ದಿನದ ಸುದ್ದಿ
ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ವಿವಿಧ ಕೋರ್ಸ್ಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ಹಾವೇರಿ: ಕನ್ನಡ ವಿಶ್ವವಿದ್ಯಾಲಯ ಹಂಪಿ ಬಾದಾಮಿ ಕೇಂದ್ರದಲ್ಲಿ ನಡೆಸಲಾಗುತ್ತಿರುವ ಚಿತ್ರಕಲೆ ಹಾಗೂ ಶಿಲ್ಪಕಲೆಯ 4 ವರ್ಷದ ಪದವಿ ಕೋರ್ಸ್ಗಳ ವ್ಯಾಸಂಗಕ್ಕೆ 2020-21 ನೇ ಸಾಲಿಗೆ ಪ್ರವೇಶಗಳು ಪ್ರಾರಂಭವಾಗಿವೆ. ಪಿ.ಯು.ಸಿ., ಐ.ಟಿ.ಐ, ಜೆ.ಓ.ಡಿ.ಸಿ. ಹಾಗೂ ತತ್ಸಮಾನ (10+2) ಪರೀಕ್ಷೆಗಳಲ್ಲಿ ಪಾಸಾದ ಆಸಕ್ತರು ಅರ್ಜಿ ಸಲ್ಲಿಸಬಹುದು.
ಕನ್ನಡ ವಿಶ್ವವಿದ್ಯಾಲಯ ಹಂಪಿಯ ವಿಸ್ತರಣಾ ಕೇಂದ್ರವಾದ ಬಾದಾಮಿ ಬನಶಂಕರಿಯಲ್ಲಿ ನಡೆಸಲಾಗುತ್ತಿರುವ ಚಿತ್ರಕಲೆ ಮತ್ತು ಶಿಲ್ಪಕಲೆಯ 4 ವರ್ಷದ ಪದವಿ ತರಗತಿಗಳು ಇನ್ನಿತರ ಸಾಮಾನ್ಯ ಪದವಿಗಳಾದ ಬಿ.ಎ, ಬಿ.ಕಾಂ, ಬಿ.ಎಸ್.ಸಿ, ಬಿ.ಎಸ್.ಡಬ್ಲೂ ಇನ್ನಿತರ ತತ್ಸಮಾನ ಪದವಿಗಳಂತೆ ಪದವಿ ಹಂತದ ಯವುದೇ ಸ್ಪರ್ಧಾತ್ಮಕ ಪರೀಕ್ಷೆಗಳು, ಬ್ಯಾಂಕಿಂಗ್, ಕೆ.ಎ.ಎಸ್., ಐ.ಎ.ಎಸ್., ರೈಲ್ವೆ ಇಲಾಖೆ, ಎಫ್.ಡಿ.ಎ. ಮುಂತಾದವುಗಳನ್ನು ಬರೆಯಲು ಅವಕಾಶವಿದೆ. ಅಲ್ಲದೆ ಉನ್ನತ ವ್ಯಾಸಂಗ ಮಾಡಬಯಸುವವರಿಗೆ ಎಂ.ವಿ.ಎ., ಎಂ.ಎಫ್.ಎ., ಎಂ.ಫಿಲ್, ಪಿ.ಹೆಚ್.ಡಿ ಮತ್ತು ಬೇರೆ ಕ್ಷೇತ್ರಗಳಾದ ಪತ್ರಿಕೋದ್ಯಮ, ಬಿ.ಪಿಎಡ್ ಮುಂತಾದವುಗಳನ್ನು ಕಲಿಯಲು ಅವಕಾಶಗಳಿವೆ.
ದೃಶ್ಯಕಲೆಯ ಈ ಪದವಿಗಳನ್ನು ಸ್ವ ಉದ್ಯೋಗ ಪ್ರಧಾನವಾಗಿ ರೂಪಿಸಲಾಗಿದೆ. ಸಾಂಪ್ರದಾಯಿಕ ಶಿಲ್ಪಕಲೆಯ ಪದವೀಧರರು ಸ್ವಂತ ಸ್ಟುಡಿಯೋ ಆರಂಭಿಸಿ ಮೂರ್ನಾಲ್ಕು ಜನರಿಗೆ ಉದ್ಯೋಗ ನೀಡುತ್ತಿದ್ದಾರೆ. ಚಿತ್ರಕಲಾ ಪದವೀಧರರು ಚಲನಚಿತ್ರ, ಧಾರವಾಹಿ, ದೂರದರ್ಶನ (ಟಿ.ವಿ)ಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ಇದಲ್ಲದೆ ಎನಿಮೇಶನ್, ಪೋಸ್ಟರ್ ಡಿಸೈನ್, ಸ್ಕೆಚಿಂಗ್ನಲ್ಲಿ ಪಳಗಿದವರು ಬೇರೆ ಬೇರೆ ವಾಣಿಜ್ಯ ಕಂಪೆನಿಗಳು, ಜಾಹೀರಾತು ಸಂಸ್ಥೆಗಳು, ಟೆಕ್ಸ್ಟೈಲ್ ಡಿಸೈನ್, ಪತ್ರಿಕೋದ್ಯಮ, ಫ್ಯಾಶನ್ ಡಿಸೈನ್ ಮುಂತಾದ ಅನೇಕ ಕಡೆಗಳಲ್ಲಿ ಕೆಲಸ ಮಾಡಬಹುದು.
