ಕ್ರೀಡೆ
ಭಾರತೀಯ ಒಲಂಪಿಕ್ ಸಂಸ್ಥೆಯ ಮೊದಲ ಮಹಿಳಾ ಅಧ್ಯಕ್ಷೆ ಪಿ.ಟಿ. ಉಷಾ ಅವರನ್ನು ಅಭಿನಂದಿಸಿದ ರಾಜ್ಯಸಭಾ ಸಭಾಪತಿ

ಸುದ್ದಿದಿನ ಡೆಸ್ಕ್ : ಭಾರತೀಯ ಒಲಂಪಿಕ್ ಸಂಸ್ಥೆಯ ಮೊದಲ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಾಜ್ಯಸಭಾ ಸದಸ್ಯೆ ಪಿ.ಟಿ. ಉಷಾ ಅವರನ್ನು ರಾಜ್ಯಸಭಾ ಸಭಾಪತಿ ಜಗದೀಪ್ ಧನಕರ್ ಅಭಿನಂದಿಸಿದ್ದಾರೆ.
ಸದನ ಇಂದು ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿಯವರು ಮಾತನಾಡಿ, ದೇಶದಲ್ಲಿ ಮನೆಮಾತಾಗಿರುವ ಪಿ.ಟಿ. ಉಷಾ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಗಳಿಸಿದ್ದಾರೆ. ಅತ್ಯುನ್ನತ ಅರ್ಜುನ ಮತ್ತು ಪದ್ಮಶ್ರೀ ಪುರಸ್ಕೃತರಾದ ಅವರು ಸದ್ಯ ಕ್ರೀಡೆಗಳನ್ನು ಮತ್ತು ಕ್ರೀಡಾ ಶಿಕ್ಷಣವನ್ನು ಉತ್ತೇಜಿಸುತ್ತಿದ್ದಾರೆ. ಕ್ರೀಡಾ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರ ಎಂದು ಬಣ್ಣಿಸಿದರು.
Thank you Hon, Chairman Sir and all my fellow Rajya Sabha members for the kind words, and the good wishes. I look forward to the responsibilities at hand with utmost sincerity! 🙏🏽 https://t.co/6qb1NcaCgD
— P.T. USHA (@PTUshaOfficial) December 12, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ದಾವಣಗೆರೆ | ಮಹಿಳಾ ಸೇವಾ ಸಮಾಜ ಪ್ರೌಢ ಶಾಲೆ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಜಿಲ್ಲಾ ಮತ್ತು ರಾಜ್ಯಮಟ್ಟಕ್ಕೆ ಆಯ್ಕೆ

ಸುದ್ದಿದಿನ, ದಾವಣಗೆರೆ : 2022-23 ನೇ ಸಾಲಿನ ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಮಹಿಳಾ ಸೇವಾ ಸಮಾಜ ಪ್ರೌಢಶಾಲೆಯ ವಿದ್ಯಾರ್ಥಿ ಮಣಿಕಂಠ ಆರ್. ಅವರು 100 ಮೀ ಫ್ರೀ ಸ್ಟೈಲ್ 200ಮೀ ಫ್ರೀ ಸ್ಟೈಲ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿಗ ಆಡಳಿತ ಮಂಡಳಿ ಹಾಗೂ ಶಾಲಾ ಸಿಬ್ಬಂದಿವರ್ಗ ಅಭಿನಂದನ ಸಲ್ಲಿಸಿದ್ದಾರೆ.
ಜಿಲ್ಲಾಮಟ್ಟಕ್ಕೆ ಆಯ್ಕೆ
2022-23 ನೇ ಸಾಲಿನ ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ತಾಲ್ಲೂಕುಮಟ್ಟದ ಕ್ರೀಡಾಕೂಟಗಳಲ್ಲಿ ಮಹಿಳಾ ಸೇವಾ ಸಮಾಜ ಪ್ರೌಢಶಾಲೆಯ ವಿದ್ಯಾರ್ಥಿನಿ ಪೂರ್ಣಿಮ ಎಂ ಗುಂಡು ಎಸೆತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಕುಮಾರಿ ಬಂಗಾರಿ ಅಂಜಲಿ 3 ಕಿ.ಮೀ ನಡಿಗೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಈ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ಹಾಗೂ ಶಾಲಾ ಸಿಬ್ಬಂದಿವರ್ಗ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್ ಶಿಪ್ ; ಕರ್ನಾಟಕ ರಾಜ್ಯ ತಂಡಕ್ಕೆ ದಾವಣಗೆರೆ ಜಿಲ್ಲೆಯಿಂದ ಎನ್. ಜಿತೇಂದ್ರ ತೋಳಹುಣಸೆ ಆಯ್ಕೆ

ಸುದ್ದಿದಿನ,ದಾವಣಗೆರೆ : ಇದೇ ನವೆಂಬರ್ 17 ರಿಂದ 20 ರ ವರೆಗೆ ನಡೆಯಲಿರುವ ಉತ್ತರಕಾಂಡ ರಾಜ್ಯದ ಹರಿದ್ವಾರದಲ್ಲಿ 48ನೇ ಬಾಲಕರ ವಿಭಾಗದ ಜೂನಿಯರ್ ನ್ಯಾಷನಲ್ಸ್ ಕಬಡ್ಡಿ ಚಾಂಪಿಯನ್ ಶಿಪ್ಗೆ ಕರ್ನಾಟಕ ರಾಜ್ಯ ತಂಡಕ್ಕೆ ದಾವಣಗೆರೆ ಜಿಲ್ಲೆಯಿಂದ ಎನ್. ಜಿತೇಂದ್ರ ತೋಳಹುಣಸೆ ಇವರು ಆಯ್ಕೆಯಾಗಿರುತ್ತಾರೆ.
