ಭಾವ ಭೈರಾಗಿ
ಕನಸಿನ ಈಡಿಯಟ್ಗೊಂದು ಪ್ರೇಮ ಪತ್ರ

ಪ್ರೇಮಿಗಳ ದಿನಾಚರಣೆಗೆ ಬೆರಳೆಣಿಕೆಯಷ್ಟು ದಿನಗಳು ಉಳಿದಿವೆ ಅಷ್ಟೇ.. ಫೆಬ್ರವರಿ ಬಂತೆಂದರೆ ಸಾಕು ಪ್ರೀತಿ ಮಾಡೋ ಪ್ರತಿ ಒಬ್ಬ ಯುವಕ ಯುವತಿಯರಿಗಂತು ಹಬ್ಬವೋ ಹಬ್ಬ. ಇವಾಗ ಆಗಲೇ ಪ್ರೀತಿ ಅಲ್ಲಿ ಮುಳುಗಿದವರಿಗೆ ಅಂದಿನ ದಿನ ಎಲ್ಲಿಗೆ ಹೋಗಬೇಕು ಅಂತ ಪ್ಲ್ಯಾನ್ ಮಾಡ್ತಿದ್ರೆ, ಪ್ರೀತಿನಾ ಕಳೆದುಕೊಂಡವರು ದುಃಖದಲ್ಲಿರುತ್ತಾರೆ, ಅದರಲ್ಲಿ ಕೆಲವರು ಅವರನ್ನು ಸಮಾಧಾನ ಮಾಡುವಲ್ಲಿ ಹರಸಾಹಸ ಮಾಡುತ್ತಿರುತ್ತಾರೆ. ಇನ್ನೂ ಈ ಪ್ರೀತಿಯೆಂಬ ಸಮುದ್ರಕ್ಕೆ ಈಜದವರು ಬೆಟ್ಟದಷ್ಟು ಕನಸುಗಳನ್ನು ಹೊತ್ತು ನಿಮಗಾಗಿ ಕಾಯ್ತಿರುತ್ತಾರೆ. ಒಟ್ಟಾರೆಯಾಗಿ ಈ ಜಗತ್ತಲ್ಲಿ ಪ್ರೀತಿ ಮಾಡದ ಮನುಜನೇ ಇಲ್ಲ ಅಲ್ವಾ?
ನಾನು ಈ ಮೇಲೆ ಹೇಳಿದ ಕೆಟಗರಿಯಲ್ಲಿ ಕೋಟಿ ಕೋಟಿ ಕನಸುಗಳನ್ನೆತ್ತಿಕೊಂಡು ಮುದ್ದಾದ ಜೀವಕ್ಕಾಗಿ ಕಾಯುತ್ತಿರುವವಳು. ಈ ಯೌವನ ಎಂಬುದು ಬಂದಾಕ್ಷಣ ಪ್ರತೀ ಹುಡುಗಿಯು ಸಹ ತನ್ನ ಜೀವನದಲ್ಲಿ ಬರೋ ತನ್ನ ಹುಡುಗನ ಬಗೆಗೆ ಬೆಟ್ಟದಷ್ಟು ಆಸೆ, ಕನಸುಗಳನ್ನು ಹೊತ್ತು ಆತ ಹೇಗಿರಬೇಕು? ಅವನಲ್ಲಿ ಯಾವ ಗುಣಗಳಿರಬೇಕು? ಸದಾ ನನ್ನನ್ನ ಮುದ್ದಿಸುತ್ತಾನ? ನನ್ನ ತಂದೆ ತಾಯಿಯ ನೆನಪುಗಳನ್ನ ಮರೆಸಿ ಮಗುವಿನ ಹಾಗೆ ನೋಡ್ಕೊತ್ತಾನ? ಹೀಗೆ ಸಾವಿರಾರು ಪ್ರಶ್ನೆಗಳನ್ನ ಹಾಕೊಂಡು ತಾವು ನೋಡೋ ಮೂವೀಗಳಲ್ಲಿ ಬರೋ ಪಾತ್ರಧಾರಿಗಳಲ್ಲಿ ತನ್ನ ರಾಜಕುಮಾರನ ಬಗೆಗಿನ ಕನಸುಗಳನ್ನ ಕಾಣ್ತಿರುತ್ತಾರೆ. ಹೀಗೆಯೇ ನಾನು ಕೂಡ ನನ್ನವನ ಕುರಿತಾಗಿ ಸಾವಿರಾರು ಆಸೆಗಳನ್ನು ಹೊತ್ತು ಕಾಯುತ್ತಲ್ಲಿದ್ದೇನೆ. ಹೇ ಮುದ್ದು ನೀನೆಲ್ಲಿದ್ದಿಯೋ ನನಗಂತು ಗೊತ್ತಿಲ್ಲ…. ಆದ್ರೆ ನಿನ್ನ ನೆನಪಲ್ಲೇ ಹೀಗೊಂದು ಪತ್ರ ನಿನಗಾಗಿ ಕಣೋ….
