ದಿನದ ಸುದ್ದಿ
ಸ್ಟಾರ್ ಗಳ ಫೇವರೆಟ್ ಫೋಟೋಗ್ರಾಫರ್ : ಯಶಸ್ಸಿನ ಶಿಖರ ಏರಿದ ಉತ್ತರಕರ್ನಾಟಕದ ಪ್ರತಿಭೆ ‘ಪ್ರಶಾಂತ್ ಪಚ್ಚಿ’..!

ಚಿತ್ರರಂಗದಲ್ಲಿ ಪ್ರಶಾಂತ್ ಪಚ್ಚಿ ಎಂದರೆ ತಕ್ಷಣವೆ ನೆನಪಾಗುವುದು ಇವರು ಕ್ಲಿಕ್ಕಿಸಿದ ಅದ್ಭುತ ಫೋಟೋಗಳು, ರವಿ ಕಾಣದ್ದನ್ನು ಕವಿ ಕಂಡ ಎನ್ನುವ ಹಾಗೆ ಯಾರಿಗೂ ಕ್ಲಿಕ್ಕಿಸಲಾಗದ ಅದ್ಭುತ ಅಚ್ಚರಿಯ ಫೋಟೋಗಳು ಇವರ ಕ್ಯಾಮೆರಾದಲ್ಲಿ ಸೆರೆಯಾಗುತ್ತದೆ. ಇವರು ಒಬ್ಬ ಮಾಂತ್ರಿಕ ಛಾಯಾಗ್ರಾಹಕ ಎಂದರೆ ತಪ್ಪಲ್ಲ, ಇವರು ಕ್ಲಿಕ್ಕಿಸಿದ ಎಲ್ಲಾ ಫೋಟೋಗಳು ಭಾರಿ ಪ್ರಮಾಣದಲ್ಲಿ ವೈರಲ್ ಆಗುತ್ತದೆ, ಸ್ಟಾರ್ ಗಳ ಫೇವರೆಟ್ ಫೋಟೋಗ್ರಾಫರ್ ಈ ನಮ್ಮ ಉತ್ತರ ಕರ್ನಾಟಕದ ಹೈದ.
ಈ ಫೋಟೋಗಳ ಜಾದೂಗಾರ ಮೂಲತಃ ಗದಗ ಜಿಲ್ಲೆಯ ಬಿಂಕದಕಟ್ಟಿ ಎಂಬ ಹಳ್ಳಿಯವರು, ಇವರ ಜನನ ಅಕ್ಟೋಬರ್ 11/ 1994, ಇವರ ತಂದೆ ಬಸವರಾಜ್ ಮಲಗವಿ, ತಾಯಿ ಲಕ್ಷ್ಮವ್ವ, ಇವರು ಮನೆಯ ಕಿರಿಯ ಪುತ್ರ, ಇವರ ಸಹೋದರರು ರಾಜು ಮತ್ತು ಚೇತನ್.
ಚಿಕ್ಕ ವಯಸ್ಸಿನಲ್ಲಿ ಮನೆಯ ಜವಾಬ್ಧಾರಿ ಹೆಗಲ ಮೇಲೆ ಹೊತ್ತು , ತಾನು ಎಸೆಸೆಲ್ಸಿ ಓದುವಾಗಲೇ ಕೆಲಸ ಮಾಡುವುದಕ್ಕೆ ಶುರುಮಾಡಿದ್ದರು, ಇವರ ಕುಟುಂಬ ಆರ್ಥಿಕವಾಗಿ ಉತ್ತಮವಾಗಿ ಇರಲಿಲ್ಲ, ಕಷ್ಟದ ನಡುವೆ ಜೇವನವನ್ನು ನೋಡಿ ಬೆಳದು ಇವರು ಜೀವನೋಪಾಯಕ್ಕಾಗಿ ಅಡುಗೆ ಕೆಲಸದವರಾಗಿ ಬೆಂಗಳೂರಿಗೆ ಬಂದರು.
