ದಿನದ ಸುದ್ದಿ
ಪತಿ ಸತ್ತು ಮೂರು ವರ್ಷದ ನಂತರ ಮಗು ಜನನ

ಸುದ್ದಿದಿನ ಡೆಸ್ಕ್: ಇದು ಸಿನಿಮೀಯ ಎನಿಸಿದರೂ ನಿಜ ಜೀವನದಲ್ಲಿ ನಡೆದ ಕತೆ. ಬೆಂಗಳೂರಿನ ಮಾರುಕಟ್ಟೆ ಸಹಾಯಕರೊಬ್ಬರ (ಮಾರ್ಕೆಟಿಂಗ್ ಕನ್ಸಲ್ಟಂಟ್) ಬದುಕಿನ ಕತೆ.
ಗೌರವ್ ಜೈನ್ ಎಂಬುವವರು ನಿಧನಹೊಂದಿದ ಮೂರು ವರ್ಷಗಳ ನಂತರ ಅವರ ಮಗು ಜನನವಾಗಿದ್ದು, ಗೌರವ್ ಅವರ ಮರುಜನ್ಮವೇ ಈ ಮಗು ಎಂದು ಕುಟುಂಬದವರು ಖುಷಿಯಾಗಿದ್ದಾರೆ.
ಗೌರವ್ ಜೈನ್ ಮತ್ತು ಸುಪ್ರಿಯಾ ಜೈನ್ ದಂಪತಿ 30ರ ಆಸುಪಾಸಿನಲ್ಲಿ ಮದುವೆಯಾದರು. ಮಗು ಪಡೆಯಬೇಕೆಂಬ ಅವರ ಪ್ರಯತ್ನ ವಿಫಲವಾಗಿ ಕೊನೆಗೆ ಐವಿಎಫ್ ಚಿಕಿತ್ಸೆ ಮೊರೆ ಹೋದರು. ಈ ಮಧ್ಯೆ ಹುಬ್ಬಳ್ಳಿಯಲ್ಲಿ ನಡೆದ ಅಪಘಾತವೊಂದರಲ್ಲಿ ಗೌರವ್ ಮೃತಪಟ್ಟರು. ಸಾವಿಗೀಡಾಗುವ ಒಂದು ದಿನದ ಮುನ್ನ ಅಪ್ಪ ಅಮ್ಮನನ್ನು ಭೇಟಿಯಾಗಿದ್ದ ಗೌರವ್ ಒಂದು ಶುಭ ಸುದ್ದಿ ಜತೆ ಮತ್ತ ಬರುವುದಾಗಿ ಹೇಳಿ ಹೋಗಿದ್ದರು. ಆದರೆ, ವಿಧಿಯಾಟವೇ ಬೇರೆಯದಾಗಿತ್ತು.
ಪತಿಯನ್ನು ಕಳೆದುಕೊಂಡ ಸುಪ್ರಿಯಾ ಅವರು ಮಗು ಪಡೆಯಬೇಕೆಂಬ ಕನಸು ಮಾತ್ರ ಹಾಗೇ ಇತ್ತು. ಈ ಮುಂಚೆಯೇ ಗೌರವ್ ಅವರ ವೀರ್ಯವನ್ನು ವೈದ್ಯರು ಪಡೆದಿದ್ದರಿಂದ ಮೂರ್ನಾಲ್ಕು ಬಾರಿ ಪ್ರಯತ್ನ ಮಾಡಿದರೂ, ಸುಪ್ರಿಯಾರಿಗೆ ಮಕ್ಕಳಾಗಲಿಲ್ಲ.
ಕೊನೆಯ ಪ್ರಯತ್ನವಾಗಿ ಬಾಡಿಗೆ ತಾಯಿಯೊಬ್ಬರನ್ನು ಸಂಪರ್ಕಿಸಿ ಅವರ ಮೂಲಕ ಸುಪ್ರಿಯಾ ಅವರು ಗಂಡು ಮಗುವನ್ನು ಪಡೆದಿದ್ದಾರೆ. ಗೌರವ್ ಅವರ ಮೂರನೇ ವರ್ಷದ ಕಾರ್ಯ ನಡೆಯುತ್ತಿರುವಾಗ ಸುಪ್ರಿಯಾ ಅವರಿಗೆ ಶುಭ ಸುದ್ದಿ ಬಂತು. ಜಸ್ಲೋಕ್ ಆಸ್ಪತ್ರೆಯಲ್ಲಿ ಬಾಡಿಗೆ ತಾಯಿಗೆ ಗಂಡು ಮಗು ಹುಟ್ಟಿರುವುದಾಗಿ ವೈದ್ಯರು ಹೇಳಿದರು. ಇದನ್ನು ಕೇಳಿದ ಕುಟುಂಬದವರಿಗೆ ಖುಷಿಯೋ ಖುಷಿ. ತಮ್ಮ ಮಗನೇ ಮಗುವಿನ ರೂಪದಲ್ಲಿ ಹುಟ್ಟಿದ್ದಾನೆಂದು ತಂದೆ ತಾಯಿ ಖುಷಿಪಟ್ಟರೆ. ಇದು ತನ್ನ ಮಗುವಲ್ಲ ಗೌರವ್ನ ಮಗು. ಥೇಟ್ ಅವರಂತೇ ಇದೆ ಎಂದು ಸುಪ್ರಿಯಾ ಭಾವಪರವಶರಾಗಿದ್ದಾರೆ.