ಕನಸಿನ ಈಡಿಯಟ್ಗೊಂದು ಪತ್ರ,
ಹೇ ಪ್ರಿಯಕರನೆ.. ನೀನು ನನ್ನ ಬೆನ್ನುಡಿಯೂ ಅಲ್ಲ, ನನ್ನ ಮುನ್ನುಡಿಯೂ ಅಲ್ಲ. ನನ್ನ ಕವನದ ಪ್ರತಿ ಸಾಲು ನಿನದೆ ನೆನಪು ಕಣೋ. ನೀನು ನೋಡೋದಕ್ಕೆ ಹೇಗಿದ್ದಿಯಾ? ನಿನ್ನ ಮುಂದೆ ನನ್ನನ್ನ ಜರೀತಾರ? ನನ್ನ ಹಾಗೆ ನೀನು ನನಗಾಗಿ ಕಾಯ್ತಿದ್ದಿಯಾ? ಹೀಗೆ ನಿನ್ನ ಬಗೆಗೆ ನಾನು ಯೋಚಿಸುವಾಗಲೆಲ್ಲಾ ನನಗೆ ನೆನಪಾಗುವುದು ಪ್ರೀತ್ಸೆ ಅಂತ ಪ್ರಾಣ ತಿನ್ನೋ ಪ್ರೇಮಿ ನೀನು ಯರು? ಅನ್ನೋ ಹಾಡೆ ಕಣೋ.
ಈ ಮೂವೀ ಸಾಂಗ್ಗಳು ಕುಡಾ ನಮ್ಮನ್ನ ಎಂತೆಂತಹ ಲೋಕಕ್ಕೊಮ್ಮೆ ಕರೆದೋಗಿ ಬಿಡುತ್ತದ್ದಲ್ಲ!ಲೋ ಅಪ್ಪು.. ನಿನಗಾಗಿ ನಾನು ಅದೆಷ್ಟು ಕಾಯ್ತಿದ್ದಿನಿ ಅಂದ್ರೆ, ಸುಮಾರು ಜನ ಬಂದು ಚಮಕ್ ಕೊಟ್ಟು ಚಲೋ ಅಂದ್ರು ಅಲ್ಲಾಡ್ದೆ ಕಲ್ಲುಗುಂಡ್ ಇದ್ದಂಗೆ ಇದ್ದ ಗುಂಡಿಗೆ ಕಣೋ ನನ್ದು. ಅಂತ ಗುಂಡ್ಗಿಗೆನು ಗೊತ್ತಾಗ್ದಂಗೆ ಸೋಲಿಸೋ ನೀನು ಎಲ್ಲೋ ಇದೀಯಾ? ಈ ಲವ್ ಅನ್ನೋ ಮಾಯಲೋಕದಲ್ಲಿ ಅದೆಷ್ಟೋ ಮಾಟಗಾರರು ಆತ್ಮಬಂಧನ ಮಾಡಿದ್ರೆ, ನೀನೊಂತರ ವಿಭಿನ್ನವಾಗಿ ನನ್ನ ಊeಚಿಡಿಣ ನೇ ದಿಗ್ಬಂಧನ ಮಾಡೋ ಚೆನ್ನಿಗರಾಯ ಯಾರೋ ನೀನು..?