ಇವರಿಗೆ ದಾವಣಗೆರೆ ಜಿಲ್ಲಾ ಅಮೆಚೂರ್ ಕಬಡ್ಡಿ ಸಂಸ್ಥೆಯ ಅಧ್ಯಕ್ಷರು ಹಾಗೂ ರಾಜ್ಯ ಅಮೆಚೂರ್ ಕಬಡ್ಡಿ ಸಂಸ್ಥೆಯ ಜಂಟಿ ಕಾರ್ಯದರ್ಶಿ ಯು ಆದ ಎಂ ನಾಗರಾಜ್ ಮತ್ತು ಚೇರ್ಮನ್ ಬಿ.ಜಿ .ಅಜಯ್ ಕುಮಾರ್ .ಪ್ರಧಾನ ಕಾರ್ಯದರ್ಶಿ ಎಂ. ನಾರಾಯಣಸ್ವಾಮಿ, ಕಾರ್ಯಾಧ್ಯಕ್ಷರು ಎಚ್. ನಿಜಗುಣ, ಗೌರವಾಧ್ಯಕ್ಷರು ಹಾಗೂ ಸೈಯದ್ ನಿಸಾರ್ ತರಬೇತುದಾರರಾದ ಬೇತುರೊಡಿ ನ ಡಿ .ರಾಜು ಹಾಗೂ ಸಿ.ಎಚ್ .ಪುಟ್ಟರಾಜ. ಕಬಡ್ಡಿಯ ಕ್ರೀಡಾಪಟುಗಳು, ಅಭಿಮಾನಿಗಳು ಶುಭ ಹಾರೈಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಸದೃಢ ರಾಷ್ಟ್ರ ನಿರ್ಮಿಸಲು ಪ್ರೇರಣೆಯಾಗಲಿದೆ

- ಪ್ರತಿಭಾ ವಿ ಪೂಜಾರ,ಪ್ರಥಮ ವರ್ಷದ ಸ್ನಾತಕೋತ್ತರ ಪದವಿ, ವಿದ್ಯಾರ್ಥಿನಿ,ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,ಬೆಂಗಳೂರು ವಿಶ್ವವಿದ್ಯಾಲಯ
ಕ್ರೀಡೆ ಎಂಬುದು ಕೇವಲ ವ್ಯಕ್ತಿಯ ಆರೋಗ್ಯ ಅಥವಾ ಮನರಂಜನೆಯ ಭಾಗ ಮಾತ್ರವಲ್ಲ. ಇದೊಂದು ಊರು, ನಾಡು, ದೇಶದ ಸಂಸ್ಕೃತಿ ಪರಂಪರೆಯನ್ನು ಜಗತ್ತಿಗೆ ತೋರಿಸುವಂತದ್ದು, ಅಂತರ್ ಮಟ್ಟ ಹಾಗೂ ಜಿಲ್ಲಾ ಮಟ್ಟ, ರಾಜ್ಯ ಮತ್ತು ರಾಷ್ಟ್ರ ಮಟ್ಟಗಳಲ್ಲಿ ಕ್ರೀಡಾಕೂಟವನ್ನು ಏರ್ಪಡಿಸಿ ಗೆದ್ದ ತಂಡಗಳನ್ನು ಗೌರವಿಸಲಾಗುತ್ತದೆ.
