ದಿನದ ಸುದ್ದಿ
ಒಂದು ಸುಳ್ಳು ಸುದ್ದಿಗೆ 29 ಪ್ರಾಣ ಬಲಿ..!
![](https://suddidina.com/wp-content/uploads/2018/07/Facknews-suddidina.jpg)
ಸುದ್ದಿದಿನ ಡೆಸ್ಕ್ : ಕಳೆದ ಒಂದು ವರ್ಷದಿಂದ ವ್ಯಾಟ್ಸಪ್ ಫೇಸ್ಬುಕ್ನಲ್ಲಿ ಹರಿದಾಡುತ್ತಿದ್ದ ಒಂದೇ ಒಂದು ಸುಳ್ಳು ಸುದ್ದಿಗೆ 29 ಜೀವಗಳನ್ನು ಬಲಿಯಾಗಿವೆ. ಈ ಬಗ್ಗೆ ಯಾರೂ ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಪ್ರಾಣ ಹಾನಿಯಾಗಿದ್ದರ ಬಗ್ಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ.
ಈ ಸಾವುಗಳ ಪ್ರಕರಣದಲ್ಲಿ ರಾಜಕೀಯ ಕೈವಾಡವಿಲ್ಲ, ಹಿಂದು- ಮುಸ್ಲಿಂ ಡಿಸ್ಪ್ಯುಟ್ ಅಲ್ಲ, ಜಾತಿ ವೈಷಮ್ಯ ಇಲ್ಲ, ಇಂಡಿಯಾ- ಪಾಕಿಸ್ತಾನ, ಬಿಜೆಪಿ- ಕಾಂಗ್ರೆಸ್, ಜಿಹಾದ್, ನಕ್ಸಲ್ ಚಟುವಟಿಕೆ, ಆರೆಸ್ಸೆಸ್, ಕಾಶ್ಮೀರ, ಇದ್ಯಾವುದೇ ವಿಷಯಗಳಿಗೆ ಜೀವಗಳು ಬಲಿಯಾಗಿಲ್ಲ. ಹಾಗಾದ್ರೆ ಯಾವ ವಿಷಯಕ್ಕೆ ಪ್ರಾಣ ಬಲಿಯಾದವು ? ಎಂದರೆ
ದೇಶಾದ್ಯಂತ 29 ಜನರ ಪ್ರಾಣ ಹಾನಿಯಾಗಿದ್ದದರೂ ಏಕೆ ಪ್ರಶ್ನೆ ಕಾಡುತ್ತಿರ ಬಹುದು. ವ್ಯಾಟ್ಸಪ್ ನಲ್ಲಿ ಹರಿಬಿಟ್ಟ ಒಂದೇ ಒಂದು ಸುಳ್ಳು ಸುದ್ದಿ ಎಂದರೆ “ಮಕ್ಕಳ ಕಳ್ಳರು” ಬಂದಿದ್ದಾರೆ ಎಂಬುದು.
ಸದ್ಯ 29 ಜೀವಗಳು ಪ್ರಾಣ ಕಳೆದುಕೊಂಡಿವೆ. ಇನ್ನು ಎರಡ್ಮೂರು ತಿಂಗಳಲ್ಲಿ 100ಕ್ಕೆ ತಲುಪ ಬಹುದಾದ ಆತಂಕವಿದೆ.
ಕಾರಣ ಏನಿರಬಹುದು?
ದೇಶದ ತಮಿಳುನಾಡಿನಿಂದ ತ್ರಿಪುರ ರಾಜ್ಯದ ವರೆಗೆ “ಮಕ್ಕಳ ಕಳ್ಳರ ಗ್ಯಾಂಗ್ ಬಂದಿದೆ, ಕದ್ದೊಯ್ಯಲಿದ್ದಾರೆ”. ಎಂಬ ವದಂತಿ ಕಾಳ್ಗಿಚ್ಚಿನಂತೆ ಹಬ್ಬಿದ್ದಕ್ಕೆ ಮುಖ್ಯ ಕಾರಣ ಕಡಿಮೆ ದರದಲ್ಲಿ ಇಂಟರ್ನೆಟ್, ಸ್ಮಾರ್ಟ್ ಫೋನ್ ಗಳು ಪರಿಚರಿಯಿಸಿದ್ದೇ ಆಗಿದೆ. ಸ್ಮಾರ್ಟ್ ಫೋನ್, ಇಂಟರ್ನೆಟ್ ಬಳಸಿಕೊಂಡು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಇದು ಕೋಟ್ಯಂತರ ಜನರಿಗೆ ತಲುಪಿ ಭಯದ ವಾತಾವರಣ ನಿರ್ಮಿಸಿತ್ತು.
ಪ್ರಮುಖಾಂಶಗಳು
• ಅಪರಿಚಿತರು, ಅನಾಮಿಕರು, ಹೊರಗಿನವರ ಊರಿಗೆ ಬಂದಾಗ ಅವರನ್ನು ಅನುಮಾನದಿಂದ ನೋಡುವಂತೆ ಮಾಡಿತು.