ಹೌದು 1 ಕ್ಯಾಟರಿಂಗ್ ಅಲ್ಲಿ ಅಡಿಗೆ ಕೆಲಸಕ್ಕೆ ಇವರು ಬೆಂಗಳೂರಿಗೆ ಬಂದರು, ಮೊದಮೊದಲು ಇಂತಹ ದೊಡ್ಡ ಬೆಂಗಳೂರಿನಲ್ಲಿ ಕೆಲಸ ಮಾಡಿ ಬೇಸತ್ತು ಪ್ರಯೋಜನವಿಲ್ಲವೆಂದು ಮರಳಿ ತಮ್ಮ ಊರಿಗೆ ವಾಪಸ್ಸಾದರು, ಊರಲ್ಲಿರುವ ತನ್ನ ತಂದೆಯ ಚಿಕ್ಕ ಟೀ ಅಂಗಡಿಯಲ್ಲಿ ಕೆಲಸ ಮಾಡುತ್ತಾ ಅದರ ಜೊತೆಗೆ ಓದುತ್ತಾ ಜೀವನ ಕಳೆಯುತ್ತಿದ್ದರು, ಈಗಲೂ ಇವರ ತಂದೆ ಊರಿನಲ್ಲಿ ಟೀ ಅಂಗಡಿಯನ್ನು ನಡೆಸುತ್ತಿದ್ದಾರೆ.
ಪ್ರಶಾಂತ್ ಅವರು ವಿದ್ಯೆಯಲ್ಲಿ ಬುದ್ಧಿವಂತ ರಾಗಿರಲಿಲ್ಲ, ಪಿಯುಸಿಯಲ್ಲಿ ಫೇಲಾದರೂ, ಫೇಲಾದ ಬಳಿಕ ಜೀವನಕ್ಕೆ ಏನು ಮಾಡಬೇಕು ಎಂದು ತಿಳಿಯದ ಇವರು ತಮ್ಮ ಬಡ ಕುಟುಂಬವನ್ನು ನೋಡುತ್ತಾ ಜೀವನದಲ್ಲಿ ಏನಾದರೂ ಮಾಡಲೇಬೇಕು ಹೇಗಾದರೂ ಮಾಡಿ ಒಂದು ಒಳ್ಳೆ ಹೆಸರು ಮಾಡಲೇಬೇಕು ಎಲ್ಲಾದರೂ ಕೆಲಸ ಮಾಡುತ್ತಾ ಜೀವ ನಡೆಸಬೇಕು ಎಂದು ಛಲದಿಂದ ಡಿಸೈಡ್ ಮಾಡಿದರು.
ಇವರ ಸಹೋದರ ಬೆಂಗಳೂರಿನಲ್ಲಿ ಒಂದು ಸ್ಟುಡಿಯೋದಲ್ಲಿ ವಿಡಿಯೋ ಎಡಿಟರ್ ಆಗಿ ಕಾರ್ಯವನ್ನು ನಿರ್ವಹಿಸುತ್ತಿದ್ದರು, ಆದರಿಂದ ಇವರ ಅಣ್ಣ ಇವರನ್ನು ತನ್ನ ಊರಿನಲ್ಲಿ ಇರುವ ಹೂವಿನ ಅಡಗಲಿ ಎಂಬ ಸ್ಟುಡಿಯೋದಲ್ಲಿ ಕೆಲಸಕ್ಕೆ ಸೇರಿಸಿದರು, ಮೂರು ತಿಂಗಳುಗಳ ಕಾಲ ಸ್ಟುಡಿಯೋದಲ್ಲಿ ಪ್ರಶಾಂತ್ ಅವರು ಕಸಗುಡಿಸಿ, ಸ್ಟುಡಿಯೋ ಕ್ಲೀನ್ ಮಾಡುವ ಕೆಲಸವನ್ನು ಮಾಡುತ್ತಿದ್ದರು, ಕಂಪ್ಯೂಟರ್ ಅನ್ನು ಹೇಗೆ ಉಪಯೋಗಿಸಬೇಕು ಎನ್ನುವ ಅರಿವಿಲ್ಲದ ಇವರು ದಿನೇದಿನೇ ಬೇರೆಯವರನ್ನು ನೋಡಿ ಬೇರೆಯವರಿಂದ ಸ್ವಲ್ಪ ಸ್ವಲ್ಪ ಕಂಪ್ಯೂಟರ್ ಬಳಕೆಯನ್ನು ಕಲಿತುಕೊಂಡರು.
