ದಿನದ ಸುದ್ದಿ
ರೈತರಿಗೆ ಹೆಕ್ಟೇರ್ ಗೆ 25 ಸಾವಿರ ಪರಿಹಾರ ನೀಡಲು ರಾಜ್ಯಸರ್ಕಾರದ ಮಹತ್ವದ ನಿರ್ಧಾರ : 2 ತಿಂಗಳ ವಿದ್ಯುತ್ ಬಿಲ್ ಮನ್ನಾ..!

ಸುದ್ದಿದಿನ,ಬೆಂಗಳೂರು : ಭೀಕರ ಕೊರೊನಾ ಎಫೆಕ್ಟ್ ನಿಂದಾಗಿ ರಾಜ್ಯದ ಜನತೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಇಂತಹ ಕಷ್ಟ ಕಾಲದಲ್ಲಿ ನಾವು ಈಗ ಲಾಕ್ಡೌನ್ ಅನ್ನು ಸರಳಗೊಳಿಸಿದ್ದೇವೆ. ಆದರೆ ಲಾಕ್ಡೌನ್ ನಿಲ್ಲಿಸಿದ್ದೇವೆ ಎಂದು ಅರ್ಥವಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದರು.
ಬುಧವಾರ ವಿಧಾನಸೌದದಲ್ಲಿ ತುರ್ತು ಪತ್ರಿಕಾಗೋಷ್ಠಿಯ ನಡೆಸಿ ಅವರು ಮಾತನಾಡಿದ ಅವರು, ನಾಳೆಯಿಂದ ಬಸ್ಸಿನಲ್ಲಿ ಕಾರ್ಮಿಕರನ್ನು ಕಳಿಸುವುದನ್ನು ನಿಲ್ಲಿಸಲಾಗುತ್ತೆದೆ. ಕಾರ್ಮಿಕರಿಗೆ ಲಾಕ್ ಡೌನ್ ಶುರುವಾದಾಗಿನಿಂದ, ಹಲವು ಬಿಲ್ಡರ್ಗಳು, ಕಂಪನಿಗಳು ಕೆಲಸ ಇಲ್ಲದಿದ್ದರೂ ಉಚಿತ ಊಟ, ವಸತಿಯನ್ನು ನೀಡಿದ್ದಾರೆ. ಹಾಗೆ ಒಂದು ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ಅವರವರ ರಾಜ್ಯಕ್ಕೆ, ಸ್ಥಳಗಳಿಗೆ ಕಳಿಸಿ ಕೊಟ್ಟಿದ್ದೇವೆ ಎಂದರು.
ಪ್ರೆಸ್ ಮೀಟ್ ಹೈಲೈಟ್ಸ್
- ರಾಜ್ಯಕ್ಕೆ ₹1600 ಕೋಟಿ ಪ್ಯಾಕೇಜ್ ಘೋಷಣೆ.
- 11687 ಹೆಕ್ಟೇರ್ ವಿಸ್ತೀರ್ಣದಲ್ಲಿ ಬೆಳೆದ ಹೂವು ಮಾರಾಟವಾಗದೇ ನಮ್ಮ ರೈತರು ಬೆಳೆದ ಹೂವು ನಾಶವಾಗಿದ್ದು, ಒಂದು ಹೆಕ್ಟೇರ್ಗೆ 25 ಸಾವಿರ ರೂಪಾಯಿ ಪರಿಹಾರವನ್ನು ರೈತರಿಗೆ ನೀಡಲು ತೀರ್ಮಾನ.
- ರೈತರು ಬೆಳೆದ ತರಕಾರಿ ಮತ್ತು ಹಣ್ಣುಗಳಿಗೆ ಸರಿಯಾದ ದರ, ಮಾರುಕಟ್ಟೆ ಸಿಗದೇ ಸಂಕಷ್ಟಕ್ಕೆ ಒಳಗಾಗಿರುವ ಬೆಳೆಗಾರರಿಗೆ ಸೆಪರೇಟ್ ಪ್ಯಾಕೇಜ್ ಘೋಷಣೆ ಮಾಡಲಿದ್ದು, ಅದರ ಬಗ್ಗೆ ಕೆಲವು ಅಧ್ಯಯನ ನಡೆಸಲಾಗುತ್ತಿದೆ.
- ರಾಜ್ಯದಲ್ಲಿ ಸುಮಾರು 15.8 ಲಕ್ಷ ಕಾರ್ಮಿಕರಿಗೆ 2 ಸಾವಿರ ರೂಪಾಯಿ ಸಹಾಯ ಧನ ನೀಡಲು ನಿರ್ಧಾರ.
- 60 ಸಾವಿರ ಅಗಸರಿಗೆ, 2 ಲಕ್ಷ 30 ಸಾವಿರ ಕ್ಷೌರಿಕರಿಗೆ ತಲಾ 5 ಸಾವಿರ ರೂಪಾಯಿ ಪರಿಹಾರವನ್ನು ನೀಡಲು ನಿರ್ಧಾರ.
- ರಾಜ್ಯದಲ್ಲಿ 575 ಸಾವಿರ ಚಾಲಕರಿದ್ದು, ಅವರಿಗೂ ಸಹ ಒನ್ ಟೈಮ್ 5 ಸಾವಿರ ರೂಪಾಯಿ ಪರಿಹಾರ ನೀಡಲು ನಿರ್ಧಾರ.
- ರಾಜ್ಯ ಬಿಟ್ಟು ಹೊರಗೆ ಹೋಗುವುದನ್ನು ತಡೆಯಲು ಕಾರ್ಮಿಕರಿಗೆ 5 ಸಾವಿರ ರೂಪಾಯಿ ನೀಡಲು ಕೂಡ ನಿರ್ಧಾರ.
- ಸಣ್ಣ ಮತ್ತು ಮಧ್ಯಮ ಉದ್ಯಮಿಗಳ ವಿದ್ಯುತ್ ಬಿಲ್ನ ಫಿಕ್ಸ್ಡ್ ಮಿನಿಮಮ್ ಚಾರ್ಜಸ್ ಅನ್ನು ಎರಡು ತಿಂಗಳ ಅವಧಿಗೆ ಸಂಪೂರ್ಣ ಮನ್ನಾ.
- ನೇಕಾರರಿಗೆ ನೆರವಾಗಲೂ ಈಗಾಗಲೇ 109 ಕೋಟಿ ವೆಚ್ಚದಲ್ಲಿ ನೇಕಾರ ಸಾಲ ಮನ್ನಾ ಯೋಜನೆ ಘೋಷಿಸಿಸಲಾಗಿತ್ತು. ಈಗ ಎಲ್ಲ ಸಾಲ ಮನ್ನಾ ಮಾಡಿ, ಹೊಸ ಸಾಲ ಕೊಡಲಾಗುವುದು. ಹಾಗೇ 1 ಲಕ್ಷದ ವರೆಗೆ ಯಾರು ಈಗಾಗಲೇ ಸಾಲ ಪಾವತಿ ಮಾಡಿದ್ದಾರೋ ಅದನ್ನು ವಾಪಾಸ್ ಕೊಡಲಾಗುವುದು.
- ನೇಕಾರ ಸಮ್ಮಾನ ಯೋಜನೆ ಘೋಷಣೆ ಮಾಡಿದ್ದು, ಇದರ ಮೂಲಕ ಸುಮಾರು 40 ಸಾವಿರ ನೇಕಾರರಿಗೆ ಪ್ರತಿ ವರ್ಷ 2 ಸಾವಿರ ರೂಪಾಯಿ ನೀಡಲು ನಿರ್ಧಾರ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