ಕನಸುಗಳ ತುಂಬೆಲ್ಲಾ ಕಾಡೋ ಪೆದ್ದು ಜೀವ ನೀನು. ಕಮಲದ ಹಾಗಿರೋ ಕಣ್ಣು, ಮಿಂಚುಳ್ಳಿ ತರ ಇರುವ ನಿನ್ನ ರೆಪ್ಪೆ, ಮುಂಗುರುಳು ದುಂಬಿಯ ಹಾಗೇ, ಕೆನ್ನೆ ತಾವರೆಯ ಎಲೆಯ ಹಾಗೇ ಇದಿಯೋ ಇಲ್ವೋ ಗೊತ್ತಿಲ್ಲ. ಆದ್ರೆ ನಿನ್ನ ನೆನಪಾದಾಗಲೆಲ್ಲಾ ನನ್ನ ಬಳಿ ಇರುವ ಆ ಬೇಬಿ ಡಾಲ್ನೊಮ್ಮೆ ಮುದ್ದಿಸುವೇ, ಆ ಬೇಬಿ ಡಾಲ್ ತರ ಖಂಡಿತ ಇರ್ತಿಯಾ ಅಲ್ವಾ?
ಕಾಯುತ್ತಲಿರುವೆ ನಿನಗಾಗಿ.. ನೀ ಬರುವೆಯಾ ನನಗಾಗಿ…
ಇಂತಿ ನಿನ್ನ ಬರುವಿಕೆಯನ್ನ ಎದುರುನೋಡುತ್ತಿರುವ ನಿನ್ನ ಮನದರಸಿ…
–ಪ್ರೀತಿ.ಟಿ.ಎಸ್.
ಪತ್ರಿಕೋದ್ಯಮ ವಿಭಾಗ
ದಾವಣಗೆರೆ ವಿಶ್ವವಿದ್ಯಾಲಯ
ಮೊ.ನಂ: 8310521904
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಭಾವ ಭೈರಾಗಿ
ಕವಿತೆ | ಕಿಚನ್ ವಕ್ತ್

- ಸಂಘಮಿತ್ರೆ ನಾಗರಘಟ್ಟ
ಎದ್ದ ತಕ್ಷಣ
ಎದ್ದೋ ಬಿದ್ದೋ ಎಂದು
ಫ್ರೆಶ್ ಆಗಲು ಬಾತ್ ರೂಂ
ನತ್ತ ಹೋಗುವುದೇ ತಡ
ಅಲ್ಲಿನ ಪುಟ್ಟ ಕನ್ನಡಿಯಲ್ಲಿ
ಹಿಡಿ ಮಾತ್ರದ ನನ್ನ ಮುಖ
ಥೇಟ್ ಆಟದ ರೋಬೋಟ್
ನಂತೆಯೇ ಕಾಣುತ್ತಿತ್ತು
ಒಳಗಿನಿಂದ ಕದ ತೆಗೆದು
ಆಚೆ ಹೆಜ್ಜೆಯಿಡುವ ಹೊತ್ತಿಗಾಗಲೇ
ಕಿಚನ್ ನಲ್ಲಿ ಆರ್ಡರ್ ಸಿದ್ಧ
ಬಿಸಿ ನೀರು ಒಬ್ಬರಿಗಾದರೆ
ಸ್ಟ್ರಾಂಗ್ ಕಾಫಿ ಇನ್ನೊಬ್ಬರಿಗೆ
ಅದನ್ನು ಕೊಡುವ ಗ್ಲಾಸ್
ಗಾಜಿನದೋ ಸ್ಟೀಲ್ ನದೋ
ಎಂಬ ಗೊಂದಲದಲ್ಲೇ
ಸ್ಟವ್ ಮೇಲಿನ ಹಾಲು
ಉಕ್ಕಿ ತನ್ನ ಹಿತ ಶತ್ರು
ಗ್ಯಾಸ್ ಟ್ಯುಬ್ ನತ್ತ ಹರಿಯುತ್ತಿತ್ತು
ಅದನ್ನು ಉಜ್ಜಿ ಕ್ಲೀನ್ ಮಾಡಿ
ಸಿಂಕ್ ನತ್ತ ನೋಡುತ್ತಿದ್ದಂತೆ
ಎಲ್ಲಾ ಪಾತ್ರೆ ಸೌಟು ಬಾಣಲೆಯಲ್ಲಿ
ತೇಲುತ್ತಿದ್ದ ಅನ್ನದ ಅಗುಳು
ಇನ್ನು ಅರೆಬರೆ ಖಾಲಿ ಆಗಿದ್ದ
ಹೊಟ್ಟೆ ಒಳಗಿನ ಕಲ್ಮಶದಂತಿತ್ತು
ರಾತ್ರಿ ,ಹಗಲು ಮಾಡುವ
ತಿಂಡಿ -ಕೆಲಸಗಳ ಚಿಂತೆಯಲ್ಲೇ
ನಿದ್ದೆ ಹೀರಿಕೊಂಡು ಮುಖ
ಹುಳಿ ಹಿಂಡಿದಂತಾಗಿತ್ತು….