ಆ ಸ್ಟುಡಿಯೋ ಮಾಲೀಕರೆ ಇವರಿಗೆ ಆಶ್ರಯವನ್ನು ಸಹ ಕೊಟ್ಟಿದ್ದರು, ದಿನಕಳೆದಂತೆ ಕ್ಯಾಮರಾದ ಬಗ್ಗೆ ಮತ್ತು ಫೋಟೋ ತೆಗೆಯುವುದನ್ನು ಸಹ ಇವರು ಕಲಿತುಕೊಂಡರು ನಂತರ ಚಿಕ್ಕ-ಚಿಕ್ಕ ಫಂಕ್ಷನ್ ಗಳಿಗೆ ಛಾಯಾಗ್ರಾಹಕನಾಗಿ ಹೋಗುತ್ತಿದ್ದರು, ಹೀಗೆ ಕೆಲವು ತಿಂಗಳುಗಳ ಕಾಲ ಹಗಲು-ರಾತ್ರಿಯೆನ್ನದೆ ಕೆಲಸ ಮಾಡುತ್ತಿದ್ದರು, ನಂತರ ಇನ್ನು ಏನಾದರೂ ಮಾಡಬೇಕು ಎಂದು ಮತ್ತೆ 2015ರಲ್ಲಿ ಬೆಂಗಳೂರಿನ ಕಡೆಗೆ ತಮ್ಮ ಸಹೋದರನ ಸಹಾಯದಿಂದ ಬಂದರು.
ಬೆಂಗಳೂರಿಗೆ ಬಂದಾಗ ಅವರು ಪಟ್ಟ ಕಷ್ಟ ಅಷ್ಟಿಷ್ಟಲ್ಲ ಬೇರೆ ಯಾರದೋ ರೂಮಿನಲ್ಲಿ ಆಶ್ರಯ ಪಡೆದು ಹಗಲು-ರಾತ್ರಿಯೆನ್ನದೆ ತಮ್ಮ ಕ್ಯಾಮರಾವನ್ನು ನಂಬಿ ಛಾಯಾಗ್ರಾಹಕ ವೃತ್ತಿಯನ್ನು ಮಾಡುತ್ತಿದ್ದರು, ಇವರ ಕೈಗೆ ಕ್ಯಾಮೆರಾ ಸಿಕ್ಕರೆ ಸಾಕು ಎಲ್ಲರ ಮನಸ್ಸನ್ನು ಸೆಳೆಯುವ ಫೋಟೋ ಇವರು ತೆಗೆಯುತ್ತಾರೆ,
ಹೀಗೆ ಕೆಲಸ ಮಾಡುತ್ತಾ ಮಾಡುತ್ತಾ ತಮ್ಮ ವೃತ್ತಿಯಲ್ಲಿ ಮದುವೆ ಸಮಾರಂಭಗಳಿಗೆ ಫೋಟೋ ತೆಗೆಯುವ ಜೊತೆಗೆ ಸೆಲೆಬ್ರಿಟಿಗಳ ಈವೆಂಟ್ಗಳು, ಮಾಡಲಿಂಗ್ ಗಳಿಗೆ ಫೋಟೋಗ್ರಾಫರ್ ಆಗಿ ಹೋಗಲು ಆರಂಭಿಸಿ ಯಶಸ್ಸನ್ನು ಕಂಡರು.
ಒಂದು ಚಿಕ್ಕ ಸ್ಟುಡಿಯೋ ಇಂದ ಆರಂಭಿಸಿದ ಇವರ ವೃತ್ತಿ ಇವತ್ತು ಎಲ್ಲಾ ಸೆಲೆಬ್ರಿಟಿಗಳ ಫೇವರೆಟ್ ಫೋಟೋಗ್ರಾಫರ್ ಆಗಿ ಬೆಳೆದಿದ್ದಾರೆ, ಸ್ಟಾರ್ಸ್ ಗಳಾದ ಶಿವಣ್ಣ, ಕಿಚ್ಚ ಸುದೀಪ್, ರಮೇಶ್ ಅರವಿಂದ್, ಪ್ರಭಾಸ್, ತಮ್ಮನ್ನ, ಕರೀನಾ ಕಪೂರ್, ಇನ್ನು ಮುಂತಾದ ಸ್ಟಾರ್ಸ್ ಗಳ ಅದ್ಭುತವಾದ ಫೋಟೋವನ್ನು ಕ್ಲಿಕ್ಕಿಸಿದ್ದಾರೆ, ಇವರು ತೆಗೆದಿರುವ ಫೋಟೋವನ್ನು ಇಷ್ಟಪಟ್ಟು ಸ್ಟಾರ್ ಗಳೆ ಇವರ ಜೊತೆ ಸೆಲ್ಫಿ ಅನ್ನು ಕೂಡ ತೆಗೆದುಕೊಂಡಿದ್ದಾರೆ.
