ಕ್ರೀಡೆ
ರಾಜ್ಯದ ಕ್ರೀಡಾ ವಿಜ್ಞಾನ ಸಂಸ್ಥೆಯಿಂದ ಪ್ರತಿಭಾನ್ವಿತ ಕ್ರೀಡಾಪಟುಗಳ ಆಯ್ಕೆ

ಸುದ್ದಿದಿನ,ದಾವಣಗೆರೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ರಾಜ್ಯದಾದ್ಯಂತ ಮಾರ್ಚ್ 2021ನೇ ಮಾಹೆಯಲ್ಲಿ ರಾಜ್ಯದ ಕ್ರೀಡಾ ವಿಜ್ಞಾನ ಸಂಸ್ಥೆಯಿಂದ (Sports Science) 8 ರಿಂದ 13 ವರ್ಷ ವಯೋಮಾನದೊಳಗಿನ ವಯೋಮಿತಿಯ ಬಾಲಕ/ಬಾಲಕಿಯರಿಗೆ ವೈಜ್ಞಾನಿಕವಾಗಿ ಆಯ್ಕೆ ಪ್ರಕ್ರಿಯೆಯನ್ನು ನಡೆಸಿ ಪ್ರತಿಭಾನ್ವಿತ ಕ್ರೀಡಾಪಟುಗಳನ್ನು ಗುರುತಿಸಲಿದ್ದಾರೆ.
ಜಿಲ್ಲೆಯಲ್ಲಿ ಮಾ.05 ರಂದು ಬೆಳಿಗ್ಗೆ 8.30 ರಿಂದ ಸಂಜೆ 5.30 ರವರೆಗೆ ಆಯ್ಕೆ ಪ್ರಕ್ರಿಯೆಯನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಸಂಘಟಿಸಲಾಗುವುದು. 08 ರಿಂದ 13 ವರ್ಷ ವಯೋಮಾನದೊಳಗಿನ ವಯೋಮಿತಿಯ ಬಾಲಕ/ಬಾಲಕಿಯರು ತಮ್ಮ ಜನ್ಮ ದಿನಾಂಕ, ಆಧಾರ್ ಕಾರ್ಡ್ ದಾಖಲೆ ಸಲ್ಲಿಸಬೇಕು. ಪ.ಜಾತಿ/ಪ.ಪಂ ಕ್ಕೆ ಸೇರಿದ ಕ್ರೀಡಾಪಟುಗಳು ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರ ಸಲ್ಲಿಸಬೇಕು. ಮಾ.03 ರೊಳಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ ಕಚೇರಿ ಅವಧಿಯಲ್ಲಿ ದಾಖಲೆಗಳನ್ನು ಸಲ್ಲಿಸಬೇಕು.
