ದಿನದ ಸುದ್ದಿ
ಒಂದು ಸುಳ್ಳು ಸುದ್ದಿಗೆ 29 ಪ್ರಾಣ ಬಲಿ..!
ಸುದ್ದಿದಿನ ಡೆಸ್ಕ್ : ಕಳೆದ ಒಂದು ವರ್ಷದಿಂದ ವ್ಯಾಟ್ಸಪ್ ಫೇಸ್ಬುಕ್ನಲ್ಲಿ ಹರಿದಾಡುತ್ತಿದ್ದ ಒಂದೇ ಒಂದು ಸುಳ್ಳು ಸುದ್ದಿಗೆ 29 ಜೀವಗಳನ್ನು ಬಲಿಯಾಗಿವೆ. ಈ ಬಗ್ಗೆ ಯಾರೂ ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಪ್ರಾಣ ಹಾನಿಯಾಗಿದ್ದರ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ.
ಈ ಸಾವುಗಳ ಪ್ರಕರಣದಲ್ಲಿ ರಾಜಕೀಯ ಕೈವಾಡವಿಲ್ಲ, ಹಿಂದು- ಮುಸ್ಲಿಂ ಡಿಸ್ಪ್ಯುಟ್ ಅಲ್ಲ, ಜಾತಿ ವೈಷಮ್ಯ ಇಲ್ಲ, ಇಂಡಿಯಾ- ಪಾಕಿಸ್ತಾನ, ಬಿಜೆಪಿ- ಕಾಂಗ್ರೆಸ್, ಜಿಹಾದ್, ನಕ್ಸಲ್ ಚಟುವಟಿಕೆ, ಆರೆಸ್ಸೆಸ್, ಕಾಶ್ಮೀರ, ಇದ್ಯಾವುದೇ ವಿಷಯಗಳಿಗೆ ಜೀವಗಳು ಬಲಿಯಾಗಿಲ್ಲ. ಹಾಗಾದ್ರೆ ಯಾವ ವಿಷಯಕ್ಕೆ ಪ್ರಾಣ ಬಲಿಯಾದವು ? ಎಂದರೆ
ದೇಶಾದ್ಯಂತ 29 ಜನರ ಪ್ರಾಣ ಹಾನಿಯಾಗಿದ್ದದರೂ ಏಕೆ ಪ್ರಶ್ನೆ ಕಾಡುತ್ತಿರ ಬಹುದು. ವ್ಯಾಟ್ಸಪ್ ನಲ್ಲಿ ಹರಿಬಿಟ್ಟ ಒಂದೇ ಒಂದು ಸುಳ್ಳು ಸುದ್ದಿ ಎಂದರೆ “ಮಕ್ಕಳ ಕಳ್ಳರು” ಬಂದಿದ್ದಾರೆ ಎಂಬುದು.
ಸದ್ಯ 29 ಜೀವಗಳು ಪ್ರಾಣ ಕಳೆದುಕೊಂಡಿವೆ. ಇನ್ನು ಎರಡ್ಮೂರು ತಿಂಗಳಲ್ಲಿ 100ಕ್ಕೆ ತಲುಪ ಬಹುದಾದ ಆತಂಕವಿದೆ.
ಕಾರಣ ಏನಿರಬಹುದು?
ದೇಶದ ತಮಿಳುನಾಡಿನಿಂದ ತ್ರಿಪುರ ರಾಜ್ಯದ ವರೆಗೆ “ಮಕ್ಕಳ ಕಳ್ಳರ ಗ್ಯಾಂಗ್ ಬಂದಿದೆ, ಕದ್ದೊಯ್ಯಲಿದ್ದಾರೆ”. ಎಂಬ ವದಂತಿ ಕಾಳ್ಗಿಚ್ಚಿನಂತೆ ಹಬ್ಬಿದ್ದಕ್ಕೆ ಮುಖ್ಯ ಕಾರಣ ಕಡಿಮೆ ದರದಲ್ಲಿ ಇಂಟರ್ನೆಟ್, ಸ್ಮಾರ್ಟ್ ಫೋನ್ ಗಳು ಪರಿಚರಿಯಿಸಿದ್ದೇ ಆಗಿದೆ. ಸ್ಮಾರ್ಟ್ ಫೋನ್, ಇಂಟರ್ನೆಟ್ ಬಳಸಿಕೊಂಡು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಇದು ಕೋಟ್ಯಂತರ ಜನರಿಗೆ ತಲುಪಿ ಭಯದ ವಾತಾವರಣ ನಿರ್ಮಿಸಿತ್ತು.