ನಮ್ಮ ಪ್ರಶಾಂತ್ ಅವರು ಫೋಟೋಗ್ರಫಿಯನ್ನು ಎಷ್ಟರಮಟ್ಟಿಗೆ ಇವರು ಇಷ್ಟಪಡುತ್ತಾರೆ ಎಂದರೆ ಆಗಸ್ಟ್ 19 ವರ್ಲ್ಡ್ ಫೋಟೋಗ್ರಫಿ ದಿನದಂದೇ ತನ್ನ ಪ್ರೇಯಸಿ ಚೈತ್ರಾಳ ಜೊತೆ ವೈವಾಹಿಕ ಜೀವನವನ್ನು ಸಹ ಆರಂಭಿಸಿದ್ದಾರೆ, ಈಗ ಪುಟ್ಟ ಮಗುವಿನೊಂದಿಗೆ ಇವರ ಕುಟುಂಬ ಸಂತೋಷದಿಂದ ಕೂಡಿದೆ, ಕ್ಯಾಮೆರಾ, ಹೆಂಡತಿ ಮತ್ತು ಮಗು ನನ್ನ ಆಸ್ತಿ ಎಂದು ಹೇಳುವ ಪ್ರಶಾಂತ್ ಪಚ್ಚಿ ಅವರು ಯಶಸ್ಸನ್ನು ಕಂಡರು, ಸ್ಟಾರ್ಸ್ ಗಳ ಜೊತೆ ಕೆಲಸ ಮಾಡಿದರು, ಸೆಲೆಬ್ರಿಟಿಗಳ ಫೇವರೆಟ್ ಫೋಟೋಗ್ರಾಫರ್ ಎಂಬ ಬಿರುದು ಇದ್ದರು ಯಾವುದೇ ಅಹಂ ಇಲ್ಲದೆ ಬಹಳ ಸರಳ ಜೀವನವನ್ನು ನಡೆಸುತ್ತಿದ್ದಾರೆ.
ಹೀಗೆ 8 ವರ್ಷಗಳ ಕಾಲ ಕಷ್ಟಪಟ್ಟು ಬೆಳೆದ ನಮ್ಮ ಛಾಯಾಗ್ರಹದ ಜಾದುಗಾರ ಪ್ರಶಾಂತ್ ಪಚ್ಚಿ ಇನ್ನು ಎತ್ತರಕ್ಕೆ ಬೆಳೆಯಲಿ ಇನ್ನು ಹೆಚ್ಚು ಮಟ್ಟದಲ್ಲಿ ಇವರ ಫೋಟೋಗಳು ವೈರಲ್ ಆಗಲಿ ಎಂದು ಆಶಿಸೋಣ.
ಯಾರಾದರೂ ಇವರನ್ನು ಮದುವೆ ಸಮಾರಂಭಗಳಿಗೆ ಅಥವಾ ಫೋಟೋಶೂಟ್ ಗಳಿಗೆ ಸಂಪರ್ಕಿಸಬೇಕು ಎಂದರೆ ಕೆಳಗಿರುವ ಇ-ಮೇಲ್ ಮತ್ತು ಮೊಬೈಲ್ ನಂಬರ್ ಗೆ ಸಂಪರ್ಕಿಸಿ:prashantpachi8951@gmail.com
9886242294
–ದಿವ್ಯಶ್ರೀ. ವಿ
ಬೆಂಗಳೂರು
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮೈಸೂರು ವಿ.ವಿಯಲ್ಲಿ ಬುದ್ಧಪೀಠ ಸ್ಥಾಪನೆ : ಜಾಗ ನೀಡುವ ಭರವಸೆ ಕೊಟ್ಟ ಕುಲಪತಿ

ಸುದ್ದಿದಿನ, ಮೈಸೂರು : ಸಂಸದ ಶ್ರೀನಿವಾಸ ಪ್ರಸಾದ್ ಅವರ ಮನವಿಗೆ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಸ್ಪಂದಿಸಿ, ಪೀಠ ಸ್ಥಾಪನೆಗೆ ಜಾಗ ನೀಡುವ ಭರವಸೆ ನೀಡಿದ್ದಾರೆ. ಬುದ್ಧ ಪೂರ್ಣಿಮೆ ಅಂಗವಾಗಿ ಮೈಸೂರಿನಲ್ಲಿಂದು ಸಮಕಾಲೀನ ಜಗತ್ತಿಗೆ ಬುದ್ಧನ ಚಿಂತನೆಗಳು ಎಂಬ ವಿಷಯ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಸದ ಶ್ರೀನಿವಾಸ ಪ್ರಸಾದ್ ಮಾತನಾಡಿದರು.
