ದಿನದ ಸುದ್ದಿ
ನೇರ ಮಾರುಕಟ್ಟೆಯಿಂದ ಲಾಭ ಗಳಿಸಿದ ಸಣ್ಣ ರೈತ ದುರ್ಗಪ್ಪ ಅಂಗಡಿ

ಸುದ್ದಿದಿನ,ಶಿವಮೊಗ್ಗ : ಲಾಕ್ಡೌನ್ ಪರಿಸ್ಥಿತಿ ಮಧ್ಯೆ ದೃತಿಗೆಡದೆ ತಾನು ಬೆಳೆದ ತರಕಾರಿಗಳನ್ನು ನೇರವಾಗಿ ಸ್ಥಳೀಯ ಮಾರುಕಟ್ಟೆಯಲ್ಲಿ ಮಾರಿ ಶಿಕಾರಿಪುರ ತಾಲೂಕಿನ ಸಹಸ್ರವಳ್ಳಿ ಗ್ರಾಮದ ರೈತ ದುರ್ಗಪ್ಪ ಅಂಗಡಿಯವರು ಲಾಭ ಕಂಡುಕೊಂಡಿದ್ದಾರೆ.
ದುರ್ಗಪ್ಪ ಅಂಗಡಿಯವರು ಕಳೆದ ಕೆಲವು ವರ್ಷಗಳಿಂದ ಕೃಷಿ ವಿಜ್ಞಾನ ಕೇಂದ್ರ, ಶಿವಮೊಗ್ಗದ ಮಾರ್ಗದರ್ಶನದಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ವಿವಿಧ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ತಮ್ಮ 2 ಎಕರೆ ಪ್ರದೇಶದಲ್ಲಿ, ಕೋಳಿ ಸಾಕಾಣಿಕೆ, ಜೇನು ಸಾಕಾಣಿಕೆ, ಕೃಷಿ ಹೊಂಡ, ಎರೆಹುಳುಗೊಬ್ಬರ ತಯಾರಿಕೆ ಘಟಕಗಳನ್ನು ಸ್ಥಪಿಸಿಕೊಂಡಿದ್ದಾರೆ.
ತೋಟಗಾರಿಕೆ ಬೆಳೆಗಳಾದ ಬಾಳೆ ಮತ್ತು ಅಡಿಕೆಯ ಬೆಳೆಗಳ ಮಧ್ಯೆ ಅಂತರ ಬೆಳೆಯಾಗಿ ತರಕಾರಿ ಬೆಳೆಗಳಾದ ತೊಂಡೆಕಾಯಿ, ನುಗ್ಗೆಕಾಯಿ, ಸೌತೆಕಾಯಿ, ಟೊಮ್ಯಾಟೋ, ಬದನೆಕಾಯಿ ಮತ್ತು ಬೀನ್ಸ್ ತರಕಾರಿಗಳನ್ನು ಬೆಳೆಯುತ್ತಿದ್ದಾರೆ.
ಆದರೆ ಲಾಕ್ಡೌನ್ ಅವಧಿಯಲ್ಲಿ ತಾನು ಬೆಳೆದ ತರಕಾರಿಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲದ ಕಾರಣ ಕಂಗಾಲಾದ ದುರ್ಗಪ್ಪನವರಿಗೆ ತರಕಾರಿ ಕೊಯ್ಲಿಗೆ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಸ್ಥಳೀಯ ಮಾರುಕಟ್ಟೆಯನ್ನು ಬಳಸಿಕೊಳ್ಳುವ ಬಗ್ಗೆ ಮಾಹಿತಿ ನೀಡಿ ಧೈರ್ಯ ತುಂಬಲಾಯಿತು ಎಂದು ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಾದ ಡಾ. ಬಿ.ಸಿ.ಹನುಮಂತಸ್ವಾಮಿ ಅವರು ತಿಳಿಸಿದ್ದಾರೆ.
ಬಳಿಕ ದುರ್ಗಪ್ಪನವರು ಪರಿಚಯಸ್ತ ಹಾಗೂ ಆರೋಗ್ಯವಂತ ಇಬ್ಬರು ಕೃಷಿ ಕಾರ್ಮಿಕರನ್ನು ನೇಮಿಸಿಕೊಂಡು ತರಕಾರಿಗಳನ್ನು ಕೊಯ್ಲು ಮಾಡಿದ್ದಾರೆ. ಅಲ್ಲದೆ, ತಾವು ತರಕಾರಿಗಳನ್ನು ಸಾಗಿಸುವ ವಾಹನ, ಗೋಣಿಚೀಲ ಮತ್ತು ಉಪಯೋಗಿಸುವ ವಸ್ತುಗಳನ್ನು ಸೋಂಕು ನಿವಾರಕ ರಾಸಾಯನಿಕಗಳಿಂದ ಶುದ್ಧಗೊಳಿಸಿಕೊಂಡು ತರಕಾರಿಗಳನ್ನು ಸಂಗ್ರಹಣೆ ಮಾಡಿಕೊಂಡಿದ್ದಾರೆ.
