Connect with us

ದಿನದ ಸುದ್ದಿ

24.61 ಕೋಟಿ ವೆಚ್ಚದ ಸಿ.ಆರ್.ಸಿ ಕೇಂದ್ರಕ್ಕೆ ಶಂಕುಸ್ಥಾಪನೆ ದಿವ್ಯಾಂಗರ ಏಳಿಗೆಗೆ ಶ್ರಮಿಸೋಣ : ಎ. ನಾರಾಯಣ ಸ್ವಾಮಿ

Published

on

ಸುದ್ದಿದಿನ,ದಾವಣಗೆರೆ : ಅಂಗವಿಕಲರ ಹಾಗೂ ದಿವ್ಯಾಂಗ ವ್ಯಕ್ತಿಗಳ ಸಬಲೀಕರಣಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸಿವೆ ಆದರೆ ಅನೇಕರಿಗೆ ಅವುಗಳ ಬಗ್ಗೆ ಮಾಹಿತಿ ಇಲ್ಲ ಈ ಬಗ್ಗೆ ಹೆಚ್ಚು ಪ್ರಚಾರ ನೀಡುವ ಮೂಲಕ ವಿಕಲಚೇತನ ಹಾಗೂ ದಿವ್ಯಾಂಗರ ಏಳಿಗೆಗೆ ಶ್ರಮಿಸೋಣ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರಾದ ಎ.ನಾರಾಯಣಸ್ವಾಮಿ ಹೇಳಿದರು.

ಶನಿವಾರ ದಾವಣಗೆರೆ ತಾಲ್ಲೂಕಿನ ವಡ್ಡಿನಹಳ್ಳಿ ಬಳಿ ಬೌದ್ಧಿಕ ದಿವ್ಯಾಂಗ ಹೊಂದಿರುವ ವ್ಯಕ್ತಿಗಳ ಸಬಲೀಕರಣಕ್ಕಾಗಿ ನೂತನವಾಗಿ ನಿರ್ಮಿಸಲಾಗುತ್ತಿರುವ ಸಂಯುಕ್ತ ಪ್ರಾದೇಶಿಕ ಕೇಂದ್ರದ ಕಟ್ಟಡದ (ಸಿಆರ್‍ಸಿ) ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಯಾವ ಮನೆಯಲ್ಲಿ ವಿಕಲಚೇತನರು ಹಾಗೂ ದಿವ್ಯಾಂಗರು ಜನಿಸಿರುತ್ತಾರೋ ಅಂತಹ ಮನೆಗಳಲ್ಲಿ ಪೋಷಕರು ಆ ಮಕ್ಕಳ ಪೋಷಣೆಗೆ ಜೀವನವನ್ನು ಮೀಸಲಿಟ್ಟಿರುತ್ತಾರೆ. ಚಿಕ್ಕ ಪುಟ್ಟ ತೊಂದರೆಗಳಿಗೆ ಆಸ್ಪತ್ರೆಗೆ ಹೋಗಲಾಗುವುದಿಲ್ಲ ಹಾಗಾಗಿ ದಿವ್ಯಾಂಗರಿಗೆ ಪೋಷಕರೇ ವೈದ್ಯರ ರೀತಿ ಉತ್ತಮ ಚಿಕಿತ್ಸೆ ನೀಡುವ ಸಲುವಾಗಿ ಅವರುಗಳ ಪೋಷಕರಿಗೆ ಅಗತ್ಯ ತರಬೇತಿ ನೀಡಲಾಗುತ್ತದೆ.