ಮೈಸೂರು ವಿಶ್ವವಿದ್ಯಾಲಯದಲ್ಲಿ ಬುದ್ಧಪೀಠ ಸ್ಥಾಪಿಸಬೇಕೆಂಬ ಸಂಸದ ಶ್ರೀನಿವಾಸ ಪ್ರಸಾದ್ ಅವರ ಮನವಿಗೆ ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ. ಹೇಮಂತ್ ಕುಮಾರ್ ಸ್ಪಂದಿಸಿ, ಪೀಠ ಸ್ಥಾಪನೆಗೆ ಜಾಗ ನೀಡುವ ಭರವಸೆ ನೀಡಿದ್ದಾರೆ.
ಬುದ್ಧ ಪೂರ್ಣಿಮೆ ಅಂಗವಾಗಿ ಮೈಸೂರಿನಲ್ಲಿ ಸೋಮವಾರ ಸಮಕಾಲೀನ ಜಗತ್ತಿಗೆ ಬುದ್ಧನ ಚಿಂತನೆಗಳು ಎಂಬ ವಿಷಯ ಕುರಿತ ಉಪನ್ಯಾಸ ಕಾರ್ಯಕ್ರಮದಲ್ಲಿ ಸಂಸದ ಶ್ರೀನಿವಾಸ ಪ್ರಸಾದ್ ಮಾತನಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಯಲುಸೀಮೆ ಭಾಗಕ್ಕೆ ಶಾಶ್ವತ ನೀರಾವರಿ ಸೌಲಭ್ಯ : ಸಚಿವ ಜೆ.ಸಿ ಮಾಧುಸ್ವಾಮಿ

ಸುದ್ದಿದಿನ, ಚಿಕ್ಕಮಗಳೂರು : ಬಯಲುಸೀಮೆ ಭಾಗಕ್ಕೆ ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಭಕ್ತನಕಟ್ಟೆ ಗ್ರಾಮದಲ್ಲಿ ನಿನ್ನೆ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಈ ಭಾಗದಲ್ಲಿ ಮಳೆಯಾಧಾರಿತ ಬೆಳೆ ಬೆಳೆಯುವ ಬಯಲುಸೀಮೆ ಭಾಗಗಳಿಗೆ ಶಾಶ್ವತ ನೀರಾವರಿ ಸೌಲಭ್ಯ ಒದಗಿಸಲು ಚಿಂತಿಸಲಾಗಿದೆ ಎಂದರು.
ರಾಜ್ಯದಲ್ಲಿ ಅಗಾಧ ನೀರಿನ ಸಂಪತ್ತು ಇದ್ದರೂ ಸದ್ಬಳಕೆಯಾಗುತ್ತಿಲ್ಲ. ಈ ನಿಟ್ಟಿನಲ್ಲಿ ಇಲಾಖೆ ಹಲವು ಯೋಜನೆಗಳನ್ನು ಜಾರಿಗೆ ತರಲು ರೂಪುರೇಷೆ ಸಿದ್ಧಪಡಿಸುತ್ತಿದೆ. ತಾವು ಮಂತ್ರಿಯಾದ ನಂತರ ಸಣ್ಣ ನೀರಾವರಿ ಇಲಾಖೆಗೆ 8 ಸಾವಿರ ಕೋಟಿ ರೂಪಾಯಿ ಅನುದಾನ ನೀಡಲಾಗಿದೆ ಎಂದು ಸಚಿವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಾಜ್ಯಾದ್ಯಂತ ಶಾಲೆಗಳು ಆರಂಭ : ಪಠ್ಯ, ಸಮವಸ್ತ್ರ ಪೂರೈಕೆಗೆ ಕ್ರಮ : ಸಿಎಂ ಬೊಮ್ಮಾಯಿ

ಸುದ್ದಿದಿನ, ಬೆಂಗಳೂರು : ಶಾಲಾ ವಿದ್ಯಾರ್ಥಿಗಳಿಗೆ ಅಗತ್ಯ ಪಠ್ಯಪುಸ್ತಕ, ಸಮವಸ್ತ್ರ ಮತ್ತು ಸೈಕಲ್ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಜೊತೆ ಮಾತನಾಡಿದ ಅವರು, ಮಕ್ಕಳಿಗೆ ಶಿಕ್ಷಣ ಬಹಳಮುಖ್ಯ ಒಳ್ಳೆಯ ವಾತಾವರಣದಲ್ಲಿ ಶಾಲೆಗಳು ಆರಂಭವಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದರು.