ಇದನ್ನೂ ಓದಿ | ಅತಿ ಕಡಿಮೆ ಪಂದ್ಯ ; 400 ವಿಕೆಟ್ : ದಾಖಲೆ ಬರೆದ ಸ್ಪಿನ್ನರ್ ಆರ್ ಅಶ್ವಿನ್

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ದೂ.ಸಂ: 08192-237480, ಮೊ.ಸಂ: 9480796263, 7019565606ನ್ನು ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಬೆಳಗಿನ ಪ್ರಮುಖ ಸುದ್ದಿಗಳು

ಬೆಳಗಿನ ಪ್ರಮುಖ ಸುದ್ದಿಗಳು
- ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯರಸ್ತೆಗಳ ಅಸುಪಾಸಿನಲ್ಲಿ ಅನಧಿಕೃತ ಕಟ್ಟಡ ನಿರ್ಮಿಸದಂತೆ ಲೋಕೋಪಯೋಗಿ ಇಲಾಖೆಯಿಂದ ಹೊಸ ನಿಯಮ ಜಾರಿಗೆ ತರಲಾಗಿದೆ ಎಂದು ಇಲಾಖೆ ಸಚಿವ ಸಿ.ಸಿ. ಪಾಟೀಲ್ ತಿಳಿಸಿದ್ದಾರೆ. ಹೆದ್ದಾರಿಗಳ ಇಕ್ಕೆಲೆಗಳ ಕಟ್ಟಡ ನಿರ್ಮಾಣ ಎಷ್ಟು ಪ್ರಮಾಣದ ಅಂತರ ಕಾಪಾಡಿಕೊಳ್ಳಬೇಕು ಎಂಬ ನಿಯಮ, ವಿವರ ನಮೂದಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
- ಬೆಳಕು ಯೋಜನೆಯಡಿ ರಾಜ್ಯದಲ್ಲಿ ವಿದ್ಯುತ್ ರಹಿತ ಮನೆಗಳಿಗೆ ಸಂಪರ್ಕ ನೀಡಲಾಗಿದೆ. 24 ಗಂಟೆಯೊಳಗೆ ಟ್ರಾನ್ಸ್ಫರ್ಮರ್ ಬದಲಾವಣೆಗೆ ಕ್ರಮ ಕೈಗೊಳ್ಳಲಾಗಿದೆ.160ಕಡೆ ಟಿಸಿ ಬ್ಯಾಂಕ್ ಸ್ಥಾಪನೆ ಮಾಡಲಾಗಿದೆ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಬಾಗಲಕೋಟೆಯಲ್ಲಿ ತಿಳಿಸಿದ್ದಾರೆ.
ರಾಜ್ಯದಲ್ಲಿ ರೇಷ್ಮೆ ಉತ್ಪಾದನೆಗೆ ಆದ್ಯತೆ ನೀಡಲಾಗುವುದು ಎಂದು ಕರ್ನಾಟಕ ರೇಷ್ಮೆ ಕೈಗಾರಿಕಾ ನಿಗಮದ ನೂತನ ಅಧ್ಯಕ್ಷ ಗೌತಮ್ ಗೌಡ ರಾಮನಗರದಲ್ಲಿ ಹೇಳಿದ್ದಾರೆ. ರಾಜ್ಯದಲ್ಲಿ ಹಾಲಿ ಇರುವ 17 ರೇಷ್ಮೆ ಕೈಗಾರಿಕಾ ನಿಗಮದ ಮಾರಾಟ ಮಳಿಗೆಗಳನ್ನು ವಿನೂತನವಾಗಿ ನವೀಕರಿಸಿ ಗ್ರಾಹಕರ ಅಭಿರುಚಿಗೆ ತಕ್ಕಂತೆ ಮಾರ್ಪಾಡು ಮಾಡಲಾಗುವುದು ಎಂದು ಅವರು ತಿಳಿಸಿದರು.
- ಕರ್ನಾಟಕ ಪರಿಕ್ಷಾ ಪ್ರಾಧಿಕಾರದ ವತಿಯಿಂದ ಇದೇ 7ರಂದು ನಡೆಯಲಿರುವ ಕೆಪಿಟಿಸಿಎಲ್ ಸ್ಪರ್ಧಾತ್ಮಕ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸುವಂತೆ ಚಿತ್ರದುರ್ಗ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ – ಇಸ್ರೋ, ತನ್ನ ಸಣ್ಣ ಉಪಗ್ರಹ ಉಡಾವಣಾ ವಾಹನ – ಎಸ್ಎಸ್ಎಲ್ವಿ ಮೂಲಕ ಇದೇ 7ರ ಭಾನುವಾರದಂದು ಪ್ರಥಮ ಉಡಾವಣೆ ಮಾಡಲಿದೆ. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಭಾರತೀಯ ಕಾಲಮಾನ ಭಾನುವಾರ ಬೆಳಿಗ್ಗೆ 9 ಗಂಟೆ 18 ನಿಮಿಷಕ್ಕೆ ಇಒಎಸ್-02ಉಪಗ್ರಹ ಉಡಾವಣೆಯಾಗಲಿದೆ ಎಂದು ಇಸ್ರೋ ತಿಳಿಸಿದೆ.
