ಕ್ರೀಡೆ
ಕ್ರಿಕೆಟಿಗ ಜಸ್ಪ್ರೀತ್ ಬುಮ್ರಾ ಮದುವೆ ; ಶುಭ ಹಾರೈಕೆಯ ಅಮುಲ್ ವಿಶಿಷ್ಟ ಪೋಸ್ಟ್ ವೈರಲ್..!

ಸುದ್ದಿದಿನ,ನವದೆಹಲಿ: ಭಾರತ ಕ್ರಿಕೆಟ್ ತಂಡದ ವೇಗಿ ಜಸ್ಪ್ರೀತ್ ಬುಮ್ರಾ ಮತ್ತು ಕ್ರಿಕೆಟ್ ನಿರೂಪಕಿ ಸಂಜನಾ ಗಣೇಶನ್ ಜೋಡಿ ಸೋಮವಾರ ಗೋವಾದಲ್ಲಿ ವೈವಾಹಿಕ ಬಂಧನಕ್ಕೆ ಕಾಲಿಟ್ಟಿದ್ದರು. ಅವರಿಗೆ ಭಾರತದ ಸಿಹಿತಿಂಡಿ ಕಂಪನಿ ಅಮುಲ್ ವಿಶಿಷ್ಟ ಪೋಸ್ಟ್ ಒಂದನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಾಕುವ ಮೂಲಕ ಶುಭಾಶಯ ಕೋರಿತ್ತು. ಈ ಪೋಸ್ಟ್ ಈಗ ಸಖತ್ ವೈರಲ್ ಆಗಿದೆ.
ಬುಮ್ರಾ ಮತ್ತು ಸಂಜನಾ ಗಣೇಶನ್ ಮದುವೆ ಸಮಾರಂಭವು ಗೋವಾದಲ್ಲಿ ಸರಳವಾಗಿ ಎರಡೂ ಕುಟುಂಬದ ಆಪ್ತರ ಸಮ್ಮುಖದಲ್ಲಿ ನಡೆದಿತ್ತು. ಬೂಮ್ರಾ ಇಂದಿನಿಂದ ಹೊಸ ಜೀವನ ಆರಂಭವಾಗಿದೆ. ಇಂದು ಅತ್ಯಂತ ಸಂಭ್ರಮದ ದಿನವಾಗಿದೆ ಎಂದು ಬರೆದುಕೊಂಡು ಸಾಮಾಜಿಕ ಜಾಲತಾಣದಲ್ಲಿ ಮದುವೆ ಸಂಭ್ರಮ ಹಂಚಿಕೊಂಡಿದ್ದರು. ಇದನ್ನು ಗಮನಿಸಿದ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಬೂಮ್ರಾ ದಂಪತಿಗೆ ಶುಭಹಾರೈಕೆ ಮಾಡಿದ್ದರು.
ಅಮೂಲ್ ಕಂಪನಿ ಕೂಡ ತನ್ನ ಇನ್ಸ್ಟಾಗ್ರಾಂ ಖಾತೆಯಲ್ಲಿ ಬೂಮ್ರಾ ದಂಪತಿಗೆ ಶುಭಹಾರೈಸಿ ವಿಶೇಷ ಪೋಸ್ಟ್ ಹಾಕಿತ್ತು ಅದರಲ್ಲಿ ಅಮುಲ್ ಜಾಸ್ ಕೋ ಪ್ರೀತ್ ಮಿಲ್ ಗಾಯಿ ಅಂತ ಪೋಸ್ಟ್ ನ ಮೇಲ್ಬಾಗದಲ್ಲಿ ಬರೆದಿದ್ದು, ಬೂಮ್ರಾ ಪಕ್ಕದಲ್ಲಿ ಕುಳಿತಿರುವ ಸಂಜನಾ ಗಣೇಶನ್ ಒಂದು ಕೈಯಲ್ಲಿ ಸಿಹಿತಿಂಡಿಯನ್ನು ಹಿಡಿದುಕೊಂಡು ಇನ್ನೊಂದು ಕೈಯಲ್ಲಿ ಮೈಕ್ ಇಡಿದು ಬೂಮ್ರಾ ಅವರನ್ನು ಮಾತನಾಡಿಸುತ್ತಿದ್ದಾರೆ. ಬೂಮ್ರಾ ಒಂದು ಕೈನಲ್ಲಿ ಸಿಹಿತಿಂಡಿ ಹಿಡಿದುಕೊಂಡಿದ್ದರೆ ಇನ್ನೊಂದು ಕೈಯಲ್ಲಿ ಕ್ರಿಕೆಟ್ ಬಾಲ್ ಮೇಲಕ್ಕೆ ಎಸೆಯುತ್ತಿದ್ದಾರೆ. ನಂತರ ಕೆಳಭಾಗದಲ್ಲಿ ಬೌಲ್ ಯೂ ಒವರ್ ಎಂದು ಬರೆದುಕೊಂಡಿದೆ.