ಒಂದು ಭಾಗದ ಜನ ಇನ್ನೊಂದು ಭಾಗದ ಜನರೊಂದಿಗೆ ಬೆರೆಯುವ ಪರಸ್ಪರ ಸ್ಪರ್ಧಾತ್ಮಕ ಭಾವನೆಯೊಂದಿಗೆ ಬರೆಯುವ, ಪರಸ್ಪರ ಸ್ಪರ್ಧಾತ್ಮಕ ಭಾವನೆಯೊಂದಿಗೆ ತಮ್ಮ ಶ್ರೇಷ್ಠತೆ, ಗಟ್ಟಿತನವನ್ನು ತೋರಿಸುವ ಪ್ರಕ್ರಿಯೆಯು ಕೂಡ ನಡೆಯುತ್ತದೆ. ಹಾಗೆಯೇ ಒಲಿಂಪಿಕ್ಸ್, ಕಾಮನ್ ವೆಲ್ತ್, ಏಷ್ಯದ ಕ್ರೀಡಾಕೂಟಗಳಲ್ಲಿ ಭಾರತೀಯರು ಗೆದ್ದು, ಸಾಧನ ಗೈದು ತಾಕತ್ತಿನ ಪರಾಕಾಷ್ಟ ಮರೆದಿದ್ದಾರೆ.
ಅದೇ ರೀತಿಯಲ್ಲಿ ಹೇಳುವುದಾದರೆ ಬಾಕ್ಸಿಂಗ್, ಕ್ರಿಕೆಟ್, ಕಬ್ಬಡ್ಡಿ, ಕುಸ್ತಿ, ವೇಟ್ ಲಿಫ್ಟಿಂಗ್, ಶಾರ್ಪ್ ಶೂಟಿಂಗ್, ವ್ರೆಸ್ಲಿಂಗ್, ಹಾಕಿ, ಬ್ಯಾಡ್ಮಿಂಟನ್, ಟೆನ್ನಿಸ್ ಹೀಗೆ ಹಲವಾರು ಮುಂತಾದ ಆಟಗಳಲ್ಲಿ ದೇಶವನ್ನು ಪ್ರತಿನಿಧಿಸಿ ಗೆದ್ದು ಬೀಗಿದ ಆಟಗಾರರ ದೊಡ್ಡ ಪಟ್ಟಿಯೇ ಇದ್ದು, ಇವರೆಲ್ಲಾ ವಿಶ್ವ ಮಟ್ಟದಲ್ಲಿ ದೇಶಕ್ಕೆ ಕೀರ್ತಿ ತಂದಿದ್ದಾರೆ.
ಇದೆಲ್ಲಾ ಸಾಧನೆ ಸಾಧ್ಯವಾಗೋದು ದಿನ ನಿತ್ಯದ ಪ್ರಯತ್ನ, ಕಠಿಣ ಪರಿಶ್ರಮ, ಛಲ ಹಾಗೂ ದೃಢ ನಿರ್ಧಾರದಿಂದ ಆದರೆ, ಯಾರು ಕ್ರೀಡೆಯನ್ನೇ ವೃತ್ತಿ ಯನ್ನಾಗಿ ಸ್ವೀಕರಿಸುತ್ತಾರೋ ಅದೇ ಅವರ ಜೀವನವಾಗುತ್ತದೆ. ಯಾರು ಕ್ರೀಡೆಯನ್ನು ಪ್ರವೃತ್ತಿಯನ್ನಾಗಿ ಆಯ್ಕೆ ಮಾಡಿಕೊಳ್ಳುತ್ತಾರೋ. ಅವರಿಗೆ ಕ್ರೀಡೆ ಹವ್ಯಾಸವಾಗುತ್ತದೆ.
ಜೀವನವನ್ನೇ ಕ್ರೀಡೆಗಾಗಿ ಮಿಸಲಿಡುವುದಕ್ಕೂ, ಒಂದೆರಡು ಗಂಟೆ ಕ್ರೀಡೆಗಾಗಿ ಮೀಸಲಿಡುವುದಕ್ಕೂ ತುಂಬಾ ವ್ಯತ್ಯಾಸ ವಿದೆ. ಹಾಗಾಗಿ ಕ್ರೀಡಾ ಜೀವನದಲ್ಲಿ ಯಾವುದೇ ಭಾಗವಾದರೂ, ಅದರಿಂದ ಲಾಭವೆ ಹೊರತು ನೋವಂತು ಖಂಡಿತ ಇಲ್ಲ.
