ದಿನದ ಸುದ್ದಿ
ಕೊವಿಡ್-19 ಎದುರಿಸುವ ಕೇರಳ ಮಾದರಿ: 20 ಸಾವಿರ ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ ಎಲ್ಲರನ್ನೂ ಒಳಗೊಳ್ಳುವ, ಯಾರನ್ನೂ ಬಿಟ್ಟು ಹಾಕದ ಕಣ್ಣೋಟ

ಕೇರಳದ ಎಡ ಸರಕಾರ ವೈದ್ಯಕೀಯ ಬಿಕ್ಕಟ್ಟನ್ನು ಎದುರಿಸುವುದು ಹೇಗೆ ಎಂದು ತೋರಿಸಿಕೊಟ್ಟಿತ್ತು, ಈಗ ಇದರಸಾಮಾಜಿಕಆಯಾಮವನ್ನು, ಮುಖ್ಯವಾಗಿ ಸಮಾಜದ ಬಡವಿಭಾಗಗಳು ಇದರಿಂದಾಗಿ ಎದುರಿಸಬೇಕಾದ ಸಂಕಷ್ಟಗಳನ್ನು ಶಮನ ಮಾಡಲು ಕೂಡ ಪರಿಹಾರ ಕ್ರಮಗಳನ್ನು ಪ್ರಕಟಿಸಿಮಾದರಿ ಹಾಕಿಕೊಟ್ಟಿದೆ.
ಮಾರ್ಚ್19 ರಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೊವಿಡ್-19ನ್ನು ಮೀರಿ ನಿಲ್ಲಲು 20,000 ಕೋಟಿ ರೂ.ಗಳ ಒಂದು ವಿಶೇಷ ಪ್ಯಾಕೇಜನ್ನು ಪ್ರಕಟಿಸಿದರು. ಇದು ಎಲ್ಲರನ್ನೂ ಒಳಗೊಳ್ಳುವ ಕಣ್ಣೋಟವನ್ನು ಹೊಂದಿದ್ದು, ಯಾರೂ ಹಿಂದೆಯೇ ಉಳಿದು ಬಿಡಬಾರದು ಎಂಬುದನ್ನು ಖಾತ್ರಿಗೊಳಿಸುತ್ತದೆ ಎಂದು ಹೇಳಲಾಗಿದೆ.
ವಿಶೇಷ ಕ್ರಮಗಳ ವಿವರ ಹೀಗಿದೆ
- ಕುಡುಂಬಶ್ರೀ ಮೂಲಕ ಕುಟುಂಬಗಳಿಗೆ 2000 ಕೋಟಿ ರೂ. ಮೌಲ್ಯದ ಸಾಲಗಳನ್ನು ಲಭ್ಯಗೊಳಿಸುವುದು.
- ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ತಲಾ 1000 ಕೋಟಿ ರೂ.ಗಳ, ಅಂದರೆ ಒಟ್ಟು 2000 ಕೋಟಿ ರೂ.ಗಳ ಗ್ರಾಮೀಣ ಉದ್ಯೋಗ ಖಾತ್ರಿ ಸ್ಕೀಮ್.
- ಎಪ್ರಿಲ್ ತಿಂಗಳಲ್ಲಿ ಕೊಡಬೇಕಾದ ಸಾಮಾಜಿಕ ಭದ್ರತಾ ಪೆನ್ಶನ್ಗಳನ್ನು ಈ ತಿಂಗಳೇ ಕೊಡುವುದು. ಹೀಗೆ ಎರಡು ತಿಂಗಳ ಪೆನ್ಶನ್ ಮೊತ್ತವನ್ನು ಒಟ್ಟಿಗೇ ಕೊಡಲು 1920 ಕೋಟಿರೂ.ಗಳ ವೆಚ್ಚ ವಾಗುತ್ತದೆ.
