ದಿನದ ಸುದ್ದಿ
ದಾವಣಗೆರೆ | ಮಂಗಳವಾರ 12 ಹೊಸ ಕೊರೋನಾ ಪಾಸಿಟಿವ್ ಕೇಸ್ : ಆ್ಯಟ್ಟೀವ್ ಕೇಸ್ 77

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ಮಂಗಳವಾರ 12 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 6 ಜನರು ಗುಜರಾತ್ನ ಅಹಮದಾಬಾದ್ಗೆ ಹೋಗಿ ಬಂದ ಹಿನ್ನೆಲೆ ಹೊಂದಿದ್ದರೆ, ಇನ್ನು 6 ಜನರು ಜಾಲಿನಗರ ಕಂಟೈನ್ಮೆಂಟ್ ಝೋನ್ಗೊಳಪಡುವ ಸಂಪರ್ಕಿತರಾಗಿದ್ದಾರೆಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.
ಮಂಗಳವಾರ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದರು ಅವರು ರೋಗಿ ಸಂಖ್ಯೆ 915 ರಿಂದ 920 ರವರೆಗೆ ಆರು ಜನರು ಗುಜರಾತ್ನ ಅಹಮದಾಬಾದ್ಗೆ ಪ್ರಯಾಣ ಮಾಡಿರುವ ಹಿನ್ನೆಲೆ ಹೊಂದಿದ್ದು, ಒಟ್ಟು 7 ಜನರು ಅಹಮದಾಬಾದ್ನಿಂದ ಹೊನ್ನಾಳಿ ತಾಲ್ಲೂಕಿನ ಹುಣಸಘಟ್ಟಕ್ಕೆ ಹೋಗುತ್ತಿದ್ದರು. ಅವರನ್ನು ಅಲ್ಲಿ ತಲುಪುತ್ತಿದ್ದಂತೆಯೇ ದಾವಣಗೆರೆ ಕರೆ ತಂದು ಕ್ವಾರಂಟೈನ್ ಮಾಡಲಾಗಿದೆ. ಏಳರಲ್ಲಿ ಆರು ಪಾಸಿಟಿವ್ ಬಂದಿದ್ದು ಒಬ್ಬರ ಫಲಿತಾಂಶ ಬಾಕಿ ಇದೆ ಎಂದರು.
ರೋಗಿ ಸಂಖ್ಯೆ 914 ರೋಗಿ ಸಂಖ್ಯೆ 696 ರ ಸಂಪರ್ಕ ಹೊಂದಿರುವವರು. ರೋಗಿ ಸಂಖ್ಯೆ 921 ಮತ್ತು 922 ರೋಗಿ ಸಂಖ್ಯೆ 695 ರ ಸಂಪರ್ಕ ಹೊಂದಿರುವವರು. ರೋಗಿ ಸಂಖ್ಯೆ 923 ರಿಂದ ರೋಗಿ ಸಂಖ್ಯೆ 925 ರೋಗಿ ಸಂಖ್ಯೆ 696 ರ ಸಂಪರ್ಕ ಹೊಂದಿರುವವರಾಗಿದ್ದು ಈ ಆರು ಜನರು ಜಾಲಿನಗರಕ್ಕೆ ಕಂಟೈನ್ಮೆಂಟ್ ಝೋನ್ ವ್ಯಾಪ್ತಿಯವರಾಗಿದ್ದಾರೆ ಈ ಎಲ್ಲ ರೋಗಿಗಳ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಗಳ ಪತ್ತೆ ಕಾರ್ಯ ಈ ಕೂಡಲೇ ಆರಂಭಿಸಲಾಗುವುದು.
ಮಂಗಳವಾರ ಒಟ್ಟು 154 ಸ್ಯಾಂಪಲ್ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಹಾಗೂ 120 ಸ್ಯಾಂಪಲ್ ಈಗ ಸಂಗ್ರಹಿಸಿ ಕಳುಹಿಸಲು ಸಿದ್ದವಾಗಿದ್ದು ಬುಧವಾರ ಕಳುಹಿಸಲಾಗುವುದು. ಇಂದು 134 ನೆಗೆಟಿವ್ ವರದಿ ಬಂದಿದ್ದು, ಒಟ್ಟು 461 ವರದಿ ಬರುವುದು ಬಾಕಿ ಇದೆ. ಪ್ರಸ್ತುತ ಜಿಲ್ಲೆಯಲ್ಲಿ 77 ಸಕ್ರಿಯ ಪ್ರಕರಣಗಳಿವೆ ಎಂದರು.