ಇನ್ನೇನು ಎಲ್ಲಾ ಕೆಲಸ ಮುಗಿಸಿ
ಸೋಫಾ ದಲ್ಲಿ ಕುಳಿತು
ಸುದ್ದಿ ಫೀಡ್ ನೋಡುತ್ತಿದ್ದೆ
ಅಕ್ಕಿ ರಾಗಿಯ ಬೆಲೆ ಪಟ್ಟಿ ಏರಿತ್ತು
ಯಾಕೋ ಈಗಲೂ ದಾಸರಿರಬೇಕಿತ್ತು
ಸಮ ತೂಕ ಮಾಡಿ ಎರಡನ್ನೂ ಅಳೆದು
ನಮ್ಮವರ ಹೊಟ್ಟೆಯನ್ನೂ ತುಂಬಿಸಬೇಕೆನಿಸಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಭಾವ ಭೈರಾಗಿ
ಕವಿತೆ | ರೇಖೆಗಳು

- ಡಾ.ಪುಷ್ಪಲತ ಸಿ ಭದ್ರಾವತಿ
ಗಡಿ ದೇಶಗಳೇನೊ ಹಂಚಿಕೊಂಡಿರಿ
ಆದರೆ,
ಸೂರ್ಯ ಚಂದ್ರರ ಗತಿಯೇನು
ಉಸಿರಾಡುವ ಗಾಳಿಯು ಒಂದಿರುವಾಗ
ಪ್ರಾಣವಾಯುವಿಗೆ ಬಂಧನದಲ್ಲಿರಿಸಲಾದಿತೆ
ಹರಿಯುವ ನದಿಗಳಿಗೆ ನಾಮಕರಣವೇನೋ ಮಾಡಿದಿರಿ
ಆದರೆ,
ಜರಿಗಳು, ಹಳ್ಳಕೊಳ್ಳಗಳು ಮಾಡಿದಾದರೂ ಏನು
ಪೂಜಾರಿ ಕೊಟ್ಟಿದ್ದು ತೀರ್ಥವೆ
ಆಬೆಜಂಜಂ, ಹಾಲಿ ವಾಟರ್ ಎಲ್ಲವೂ ಜಲ
ಫಾದರ್,ಪೂಜಾರಿ,ಮೌಲ್ವಿ
ಎಲ್ಲರೂ ಕುಡಿದದ್ದು ನೀರು
ಕೊನೆಗೂ ಅದರ ಮೂಲರೂಪ ಬದಲಾಗಲಿಲ್ಲ
ಮನುಷ್ಯ ,ಪ್ರಾಣಿ,ಮರಗಿಡಗಳ
ತಳಿಗಳನ್ನು ಬೇರ್ಪಡಿಸುವವನು ಮೂರ್ಖನೇ ಇರಬೇಕು .
ದೇಹದಲ್ಲಿರುವ ನರಮಂಡಲವನೊಮ್ಮೆ ಬೇರ್ಪಡಿಸಿ
ಬದುಕಲಾದಿತೆ
ಏನು?
ಕ್ರಿಸ್ತನೇನಾದರು ಬಂದು ಮತಾಂತರ ಮಾಡಿದನೇ
ಅಲ್ಲಾನೇನಾದರು ಬಂದು ರಾಮಮಂದಿರ ಕೆಡವಿದನೇ
ಶಿವನೇನಾದರು ಬಂದು ಮಸೀದಿಯನ್ನು ಹೊಡೆದುರುಳಿಸಿದನೇ..!?
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಇರುಳ ತಾರೆಗಳಂತೆ ಬೆಳಕೊಂದು ಮಿನುಗುವುದು..!