- ಸಾಮಾಜಿಕ ಕಲ್ಯಾಣ ಪೆನ್ಶನ್ಗಳಿಲ್ಲದ ಬಿಪಿಎಲ್ ಮತ್ತು ಅಂತ್ಯೋದಯ ಕುಟುಂಬಗಳಿಗೆ ತಲಾ 1000ರೂ. ಇದಕ್ಕೆ ತಗಲುವ ಒಟ್ಟು ವೆಚ್ಚ 100 ಕೋಟಿ ರೂ.
- ರಾಜ್ಯಾದ್ಯಂತ ಪ್ರತಿಯೊಬ್ಬರಿಗೂ, ಬಿಪಿಎಲ್-ಎಪಿಎಲ್ ಬೇಧವಿಲ್ಲದೆ, ಒಂದು ತಿಂಗಳ ಆಹಾರಧಾನ್ಯಗಳನ್ನು ಉಚಿತವಾಗಿ ಕೊಡಲಾಗುವುದು. ಬಿಪಿಎಲ್ಲೇತರ ಮತ್ತು ಅಂತ್ಯೋದಯೇತರ ಕುಟುಂಬಗಳಿಗೆ 10 ಕೆ.ಜಿ. ಆಹಾರಧಾನ್ಯಗಳು. ಇದಕ್ಕೆ 100 ಕೋಟಿ ರೂ. ತೆಗೆದಿಡಲಾಗಿದೆ
- ಸಬ್ಸಿಡಿ ದರಗಳಲ್ಲಿ ಆಹಾರ ನೀಡುವ ರೆಸ್ಟೋರೆಂಟ್ಗಳನ್ನು ಮೂಲತಃ ಸಪ್ಟಂಬರ್ ವೇಳೆಗೆ ಆರಂಭಿಸಬೇಕೆಂದಿತ್ತು. ಈಗಿನ ಸನ್ನಿವೇಶವನ್ನು ಪರಿಗಣಿಸಿ ಎಪ್ರಿಲ್ನಿಂದಲೇ ಅವುಗಳ ಕಾರ್ಯಾರಂಭ. 1000 ಇಂತಹ ರೆಸ್ಟೋರೆಂಟ್ಗಳು 20ರೂ. ದರದಲ್ಲಿ ಊಟ ಒದಗಿಸುತ್ತವೆ. ಈ ಮೊದಲು ಇದಕ್ಕೆ 25ರೂ. ನಿಗದಿ ಮಾಡಲಾಗಿತ್ತು.7. 500 ಕೋಟಿ ರೂ.ಗಳ ಒಂದು ಆರೋಗ್ಯ ಪ್ಯಾಕೇಜ್.
- ಎಲ್ಲ ಸಂಸ್ಥೆಗಳ, ವ್ಯಕ್ತಿಗಳ ಬಾಕಿಗಳನ್ನು ಎಪ್ರಿಲ್ನಲ್ಲಿ ಚುಕ್ತಾ ಮಾಡಲಾಗುವುದು. ಇದಕ್ಕೆ 14,000 ಕೋಟಿ ರೂ. ಖರ್ಚು ಮಾಡಲಾಗುತ್ತದೆ.
- ಇವಲ್ಲದೆ, ಆಟೋರಿಕ್ಷಾ ಮತ್ತು ಟ್ಯಾಕ್ಸಿಗಳಿಗೆ ಫಿಟ್ನೆಸ್ ಶುಲ್ಕಗಳನ್ನು ಪಾವತಿ; ಬಸ್ಗಳಿಗೂ ತೆರಿಗೆ ಪಾವತಿ ಸಡಿಲಿಕೆ; ಚಿತ್ರ ಮಂದಿರಗಳಿಗೆ ಮನರಂಜನಾ ತೆರಿಗೆಯಲ್ಲಿ ರಿಯಾಯ್ತಿ.
- ನೀರು ಮತ್ತು ವಿದ್ಯುತ್ ಬಿಲ್ ಪಾವತಿಯ ಅವಧಿಯಲ್ಲೂ ರಿಯಾಯ್ತಿ.
- ಕೃಪೆ : ಜನಶಕ್ತಿ ಮೀಡಿಯಾ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