•ಮಕ್ಕಳ ಕಿಡ್ನಾಪ್ ತಡೆಯುವ ಕುರಿತ ಪಾಕಿಸ್ತಾನದ ಕರಾಚಿಯಲ್ಲಿ ನಿರ್ಮಿಸಿದ ವಿಡಿಯೋ ವೈರಲ್ ಆಗಿತ್ತು.
• ವ್ಯಕ್ತಿಯೊಬ್ಬ ಮಗುವನ್ನು ಬೈಕ್ ನಲ್ಲಿ ಕಿಡ್ನಾಪ್ ಮಾಡುತ್ತಿರುವಂತಹ ದೃಶ್ಯ ವಿಡಿಯೋ ನಲ್ಲಿತ್ತು.
• ಈ ವಿಡಿಯೋವನ್ನು ಎಡಿಟ್ ಮಾಡಿ ದೇಶಾದ್ಯಂತ ಸಾಮಾಜಿಕ ಜಾಲತಾಣದ ಮೂಲಕ ಹಬ್ಬಿಸಲಾಗಿತ್ತು.
• ಈ ವಿಡಿಯೋ ಹರಿದಾಡುತ್ತಿರುವ ಬಗ್ಗೆ ತಕ್ಷಣ ಯಾರೂ ಕ್ರಮ ಕೈಗೊಳ್ಳದೇ ಇರುವುದೇ ಜನರ ಪ್ರಾಣಕ್ಕೆ ಕುತ್ತು ತಂದಿತು.
ಈ ಕುರಿತಾಗಿ 2017-18ರ ಘಟನಾವಳಿಗಳು
2017ರ ಘಟನಾವಳಿಗಳು
• ಮೇ: 7 ಜಾರ್ಖಂಡ್ನಲ್ಲಿ ಸಾವನ್ನಪ್ಪಿದ್ದರು.
• ಮೇ 10: ತಮಿಳುನಾಡಿನಲ್ಲಿ 2 ಮಂದಿ ಕೊಲ್ಲಲ್ಪಟ್ಟರು.
• ಮೇ 23: ಈ ಸಂಬಂಧ ಬೆಂಗಳೂರಿನಲ್ಲಿ ವ್ಯಕ್ತಿಯೊಬ್ಬ ಬಂಧಿಸಲಾಗಿದೆ.
2018 ರ ಘಟನೆಗಳು
• ಮೇ: ಪ್ರತ್ಯೇಕ ಘಟನೆಗಳಲ್ಲಿ ಆಂಧ್ರ ಮತ್ತು ತೆಲಂಗಾಣದಲ್ಲಿ 6 ಮಂದಿ ಮೃತಪಟ್ಟಿದ್ದಾರೆ.
• 8 ಜೂನ್: 2 ಅಸ್ಸಾಂನಲ್ಲಿ ಮೃತಪಟ್ಟಿದ್ದಾರೆ.
• 8 ಜೂನ್: 2 ಮಹಾರಾಷ್ಟ್ರದ ಔರಂಗಾಬಾದ್ನಲ್ಲಿ ಹತ್ಯೆಗೈಯ್ಯಲಾಗಿದೆ.
• ಜೂನ್ 13: ಪಶ್ಚಿಮ ಬಂಗಾಳದ ಮಾಲ್ಟಾದಲ್ಲಿ ವ್ಯಕ್ತಿ ಹತ್ಯೆ ಮಾಡಿದರು.
• ಜೂನ್ 23: ಪಶ್ಚಿಮ ಬಂಗಾಳದ ಈಸ್ಟ್ ಮಿಡ್ನಾಪೋರ್ನಲ್ಲಿ ವ್ಯಕ್ತಿಯನ್ನು ಹತ್ಯೆಗೈಯಲಾಯಿತು.
• ಜೂನ್ 26: ಗುಜರಾತ್ನ ಅಹಮದಾಬಾದ್ನಲ್ಲಿ 45 ವರ್ಷ ವಯಸ್ಸಿನ ಭಿಕ್ಷುಕ ಮಹಿಳೆಯ ಕೊಲೆ.
• 28 ಜೂನ್: ಒಂದೇ ದಿನದಲ್ಲಿ ತ್ರಿಪುರದಲ್ಲಿ ಮೂವರು ಸಾವನ್ನಪ್ಪಿದರು, ವದಂತಿಗಳನ್ನು ವಜಾಗೊಳಿಸಲು ಸರ್ಕಾರದಿಂದ ನೇಮಕಗೊಂಡ ವ್ಯಕ್ತಿ ಸೇರಿದಂತೆ.
• ಜುಲೈ 1: ಮಹಾರಾಷ್ಟ್ರದ ಧುಲೆ ಜಿಲ್ಲೆಯಲ್ಲಿ 5 ಮಂದಿಯನ್ನು ಈ ಸಂಬಂಧ ಬಂಧಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ6 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!