- 8ನೇ ರಾಷ್ಟ್ರೀಯ ಕೈಮಗ್ಗ ದಿನಾಚರಣೆಯ ಅಂಗವಾಗಿ, ಕೈಮಗ್ಗ ಮತ್ತು ಜವಳಿ ಇಲಾಖೆ ನಾಳೆಯಿಂದ ಆಗಸ್ಟ್ (5 ರಿಂದ) 7ರವರೆಗೆ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಆಯೋಜಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ಬೆಂಗಳೂರಿನಲ್ಲಿ ಪ್ರದರ್ಶನ ಉದ್ಘಾಟಿಸಲಿದ್ದಾರೆ.
- ರಾಜ್ಯದಲ್ಲಿ ಪಿಎಸ್ಐ ನೇಮಕಾತಿಯ ಮರು ಪರೀಕ್ಷೆ ಶೀಘ್ರದಲ್ಲಿಯೇ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಳೂರಿನಲ್ಲಿ ತಿಳಿಸಿದ್ದಾರೆ. ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಈ ಪ್ರಕ್ರಿಯೆ ಮುಗಿದ ನಂತರ ಮರು ಪರೀಕ್ಷೆ ನಡೆಸುವ ಬಗ್ಗೆ ಪ್ರಕಟಣೆ ಹೊರಡಿಸಲಾಗುವುದು ಎಂದು ಸಚಿವರು ಹೇಳಿದರು.
- ರಾಜ್ಯ ಹೆದ್ದಾರಿ ಜಿಲ್ಲಾ ಮುಖ್ಯರಸ್ತೆಗಳ ಆಸುಪಾಸಿನಲ್ಲಿ ಅನಧಿಕೃತ ಕಟ್ಟಡ ನಿರ್ಮಿಸದಂತೆ ಲೋಕೋಪಯೋಗಿ ಇಲಾಖೆಯಿಂದ ಹೊಸ ನಿಯಮ ಜಾರಿಗೆ ತರಲಾಗಿದೆ ಎಂದು ಇಲಾಖೆ ಸಚಿವ ಸಿ.ಸಿ. ಪಾಟೀಲ್ ತಿಳಿಸಿದ್ದಾರೆ. ಸಿಟಿ ಕಾರ್ಪೋರೇಷನ್ ವ್ಯಾಪ್ತಿಯಲ್ಲಿ 12 ಮೀಟರ್ ದೂರದವರೆಗೆ ಅಂತರ ಪಾಲಿಸುವುದು ಕಡ್ಡಾಯವಾಗಿದೆ. ಪಟ್ಟಣ ಪಂಚಾಯತಿ, ನಗರಸಭೆ ಮತ್ತು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ೬ ಮೀಟರ್ ಅಂತರ ಕಾಪಾಡಿಕೊಳ್ಳಬೇಕು ಎಂದು ಸಚಿವರು ತಿಳಿಸಿದ್ದಾರೆ.
- ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆ ’ಹರ್ ಘರ್ ತಿರಂಗ್’ ಕಾರ್ಯಕ್ರಮದ ಅಂಗವಾಗಿ ದಾವಣಗೆರೆ ಮಹಾನಗರ ಪಾಲಿಕೆಯಿಂದ ನಿನ್ನೆ ಕಾರ್ಮಿಕರಿಗೆ ತ್ರಿವರ್ಣ ಧ್ವಜ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಆಗಸ್ಟ್ 13 ರಿಂದ 15 ರ ವರೆಗೆ ಎಲ್ಲರ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಿಸಿ, ರಾಷ್ಟ್ರ ಪ್ರೇಮವನ್ನು ಎಲ್ಲೆಡೆ ಪಸರಿಸಿ, ಭಾರತ ಮಾತೆಗೆ ಗೌರವ ಸಲ್ಲಿಸಲು ಅನುಕೂಲವಾಗುವಂತೆ ಅಂಗಡಿ ವರ್ತಕರು, ಹಾಗೂ ಅಲ್ಲಿ ಕಾರ್ಯನಿರ್ವಹಿಸುವ ಕಾರ್ಮಿಕರಿಗೆ ಧ್ವಜ ವಿತರಣೆ ಕಾರ್ಯಕ್ಕೆ ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಸೋಗಿ ಶಾಂತಕುಮಾರ ಚಾಲನೆ ನೀಡಿದರು.