#Amul Topical: Indian speedster Bumrah weds Sanjana Ganesan! pic.twitter.com/C8mztNasAP
— Amul.coop (@Amul_Coop) March 15, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಐಪಿಎಲ್ ಸುದ್ದಿ

ಸುದ್ದಿದಿನ ಡೆಸ್ಕ್ : ಮುಂಬೈನ ಬ್ರೆಬೌರ್ನ್ ಕ್ರೀಡಾಂಗಣದಲ್ಲಿ ನಿನ್ನೆ ರಾತ್ರಿ ನಡೆದ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ೨೪ ರನ್ಗಳಿಂದ ಲಖನೌ ಸೂಪರ್ ಜೈಂಟ್ಸ್ ತಂಡದ ವಿರುದ್ಧ ಜಯ ಗಳಿಸಿತು.
ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ 20ಓವರುಗಳಲ್ಲಿ 6 ವಿಕೆಟ್ ನಷ್ಟಕ್ಕೆ 178ರನ್ ಗಳಿಸಿತು.
ಈ ಗುರಿ ಬೆನ್ನತ್ತಿದ ಲಖನೌ ಸೂಪರ್ ಜೈಂಟ್ಸ್ ತಂಡಕ್ಕೆ8ವಿಕೆಟ್ ನಷ್ಟಕ್ಕೆ 154 ರನ್ ಗಳಿಸಲಷ್ಟೇ ಸಾಧ್ಯವಾಯಿತು.
ವಾಂಖೆಡೆ ಕ್ರೀಡಾಂಗಣದಲ್ಲಿ ನಿನ್ನೆಯೇ ನಡೆದ ಮತ್ತೊಂದು ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡ 7 ವಿಕೆಟ್ಗಳಿಂದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆಲುವು ದಾಖಲಿಸಿತು. ಮೊದಲು ಬ್ಯಾಟ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ಕೇವಲ 133 ರನ್ ಗಳಿಸಿತು. ಉತ್ತರವಾಗಿ 134 ರನ್ ಗಳ ಗುರಿಯತ್ತ ಸಾಗಿದ ಗುಜರಾತ್ ಟೈಟಾನ್ಸ್ 19.1 ಓವರುಗಳಲ್ಲಿ 3ವಿಕೆಟ್ ನಷ್ಟಕ್ಕೆ 137 ರನ್ ಗಳಿಸಿ ವಿಜಯೋತ್ಸವ ಆಚರಿಸಿತು.
