ದಿನದ ಸುದ್ದಿ
24.61 ಕೋಟಿ ವೆಚ್ಚದ ಸಿ.ಆರ್.ಸಿ ಕೇಂದ್ರಕ್ಕೆ ಶಂಕುಸ್ಥಾಪನೆ ದಿವ್ಯಾಂಗರ ಏಳಿಗೆಗೆ ಶ್ರಮಿಸೋಣ : ಎ. ನಾರಾಯಣ ಸ್ವಾಮಿ
ಸುದ್ದಿದಿನ,ದಾವಣಗೆರೆ : ಅಂಗವಿಕಲರ ಹಾಗೂ ದಿವ್ಯಾಂಗ ವ್ಯಕ್ತಿಗಳ ಸಬಲೀಕರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸಿವೆ ಆದರೆ ಅನೇಕರಿಗೆ ಅವುಗಳ ಬಗ್ಗೆ ಮಾಹಿತಿ ಇಲ್ಲ ಈ ಬಗ್ಗೆ ಹೆಚ್ಚು ಪ್ರಚಾರ ನೀಡುವ ಮೂಲಕ ವಿಕಲಚೇತನ ಹಾಗೂ ದಿವ್ಯಾಂಗರ ಏಳಿಗೆಗೆ ಶ್ರಮಿಸೋಣ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರಾದ ಎ.ನಾರಾಯಣಸ್ವಾಮಿ ಹೇಳಿದರು.
ಶನಿವಾರ ದಾವಣಗೆರೆ ತಾಲ್ಲೂಕಿನ ವಡ್ಡಿನಹಳ್ಳಿ ಬಳಿ ಬೌದ್ಧಿಕ ದಿವ್ಯಾಂಗ ಹೊಂದಿರುವ ವ್ಯಕ್ತಿಗಳ ಸಬಲೀಕರಣಕ್ಕಾಗಿ ನೂತನವಾಗಿ ನಿರ್ಮಿಸಲಾಗುತ್ತಿರುವ ಸಂಯುಕ್ತ ಪ್ರಾದೇಶಿಕ ಕೇಂದ್ರದ ಕಟ್ಟಡದ (ಸಿಆರ್ಸಿ) ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಯಾವ ಮನೆಯಲ್ಲಿ ವಿಕಲಚೇತನರು ಹಾಗೂ ದಿವ್ಯಾಂಗರು ಜನಿಸಿರುತ್ತಾರೋ ಅಂತಹ ಮನೆಗಳಲ್ಲಿ ಪೋಷಕರು ಆ ಮಕ್ಕಳ ಪೋಷಣೆಗೆ ಜೀವನವನ್ನು ಮೀಸಲಿಟ್ಟಿರುತ್ತಾರೆ. ಚಿಕ್ಕ ಪುಟ್ಟ ತೊಂದರೆಗಳಿಗೆ ಆಸ್ಪತ್ರೆಗೆ ಹೋಗಲಾಗುವುದಿಲ್ಲ ಹಾಗಾಗಿ ದಿವ್ಯಾಂಗರಿಗೆ ಪೋಷಕರೇ ವೈದ್ಯರ ರೀತಿ ಉತ್ತಮ ಚಿಕಿತ್ಸೆ ನೀಡುವ ಸಲುವಾಗಿ ಅವರುಗಳ ಪೋಷಕರಿಗೆ ಅಗತ್ಯ ತರಬೇತಿ ನೀಡಲಾಗುತ್ತದೆ.
ಕೆಲವೊಮ್ಮೆ ಇಂತಹ ಮಕ್ಕಳನ್ನು ಪೋಷಕರು ಸಂಭಾಳಿಸಲಾಗದೆ ಅವರನ್ನು ಕೂಡಿ ಹಾಕುವಂತಹ ಪ್ರಕರಣಗಳು ಕಂಡುಬರುತ್ತವೆ, ಆದರೆ ಆ ರೀತಿ ಮಕ್ಕಳನ್ನು ಕೂಡಿ ಹಾಕುವುದು ತಪ್ಪಾಗುತ್ತದೆ, ಸಂಯುಕ್ತ ಪ್ರಾದೇಶಿಕ ಕೇಂದ್ರದ ಮೂಲಕ ಪೋಷಕರಿಗೂ ತರಬೇತಿ ನೀಡಿ ಪೋಷಕರನ್ನು ಒಂದು ರೀತಿ ತರಬೇತಿದಾರರನ್ನಾಗಿ ಹಾಗೂ ವೈದ್ಯರನ್ನಾಗಿಸುವ ಮೂಲಕ ದಿವ್ಯಾಂಗರಿಗೆ ನೆರವು ನೀಡಲಾಗುತ್ತದೆ ಎಂದರು.