- 2021-22ರ ಸಾಲಿನಲ್ಲಿ 99.30 ಲಕ್ಷ ಮೆಟ್ರಿಕ್ ಟನ್ನಷ್ಟು ಸಕ್ಕರೆ ರಫ್ತು ಮಾಡಲಾಗಿದೆ ಎಂದು ಕೇಂದ್ರ ಆಹಾರ ಮತ್ತು ಸಾರ್ವಜನಿಕ ಸರಬರಾಜು ಖಾತೆ ರಾಜ್ಯ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ತಿಳಿಸಿದ್ದಾರೆ. ದೇಶದಲ್ಲಿ ಸಕ್ಕರೆ ಲಭ್ಯತೆ, ಮಾರಾಟ ಮತ್ತು ರಫ್ತು ವಹಿವಾಟನ್ನು ಸಚಿವಾಲಯ ನಿರಂತರವಾಗಿ ನಿಗಾ ವಹಿಸುತ್ತಿದೆ ಎಂದು ಅವರು ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
- ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ 2 ದಿನಗಳ ಭೇಟಿಗಾಗಿ ಕಳೆದ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ಕಳೆದ ರಾತ್ರಿ ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಹಿರಿಯ ಸಚಿವರಾದ ಗೋವಿಂದ ಕಾರಜೋಳ, ಸಿಸಿ ಪಾಟೀಲ್, ಆರಗ ಜ್ಞಾನೇಂದ್ರ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು, ಅಮಿತ್ ಶಾ ಅವರನ್ನು ಸ್ವಾಗತಿಸಿದರು.
- ಇಂದು ಬೆಂಗಳೂರು ನಗರದಲ್ಲಿ ನಡೆಯಲಿರುವ 3ನೇ ಆವೃತ್ತಿಯ ’ಸಂಕಲ್ಪದಿಂದ ಸಿದ್ಧಿ’ ಕಾರ್ಯಕ್ರಮದಲ್ಲಿ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ. ಅನಂತರ ಅವರು, ದೇಶದಲ್ಲೇ ಅತಿ ದೊಡ್ಡ ಹಾಲಿನ ಘಟಕವೆಂದು ಖ್ಯಾತಿಗಳಿಸಿರುವ ಕರ್ನಾಟಕ ಹಾಲು ಒಕ್ಕೂಟ-ಕೆಎಂಎಫ್ಗೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಕೇಂದ್ರ ಸಚಿವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಹ ಭಾಗವಹಿಸಲಿದ್ದಾರೆ.
- ಹೈಕೋರ್ಟ್ನ ನ್ಯಾಯಮೂರ್ತಿ ಪಿ. ಕೃಷ್ಣಾಭಟ್ ಅವರು ಸೇವೆಯಿಂದ ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಅವರಿಗೆ ಹೈಕೋರ್ಟ್ನಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಗಿದೆ. ಹಂಗಾಮಿ ಮುಖ್ಯನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸುವರು.
- ಕೇಂದ್ರ ಸಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ 2022ನೇ ಸಾಲಿನ ವಯೋಶ್ರೇಷ್ಠ ಸಮ್ಮಾನ್ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ.