ಇಂದು ನವಿ ಮುಂಬೈನ ಡಿ.ವೈ. ಪಾಟೀಲ್ ಕ್ರೀಡಾಂಗಣದಲ್ಲಿ ರಾತ್ರಿ 7.30 ಕ್ಕೆ ಆರಂಭವಾಗಲಿರುವ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಬ್ಯಾಂಕಾಕ್ ಥಾಮಸ್ ಕಪ್ ಬ್ಯಾಡ್ಮಿಂಟನ್ ಟೂರ್ನಿ : ಇತಿಹಾಸ ನಿರ್ಮಿಸಿದ ಭಾರತ ತಂಡದ ಆಟಗಾರರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ

ಸುದ್ದಿದಿನ ಡೆಸ್ಕ್ : ಬ್ಯಾಂಕಾಕ್ನಲ್ಲಿ ನಡೆದ ಥಾಮಸ್ ಕಪ್ ಬ್ಯಾಡ್ಮಿಂಟನ್ ಟೂರ್ನಿ ಗೆದ್ದು, ಇತಿಹಾಸ ನಿರ್ಮಿಸಿದ ಭಾರತ ತಂಡದ ಆಟಗಾರರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ.
ತಂಡದ ಆಟಗಾರರೊಂದಿಗೆ ಈ ಐತಿಹಾಸಿಕ ಸಾಧನೆಯ ಕುರಿತು ಮಾತನಾಡಿರುವ ಪ್ರಧಾನಮಂತ್ರಿಯವರು ಎಲ್ಲರಿಗೂ ಅಭಿನಂದನೆ ಸಲ್ಲಿಸಿ ದೇಶೀಯ ಕ್ರೀಡೆಯಲ್ಲಿ ಇದೊಂದು ಆಕರ್ಷಣೀಯ ಗೆಲುವಾಗಿದೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.
ಪ್ರತಿಯೊಬ್ಬ ಆಟಗಾರ ಪ್ರತಿಷತ 100ರಷ್ಟು ಸಾಮರ್ಥ್ಯ ತೋರಿದ್ದು, ತಂಡದ ಸ್ಫೂರ್ತಿಗೆ ನಿದರ್ಶನವಾಗಿದೆ. ಜೊತೆಗೆ ತರಬೇತುದಾರರು ಸಹ ಈ ಗೆಲುವಿಗೆ ಅರ್ಹರು ಎಂದು ಪ್ರಧಾನಿಯವರು ಈ ಸಂದರ್ಭದಲ್ಲಿ ಹೇಳಿದರು.
ಎಲ್ಲಾ ಆಟಗಾರರು ಸ್ವದೇಶದಿಂದ ಹಿಂತಿರುಗಿದ ಬಳಿಕ ತಮ್ಮ ಕೋಚ್ಗಳೊಂದಿಗೆ ನಿವಾಸಕ್ಕೆ ಆಗಮಸುವಂತೆಯೂ ಆಹ್ವಾನ ನೀಡಿರುವ ನರೇಂದ್ರ ಮೋದಿಯವರು ಅನೇಕ ಆಟಗಾರರ ಅನುಭವವನ್ನು ಕೇಳಿ ತಿಳಿದುಕೊಂಡರು.
ಥಾಮಸ್ ಕಪ್ ಬ್ಯಾಡ್ಮಿಂಟನ್ ಟೂರ್ನಿಯ ಫೈನಲ್ನಲ್ಲಿ ಭಾರತದ ಪುರುಷರ ತಂಡ 14 ಬಾರಿಯ ಚಾಂಪಿಯನ್ ಇಂಡೋನೇಷಿಯಾ ತಂಡದ ವಿರುದ್ಧ 3-0 ಅಂಕಗಳಿಂದ ಜಯಗಳಿಸಿ ಈ ಐತಿಹಾಸಿಕ ಸಾಧನೆ ಮಾಡಿತ್ತು.