- ಪ್ರೀತಿ.ಟಿ.ಎಸ್, ದಾವಣಗೆರೆ
ಬೇಂದ್ರೆಯವರು “ಇರುಳ ತಾರೆಗಳಂತೆ ಬೆಳಕೊಂದು ಮಿನುಗುವುದು, ಕಳೆದ ದುಃಖಗಳಲ್ಲಿ ನೆನೆದಂತೆಯೆ” ಎಂದು ತಮ್ಮ ಸಖೀ ಗೀತದಲ್ಲಿ ಹಾಡುತ್ತಾರೆ. ಆದರೆ ಈ ಹೊಸ ವರ್ಷದಲ್ಲಿ ಕಹಿದಿನಗಳ ನೆನಪೇ ಬೇಡ, ಸಿಹಿ ಕಹಿ ಕನಸುಗಳನ್ನು ಕಂಡಂತಹ ಎಳೆತನದ, ಕೆಳೆತನದ ದಿನಗಳ ನೆನಪೇ ಸ್ಥಿರವಾಗಿರಲಿ; ಕಾಲನ ಹೊಡೆತಕ್ಕೆ ಆ ಕನಸುಗಳ ನೆನಪು ಮರೆಯಾಗದಿರಲಿ.
ಹೊಸ ವರ್ಷದಲ್ಲಿ ಇದೆಂತ ಬರಿತ್ತಿದ್ದಾರೆ ಅಂತೀರ! ನಿಮಗಿಂದು ಬರೀ ಹೊಸ ವರುಷ. ಆದರೆ ನನಗೋ ನನ್ನ ಜೀವನ ಪಾವನವಾಗಿಸುವ ದಿನ. ಯಾಕೇ ಗೊತ್ತಾ? ನನ್ನ ಸಾಹಿತ್ಯ ಕ್ಷೇತ್ರಕ್ಕೆ ಅನುಕರಿಣಿಸಿ, ಸಮಾಜ ಕ್ಷೇತ್ರದಲ್ಲಿ ನನ್ನನ್ನ ತೊಡಗುವಂತೆ ಮಾಡಿ, ಕಿಂಚಿತಾದರೂ ನನ್ನಲ್ಲಿ ದಯೆ, ಕರುಣೆ, ವಿಶ್ವಾಸ, ಪ್ರೀತಿ ಹೀಗೆ ಅನೇಕ ಭಾವಗಳನ್ನ ಚಿಕ್ಕಂದಿನಿಂದ ತಿದ್ದಿ ತೀಡಿದ ನನ್ನ ತಂದೆ ತಾಯಿಯ ಜನುಮ ದಿನ.
ಹೊಸ ವರುಷಕ್ಕಿಂತ ಇವರೀರ್ವರ ಜನುಮವೇ ಅದೇನೋ ಸಂಭ್ರಮ. ಅದೇನೋ ಸಡಗರ. ಹಳೆಯ ನೆನಪಿನ ಬುತ್ತಿಯನ್ನು ಮುಚ್ಚಿಟ್ಟು ಹೊಸ ಜೀವನದ ಪಯಣಕ್ಕೆ ಅದೇನೋ ಕಾತುರದಿಂದ ಗಡಿಬಿಡಿಯಾಗುವಾಗ ಅಪ್ಪಾಜಿ ಬಂದು ಹಾದಿಯಲ್ಲಿ ಕಲ್ಲು- ಮುಳ್ಳುಗಳಿರಬಹುದು ಎಚ್ಚರ! ಆದರೆ ಅದನ್ನು ಎದುರಿಸಿ ಮುನ್ನಡೆದಾಗಲೇ ಸುಖ ಸಾಗರ ಎಂಬ ಅವರ ಆಶಯದ ನುಡಿ ಮಾತುಗಳು ಬಹುಶಃ ಇಂದು ನನ್ನನ್ನು ಇಲ್ಲಿಯವರೆಗೂ ತಂದು ನಿಲ್ಲಿಸಿದೆ.
ಮಾಮೂಲೀ ವಾಟ್ಸ್ಆ್ಯಪ್, ಫೇಸ್ಬುಕ್, ಇನ್ಸ್ಟಾಗ್ರಾಮ್ ನಲ್ಲಿ ತಂದೆ-ತಾಯಿಯ ಪೋಸ್ಟ್ ಹಾಕಿ ವಿಶ್ ಮಾಡಿದ್ರೆ ಮುಗಿತಿತ್ತು. ಆದರೆ ಈ ಭಾರಿ, ನನಗಾಗುತ್ತಿರುವುದು ವಿಚಿತ್ರ ಅನುಭವ. ಸಾವಿರ ನೋವು, ದುಃಖ-ದುಮ್ಮಾನಗಳು ಎದೆಯಲ್ಲಿದ್ರು ನಮ್ಮ ಮುಂದೆ ತೋರಿಸದೆ ಮನಸ್ಸಲ್ಲೇ ಇಟ್ಟು ಕೊರಗುತ್ತ ಒಳ್ಳೆಯ ವಿದ್ಯಾಭ್ಯಾಸ ನೀಡಿ, ಸಂಸ್ಕೃತಿ, ನಾಡು-ನುಡಿ, ಸಂಸ್ಕಾರವನ್ನು ಭಿತ್ತುತ್ತ ಬಂದಿದ್ದಾರೆ. ಸುಖದಲ್ಲೆ ಬೆಳೆದ ನಮಗೆ ಕಹಿ ಜೀವನದ ಅನುಭವ ಕಡಿಮೆಯೇ!