- ಗೃಹ ರಕ್ಷಕ ದಳ ಮತ್ತು ರಾಜ್ಯ ವಿಪ್ಪತ್ತು ಸ್ಪಂದನಾ ಪಡೆಯಿಂದ ಇಂದು 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನ ಆಯೋಜಿಸಲಾಗಿದೆ. ವಿಧಾನಸೌಧದ ಪೂರ್ವ ದ್ವಾರದ ಮೆಟ್ಟಿಲುಗಳ ಮೇಲೆ ನಡೆಯುವ ಕಾರ್ಯಕ್ರಮದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತಿತರರು ಭಾಗವಹಿಸಲಿದ್ದಾರೆ.
- ಬರ್ಮಿಂಗ್ಹ್ಯಾಮ್ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ತೇಜಸ್ವಿನಿ ಶಂಕರ್ ಅಥ್ಲೆಟಿಕ್ಸ್ನಲ್ಲಿ ದೇಶಕ್ಕೆ ಮೊದಲ ಪದಕ ಗೆದ್ದುಕೊಟ್ಟಿದ್ದಾರೆ. ಪುರುಷರ ಹೈಜಂಪ್ ಫೈನಲ್ನಲ್ಲಿ ಅವರು, ಐತಿಹಾಸಿಕ ಕಂಚಿನ ಪದಕ ತನ್ನದಾಗಿಸಿಕೊಂಡಿದ್ದಾರೆ. ಭಾರತದ ವೇಟ್ಲಿಫ್ಟರ್ ಗುರ್ದಿಪ್ ಸಿಂಗ್ ಪುರುಷರ 109ಕೆಜಿ ವಿಭಾಗದಲ್ಲಿ ಕಂಚಿನ ಪದಕವನ್ನು ಜಯಿಸಿದ್ದಾರೆ. ಭಾರತದ ಜುಡೊ ಪಟು ತುಲಿಕಾ ಮಾನ್ ಮಹಿಳೆಯರ 78 ಕೆಜಿ ವಿಭಾಗದಲ್ಲಿ ಸ್ಕಾಟ್ಲ್ಯಾಂಡ್ನ ಆಟಗಾರ್ತಿ ವಿರುದ್ಧ ಗೆದ್ದು, ಬೆಳ್ಳಿ ಪದಕವನ್ನು ಸಂಪಾದಿಸಿದ್ದಾರೆ.ಇದರೊಂದಿಗೆ ಭಾರತ ಒಟ್ಟು 5 ಚಿನ್ನ, 6 ಬೆಳ್ಳಿ, ಮತ್ತು 7 ಕಂಚಿನ ಪದಕ ಸೇರಿ 18 ಪದಕಗಳನ್ನು ಗೆದ್ದದಂತಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಸೇಂಟ್ ಕಿಟ್ಸ್ ನಲ್ಲಿಂದು ಭಾರತ – ವೆಸ್ಟ್ ಇಂಡೀಸ್ ನಡುವಣ 2ನೇ ಟಿ-20 ಕ್ರಿಕೆಟ್ ಪಂದ್ಯ

ಸುದ್ದಿದಿನ ಡೆಸ್ಕ್ : ಭಾರತ ಮತ್ತು ವೆಸ್ಟ್ ಇಂಡೀಸ್ ( India – west indies) ನಡುವಣ ಎರಡನೇ ಟಿ-20 ಕ್ರಿಕೆಟ್ ಪಂದ್ಯ(T20 Cricket Match ) ಇಂದು ಸೇಂಟ್ ಕಿಟ್ಸ್ನ ಬಾಸೆಟೆರೆಯ ವಾರ್ನರ್ ಪಾರ್ಕ್ ( warner park stadium )ನಲ್ಲಿ ನಡೆಯಲಿದೆ.