ಈ ನಡುವೆ ರಾಜ್ಯಾದ್ಯಂತ ಇಂದಿನಿಂದ ಶಾಲೆಗಳು ಆರಂಭವಾಗಿದ್ದು, ಶಾಲಾ ಆವರಣದಲ್ಲಿ ಚಿಣ್ಣರ ಕಲರವ ಕೇಳಿ ಬರುತ್ತಿದ್ದು, ವಿದ್ಯಾರ್ಥಿಗಳಲ್ಲಿ ಹೊಸ ಹುಮ್ಮಸ್ಸು, ಸಂಚಲನ ಮೂಡಿಸಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶಾಲಾ ಪ್ರಾರಂಭೋತ್ಸವ ವಿಜೃಂಭಣೆಯಿಂದ ನೆರವೇರಿತು. ಊರಿನ ಗಣ್ಯರು, ಶಿಕ್ಷಕರು ಮಕ್ಕಳಿಗೆ ಆರತಿ ಬೆಳಗಿ, ಹೂ ನೀಡಿ ಸ್ವಾಗತಿಸಿದರು.
ಜಿಲ್ಲೆಯ ಪುಂಜಾಲಕಟ್ಟೆ ಶಾಲೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಶಾಲಾ ಆರಂಭಕ್ಕೆ ಚಾಲನೆ ನೀಡಿದರು. ಬಳಿಕ ಅವರು ಮಾತನಾಡಿ, ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಅವರನ್ನು ಸತ್ಪ್ರಜೆಗಳನ್ನಾಗಿ ರೂಪಿಸುವುದು ಎಲ್ಲರ ಕರ್ತವ್ಯ ಎಂದು ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶಾಲೆಗಳನ್ನು ಸ್ವಚ್ಛಗೊಳಿಸಿ, ತಳಿರು ತೋರಣಗಳೊಂದಿಗೆ ಸಿಂಗರಿಸಲಾಗಿತ್ತು. ಮಕ್ಕಳಿಗೆ ಹೂ ಹಾಗೂ ಸಿಹಿ ನೀಡಿ ಸ್ವಾಗತಿಸಲಾಯಿತು. ಜಿಲ್ಲೆಯ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಾಸಕ ಟಿ.ವೆಂಕಟರಮಣಯ್ಯ ಮಕ್ಕಳಿಗೆ ಹೂ ಹಾಗೂ ಸಿಹಿ ನೀಡಿ ಸ್ವಾಗತಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಪ್ರಾಥಮಿಕ ಮತು ಪ್ರೌಢಶಾಲೆಗಳು ಇಂದು ಆರಂಭವಾಗಿವೆ. ಮಕ್ಕಳ ಸ್ವಾಗತಕ್ಕೆ ಶಾಲೆಗಳನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಮಕ್ಕಳು ಶಾಲಾ ಅಂಗಳಕ್ಕೆ ಬರುತ್ತಿದ್ದಂತೆಯೆ ಶಿಕ್ಷಕರು ಸಿಹಿತಿನಿಸು ಮತ್ತು ಹೂಗಳನ್ನು ನೀಡಿ ಸ್ವಾಗತಿಸಿದರು.