ದೂರದ ಗ್ರಾಮಗಳಿಗೆ ಸಾಗಾಟಕ್ಕೆ ಅವಕಾಶ ಇಲ್ಲದೆ ಇದ್ದುದ್ದರಿಂದ ತಾವೇ ಖುದ್ದು ತರಕಾರಿಗಳನ್ನು ಸ್ಥಳೀಯವಾಗಿ ಮನೆ ಮನೆಗೆ ಹೋಗಿ ತರಕಾರಿಗಳನ್ನು ಮಾರಾಟ ಮಾಡಿದ್ದಾರೆ.ನೇರ ಮಾರುಕಟ್ಟೆಯಿಂದ ಅವರ ಮುಖದಲ್ಲಿ ಮಂದಹಾಸ ಬೀರುವ ಹಾಗೆ ಮಾಡಿದೆ.
ರೈತ ಉತ್ಪಾದಕರ ಸಂಘ ಹಾಗೂ ಹಾಪ್ಕಾಮ್ಸ್ಗಳ ಮುಖಾಂತರ ಜೊತೆಗೆ ಸ್ಥಳೀಯವಾಗಿಯೇ ಮಾರುಕಟ್ಟೆ ವ್ಯವಸ್ಥೆ ಕಂಡುಕೊಂಡ ಇವರು ಹೇಳುವ ಪ್ರಕಾರ 20 ರೂ.ನಂತೆ 20 ಕ್ವಿಂಟಾಲ್ ತೊಂಡೆಕಾಯಿ, 25 ರೂ.ನಂತೆ 5 ಕ್ವಿಂಟಾಲ್ ನುಗ್ಗೆಕಾಯಿ, 20 ರೂ.ನಂತೆ 6 ಕ್ವಿಂಟಾಲ್ ಟೊಮ್ಯಾಟೊ, 30 ರೂ.ನಂತೆ 10 ಕ್ವಿಂಟಾಲ್ ಬೀನ್ಸ್ ಮಾರಾಟ ಮಾಡಿರುತ್ತಾರೆ. ಇದರಿಂದ ಒಟ್ಟು 54,500/- ರೂಪಾಯಿ ನಿವ್ವಳ ಆದಾಯ ಬಂದಿದೆ.
ಲಾಕ್ಡೌನ್ ಮಧ್ಯೆಯೂ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ, ಶಿವಮೊಗ್ಗದ ವ್ಯಾಪ್ತಿಯಲ್ಲಿ ಬರುವ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಿಂದ ಮಾಹಿತಿ ಪಡೆದು ಮಾರಾಟ ಮಾಡಲು ಸೂಕ್ತ ಮತ್ತು ಪರ್ಯಾಯ ದಾರಿಯ ಬಗ್ಗೆ ಚಿಂತಿಸದಿದ್ದರೆ ತರಕಾರಿಗಳು ಹೊಲದಲ್ಲಿ ಕೊಳೆತು ನಾರುತ್ತಿದ್ದವು. ಈಗ ತಾನು ಹಾಕಿದ ಬಂಡವಾಳವೂ ಬಂದಿದೆ. ನಾವು ಹೊಲಕ್ಕೆ ಹಾಕಿದ ಪರಿಶ್ರಮಕ್ಕೆ ಫಲ ಸಿಕ್ಕಿದೆ ಎಂದು ಅವರು ತಮ್ಮ ಖುಷಿಯನ್ನು ವ್ಯಕ್ತಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243

-
ನಿತ್ಯ ಭವಿಷ್ಯ6 days ago
ಸೋಮವಾರ- ರಾಶಿ ಭವಿಷ್ಯ ಜನವರಿ-23,2023 : ಈ ರಾಶಿಯವರಿಗೆ ಸಾಡೇ ಸಾತಿ ಶನಿಯಿಂದ ಮುಕ್ತಿ,ಎಲ್ಲಾ ನಿಮ್ಮ ಕೆಲಸಗಳು ನೆರವೇರಲಿ
-
ದಿನದ ಸುದ್ದಿ4 days ago
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ
-
ದಿನದ ಸುದ್ದಿ9 hours ago
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
-
ದಿನದ ಸುದ್ದಿ8 hours ago
ನಟ ಮನದೀಪ್ ರಾಯ್ ನಿಧನ