ದಿನದ ಸುದ್ದಿ
ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್ಟಾಪ್ ವಿತರಿಸಿದರು.
ಶಾಸಕ ನಿವಾಸದಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿ ಮಾತನಾಡಿದ ಶಾಸಕರು, ಇದೇ ಮಾ.21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಮಕ್ಕಳು ಯಾವುದೇ ಆತಂಕ ಇಲ್ಲದೆ ಪರೀಕ್ಷೆ ಎದುರಿಸುವ ಮೂಲಕ ಉತ್ತಮ ಅಂಕಗಳನ್ನು ಪಡೆಯುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ, ಇಸಿಒ ಗೋವಿಂದರಾಜ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ

ಸುದ್ದಿದಿನ,ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಆಯೋಜಿಸಿದ್ದ ಹೋಳಿ ಹಬ್ಬದ ಅಂಗವಾಗಿ ವಿಭಾಗದ ಮುಂಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಕಲರ್ ಹಚ್ಚುವ ಮೂಲಕ ಹೋಳಿ ಸಂಭ್ರಮ ಮಾಡಲಾಯಿತು. ಇದೇ ಸಂದರ್ಭದಲ್ಲಿ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ಬಿ ಶೈಲಶ್ರೀರವರು, ಸಂಶೋಧನಾ, ಸ್ನಾತಕೋತ್ತರ ಪ್ರಥಮ ಹಾಗೂ ದ್ವೀತಿಯ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಸುದ್ದಿದಿನಡೆಸ್ಕ್:ದೇಶಾದ್ಯಂತ 2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ; ಅಂದಾಜು 34 ಲಕ್ಷ 60 ಸಾವಿರ ಚೀಟಿಗಳು ನಕಲಿ ಎಂಬ ಆರೋಪವಿದೆ.
ಅರ್ಹರನ್ನು ಪಡಿತರ ಚೀಟಿಗೆ ಸೇರಿಸಿ, ಅನರ್ಹರನ್ನು ಕೈಬಿಡುವಂತೆ, ಎಲ್ಲ ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಲಾಗಿದೆ ಎಂದು, ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಪ್ರಲ್ಹಾದ ಜೋಶಿ, ಸ್ಪಷ್ಟಪಡಿಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಅವರು, ‘ಅಂತ್ಯೋದಯ ಅನ್ನ ಯೋಜನೆ’ ಅಡಿ, ಕಳೆದ 2000ದಿಂದ ಆರ್ಥಿಕವಾಗಿ ದುರ್ಬಲರು ಹಾಗೂ ವಿಶೇಷ ಚೇತನರಿಗೆ, ಅತಿ ಕಡಿಮೆ ಬೆಲೆಯಲ್ಲಿ, ತಿಂಗಳಿಗೆ 35 ಕಿಲೋ ಆಹಾರ ಧಾನ್ಯ ನೀಡಲಾಗುತ್ತಿದೆ. ಪ್ರತಿ ಕುಟುಂಬಗಳಿಗೆ 35 ಕಿಲೋ ಪಡಿತರ ವಿತರಿಸಲಾಗುತ್ತಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಸರ್ಕಾರಿ ವೈದ್ಯರು ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಕಾರ್ಯ ನಿರ್ವಹಿಸುವುದು ಕಡ್ಡಾಯ:ಸಚಿವ ಶರಣಪ್ರಕಾಶ್ ಪಾಟೀಲ್
-
ದಿನದ ಸುದ್ದಿ4 days ago
ಮಾರ್ಚ್ 15 ರಂದು ಬೃಹತ್ ಉದ್ಯೋಗ ಮೇಳ ; ಸಂಜೆ ಬಿಐಇಟಿ ಸಾಂಸ್ಕೃತಿಕ ಕೇಂದ್ರದಲ್ಲಿ ಸಂಗೀತ ಪ್ರಭ
-
ದಿನದ ಸುದ್ದಿ6 days ago
ಮಹಿಳಾ ಸಬಲೀಕರಣಕ್ಕೆ ಶಿಕ್ಷಣ ಮತ್ತು ಆರ್ಥಿಕ ಸ್ವಾವಲಂಬನೆಯೇ ಪೂರಕ : ಡಾ.ಬಾಬು
-
ದಿನದ ಸುದ್ದಿ5 days ago
ಸೌಜನ್ಯ ಸಾವು ; ನಾಡಿನಾದ್ಯಂತ ಜನಾಂದೋಲನ : ಹಿರಿಯ ಪತ್ರಕರ್ತ ಪುರಂದರ್ ಲೋಕಿಕೆರೆ
-
ದಿನದ ಸುದ್ದಿ4 days ago
ದಾವಣಗೆರೆಯಲ್ಲಿ ಉದ್ಯೋಗ ಮೇಳ | ಬನ್ನಿ ಭಾಗವಹಿಸಿ, ಉದ್ಯೋಗ ಪಡೆಯಿರಿ
-
ದಿನದ ಸುದ್ದಿ4 days ago
ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’
-
ದಿನದ ಸುದ್ದಿ4 days ago
ವಾಣಿಜ್ಯ ಮಳಿಗೆಗಳ ಹರಾಜು ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ4 days ago
ದಾವಣಗೆರೆ | ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಶಿಕ್ಷಕರಿಂದ ಅರ್ಜಿ ಆಹ್ವಾನ