ಪ್ರಮುಖಾಂಶಗಳು
• ಅಪರಿಚಿತರು, ಅನಾಮಿಕರು, ಹೊರಗಿನವರ ಊರಿಗೆ ಬಂದಾಗ ಅವರನ್ನು ಅನುಮಾನದಿಂದ ನೋಡುವಂತೆ ಮಾಡಿತು.
•ಮಕ್ಕಳ ಕಿಡ್ನಾಪ್ ತಡೆಯುವ ಕುರಿತ ಪಾಕಿಸ್ತಾನದ ಕರಾಚಿಯಲ್ಲಿ ನಿರ್ಮಿಸಿದ ವಿಡಿಯೋ ವೈರಲ್ ಆಗಿತ್ತು.
• ವ್ಯಕ್ತಿಯೊಬ್ಬ ಮಗುವನ್ನು ಬೈಕ್ ನಲ್ಲಿ ಕಿಡ್ನಾಪ್ ಮಾಡುತ್ತಿರುವಂತಹ ದೃಶ್ಯ ವಿಡಿಯೋ ನಲ್ಲಿತ್ತು.
• ಈ ವಿಡಿಯೋವನ್ನು ಎಡಿಟ್ ಮಾಡಿ ದೇಶಾದ್ಯಂತ ಸಾಮಾಜಿಕ ಜಾಲತಾಣದ ಮೂಲಕ ಹಬ್ಬಿಸಲಾಗಿತ್ತು.
• ಈ ವಿಡಿಯೋ ಹರಿದಾಡುತ್ತಿರುವ ಬಗ್ಗೆ ತಕ್ಷಣ ಯಾರೂ ಕ್ರಮ ಕೈಗೊಳ್ಳದೇ ಇರುವುದೇ ಜನರ ಪ್ರಾಣಕ್ಕೆ ಕುತ್ತು ತಂದಿತು.
ಈ ಕುರಿತಾಗಿ 2017-18ರ ಘಟನಾವಳಿಗಳು
2017ರ ಘಟನಾವಳಿಗಳು
• ಮೇ: 7 ಜಾರ್ಖಂಡ್ನಲ್ಲಿ ಸಾವನ್ನಪ್ಪಿದ್ದರು.
• ಮೇ 10: ತಮಿಳುನಾಡಿನಲ್ಲಿ 2 ಮಂದಿ ಕೊಲ್ಲಲ್ಪಟ್ಟರು.
• ಮೇ 23: ಈ ಸಂಬಂಧ ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬ ಬಂಧಿಸಲಾಗಿದೆ.
2018 ರ ಘಟನೆಗಳು
• ಮೇ: ಪ್ರತ್ಯೇಕ ಘಟನೆಗಳಲ್ಲಿ ಆಂಧ್ರ ಮತ್ತು ತೆಲಂಗಾಣದಲ್ಲಿ 6 ಮಂದಿ ಮೃತಪಟ್ಟಿದ್ದಾರೆ.
• 8 ಜೂನ್: 2 ಅಸ್ಸಾಂನಲ್ಲಿ ಮೃತಪಟ್ಟಿದ್ದಾರೆ.
• 8 ಜೂನ್: 2 ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ಹತ್ಯೆಗೈಯ್ಯಲಾಗಿದೆ.