ಜಿಲ್ಲೆಯಲ್ಲಿ 587 ಕಿರಿಯ ಪ್ರಾಥಮಿಕ, 947 ಹಿರಿಯ ಪ್ರಾಥಮಿಕ ಮತ್ತು 503 ಪ್ರೌಢಶಾಲೆಗಳು ಸೇರಿದಂತೆ ಒಟ್ಟಾರೆ 2ಸಾವಿರದ 960 ಶಾಲೆಗಳು ಆರಂಭಗೊಂಡಿವೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಿ.ಆರ್.ತಿಪ್ಪೇಶಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯಲ್ಲೂ ಶಾಲೆಗಳ ಆವರಣದಲ್ಲಿ ಹಬ್ಬದ ಸಡಗರ-ಸಂಭ್ರಮ ಮನೆ ಮಾಡಿದೆ. 2 ವರ್ಷಗಳ ನಂತರ ಶಾಲೆ ಪುನಾರಂಭಗೊಂಡ ಹಿನ್ನೆಲೆಯಲ್ಲಿ ಶಿಕ್ಷಕರು, ಮಕ್ಕಳಿಗೆ ಹೂ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಶಾಲೆಗಳು ಆರಂಭವಾಗಿದ್ದು ನಗರದ ಬಸವನಹಳ್ಳಿ ಬಾಲಕಿಯರ ಶಾಲೆಯಲ್ಲಿ ಶಿಕ್ಷಣ ಅಧಿಕಾರಿಗಳು ಶಾಲಾ ಸಿಬ್ಬಂದಿ ಮಕ್ಕಳಿಗೆ ಹೂಗಳನ್ನು ನೀಡಿ ಸ್ವಾಗತಿಸಿದರು.
ಗದಗ ಜಿಲ್ಲೆಯಲ್ಲಿ ಇಂದಿನಿಂದ 1ಸಾವಿರದ 381ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಆರಂಭಗೊಂಡಿವೆ. ಲಕ್ಕುಂಡಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಶಾಲಾ ಮಕ್ಕಳಿಗೆ ಸಿಹಿವಿತರಿಸಿ, ಹೂ ನೀಡುವ ಮೂಲಕ ಶಾಲೆಯ ಆರಂಭಕ್ಕೆ ಚಾಲನೆ ನೀಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಕ್ರೀಡೆ7 days ago
ಮಧ್ಯಾಹ್ನದ ಪ್ರಮುಖ ಸುದ್ದಿಗಳು
-
ಸಿನಿ ಸುದ್ದಿ7 days ago
ವಿದ್ಯುತ್ ಶಾಕ್ ನಿಂದ ಜೂ.ರವಿಚಂದ್ರನ್ ಖ್ಯಾತಿಯ ಲಕ್ಷ್ಮಿನಾರಾಯಣ್ ಸಾವು
-
ದಿನದ ಸುದ್ದಿ7 days ago
ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ : ಆಯೋಗದಿಂದ ವೇಳಾಪಟ್ಟಿ ಪ್ರಕಟ
-
ನಿತ್ಯ ಭವಿಷ್ಯ6 days ago
ಈ ರಾಶಿಯ ನವದಂಪತಿಗಳಿಗೆ ಘರ್ಷಣೆ ಸಾಧ್ಯತೆ! ಈ ರಾಶಿಯ ಉದ್ಯೋಗಿಗಳು ಎದುರಾಳಿಯ ಪಿತೂರಿಗಳು ಎದುರಿಸಬೇಕಾಗುವುದು! ಬುಧವಾರ ರಾಶಿ ಭವಿಷ್ಯ-ಮೇ-11,2022
-
ದಿನದ ಸುದ್ದಿ6 days ago
ಸಮೀಕ್ಷೆ ಆಧಾರದಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ರೂಪಿಸಿ ; ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಅವಕಾಶ ಕೊಡಿ : ಸಿಎಂ ಬೊಮ್ಮಾಯಿ ಗೆ ಸಿದ್ದರಾಮಯ್ಯ ಆಗ್ರಹ
-
ದಿನದ ಸುದ್ದಿ6 days ago
ದಾವಣಗೆರೆ | ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ-ಮನೆ ಭೇಟಿ
-
ದಿನದ ಸುದ್ದಿ6 days ago
15 ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ; ಆದೇಶ ಪಾಲಿಸಲು ಕ್ರಮ : ಸಿಎಂ ಬೊಮ್ಮಾಯಿ
-
ದಿನದ ಸುದ್ದಿ6 days ago
ಶ್ರೀಲಂಕಾ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸ ಭಾರತಕ್ಕೆ ಪಲಾಯನ ಕುರಿತ ವರದಿ ನಿರಾಧಾರ : ಕೊಲಂಬೊದ ಭಾರತೀಯ ರಾಯಭಾರಿ ಕಚೇರಿ ಸ್ಪಷ್ಟನೆ