A special interaction with our badminton 🏸 champions, who have won the Thomas Cup and made 135 crore Indians proud. pic.twitter.com/KdRYVscDAK
— Narendra Modi (@narendramodi) May 15, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ನಾಳೆಯಿಂದ ಬೆಂಗಳೂರಿನಲ್ಲಿ ಮಿನಿ ಓಲಂಪಿಕ್ ಕ್ರೀಡಾಕೂಟ

ಸುದ್ದಿದಿನ ಡೆಸ್ಕ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ, ಕರ್ನಾಟಕ ಓಲಂಪಿಕ್ಸ್ ಸಂಸ್ಥೆ ಜಂಟಿಯಾಗಿ ಆಯೋಜಿಸಿರುವ ಮಿನಿ ಓಲಂಪಿಕ್ ಕ್ರೀಡಾಕೂಟ – 2022 ನಾಳೆಯಿಂದ ಬೆಂಗಳೂರಿನ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ.
ರಾಜ್ಯಪಾಲ ಥಾವರ್ ಚೆಂದ್ ಗೆಲ್ಹೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಂಟಿಯಾಗಿ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಈ ಮಿನಿ ಓಲಂಪಿಕ್ ಕ್ರೀಡಾಕೂಟದಲ್ಲಿ 3 ಸಾವಿರ ಅಥ್ಲೇಟ್ಗಳು ಭಾಗವಹಿಸಲಿದ್ದಾರೆ. ಕ್ರೀಡಾಕೂಟದಲ್ಲಿ 21 ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಸಿನಿ ಸುದ್ದಿ7 days ago
ವಿದ್ಯುತ್ ಶಾಕ್ ನಿಂದ ಜೂ.ರವಿಚಂದ್ರನ್ ಖ್ಯಾತಿಯ ಲಕ್ಷ್ಮಿನಾರಾಯಣ್ ಸಾವು
-
ದಿನದ ಸುದ್ದಿ7 days ago
ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ : ಆಯೋಗದಿಂದ ವೇಳಾಪಟ್ಟಿ ಪ್ರಕಟ
-
ನಿತ್ಯ ಭವಿಷ್ಯ7 days ago
ಈ ರಾಶಿಯ ನವದಂಪತಿಗಳಿಗೆ ಘರ್ಷಣೆ ಸಾಧ್ಯತೆ! ಈ ರಾಶಿಯ ಉದ್ಯೋಗಿಗಳು ಎದುರಾಳಿಯ ಪಿತೂರಿಗಳು ಎದುರಿಸಬೇಕಾಗುವುದು! ಬುಧವಾರ ರಾಶಿ ಭವಿಷ್ಯ-ಮೇ-11,2022
-
ದಿನದ ಸುದ್ದಿ6 days ago
ಸಮೀಕ್ಷೆ ಆಧಾರದಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ರೂಪಿಸಿ ; ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಅವಕಾಶ ಕೊಡಿ : ಸಿಎಂ ಬೊಮ್ಮಾಯಿ ಗೆ ಸಿದ್ದರಾಮಯ್ಯ ಆಗ್ರಹ
-
ದಿನದ ಸುದ್ದಿ6 days ago
ದಾವಣಗೆರೆ | ಮತದಾರರ ಪಟ್ಟಿ ಪರಿಷ್ಕರಣೆಗೆ ಮನೆ-ಮನೆ ಭೇಟಿ
-
ದಿನದ ಸುದ್ದಿ6 days ago
ಶ್ರೀಲಂಕಾ ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸ ಭಾರತಕ್ಕೆ ಪಲಾಯನ ಕುರಿತ ವರದಿ ನಿರಾಧಾರ : ಕೊಲಂಬೊದ ಭಾರತೀಯ ರಾಯಭಾರಿ ಕಚೇರಿ ಸ್ಪಷ್ಟನೆ
-
ದಿನದ ಸುದ್ದಿ6 days ago
15 ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ; ಆದೇಶ ಪಾಲಿಸಲು ಕ್ರಮ : ಸಿಎಂ ಬೊಮ್ಮಾಯಿ
-
ದಿನದ ಸುದ್ದಿ7 days ago
ಅತ್ಯುನ್ನತ ಸಾಧನೆ ಮೆರೆದ ಸೇನಾಪಡೆ ಅಧಿಕಾರಿಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ಶೌರ್ಯ ಪದಕ ಪ್ರದಾನ