದೀಶರುಗಳ ಜೊತೆಗೂಡಿ ಬೃಹತ್ ಪಾದಯಾತ್ರೆ ಮಾಡುವ ಮುಖೇನಾ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕುವಂತಹ ಕೆಲಸ ಮಾಡಿದಾಗ ಮೂಲಕ ನ್ಯಾಯ ಪಡೆದುಕೊಳ್ಳೊಣ ಎಂದು ರೈತರಿಗೆ ಧೈರ್ಯ ತುಂಬಿದರು.
ಈ ವೇಳೆ ಗ್ರಾಮಸ್ಥರಾದ ಪ್ರಭು, ಕೃಷ್ಣಪ್ಪ, ಪರುಶುರಾಮ್, ಕುಬೇಂದ್ರಪ್ಪ, ಮಲಾತೇಶ್, ಹನುಮಂತಪ್ಪ, ನೂರಾರು ಮಹಿಳೆಯರು ಸೇರಿದಂತೆ ರಘುಪ್ರಸಾದ್. ಅರುಣ್, ಪ್ರದೀಪ್, ಚೇತನ್ ಸೇರಿದಂತೆ ಕರ್ನಾಟಕ ರಣಧೀರಪಡೆಯ ಜಿಲ್ಲಾ ಸಮಿತಿ ಮತ್ತು ತಾಲ್ಲೂಕು ಸಮಿತಿಯ ಪಧಾದಿಕಾರಿಗಳು ಪಾಲ್ಗೋಂಡಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