ಇದನ್ನೂ ಓದಿ |ಕಾಮನ್ ವೆಲ್ತ್ ಕ್ರೀಡಾಕೂಟ ; ಪುರುಷರ 73 ಕೆ.ಜಿ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ ಅಚಿಂತಾ ಶೆಯಿಲಿಗೆ ಸ್ವರ್ಣ ಪದಕ
ಪಂದ್ಯ ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ 68 ರನ್ ಜಯ ಗಳಿಸಿರುವ ರೋಹಿತ್ ಶರ್ಮ ಸಾರಥ್ಯದ ಭಾರತ ತಂಡ, ಪ್ರಸ್ತುತ ಐದು ಪಂದ್ಯಗಳ ಟಿ-20 ಸರಣಿಯಲ್ಲಿ 1-0 ಅಂತರದ ಮುನ್ನಡೆಯಲ್ಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಕಾಮನ್ ವೆಲ್ತ್ ಕ್ರೀಡಾಕೂಟ ; ಪುರುಷರ 73 ಕೆ.ಜಿ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ ಅಚಿಂತಾ ಶೆಯಿಲಿಗೆ ಸ್ವರ್ಣ ಪದಕ

ಸುದ್ದಿದಿನ ಡೆಸ್ಕ್ : ಭಾರತದ ವೇಟ್ ಲಿಫ್ಟರ್ ಅಚಿಂತಾ ಶೆಯಿಲಿ ( Achinta Sheuli – Indian weightlifter) ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದ (Birmingham 2022 Commonwealth Games) ಪುರುಷರ 73 ಕೆ.ಜಿ ವಿಭಾಗದಲ್ಲಿ ಚಿನ್ನದ ಪದಕ (Gold Medal) ಗೆದ್ದಿದ್ದಾರೆ.
20 ವರ್ಷದ ಅಚಿಂತಾ ಸ್ನ್ಯಾಚ್ ವಿಭಾಗದಲ್ಲಿ143 ಕೆ.ಜಿ. ಹಾಗೂ ಕ್ಲೀನ್ ಮತ್ತು ಜರ್ಕ್ ವಿಭಾಗದಲ್ಲಿ170 ಕೆ.ಜಿ ಸೇರಿದಂತೆ ಒಟ್ಟಾರೆ 313 ಕೆ.ಜಿ ಭಾರ ಎತ್ತುವ ಮೂಲಕ ಸ್ವರ್ಣ ಪದಕ ಜಯಿಸಿದ್ದಾರೆ. ಭಾರತಕ್ಕೆ ಲಭಿಸಿರುವ ಆರು ಪದಕಗಳು ವೇಟ್ ಲಿಫ್ಟಿಂಗ್ನಿಂದಲೇ ಬಂದಿರುವುದು ವಿಶೇಷವಾಗಿದೆ.
ಇದನ್ನೂ ಓದಿ | ಹರಿಯಾಣದ ಚಾಂಡಿಮಂದಿರದಲ್ಲಿ ಇಂದಿನಿಂದ ಇದೇ 20ರವರೆಗೆ ಭಾರತ – ವಿಯೆಟ್ನಾಂ ಸೇನಾ ಸಮರಾಭ್ಯಾಸ

ಮೀರಾಬಾಯಿ ಚಾನು ಮತ್ತು ಜೆರೆಮಿ ಲಾಲ್ರಿನ್ನುಂಗಾ ವೇಟ್ ಲಿಫ್ಟಿಂಗ್ ನಲ್ಲಿ ಚಿನ್ನ ಗೆದ್ದರೆ, ಬಿಂದ್ಯಾರಾಣಿ ಮತ್ತು ಸಂಕೇತ್ ಸರ್ಗರ್ ಬೆಳ್ಳಿ ಪದಕ ಹಾಗೂ ಗುರುರಾಜ ಪೂಜಾರಿ ಕಂಚಿನ ಪದಕ ಜಯಿಸಿದ್ದಾರೆ. ಶೆಯಿಲಿ ಚಿನ್ನ ಗೆಲ್ಲುವುದರೊಂದಿಗೆ ಭಾರತ ಇದುವೆರೆಗೆ 3 ಚಿನ್ನ, 2ಬೆಳ್ಳಿ ಮತ್ತು 1 ಕಂಚು ಸೇರಿ ಆರು ಪದಕ ಗೆದ್ದಿದೆ.