ಅಪ್ಪಜಿ-ಅಮ್ಮನ ಆಸೆಯಂತೆ ಮಾಸ್ಟರ್ ಆಫ್ ಜರ್ನಲಿಸಂ ಅಲ್ಲಿ ಎರಡು ಬಂಗಾರದ ಪದಕ ಗೆದ್ದು ಅವರಿಗೆ ನೀಡಿ ಆಸೆ ತೀರಿಸಿದ ನಂತರವಷ್ಟೇ ತಿಳಿದ್ದದ್ದು. ಜೀವನದ ಆಳವೆಷ್ಟು ಎಂದು? ಅಪ್ಪಾಜಿ ಅಮ್ಮನನ್ನು ಬಿಟ್ಟು ಕೆಲಸ ಹುಡುಕುತ್ತ ಬೆಂಗಳೂರಿಗೆ ಬಂದಾಗ ನಿಜವಾದ ರೋಧನೆ, ನೋವು, ಒಂಟಿತನ, ಕಷ್ಟ, ಉಪವಾಸ, ಅನ್ನದ ಬೆಲೆ ಹೀಗೆ ಬದುಕಿನ ಅಷ್ಟು ಪಾಠಗಳು ತಿಳಿಯುತ್ತ ಹೋದದ್ದು. ಎಂತಹ ಒದ್ದಾಟದಲ್ಲೂ ನನ್ನ ತಂದೆ-ತಾಯಿಗೆ ತಿಳಿಸದೆ ನಗ್ತ ನಗ್ತ ಮಾತಾಡಿದ್ರು ಕ್ಷಣಮಾತ್ರದಲ್ಲಿ ಅಪ್ಪಜಿ ಮಾತ್ರ ನನ್ನ ನಗುವಿನ ಹಿಂದಿನ ದುಃಖನ ಗುರುತಿಸಿ, ಮತ್ತಷ್ಟು ಬಲ ತುಂಬುತ್ತ ಬಂದವರು.
ಜನವರಿ 1 ಬಂತೆಂದರೆ ಅಪ್ಪಾಜಿ ಅಮ್ಮನ ಹುಟ್ಟು ಹಬ್ಬ. ಈ ಭಾರಿ ನಾನು ನಿಮಗೆನೂ ಮಾಡಿದೇನು? ಕಡೆಪಕ್ಷ ಅವರ ಮುಂದೆ ಹೋಗಿ ನಿಂತು ಶುಭಾಶಯ ತಿಳಿಸಿ ಬಂದು ಬಿಡಲೇ ಎಂದರೆ ಕೈಯಲ್ಲಿ ಕಾಸಿಲ್ಲ. ಇಲ್ಲಿಂದಲೇ ಶುಭಾಶಯ ತಿಳಿಸಿ ಸುಮ್ಮನಾಗಿ ಬಿಡಲೇ ಎಂದರೆ ಮನಸ್ಸು ಒಪ್ಪುತ್ತಿಲ್ಲ. ಇದೀಗ ದುಡಿತ್ತಿದ್ದಿನಾದರು ಕಣ್ಣ ಮುಂದಿರುವ ಅಷ್ಟು ಹೊಣೆಗಾರಿಕೆಗಳು ನನ್ನನ್ನ ಕಟ್ಟಿಹಾಕ್ತಿದೆ. ಈ ಗೊಂದಲದ ನಡುವೇ ಈ ಲೇಖನ ನಿಮಗಾಗಿ.