• ಜೂನ್ 13: ಪಶ್ಚಿಮ ಬಂಗಾಳದ ಮಾಲ್ಟಾದಲ್ಲಿ ವ್ಯಕ್ತಿ ಹತ್ಯೆ ಮಾಡಿದರು.
• ಜೂನ್ 23: ಪಶ್ಚಿಮ ಬಂಗಾಳದ ಈಸ್ಟ್ ಮಿಡ್ನಾಪೋರ್ನಲ್ಲಿ ವ್ಯಕ್ತಿಯನ್ನು ಹತ್ಯೆಗೈಯಲಾಯಿತು.
• ಜೂನ್ 26: ಗುಜರಾತ್ನ ಅಹಮದಾಬಾದ್ನಲ್ಲಿ 45 ವರ್ಷ ವಯಸ್ಸಿನ ಭಿಕ್ಷುಕ ಮಹಿಳೆಯ ಕೊಲೆ.
• 28 ಜೂನ್: ಒಂದೇ ದಿನದಲ್ಲಿ ತ್ರಿಪುರದಲ್ಲಿ ಮೂವರು ಸಾವನ್ನಪ್ಪಿದರು, ವದಂತಿಗಳನ್ನು ವಜಾಗೊಳಿಸಲು ಸರ್ಕಾರದಿಂದ ನೇಮಕಗೊಂಡ ವ್ಯಕ್ತಿ ಸೇರಿದಂತೆ.
• ಜುಲೈ 1: ಮಹಾರಾಷ್ಟ್ರದ ಧುಲೆ ಜಿಲ್ಲೆಯಲ್ಲಿ 5 ಮಂದಿಯನ್ನು ಈ ಸಂಬಂಧ ಬಂಧಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇಲ್ಲಿಯ ಜಂಟಿ ನಿರ್ದೇಶಕರಾದ ಶ್ರೀ ಕೇಶವ ಹೆಚ್. ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ 2022ನೇ ಸಾಲಿನಲ್ಲಿ ಬ್ಯಾಕ್ಲಾಗ್ ಅಡಿಯಲ್ಲಿ ಅರ್ಥಶಾಸ್ತç (ಎಸ್.ಟಿ), ರಾಜ್ಯಶಾಸ್ತç (ಎಸ್.ಸಿ), ಗ್ರಂಥಪಾಲಕರು (ಎಸ್.ಟಿ) ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇಲ್ಲಿ ಅಂತಿಮವಾಗಿ ಆಯ್ಕೆ ಮಾಡಿಕೊಳ್ಳಲಾದ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆದಿರುವ ಬಗ್ಗೆ ಅನುಮಾನ ವ್ಯಕ್ತವಾಗಿ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರಿಗೆ ದಿನಾಂಕ: 24-11-2025 ರಂದು ಅರ್ಜಿ ಸಲ್ಲಿಸಿ, ಬ್ಯಾಕ್ ಲಾಗ್ ನೇಮಕಾತಿಯ ಬಗ್ಗೆ ತನಿಖೆ ನಡೆಸಿ, ತನಿಖಾ ವರದಿಯನ್ನು ನೀಡುವಂತೆ ಕೋರಲಾಗಿತ್ತು.
ಅರ್ಜಿ ಸಲ್ಲಿಸಿ ಒಂದು ತಿಂಗಳಾದರೂ ಯಾವುದೇ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ಜ್ಞಾಪನ ನೀಡಿ 7 ದಿನಗಳ ಒಳಗಾಗಿ ತನಿಖಾ ವರದಿಯನ್ನು ನೀಡುವಂತೆ ವಿನಂತಿಸಲಾಗಿತ್ತು. ಆದರೆ ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಶಿವಮೊಗ್ಗ ಇವರು ಅರ್ಜಿ ಸಲ್ಲಿಸಿ 2 ತಿಂಗಳಾದರೂ ಕನಿಷ್ಠ ಹಿಂಬರಹವನ್ನಾದರೂ ನೀಡದೆ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕರ್ತವ್ಯ ಲೋಪ ಎಸಗಿದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.


