ದಿನದ ಸುದ್ದಿ
ರಾಜ್ಯದ 3,450 ಕನ್ನಡ ಶಾಲೆಗಳು ಶಾಶ್ವತವಾಗಿ ಬಂದ್…!

ಸುದ್ದಿದಿನ, ಬೆಂಗಳೂರು : ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗಳಲ್ಲಿ ಸುಮಾರು 10 ಮಕ್ಕಳಿಗಿಂತ ಕಡಿಮೆಯಿರುವ 3,450 ಏಕೋಪಾಧ್ಯಾಯ ಶಾಲೆಗಳನ್ನು ಹತ್ತಿರದ ಇತರೆ ಶಾಳೆಗಳೊಂದಿಗೆ ವಿಲೀನಗೊಳಿಸುವ ಪ್ರಕ್ರಿಯೆ ನಡೆದಿದೆ, ಈ ನಿಟ್ಟಿನಲ್ಲಿ ರಾಜ್ಯದಲ್ಲಿ 3,450 ಕನ್ನಡ ಶಾಲೆಗಳು ಶಾಶ್ವತವಾಗಿ ಬಂದ್ ಆಗಲಿವೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್. ಮಹೇಶ್ ತಿಳಿಸಿದರು.
ಸೋಮವಾರ (ಜೂನ್11) ಸರ್ವ ಶಿಕ್ಷಾ ಅಭಿಯಾನದ ಸಭಾಂಗಣದಲ್ಲಿ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆನಡೆಸಿದ ಅವರು, ರಾಜ್ಯದಲ್ಲಿ21,225 ಪ್ರಾಥಮಿಕ ಶಾಲೆಗಳು ಹಾಗೂ 22,487 ಹಿರಿಯ ಪ್ರಾಥಮಿಕ ಶಾಲೆಗಳು ಸೇರಿ ಒಟ್ಟು 43,712ಶಾಲೆಗಳಿವೆ ಎಂದು ಮಾಹಿತಿ ಹಂಚಿಕೊಂಡರು.
ಶಾಲೆಯ ಮಕ್ಕಳಿಗೆ ಉತ್ತಮ ವಿಧ್ಯಾಭ್ಯಾಸವನ್ನು ನೀಡುವ ನಿಟ್ಟಿನಲ್ಲಿ ಹತ್ತಿರದ ಶಾಲೆಗಳೊಂದಿಗೆ ವಿಲೀನಗೊಳಿಸಲಿದ್ದು, ಈಗಿರುವ ವ್ಯವಸ್ಥೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಲು ತಯಾರಿನಡೆಸಿದ್ದೇವೆ ಎಂದು ಸ್ಪಷ್ಟೀಕರಣ ನೀಡಿದರು.
ಈ ಸಲುವಾಗಿ ಗ್ರಾಮಪಂಚಾಯಿತಿ ವ್ಯಾಪ್ತಿಗೆ ಬರುವ ನಾಲ್ಕೈದು ಶಾಲೆಗಳನ್ನು ಒಟ್ಟುಗೂಡಿಸಿ, ಸಕಲ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತದೆ. ವಿದ್ಯಾರ್ಥಿಗಳನ್ನು ಶಾಲೆಗೆ ಕರೆದೊಯ್ಯಲು ವಾಹನಗಳ ವ್ಯವಸ್ಥೆಯನ್ನು ಮಾಡಲಾಗುವುದು. ವಿದ್ಯಾರ್ಥಿಗಳಿಗೆ ಏಕೋಪಾಧ್ಯಾಯ ಶಾಲೆಗಿಂತಲೂ ಎಲ್ಲಾ ಸೌಲಭ್ಯಗಳು ದೊರಕುವ ಶಾಲೆಗಳಲ್ಲಿ ಪರಿಣಾಮಕಾರಿಯಾದ ಶಿಕ್ಷಣವನ್ನು ಕೊಡಬಹುದು. ಹೀಗೆ ಮಾಡುವುದರಿಂದ ಸುಮಾರು 30 ಸಾವಿರ ವಿಧ್ಯಾರ್ಥಿಗಳನ್ನು ಸ್ಥಳಾಂತರಗೊಳಿಸಬೇಕಾಗಬಹುದು ಎಂದು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್ಟಾಪ್ ವಿತರಿಸಿದರು.