ಕೆಲವೊಮ್ಮೆ ಇಂತಹ ಮಕ್ಕಳನ್ನು ಪೋಷಕರು ಸಂಭಾಳಿಸಲಾಗದೆ ಅವರನ್ನು ಕೂಡಿ ಹಾಕುವಂತಹ ಪ್ರಕರಣಗಳು ಕಂಡುಬರುತ್ತವೆ, ಆದರೆ ಆ ರೀತಿ ಮಕ್ಕಳನ್ನು ಕೂಡಿ ಹಾಕುವುದು ತಪ್ಪಾಗುತ್ತದೆ, ಸಂಯುಕ್ತ ಪ್ರಾದೇಶಿಕ ಕೇಂದ್ರದ ಮೂಲಕ ಪೋಷಕರಿಗೂ ತರಬೇತಿ ನೀಡಿ ಪೋಷಕರನ್ನು ಒಂದು ರೀತಿ ತರಬೇತಿದಾರರನ್ನಾಗಿ ಹಾಗೂ ವೈದ್ಯರನ್ನಾಗಿಸುವ ಮೂಲಕ ದಿವ್ಯಾಂಗರಿಗೆ ನೆರವು ನೀಡಲಾಗುತ್ತದೆ ಎಂದರು.

ಗೋವಾ, ಕರ್ನಾಟಕ ರಾಜ್ಯಗಳನ್ನೊಳಗೊಂಡತೆ ಈ ಕೇಂದ್ರ ಸ್ಥಾಪಿಸಲಾಗುತ್ತಿದ್ದು ಎರಡೂ ರಾಜ್ಯಗಳ ದಿವ್ಯಾಂಗರು ಈ ಕೇಂದ್ರದಲ್ಲಿ ಚಿಕಿತ್ಸೆ ಹಾಗೂ ತರಬೇತಿ ಪಡೆಯುವುದರಿಂದ ದೂರದಿಂದ ಬಂದು ಉಳಿದುಕೊಳ್ಳುವವರಿಗೆ ಎಲ್ಲಾ ರೀತಿಯ ಊಟ ವಸತಿ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಪ್ರತಿ ಜಿಲ್ಲಾ ಕೇಂದ್ರಗಳಗಲ್ಲಿ ಒಂದೊಂದು ಪ್ರಾದೇಶಿಕ ಸಂಯುಕ್ತ ಕೇಂದ್ರ ಸ್ಥಾಪಿಸುವ ಅವಶ್ಯಕತೆ ಇದೆ.

ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ಜನಪ್ರತಿನಿಧಿಗಳು ಬದ್ಧವಾಗಿರಬೇಕು. ಶೀಘ್ರದಲ್ಲೇ ದಾವಣಗೆರೆ-ತುಮಕೂರು ನೇರ ರೈಲು ಮಾರ್ಗ ಯೋಜನೆಗೆ ಶಂಕುಸ್ಥಾಪನೆ ಮಾಡಲಾಗುವುದು, ಅದರಿಂದ ಸಮೀಪದಲ್ಲಿ ರೈಲು ನಿಲುಗಡೆ ಕೇಂದ್ರ ಆದರೆ ಈ ಕೇಂದ್ರಕ್ಕೆ ಮಕ್ಕಳನ್ನು ಕರೆತರುವವರಿಗೆ ಅನುಕೂಲವಾಗಲಿದೆ ಎಂದರು.

ಸಂಸದ ಡಾ.ಜಿ.ಎಂ ಸಿದ್ದೇಶ್ವರ್ ಮಾತನಾಡಿ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಪರಿಕಲ್ಪನೆಯ ಆಧಾರದ ಮೇಲೆ ಎಲ್ಲರಿಗೂ ಸಾಮಾಜಿಕ ನ್ಯಾಯ ಒದಗಿಸುವುದು ಸರ್ಕಾರದ ಮುಖ್ಯ ಧ್ಯೇಯವಾಗಿದೆ. ಸರ್ಕಾರ ಇಂತಹವರನ್ನು ಮುಖ್ಯವಾಹಿನಿಗೆ ತರಲು ಹಲವಾರು ಯೋಜನೆಗಳನ್ನು ರೂಪಿಸಿದೆ ಅಂತಹ ಯೋಜನೆಗಳ ಸೌಲಭ್ಯ ಇವರಿಗೆ ಸಿಗುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕಾಗಿದೆ.