ಗೋವಾ, ಕರ್ನಾಟಕ ರಾಜ್ಯಗಳನ್ನೊಳಗೊಂಡತೆ ಈ ಕೇಂದ್ರ ಸ್ಥಾಪಿಸಲಾಗುತ್ತಿದ್ದು ಎರಡೂ ರಾಜ್ಯಗಳ ದಿವ್ಯಾಂಗರು ಈ ಕೇಂದ್ರದಲ್ಲಿ ಚಿಕಿತ್ಸೆ ಹಾಗೂ ತರಬೇತಿ ಪಡೆಯುವುದರಿಂದ ದೂರದಿಂದ ಬಂದು ಉಳಿದುಕೊಳ್ಳುವವರಿಗೆ ಎಲ್ಲಾ ರೀತಿಯ ಊಟ ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಪ್ರತಿ ಜಿಲ್ಲಾ ಕೇಂದ್ರಗಳಗಲ್ಲಿ ಒಂದೊಂದು ಪ್ರಾದೇಶಿಕ ಸಂಯುಕ್ತ ಕೇಂದ್ರ ಸ್ಥಾಪಿಸುವ ಅವಶ್ಯಕತೆ ಇದೆ.
ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ಜನಪ್ರತಿನಿಧಿಗಳು ಬದ್ಧವಾಗಿರಬೇಕು. ಶೀಘ್ರದಲ್ಲೇ ದಾವಣಗೆರೆ-ತುಮಕೂರು ನೇರ ರೈಲು ಮಾರ್ಗ ಯೋಜನೆಗೆ ಶಂಕುಸ್ಥಾಪನೆ ಮಾಡಲಾಗುವುದು, ಅದರಿಂದ ಸಮೀಪದಲ್ಲಿ ರೈಲು ನಿಲುಗಡೆ ಕೇಂದ್ರ ಆದರೆ ಈ ಕೇಂದ್ರಕ್ಕೆ ಮಕ್ಕಳನ್ನು ಕರೆತರುವವರಿಗೆ ಅನುಕೂಲವಾಗಲಿದೆ ಎಂದರು.
ಸಂಸದ ಡಾ.ಜಿ.ಎಂ ಸಿದ್ದೇಶ್ವರ್ ಮಾತನಾಡಿ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಪರಿಕಲ್ಪನೆಯ ಆಧಾರದ ಮೇಲೆ ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸುವುದು ಸರ್ಕಾರದ ಮುಖ್ಯ ಧ್ಯೇಯವಾಗಿದೆ. ಸರ್ಕಾರ ಇಂತಹವರನ್ನು ಮುಖ್ಯವಾಹಿನಿಗೆ ತರಲು ಹಲವಾರು ಯೋಜನೆಗಳನ್ನು ರೂಪಿಸಿದೆ ಅಂತಹ ಯೋಜನೆಗಳ ಸೌಲಭ್ಯ ಇವರಿಗೆ ಸಿಗುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕಾಗಿದೆ.
ದಿವ್ಯಾಂಗ ಮಕ್ಕಳು ದೇವರ ಮಕ್ಕಳು ಇದ್ದಂತೆ ಆದ್ದರಿಂದ ಅವರಿಗೆ ವಿವಿಧ ಸೌಲಭ್ಯ ಹಾಗೂ ಪೋಷಕರಿಗೆ ತರಬೇತಿ ನೀಡಿ ಅವರನ್ನು ಸಬಲೀಕರಣ ಮಾಡುವ ಉದ್ದೇಶದಿಂದ ಸಿಆರ್ಸಿ ಕೇಂದ್ರ ಸ್ಥಾಪಿಸಲಾಗುತ್ತಿದೆ. ವಿಕಲಚೇತನ ವ್ಯಕ್ತಿಗಳ ಕಲ್ಯಾಣಕ್ಕಾಗಿ ಸರ್ಕಾರಗಳು ಹಲವಾರು ಯೋಜನೆಗಳನ್ನು ರೂಪಿಸಿವೆ.
ತರಬೇತಿ ಕೇಂದ್ರದ ಮೂಲಕ ವಿಕಲಚೇತನರಿಗೆ ಅನೇಕ ರೀತಿಯ ಕೌಶಲ್ಯ ತರಬೇತಿಗಳನ್ನು ನೀಡಲಾಗುವುದು, 24.61 ಕೋಟಿ ರೂ ವೆಚ್ಚದಲ್ಲಿ 7 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣವಾಗುತ್ತಿರುವ ಸಿಆರ್ಸಿ ಕೇಂದ್ರದ ಸದುಪಯೋಗ ಅಗತ್ಯವಿರುವ ಎಲ್ಲರಿಗೂ ಸಿಗಲಿ, 2017 ರಲ್ಲಿ ಮಂಜೂರಾದ ಕೇಂದ್ರವು ಕ್ಲಿನಿಕಲ್ ಸೇವೆಗಳನ್ನು ಒದಗಿಸುತ್ತಿತ್ತು ಇನ್ನು ಮುಂದೆ ತರಬೇತಿ, ಕೌಶಲಾಭಿವೃದ್ದಿಯಂತಹ ಚಟುವಟಿಕೆಗಳಿಗೂ ನೆರವಾಗಲಿದೆ ಹಾಗೂ ದಿವ್ಯಾಂಗ ವ್ಯಕ್ತಿಗಳ ಸೇವೆ ಮಾಡುವ ಮೂಲಕ ದೇಶಕ್ಕೆ ಮಾದರಿ ಕೇಂದ್ರವನ್ನಾಗಿ ಮಾಡಲು ಶ್ರಮಿಸೋಣ ಎಂದರು.