ಕೋವಿಡ್19: 2020ರ 11ಮೇ ಸಂಜೆ 5 ಗಂಟೆಯಿಂದ 12 ಮೇ ಬೆಳಗ್ಗೆ 12 ಗಂಟೆ ಒಳಗಿನ ವರದಿ
- ಒಟ್ಟು ಪ್ರಕರಣಗಳು: 83
- ಮೃತಪಟ್ಟವರು: 04
- ಗುಣಮುಖರಾದವರು: 02
- ಹೊಸ ಪ್ರಕರಣಗಳು: 12
- ಆ್ಯಕ್ಟಿವ್ ಕೇಸ್: 77
- ವರದಿ ಬಾಕಿ : 461
ಒಟ್ಟು 22 ಜನರ 14 ದಿನಗಳ ಚಿಕಿತ್ಸೆ ಮುಗಿದಿದ್ದು ಇವರ ಮೊದಲನೇ ಸ್ಯಾಂಪಲ್ ಕಳುಹಿಸಲಾಗಿದೆ. ಇನ್ನು 24 ಗಂಟೆಯಲ್ಲಿ ಮತ್ತೊಂದು ಬಾರಿ ಪರೀಕ್ಷೆಗೆ ಸ್ಯಾಂಪಲ್ ಕಳುಹಿಸಲಾಗುವುದು ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಟ ಮನದೀಪ್ ರಾಯ್ ನಿಧನ

ಸುದ್ದಿದಿನ ಡೆಸ್ಕ್ : ಹಿರಿಯ ಚಿತ್ರನಟ ಮನದೀಪ್ ರಾಯ್ (74 ವರ್ಷ) ಇಂದು ಬೆಳಗಿನ ಜಾವ ಅಗಲಿದ್ದಾರೆ.
ಕೆಲ ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮನದೀಪ್ ರಾಯ್ ಹವ್ಯಾಸಿ ರಂಗಭೂಮಿ ಹಿನ್ನೆಲೆಯ ಕಲಾವಿದ. ನಟ – ನಿರ್ದೇಶಕ ಶಂಕರನಾಗ್ ಅವರ ಆತ್ಮೀಯ ಒಡನಾಡಿ. ಪೋಷಕ ಪಾತ್ರ, ಹಾಸ್ಯ ನಟರಾಗಿ 500ಕ್ಕೂ ಹೆಚ್ಚು ಸಿನಿಮಾಗಳು ಹಾಗೂ ಕಿರುತೆರೆ ಸರಣಿಗಳಲ್ಲಿ ಅಭಿನಯಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸುದ್ದಿದಿನ, ಹಾವೇರಿ : ಕರ್ನಾಟಕದಲ್ಲಿ ಮುಂದಿನ ತಿಂಗಳು ಮಂಡಿಸಲಾಗುತ್ತಿರುವ ಈ ವರ್ಷದ ರಾಜ್ಯ ಬಜೆಟ್ ರೈತರು, ದೀನ ದಲಿತರು, ಯುವಕರು, ಮಹಿಳೆಯರು, ದುಡಿಯುವ ವರ್ಗ ಮತ್ತು ಜನಪರವಾಗಿರುತ್ತದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವ್ನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ದುಡಿಮೆಗೆ ಯೋಗ್ಯ ಬೆಲೆ ಸಿಗುವ ರೀತಿಯಲ್ಲಿ ನಮ್ಮ ಕಾರ್ಯಕ್ರಮಗಳು ಇರುತ್ತವೆ ಎಂದರು.
ಕರ್ನಾಟಕ ರಾಜ್ಯದ ಆರ್ಥಿಕ ಅಭಿವೃದ್ಧಿಯಲ್ಲಿ ನಾವು ವೇಗವನ್ನು ಕಂಡಿದ್ದೇವೆ. ಕಳೆದ ವರ್ಷ ನಾನು ಅಧಿಕಾರ ವಹಿಸಿಕೊಂಡಾಗ 5 ಸಾವಿರ ಕೋಟಿ ರೂಪಾಯಿ ರಾಜ್ಯದ ಬೊಕ್ಕಸಕ್ಕೆ ನಮ್ಮ ನಿರ್ಧಿಷ್ಟ ಗುರಿಗೆ ಕೊರತೆಯಿತ್ತು. ಅದನ್ನು ನಾವು 5 ಸಾವಿರ ಕೋಟಿ ತುಂಬುವುದಲ್ಲದೇ, 13 ಸಾವಿರ ಕೋಟಿ ಅಧಿಕವಾಗಿ ಸಂಗ್ರಹ ಮಾಡಿದ್ದೇವೆ. ಈ ವರ್ಷವೂ ಕೂಡ ನಮ್ಮ ಹಣಕಾಸಿನ ಸಂಗ್ರಹ ಉತ್ತಮವಾಗಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಹೇಳಿದರು.