ಬರ್ಮಿಂಗ್ಹ್ಯಾಮ್ನಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಕ್ರೀಡಾಕೂಟದ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತ ಬ್ಯಾಡ್ಮಿಂಟನ್ ತಂಡವು ಮಿಶ್ರ ತಂಡ ವಿಭಾಗದಲ್ಲಿ ಸೆಮಿಫೈನಲ್ ಪ್ರವೇಶಿಸಿದೆ.
Delighted that the talented Achinta Sheuli has won a Gold Medal at the Commonwealth Games. He is known for his calm nature and tenacity. He has worked very hard for this special achievement. My best wishes to him for his future endeavours. pic.twitter.com/cIWATg18Ce
— Narendra Modi (@narendramodi) August 1, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
ಮಳೆ ಅವಾಂತರ | ನವಿಲೇಹಾಳಿನಲ್ಲಿ ನಾಲ್ಕು ಮನೆಗಳು ನೆಲಸಮ
-
ಕ್ರೀಡೆ6 days ago
ಕಾಮನ್ ವೆಲ್ತ್ ಕ್ರೀಡಾಕೂಟ ; ಪುರುಷರ 73 ಕೆ.ಜಿ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾರತದ ಅಚಿಂತಾ ಶೆಯಿಲಿಗೆ ಸ್ವರ್ಣ ಪದಕ
-
ನಿತ್ಯ ಭವಿಷ್ಯ7 days ago
ಸೋಮವಾರ ರಾಶಿ ಭವಿಷ್ಯ-ಆಗಸ್ಟ್-1,2022 : ಈ ರಾಶಿಯವರಿಗೆ ತುಂಬಾ ಇಷ್ಟಪಟ್ಟವರು ನಿಲುಕದ ನಕ್ಷತ್ರ!
-
ದಿನದ ಸುದ್ದಿ6 days ago
ಹರಿಯಾಣದ ಚಾಂಡಿಮಂದಿರದಲ್ಲಿ ಇಂದಿನಿಂದ ಇದೇ 20ರವರೆಗೆ ಭಾರತ – ವಿಯೆಟ್ನಾಂ ಸೇನಾ ಸಮರಾಭ್ಯಾಸ
-
ದಿನದ ಸುದ್ದಿ6 days ago
ಭಾರತದಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆ; ಮೇಲ್ವಿಚಾರಣೆಗೆ ಕಾರ್ಯಪಡೆ ರಚನೆ
-
ಕ್ರೀಡೆ6 days ago
ಸೇಂಟ್ ಕಿಟ್ಸ್ ನಲ್ಲಿಂದು ಭಾರತ – ವೆಸ್ಟ್ ಇಂಡೀಸ್ ನಡುವಣ 2ನೇ ಟಿ-20 ಕ್ರಿಕೆಟ್ ಪಂದ್ಯ
-
ದಿನದ ಸುದ್ದಿ6 days ago
ಕೋಲಾರ ಪತ್ರಕರ್ತರ ಮೇಲೆ ಹಲ್ಲೆ ಖಂಡಿಸಿ ಇಂದು ಸಂಜೆ ಪ್ರತಿಭಟನೆ
-
ದಿನದ ಸುದ್ದಿ6 days ago
ಮಂಕಿಪಾಕ್ಸ್ ಕುರಿತಂತೆ ನಾಳೆ ಮಹತ್ವದ ಸಭೆ : ಸಿ.ಎಂ ಬಸವರಾಜ್ ಬೊಮ್ಮಾಯಿ