ದಿವ್ಯಾಂಗ ಮಕ್ಕಳು ದೇವರ ಮಕ್ಕಳು ಇದ್ದಂತೆ ಆದ್ದರಿಂದ ಅವರಿಗೆ ವಿವಿಧ ಸೌಲಭ್ಯ ಹಾಗೂ ಪೋಷಕರಿಗೆ ತರಬೇತಿ ನೀಡಿ ಅವರನ್ನು ಸಬಲೀಕರಣ ಮಾಡುವ ಉದ್ದೇಶದಿಂದ ಸಿಆರ್‍ಸಿ ಕೇಂದ್ರ ಸ್ಥಾಪಿಸಲಾಗುತ್ತಿದೆ. ವಿಕಲಚೇತನ ವ್ಯಕ್ತಿಗಳ ಕಲ್ಯಾಣಕ್ಕಾಗಿ ಸರ್ಕಾರಗಳು ಹಲವಾರು ಯೋಜನೆಗಳನ್ನು ರೂಪಿಸಿವೆ.

ತರಬೇತಿ ಕೇಂದ್ರದ ಮೂಲಕ ವಿಕಲಚೇತನರಿಗೆ ಅನೇಕ ರೀತಿಯ ಕೌಶಲ್ಯ ತರಬೇತಿಗಳನ್ನು ನೀಡಲಾಗುವುದು, 24.61 ಕೋಟಿ ರೂ ವೆಚ್ಚದಲ್ಲಿ 7 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣವಾಗುತ್ತಿರುವ ಸಿಆರ್‍ಸಿ ಕೇಂದ್ರದ ಸದುಪಯೋಗ ಅಗತ್ಯವಿರುವ ಎಲ್ಲರಿಗೂ ಸಿಗಲಿ, 2017 ರಲ್ಲಿ ಮಂಜೂರಾದ ಕೇಂದ್ರವು ಕ್ಲಿನಿಕಲ್ ಸೇವೆಗಳನ್ನು ಒದಗಿಸುತ್ತಿತ್ತು ಇನ್ನು ಮುಂದೆ ತರಬೇತಿ, ಕೌಶಲಾಭಿವೃದ್ದಿಯಂತಹ ಚಟುವಟಿಕೆಗಳಿಗೂ ನೆರವಾಗಲಿದೆ ಹಾಗೂ ದಿವ್ಯಾಂಗ ವ್ಯಕ್ತಿಗಳ ಸೇವೆ ಮಾಡುವ ಮೂಲಕ ದೇಶಕ್ಕೆ ಮಾದರಿ ಕೇಂದ್ರವನ್ನಾಗಿ ಮಾಡಲು ಶ್ರಮಿಸೋಣ ಎಂದರು.

ಕಾರ್ಯಕ್ರಮದಲ್ಲಿ 492 ಅರ್ಹ ಫಲಾನುಭವಿಗಳಿಗೆ 41 ಲಕ್ಷ ವೆಚ್ಚದ ವಿವಿಧ ಭೋಧನ ಕಲಿಕಾ ಸಾಮಗ್ರಿಗಳನ್ನು ಹಾಗೂ ಕಿಟ್ ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಯಕೊಂಡ ಶಾಸಕ ಪ್ರೊ.ಲಿಂಗಣ್ಣ, ದಾವಣಗೆರೆ ಉತ್ತರ ಕ್ಷೇತ್ರ ಶಾಸಕ ಎಸ್.ಎ.ರವೀಂದ್ರನಾಥ್, ಸಿ.ಆರ್.ಸಿ ಕೇಂದ್ರದ ಜಂಟಿ ಕಾರ್ಯದರ್ಶಿ ರಾಜೀವ್ ಶರ್ಮಾ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಜಿಲ್ಲಾ ಪಂಚಾಯತ್ ಸಿಇಓ ಡಾ.ಎ.ಚನ್ನಪ್ಪ, ಸಿಆರ್‍ಸಿ ಕೇಂದ್ರದ ನಿರ್ದೇಶಕ ಡಾ ಉಮಾಶಂಕರ್ ಮೊಹಂತಿ, ಗ್ರಾಮ ಪಂಚಾಯತ್ ಅಧ್ಯಕ್ಷ ಬಸವರಾಜ್, ಗ್ರಾ.ಪಂ ಸದಸ್ಯರುಗಳು ಹಾಗೂ ಅಧಿಕಾರಿಗಳು, ಸಾರ್ವಜನಿಕರು ಭಾಗವಹಿಸಿದ್ದರು.

