ದಿನದ ಸುದ್ದಿ
ರೇಪಿಸ್ಟ್ ಬಾಬಾ ಆಶ್ರಮದಿಂದ 600 ಹುಡುಗಿಯರು ನಾಪತ್ತೆ
ಸುದ್ದಿದಿನ ಡೆಸ್ಕ್: ಬಾಬಾ ರಾಮ್ ರಹೀಮ್ ಸಿಂಗ್ನ ಡೇರಾ ಸಚ್ಚಾ ಆಶ್ರಮದ ಕರ್ಮಕಾಂಡ ಬೆಳಕಿಗೆ ಬಂದ ಬೆನ್ನ ಹಿಂದೆಯೇ ರಾಜಸ್ಥನದ ಆಳ್ವಾಸ್ ಆಶ್ರಮದ ರೇಪಿಸ್ಟ್ ದಾತಿ ಮಹರಾಜ್ ಸ್ವಾಮೀಜಿಯ ಮುಖವಾಡ ಕಳಚಿಬಿದ್ದಿದೆ.
25 ವರ್ಷದ ಯುವತಿಯೊಬ್ಬರು ದಾತಿ ಸ್ವಾಮೀಜಿ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆರೋಪಿಸಿದ್ದು, ಈ ಘಟನೆ ನಡೆದ ಎರಡೇ ದಿನಗಳಲ್ಲಿ ಬಾಬಾ ಆಶ್ರಮದದಲ್ಲಿದ್ದ 600 ಹುಡುಗಿಯರು ನಾಪತ್ತೆಯಾಗಿದ್ದಾರೆ.
ಈ ಎಲ್ಲ ಹುಡುಗಿಯರು ತಲೆ ಮರೆಸಿಕೊಂಡಿದ್ದಾರೆಯೋ ಅಥವಾ ಅವರು ರಜೆ ಮಲೆ ತಮ್ಮ ಮನೆಗಳಿಗೆ ತೆರಳಿದ್ದಾರೆಯೇ ಎಂಬುದು ಇನ್ನು ತಿಳಿದುಬರಬೇಕಿದೆ. ವಿಶೇಷ ಎಂದರೆ ರೇಪ್ ಆರೋಪಕ್ಕೆ ಒಳಗಾಗಿರುವ ದಾತಿ ಸ್ವಾಮೀಜಿಯೂ ಕೂಡ ತಲೆಮರೆಸಿಕೊಂಡಿದ್ದಾನೆ.
ದಾತಿ ಸ್ವಾಮೀಜಿ ಹಾಗೂ ಆತನ ಇಬ್ಬರು ಶಿಷ್ಯಂದಿರು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಅತ್ಯಾಚಾರ ಸಂತ್ರಸ್ತೆ ತನ್ನ ದೂರಿನಲ್ಲಿತಿಳಿಸಿದ್ದಾಳೆ.
“ನಾನು ಸ್ವಮೀಜಿಯ ಶಿಷ್ಯೆಯಾಗಿದ್ದೆ. ಬಾಬಾ ಬಳಿ ಕರೆದುಕೊಂಡು ಹೋಗುವುದಾಗಿ ಹೇಳಿದ ಆತನ ಶಿಷ್ಯಂದಿರು ಸ್ವಾಮೀಜಿ ಇದ್ದ ಕೋಣೆಗೆ ನನ್ನನ್ನು ಬಲವಂತವಾಗಿ ತಳ್ಳಿದರು. ಅಲ್ಲಿ ಸ್ವಾಮೀಜಿ ಜತೆ ಬಹಳಷ್ಟು ಮಹಿಳೆಯರಿದ್ದರು. ಮೊದಲಿಗೆ ನನ್ನ ಮೈ ಸ್ಪರ್ಶಿಸಿ ಕಾಮ ಪ್ರಚೋದನೆಗೆ ಸ್ವಾಮೀಜಿ ಮುಂದಾದ ನಾನು ಒಲ್ಲೆ ಎಂದಾಗ ನನ್ನ ಮೇಲೆ ಅತ್ಯಾಚಾರ ಎಸಗಿದ. ಸ್ವಾಮೀಜಿ ನಂತರ ಆತನ ಇಬ್ಬರು ಶಿಷ್ಯಂದಿರೂ ಕೂಡ ರೇಪ್ ಮಾಡಿದರು,’ ಎಂದು ಯುವತಿಯು ವಿವರಿಸಿದ್ದಾಳೆ.
ದಿಲ್ಲಿ ಮತ್ತು ರಾಜಸ್ಥಾನದ ಆಶ್ರಮಗಳಲ್ಲಿ ನನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ತಿಳಿದುಬಂದಿದೆ. ವರದಿಗಳ ಪ್ರಕಾರ ಬಾಬಾ ಆಶ್ರಮದಲ್ಲಿ ಎರಡು ವರ್ಷಗಳ ಹಿಂದೆ ಈ ಯುವತಿ ತಪ್ಪಿಸಿಕೊಂಡಿದ್ದಳು. ಆ ನಂತರ ಖಿನ್ನತೆಗೆ ಒಳಗಾಗಿದ್ದಳು. ತನ್ನ ಮೇಲೆ ಅತ್ಯಾಚಾರ ನಡೆದಿರುವ ವಿಷಯವನ್ನು ಪೋಷಕರಿಗೆ ತಿಳಿಸದಾಗ ಅವರು ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.
ಈ ವಿಷಯ ಕುರಿತು ಪ್ರತಿಕ್ರಿಯಿಸಿರುವ ದಾತಿ ಸ್ವಾಮೀಜಿ ಆರೋಪ ಎಸಗಿರುವ ಯುವತಿಯು ತನ್ನ ಮಗಳಂತೆ ಎಂದು ಸ್ಪಷ್ಟನೆ ನೀಡಿದ್ದಾನೆ. ತಾನು ಯಾವುದೇ ಅಪರಾಧ ಎಸಗಿಲ್ಲ. ಪೊಲೀಸರು ನಡೆಸುವ ಎಲ್ಲ ತನಿಖೆಗಳಿಗೂ ಸಹಕರಿಸುತ್ತೇನೆ. ಈ ಆರೋಪಕ್ಕಾಗಿ ತನ್ನನ್ನು ಗಲ್ಲಿಗೇರಿಸಿದರೂ ದೂರು ನೀಡಿದವರನ್ನು ದೂಶಿಸುವುದಿಲ್ಲ ಎಂದು ಪ್ರಕಟಣೆಯಲ್ಲಿ ಹೇಳಿದ್ದಾನೆ.
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ5 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!