ಕಾರ್ಯಕ್ರಮದಲ್ಲಿ 492 ಅರ್ಹ ಫಲಾನುಭವಿಗಳಿಗೆ 41 ಲಕ್ಷ ವೆಚ್ಚದ ವಿವಿಧ ಭೋಧನ ಕಲಿಕಾ ಸಾಮಗ್ರಿಗಳನ್ನು ಹಾಗೂ ಕಿಟ್ ಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮಾಯಕೊಂಡ ಶಾಸಕ ಪ್ರೊ.ಲಿಂಗಣ್ಣ, ದಾವಣಗೆರೆ ಉತ್ತರ ಕ್ಷೇತ್ರ ಶಾಸಕ ಎಸ್.ಎ.ರವೀಂದ್ರನಾಥ್, ಸಿ.ಆರ್.ಸಿ ಕೇಂದ್ರದ ಜಂಟಿ ಕಾರ್ಯದರ್ಶಿ ರಾಜೀವ್ ಶರ್ಮಾ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯತ್ ಸಿಇಓ ಡಾ.ಎ.ಚನ್ನಪ್ಪ, ಸಿಆರ್ಸಿ ಕೇಂದ್ರದ ನಿರ್ದೇಶಕ ಡಾ ಉಮಾಶಂಕರ್ ಮೊಹಂತಿ, ಗ್ರಾಮ ಪಂಚಾಯತ್ ಅಧ್ಯಕ್ಷ ಬಸವರಾಜ್, ಗ್ರಾ.ಪಂ ಸದಸ್ಯರುಗಳು ಹಾಗೂ ಅಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದ್ದರು.
ಸಿಆರ್ಸಿ ಕೇಂದ್ರದಲ್ಲಿ ದೊರೆಯುವ ಸೌಲಭ್ಯ
ದಾವಣಗೆರೆಯ ಸಿಆರ್ಸಿ ಕೇಂದ್ರದಲ್ಲಿ ಆರಂಭಿಕ ಗುರುತಿಸುವಿಕೆ ಮತ್ತು ಮಧ್ಯಸ್ಥಿಕೆ, ಔದ್ಯೋಗಿಕ ಚಿಕಿತ್ಸೆ, ಭೌತಿಕ ಚಿಕಿತ್ಸೆ, ದೈಹಿಕ ವೈದ್ಯಕೀಯ ಚಿಕಿತ್ಸೆ ಮತ್ತು ಪುನರ್ವಸತಿ, ಮಾನಸಿಕ ಮಧ್ಯಸ್ಥಿಕೆ, ಪ್ರಾಸ್ಥೆಟಿಕ್ಸ್ ಮತ್ತು ಆರ್ಥೋಟಿಕ್ಸ್, ಮಾತನಾಡುವ ಭಾಷೆ ಮತ್ತು ಶ್ರವಣ, ವಿಶೇಷ ಶಿಕ್ಷಣ, ಕೌಶಲ್ಯ ತರಬೇತಿ, ವೃತ್ತಿಪರ ತರಬೇತಿ, ಸಹಾಯಕ ಸಾಧನಗಳ ವಿತರಣೆ, ಬೋಧನೆ ಕಲಿಕೆ ಮತ್ತು ಸಂವಹನ ಸಾಮಗ್ರಿಗಳು, ಸಮಾಜ ಕಾರ್ಯ, ಉದ್ಯೋಗ, ಔಟ್ರೀಚ್ ಸೇವೆಗಳು, ಮಾನವ ಸಂಪನ್ಮೂಲ ಅಭಿವೃದ್ದಿ, ಸಂಶೋಧನೆ ಮತ್ತು ಅಭಿವೃದ್ಧಿ, ಬೌದ್ಧಿಕ ಅಸಾಮಥ್ರ್ಯ ಹೊಂದಿರುವ ವ್ಯಕ್ತಿಗಳಿಗೆ ಕೃತಕ ಅಂಗಗಳು, ಬೋಧನೆ ಮತ್ತು ಕಲಿಕಾ ಸಾಮಗ್ರಿ ಕಿಟ್ಗಳು, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಶ್ರವಣ ಸಾಧನಗಳು ಸೇರಿದಂತೆ ದೈಹಿಕ ಅಂಗವೈಕಲ್ಯ ಸಹಾಯಕ ಸಾಧನಗಳ ನಿಯಮಿತ ವಿತರಣೆ ಕೇಂದ್ರದಿಂದ ನಡೆಯಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ4 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ3 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