ಕೋವಿಡ್ ನಂತರದಲ್ಲಿ ಆರ್ಥಿಕ ಸುಧಾರಣೆ ಆಗುತ್ತಿರುವ ಸಂದರ್ಭದಲ್ಲಿ ಕೆಳಹಂತದ ಜನಸಮುದಾಯಕ್ಕೆ ಇನ್ನಷ್ಟು ಸಹಾಯ ಮಾಡಿ, ಅವರನ್ನು ಕೂಡ ಮುಖ್ಯ ವಾಹಿನಿಗೆ ಬರಬೇಕು ಎನ್ನುವ ನಿಟ್ಟಿನಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ

ಸುದ್ದಿದಿನ ಡೆಸ್ಕ್ : ಸಂಸತ್ತಿನ ಮುಂಬರುವ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೇ 30ರಂದು ಸರ್ವಪಕ್ಷಗಳ ಸಭೆಯನ್ನು ಕರೆದಿದೆ. ಸಂಸತ್ ಭವನದ ಸಂಕೀರ್ಣದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸಭೆ ನಡೆಯಲಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ, ಕೇಂದ್ರ ಸಚಿವರು ಮತ್ತು ಸಂಸತ್ತಿನ ಎರಡೂ ಸದನಗಳನ್ನು ಪ್ರತಿನಿಧಿಸುವ ಸದನ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸರ್ಕಾರ ಸಂಸತ್ತಿನ ಉಭಯ ಸದನಗಳ ಸುಗಮ ಕಲಾಪಕ್ಕೆ ಎಲ್ಲ ರಾಜಕೀಯ ಪಕ್ಷಗಳ ಸಹಕಾರವನ್ನು ಕೋರಲಿದೆ. ಸಂಸತ್ತಿನ ಬಜೆಟ್ ಅಧಿವೇಶನ ಇದೇ 31ರಿಂದ ಆರಂಭವಾಗಲಿದೆ. ಮೊದಲ ದಿನ ಬೆಳಿಗ್ಗೆ 11 ಗಂಟೆಗೆ ಸೆಂಟ್ರಲ್ ಹಾಲ್ ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವರು.
ಅದೇ ದಿನವೇ ಆರ್ಥಿಕ ಸಮೀಕ್ಷೆಯನ್ನೂ ಸಹ ಮಂಡಿಸಲಾಗುವುದು. ಫೆಬ್ರವರಿ 1ರಂದು 2023-24ನೇ ಸಾಲಿನ ಕೇಂದ್ರ ಬಜೆಟ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡನೆ ಮಾಡಲಿದ್ದಾರೆ.
ಬಜೆಟ್ ಅಧಿವೇಶನ ಏಪ್ರಿಲ್ 6ವರೆಗೆ ನಡೆಯಲಿದ್ದು, ಸುಮಾರು 66 ದಿನಗಳಲ್ಲಿ 27 ಕಲಾಪಗಳು ನಡೆಯಲಿದೆ. ಮೊದಲ ಅವಧಿಯಲ್ಲಿ ಅಧಿವೇಶನ ಫೆಬ್ರವರಿ 13ರವರೆಗೆ ನಡೆಯಲಿದೆ. ಫೆಬ್ರವರಿ 14ರಿಂದ ಮಾರ್ಚ್ 12ರವರೆಗೆ ಅಧಿವೇಶನಕ್ಕೆ ಬಿಡುವು ಇರಲಿದೆ ಆನಂತರ ಮಾರ್ಚ್ 13ರಿಂದ ಆರಂಭವಾಗುವ ಅಧಿವೇಶನ ಏಪ್ರಿಲ್ 6ಕ್ಕೆ ಕೊನೆಗೊಳ್ಳಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980336243