ಶಾಸಕ ನಿವಾಸದಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಿಸಿ ಮಾತನಾಡಿದ ಶಾಸಕರು, ಇದೇ ಮಾ.21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಮಕ್ಕಳು ಯಾವುದೇ ಆತಂಕ ಇಲ್ಲದೆ ಪರೀಕ್ಷೆ ಎದುರಿಸುವ ಮೂಲಕ ಉತ್ತಮ ಅಂಕಗಳನ್ನು ಪಡೆಯುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ, ಇಸಿಒ ಗೋವಿಂದರಾಜ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ

ಸುದ್ದಿದಿನ,ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಆಯೋಜಿಸಿದ್ದ ಹೋಳಿ ಹಬ್ಬದ ಅಂಗವಾಗಿ ವಿಭಾಗದ ಮುಂಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಕಲರ್ ಹಚ್ಚುವ ಮೂಲಕ ಹೋಳಿ ಸಂಭ್ರಮ ಮಾಡಲಾಯಿತು. ಇದೇ ಸಂದರ್ಭದಲ್ಲಿ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ಬಿ ಶೈಲಶ್ರೀರವರು, ಸಂಶೋಧನಾ, ಸ್ನಾತಕೋತ್ತರ ಪ್ರಥಮ ಹಾಗೂ ದ್ವೀತಿಯ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಸುದ್ದಿದಿನಡೆಸ್ಕ್:ದೇಶಾದ್ಯಂತ 2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ; ಅಂದಾಜು 34 ಲಕ್ಷ 60 ಸಾವಿರ ಚೀಟಿಗಳು ನಕಲಿ ಎಂಬ ಆರೋಪವಿದೆ.
ಅರ್ಹರನ್ನು ಪಡಿತರ ಚೀಟಿಗೆ ಸೇರಿಸಿ, ಅನರ್ಹರನ್ನು ಕೈಬಿಡುವಂತೆ, ಎಲ್ಲ ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಲಾಗಿದೆ ಎಂದು, ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಪ್ರಲ್ಹಾದ ಜೋಶಿ, ಸ್ಪಷ್ಟಪಡಿಸಿದ್ದಾರೆ.
ಲೋಕಸಭೆಯಲ್ಲಿ ಮಾತನಾಡಿದ ಅವರು, ‘ಅಂತ್ಯೋದಯ ಅನ್ನ ಯೋಜನೆ’ ಅಡಿ, ಕಳೆದ 2000ದಿಂದ ಆರ್ಥಿಕವಾಗಿ ದುರ್ಬಲರು ಹಾಗೂ ವಿಶೇಷ ಚೇತನರಿಗೆ, ಅತಿ ಕಡಿಮೆ ಬೆಲೆಯಲ್ಲಿ, ತಿಂಗಳಿಗೆ 35 ಕಿಲೋ ಆಹಾರ ಧಾನ್ಯ ನೀಡಲಾಗುತ್ತಿದೆ. ಪ್ರತಿ ಕುಟುಂಬಗಳಿಗೆ 35 ಕಿಲೋ ಪಡಿತರ ವಿತರಿಸಲಾಗುತ್ತಿದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಸರ್ಕಾರಿ ವೈದ್ಯರು ಬೆಳಗ್ಗೆ 9 ಗಂಟೆಯಿಂದ 4 ಗಂಟೆಯವರೆಗೆ ಕಾರ್ಯ ನಿರ್ವಹಿಸುವುದು ಕಡ್ಡಾಯ:ಸಚಿವ ಶರಣಪ್ರಕಾಶ್ ಪಾಟೀಲ್
-
ದಿನದ ಸುದ್ದಿ4 days ago
ಮಾರ್ಚ್ 15 ರಂದು ಬೃಹತ್ ಉದ್ಯೋಗ ಮೇಳ ; ಸಂಜೆ ಬಿಐಇಟಿ ಸಾಂಸ್ಕೃತಿಕ ಕೇಂದ್ರದಲ್ಲಿ ಸಂಗೀತ ಪ್ರಭ
-
ದಿನದ ಸುದ್ದಿ6 days ago
ಮಹಿಳಾ ಸಬಲೀಕರಣಕ್ಕೆ ಶಿಕ್ಷಣ ಮತ್ತು ಆರ್ಥಿಕ ಸ್ವಾವಲಂಬನೆಯೇ ಪೂರಕ : ಡಾ.ಬಾಬು
-
ದಿನದ ಸುದ್ದಿ5 days ago
ಸೌಜನ್ಯ ಸಾವು ; ನಾಡಿನಾದ್ಯಂತ ಜನಾಂದೋಲನ : ಹಿರಿಯ ಪತ್ರಕರ್ತ ಪುರಂದರ್ ಲೋಕಿಕೆರೆ
-
ದಿನದ ಸುದ್ದಿ4 days ago
ದಾವಣಗೆರೆಯಲ್ಲಿ ಉದ್ಯೋಗ ಮೇಳ | ಬನ್ನಿ ಭಾಗವಹಿಸಿ, ಉದ್ಯೋಗ ಪಡೆಯಿರಿ
-
ದಿನದ ಸುದ್ದಿ4 days ago
ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’
-
ದಿನದ ಸುದ್ದಿ4 days ago
ದಾವಣಗೆರೆ | ಪೊಲೀಸ್ ಪಬ್ಲಿಕ್ ಶಾಲೆಗೆ ನುರಿತ ಶಿಕ್ಷಕರಿಂದ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ವಾಣಿಜ್ಯ ಮಳಿಗೆಗಳ ಹರಾಜು ದಿನಾಂಕ ಮುಂದೂಡಿಕೆ