ಬಾದಾಮಿ ಕ್ಷೇಂದ್ರದಲ್ಲಿ ನಿರಂತರವಾಗಿ ಪ್ರಖ್ಯಾತ ಕಲಾವಿದರು ಮತ್ತು ಸೃಜನಶೀಲ ಯುವ ಕಲಾವಿದರಿಂದ ಕಲಾಪ್ರಾತ್ಯಕ್ಷಿಕೆ ಹಾಗೂ ಉಪನ್ಯಾಸಗಳನ್ನು ಏರ್ಪಡಿಸಲಾಗುತ್ತದೆ. ರಾಷ್ಟ್ರ ಹಾಗೂ ರಾಜ್ಯ ಮಟ್ಟದ ಕಲಾ ಶಿಬಿರ, ಕಾರ್ಯಾಗಾರ, ಕಲಾ ಪ್ರದರ್ಶನಗಳು ನಿರಂತರವಾಗಿ ನಡೆಯುತ್ತವೆ. ಕೇಂದ್ರವು ನಾಡೋಜ ಡಾ. ಆರ್.ಎಂ. ಹಡಪದ ಅವರ ಹೆಸರಿನಲ್ಲಿ ಚಿತ್ರಕಲೆ ಹಾಗೂ ಶಿಲ್ಪಕಲೆಯ ಸುಸಜ್ಜಿತ ಆರ್ಟ್ ಗ್ಯಾಲರಿಯನ್ನು (ಕಲಾ ಸಂಗ್ರಹಾಲಯ) ಹೊಂದಿದೆ. ಇಲ್ಲಿ ಸಂಪ್ರದಾಯ ಶಿಲ್ಪ ಮತ್ತು ಚಿತ್ರಗಳನ್ನು ಸಂಗ್ರಹಿಸಿದ್ದು, ಪ್ರದರ್ಶನ ಹಾಗೂ ಅಧ್ಯಯನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕನ್ನಡ ವಿಶ್ವವಿದ್ಯಾಲಯ ಹಂಪಿ, ಬಾದಾಮಿ ಕೇಂದ್ರ, ದೂರವಾಣಿ ಸಂಖ್ಯೆ 9449256814, 9448580056, 9886664962 ಸಂರ್ಪಕಿಸಲು ಹಂಪಿ ಕನ್ನಡ ವಿಶ್ವವಿದ್ಯಾಲಯದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈಗ ಇ-ರೈಲಿನ ಕನಸು ಸಹ ನನಸಾಗಲಿದೆ..!

ಸುದ್ದಿದಿನ ಡೆಸ್ಕ್ : ದೇಶದಲ್ಲಿ ಇ-ಬೈಕ್, ಇ-ಕಾರ್ ಮತ್ತು ಇ-ಬಸ್ ನಂತರ, ಈಗ ಇ-ರೈಲಿನ ಕನಸು ಸಹ ನನಸಾಗಲಿದೆ. ಪಶ್ಚಿಮ ಮಧ್ಯ ರೈಲ್ವೆಯು ನವದೂತ್ ಎಂಬ ಬ್ಯಾಟರಿ ಚಾಲಿತ ಡ್ಯುಯಲ್ ಮೋಡ್ ಲೋಕೋಮೋಟಿವ್ ಅನ್ನು ಅಭಿವೃದ್ಧಿಪಡಿಸಿದೆ.