ಕ್ರೀಡೆ ಮತ್ತು ಆರೋಗ್ಯ: ಹಲವು ರೋಗಗಳಿಗೆ ಮದ್ದು ಯೋಗ ಅಂತಾ ಹೇಳತಾರೆ.ಹಾಗೆಯೇ ಹಲವು ಕಾಯಿಲೆಗಳಿಗೆ ಆಟವೇ ರಾಮಬಾಣ. ನಾವು ಆಡುವ ಪ್ರತಿಯೊಂದು ಆಟವೂ ನಮ್ಮ ದೈನಂದಿನ ಹಾಗೂ ದೈಹಿಕ, ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಕ್ರೀಡೆಯು ದೇಹಕ್ಕೆ ನಿಯಮಿತ ವ್ಯಾಯಾಮ ಆಗುತ್ತದೆ. ಹೆಚ್ಚಿನ ತೂಕವನ್ನು ತೊಡೆದು ಹಾಕುತ್ತದೆ. ಮನಸ್ಸು ಮತ್ತು ದೇಹವನ್ನು ಚೇತನ್ಯಮಯವಾಗಿಸುತ್ತದೆ. ಮೂಳೆ, ಸ್ನಾಯುಗಳನ್ನು ಬಲಪಡಿಸುತ್ತದೆ.
ಜನರಲ್ಲಿ ಶಿಸ್ತು, ಒಗ್ಗಟ್ಟು, ಸಂಘಟನಾತ್ಮಕ ಶಕ್ತಿಯನ್ನು ಬೆಳೆಸಲಾಗುತ್ತದೆ. ನಿದ್ರಾಹೀನತೆ, ಒತ್ತಡವನ್ನು ತೆಗೆದು ಹಾಕುತ್ತದೆ. ಆರೋಗ್ಯದ ಸಮತೋಲನ ಕಾಯ್ದುಕೊಳ್ಳಲು ಸಹಕಾರಿಯಾಗಿದೆ.
ಮನುಷ್ಯನ ಬೆಳವಣಿಗೆ, ಆರೋಗ್ಯಕರ ಜೀವನ ಶೈಲಿ ರೂಢಿಯಾಗಬೇಕಾದರೆ ಬಾಲ್ಯದಿಂದಲೇ ಉತ್ತಮ ಚಟುವಟಿಕೆಗಳನ್ನು ರೂಡಿ ಮಾಡಿಸಬೇಕಾಗುತ್ತದೆ.
ಒಟ್ಟಿನಲ್ಲಿ ಕ್ರೀಡೆಗಳು ಪರಂಪರೆಯ ಜತೆಗೆ ಸಾಗಿ ಬಂದಿದ್ದು, ಜಗತ್ತಿನ ತುಂಬಾ ವಿಸ್ತಾರಗೊಂಡಿದೆ. ಆಯಾ ದೇಶಗಳು ಒಂದೊಂದು ಕ್ರೀಡೆಯನ್ನು ಹೊಂದಿದ್ದು, ಜಿಲ್ಲಾ, ತಾಲೂಕು, ರಾಜ್ಯ ಹಾಗೂ ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸುವುದರಿಂದ ಅನ್ಯ ರಾಜ್ಯ ರಾಷ್ಟ್ರದ ಜನರೊಡನೆ ಸ್ನೇಹ ಉಂಟಾಗುತ್ತದೆ. ಹಾಗೂ ಸಂಪರ್ಕ ಉಂಟಾಗುತ್ತದೆ. ಬದುಕಿನಲ್ಲಿ ಸೋಲು ಗೆಲುವು ನಮ್ಮ ದೃಷ್ಟಿಯಲ್ಲಿ ಸ್ವೀಕರಿಸಲು ಬೆಳವಣಿಗೆಯಾಗುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ನಿತ್ಯ ಭವಿಷ್ಯ6 days ago
ಸೋಮವಾರ- ರಾಶಿ ಭವಿಷ್ಯ ಜನವರಿ-23,2023 : ಈ ರಾಶಿಯವರಿಗೆ ಸಾಡೇ ಸಾತಿ ಶನಿಯಿಂದ ಮುಕ್ತಿ,ಎಲ್ಲಾ ನಿಮ್ಮ ಕೆಲಸಗಳು ನೆರವೇರಲಿ
-
ದಿನದ ಸುದ್ದಿ4 days ago
ಸಂಸತ್ತಿನ ಬಜೆಟ್ ಅಧಿವೇಶನದ ಹಿನ್ನೆಲೆ ; ಇದೇ 30ರಂದು ಸರ್ವಪಕ್ಷಗಳ ಸಭೆ
-
ದಿನದ ಸುದ್ದಿ13 hours ago
ಕರ್ನಾಟಕದಲ್ಲಿ ಈ ವರ್ಷ ಜನಪರ ರಾಜ್ಯ ಬಜೆಟ್ ಮಂಡನೆ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
-
ದಿನದ ಸುದ್ದಿ12 hours ago
ನಟ ಮನದೀಪ್ ರಾಯ್ ನಿಧನ