ಅಪ್ಪಜಿ-ಅಮ್ಮ ಈ ಭಾರಿ ಹೊಸ ವರುಷದ ಹೊಸ ಆಚರಣೆ ಸಾಧ್ಯವಾಗದಿದ್ದರು ಬೇಸರಿಸದಿರಿ. ಯಾಕೆಂದರೆ ನಿಮಗಾಗಿ ನೀವು ಕಂಡ ಹೊಸ ಕನಸಿನ ಗೂಡೊಂದನ್ನ ಹೊತ್ತು ತರುತ್ತಿದ್ದೇನೆ. ತಂದ ದಿನವೇ ನಿಮ್ಮ ಈ ಜನುಮೋತ್ಸವವನ್ನು ಆಚರಿಸ್ತೇನೆ. ಇದನ್ನ ನಿಮ್ಮೊಡನೇ ಹೇಳಬಹುದಿತ್ತಾದರು, ನನ್ನ ಸಹಪಯಣಿಗರೊಡನೆ ಹಂಚಿಕೊಂಡ ಈ ಕನಸುಗಳು ನಮ್ಮ ಬಾಳಿನ ಮುಂದಿನ ಪಯಣದ ಬುತ್ತಿಯಾಗುತ್ತದೆ ಎಂಬುದು ನನ್ನ ಭಾವನೆ.
ಇಂತಹ ಅದೆಷ್ಟೋ ಅನುಭವಗಳು ಮನೆ ಬಿಟ್ಟು, ತಂದೆ ತಾಯಿಯ ಆಶಯವನ್ನು ನೆನಸಾಗಿಸೋ ಸಾವಿರ ಕನಸುಗಳನ್ನು ಹೊತ್ತು ಬಂದ ಅದೆಷ್ಟೋ ಮನಸ್ಸುಗಳಿಗೆ ಆಗಿರುತ್ತೆ. ಇನ್ನು ಕೆಲವರಿಗೆ ಇಡೀ ವರ್ಷದ ಶ್ರಮದಾಯಕ ದುಡಿಮೆ ಬಳಿಕ ಮನಸ್ಸು ಸ್ವಲ್ಪ ವಿಶ್ರಾಂತಿಯನ್ನು, ಮನೋರಂಜನೆಯನ್ನು ಬಯಸುತ್ತದೆ. ಕುಟುಂಬದ ಬಂಧವನ್ನು ಗಟ್ಟಿಗೊಳಿಸಲು ಮತ್ತು ಪ್ರೀತಿ, ಅನುಬಂಧವನ್ನು ಬಿತ್ತಲು ಹೊಸವರ್ಷವೊಂದು ಸುವರ್ಣಾವಕಾಶ. ನಮ್ಮ ಎಲ್ಲ ಕೆಲಸಕ್ಕೆ ಸ್ವಲ್ಪ ಸಮಯ ವಿಶ್ರಾಂತಿ ಕೊಟ್ಟು ರಿಲ್ಯಾಕ್ಸ್ ಮಾಡುವ ಮೂಲಕ ಸಂಭ್ರಮ, ಸಡಗರಕ್ಕೆ ಅಣಿಯಾಗೋಣ. ನಿಮ್ಮೆಲ್ಲರ ಆಸೆ, ನಿರೀಕ್ಷೆಗಳು ನೆರವೇರಲಿ ಎಂದು ಮನಸ್ಸಲ್ಲೆ ಪ್ರಾರ್ಥಿಸುತ್ತಾ, ಮುಸ್ಸಂಜೆ ಕವಿಯುತ್ತಿರುವಾಗಲೂ ಮರುದಿನದ ಬೆಳಗು ಆಶಾಕಿರಣವನ್ನು ಹೊತ್ತು ತರಲಿ ಎಂದು ಹಾರೈಸುತ್ತೇನೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ನಿತ್ಯ ಭವಿಷ್ಯ6 days ago
ಸೋಮವಾರ- ರಾಶಿ ಭವಿಷ್ಯ ಜನವರಿ-23,2023 : ಈ ರಾಶಿಯವರಿಗೆ ಸಾಡೇ ಸಾತಿ ಶನಿಯಿಂದ ಮುಕ್ತಿ,ಎಲ್ಲಾ ನಿಮ್ಮ ಕೆಲಸಗಳು ನೆರವೇರಲಿ
-
ದಿನದ ಸುದ್ದಿ4 days ago
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ
-
ದಿನದ ಸುದ್ದಿ11 hours ago
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
-
ದಿನದ ಸುದ್ದಿ10 hours ago
ನಟ ಮನದೀಪ್ ರಾಯ್ ನಿಧನ