ಈ ಎಂಜಿನ್ ಎರಡೂ ಮೋಡ್ ಗಳಲ್ಲಿ ಅಂದರೆ ಬ್ಯಾಟರಿ ಮತ್ತು ವಿದ್ಯುಚ್ಛಕ್ತಿಯಲ್ಲಿ ಚಲಿಸುತ್ತದೆ. ಪ್ರಸ್ತುತ, ಇದನ್ನು ಪ್ರಾಯೋಗಿಕ ಆಧಾರದ ಮೇಲೆ ಜಬಲ್ಪುರ, ಮುದ್ವಾರ ಮತ್ತು ಇತರ ನಿಲ್ದಾಣಗಳಲ್ಲಿ ರೈಲುಗಳನ್ನು ಓಡಿಸುವಾಗ ಬಳಸಲಾಗುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆ ; ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗಿದೆ : ಸಿಎಂ ಬೊಮ್ಮಾಯಿ

ಸುದ್ದಿದಿನ ಡೆಸ್ಕ್ : ವಿಧಾನ ಪರಿಷತ್ನ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ತಮ್ಮ ಹಿಂದಿನ ಎಲ್ಲಾ ಸ್ಥಾನಗಳಿಗೆ ರಾಜಿನಾಮೆ ಸಲ್ಲಿಸಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಹುಬ್ಬಳ್ಳಿಯಲ್ಲಿ ಶೀಘ್ರ ಬೃಹತ್ ಕಾರ್ಯಕ್ರಮ ಆಯೋಜಿಸಿ ಅವರನ್ನು ಪಕ್ಷಕ್ಕೆ ಸ್ವಾಗತಿಸಲಾಗುವುದು. ಸಾಕಷ್ಟು ರಾಜಕೀಯ ಅನುಭವ ಹೊಂದಿರುವ ಹೊರಟ್ಟಿ ಅವರು, ಪಕ್ಷಕ್ಕೆ ಬಂದಿರುವುದರಿಂದ ಪಕ್ಷದ ಬಲ, ಮತ್ತಷ್ಟು ಹೆಚ್ಚಾಗಿದೆ. ಅದರಲ್ಲೂ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಶಕ್ತಿ ತುಂಬಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿಂದು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಧಾರಾಕಾರ ಮಳೆ ; ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ರೆಡ್ ಅಲರ್ಟ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲು ಸೂಚನೆ

ಸುದ್ದಿದಿನ ಡೆಸ್ಕ್ : ಬೆಂಗಳೂರಿನ ಬಹುತೇಕ ಎಲ್ಲಾ ಭಾಗಗಳಲ್ಲಿ 100 ಮಿಲಿಮೀಟರ್ಗೂ ಹೆಚ್ಚು ಮಳೆಯಾಗಿದೆ. ಈ ಸಂಬಂಧ ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಬಿಎಂಪಿ ಆಯುಕ್ತರೊಂದಿಗೆ ಚರ್ಚಿಸಲಾಗಿದೆ.
ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ರೆಡ್ ಅಲರ್ಟ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲು ಸೂಚಿಸಲಾಗಿದೆ. ಮುಖ್ಯಮಂತ್ರಿಗಳು ಇಂದು ಮಳೆಯಿಂದ ಹಾನಿಗೊಳಗಾದ ಕೆಲಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಘೋಷಿಸಲಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ ಬೆಂಗಳೂರಿನಲ್ಲಿಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ನಿತ್ಯ ಭವಿಷ್ಯ6 days ago
ಈ ರಾಶಿಯವರು ಆರ್ಥಿಕ ಮುಗ್ಗಟ್ಟಿನಿಂದ ಕಂಗಾಲು ಆದರೆ ಕೊನೆಘಳಿಗೆಯಲ್ಲಿ ಆತ್ಮೀಯರಿಂದ ಬಚಾವ್! ಗುರುವಾರ- ರಾಶಿ ಭವಿಷ್ಯ ಮೇ-12,2022
-
ರಾಜಕೀಯ6 days ago
ಕರ್ನಾಟಕದ ನಾಲ್ಕು ಸ್ಥಾನ ಸೇರಿದಂತೆ ರಾಜ್ಯಸಭೆಯ 57ಸ್ಥಾನಗಳಿಗೆ ಜೂನ್ 10 ರಂದು ಚುನಾವಣೆ ; ಆಯೋಗದಿಂದ ವೇಳಾಪಟ್ಟಿ ಪ್ರಕಟ
-
ರಾಜಕೀಯ6 days ago
ಹಿಂದುಳಿದ ವರ್ಗಗಳಿಗೆ ಮೀಸಲು ಸೌಲಭ್ಯ ; ಕಾನೂನು ಕ್ರಮ : ಸಿಎಂ ಬೊಮ್ಮಾಯಿ
-
ದಿನದ ಸುದ್ದಿ6 days ago
ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಸರ್ಕಾರದ ತೀರ್ಮಾನ : ಸಚಿವ ಜೆ.ಸಿ. ಮಾದುಸ್ವಾಮಿ
-
ದಿನದ ಸುದ್ದಿ5 days ago
ಮಧ್ಯಾಹ್ನದ ಪ್ರಮುಖ ಸುದ್ದಿಗಳು
-
ನಿತ್ಯ ಭವಿಷ್ಯ4 days ago
ಇಂದಿನಿಂದಲೇ ಈ ರಾಶಿಗಳಿಗೆ ಧನ ಲಾಭ, ಸುಖ ಸಂಪತ್ತು ಪ್ರಾಪ್ತಿ! ಶನಿವಾರ ರಾಶಿ ಭವಿಷ್ಯ-ಮೇ-14,2022
-
ನಿತ್ಯ ಭವಿಷ್ಯ5 days ago
ಬುಧ ಗ್ರಹ ವಕ್ರಿಯ ಚಾಲನೆ ಯಾವ ರಾಶಿಗೆ ಶುಭ ಅಶುಭ ಫಲ! ಶುಕ್ರವಾರ ರಾಶಿ ಭವಿಷ್ಯ-ಮೇ-13,2022
-
ದಿನದ ಸುದ್ದಿ5 days ago
ಮೇ 19 ರಂದು ಎಸ್.ಎಸ್.ಎಲ್.ಸಿ ಫಲಿತಾಂಶ : ಸಚಿವ ಬಿ.ಸಿ.ನಾಗೇಶ್