ಸಿಆರ್ಸಿ ಕೇಂದ್ರದಲ್ಲಿ ದೊರೆಯುವ ಸೌಲಭ್ಯ

ದಾವಣಗೆರೆಯ ಸಿಆರ್‍ಸಿ ಕೇಂದ್ರದಲ್ಲಿ ಆರಂಭಿಕ ಗುರುತಿಸುವಿಕೆ ಮತ್ತು ಮಧ್ಯಸ್ಥಿಕೆ, ಔದ್ಯೋಗಿಕ ಚಿಕಿತ್ಸೆ, ಭೌತಿಕ ಚಿಕಿತ್ಸೆ, ದೈಹಿಕ ವೈದ್ಯಕೀಯ ಚಿಕಿತ್ಸೆ ಮತ್ತು ಪುನರ್ವಸತಿ, ಮಾನಸಿಕ ಮಧ್ಯಸ್ಥಿಕೆ, ಪ್ರಾಸ್ಥೆಟಿಕ್ಸ್ ಮತ್ತು ಆರ್ಥೋಟಿಕ್ಸ್, ಮಾತನಾಡುವ ಭಾಷೆ ಮತ್ತು ಶ್ರವಣ, ವಿಶೇಷ ಶಿಕ್ಷಣ, ಕೌಶಲ್ಯ ತರಬೇತಿ, ವೃತ್ತಿಪರ ತರಬೇತಿ, ಸಹಾಯಕ ಸಾಧನಗಳ ವಿತರಣೆ, ಬೋಧನೆ ಕಲಿಕೆ ಮತ್ತು ಸಂವಹನ ಸಾಮಗ್ರಿಗಳು, ಸಮಾಜ ಕಾರ್ಯ, ಉದ್ಯೋಗ, ಔಟ್‍ರೀಚ್ ಸೇವೆಗಳು, ಮಾನವ ಸಂಪನ್ಮೂಲ ಅಭಿವೃದ್ದಿ, ಸಂಶೋಧನೆ ಮತ್ತು ಅಭಿವೃದ್ಧಿ, ಬೌದ್ಧಿಕ ಅಸಾಮಥ್ರ್ಯ ಹೊಂದಿರುವ ವ್ಯಕ್ತಿಗಳಿಗೆ ಕೃತಕ ಅಂಗಗಳು, ಬೋಧನೆ ಮತ್ತು ಕಲಿಕಾ ಸಾಮಗ್ರಿ ಕಿಟ್‍ಗಳು, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಶ್ರವಣ ಸಾಧನಗಳು ಸೇರಿದಂತೆ ದೈಹಿಕ ಅಂಗವೈಕಲ್ಯ ಸಹಾಯಕ ಸಾಧನಗಳ ನಿಯಮಿತ ವಿತರಣೆ ಕೇಂದ್ರದಿಂದ ನಡೆಯಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

Published

on

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.

ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ  2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆಶ್ರಯ ಯೋಜನೆ – ಆವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್‌ ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

Published

on

ಗಿರೀಶ್ ಮುತ್ತು

ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು

ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.

ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.

ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್‌ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.

ಗರಿಕೆ ರಸದ ಪ್ರಯೋಜನಗಳು

1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.

2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ

4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.

5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್‌ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.

6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.

ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?

*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.

* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.

* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.

* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.

* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending