ದಿನದ ಸುದ್ದಿ
ರೇಪಿಸ್ಟ್ ಬಾಬಾ ಆಶ್ರಮದಿಂದ 600 ಹುಡುಗಿಯರು ನಾಪತ್ತೆ
ಸುದ್ದಿದಿನ ಡೆಸ್ಕ್: ಬಾಬಾ ರಾಮ್ ರಹೀಮ್ ಸಿಂಗ್ನ ಡೇರಾ ಸಚ್ಚಾ ಆಶ್ರಮದ ಕರ್ಮಕಾಂಡ ಬೆಳಕಿಗೆ ಬಂದ ಬೆನ್ನ ಹಿಂದೆಯೇ ರಾಜಸ್ಥನದ ಆಳ್ವಾಸ್ ಆಶ್ರಮದ ರೇಪಿಸ್ಟ್ ದಾತಿ ಮಹರಾಜ್ ಸ್ವಾಮೀಜಿಯ ಮುಖವಾಡ ಕಳಚಿಬಿದ್ದಿದೆ.
25 ವರ್ಷದ ಯುವತಿಯೊಬ್ಬರು ದಾತಿ ಸ್ವಾಮೀಜಿ ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆರೋಪಿಸಿದ್ದು, ಈ ಘಟನೆ ನಡೆದ ಎರಡೇ ದಿನಗಳಲ್ಲಿ ಬಾಬಾ ಆಶ್ರಮದದಲ್ಲಿದ್ದ 600 ಹುಡುಗಿಯರು ನಾಪತ್ತೆಯಾಗಿದ್ದಾರೆ.
ಈ ಎಲ್ಲ ಹುಡುಗಿಯರು ತಲೆ ಮರೆಸಿಕೊಂಡಿದ್ದಾರೆಯೋ ಅಥವಾ ಅವರು ರಜೆ ಮಲೆ ತಮ್ಮ ಮನೆಗಳಿಗೆ ತೆರಳಿದ್ದಾರೆಯೇ ಎಂಬುದು ಇನ್ನು ತಿಳಿದುಬರಬೇಕಿದೆ. ವಿಶೇಷ ಎಂದರೆ ರೇಪ್ ಆರೋಪಕ್ಕೆ ಒಳಗಾಗಿರುವ ದಾತಿ ಸ್ವಾಮೀಜಿಯೂ ಕೂಡ ತಲೆಮರೆಸಿಕೊಂಡಿದ್ದಾನೆ.
ದಾತಿ ಸ್ವಾಮೀಜಿ ಹಾಗೂ ಆತನ ಇಬ್ಬರು ಶಿಷ್ಯಂದಿರು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಅತ್ಯಾಚಾರ ಸಂತ್ರಸ್ತೆ ತನ್ನ ದೂರಿನಲ್ಲಿತಿಳಿಸಿದ್ದಾಳೆ.
“ನಾನು ಸ್ವಮೀಜಿಯ ಶಿಷ್ಯೆಯಾಗಿದ್ದೆ. ಬಾಬಾ ಬಳಿ ಕರೆದುಕೊಂಡು ಹೋಗುವುದಾಗಿ ಹೇಳಿದ ಆತನ ಶಿಷ್ಯಂದಿರು ಸ್ವಾಮೀಜಿ ಇದ್ದ ಕೋಣೆಗೆ ನನ್ನನ್ನು ಬಲವಂತವಾಗಿ ತಳ್ಳಿದರು. ಅಲ್ಲಿ ಸ್ವಾಮೀಜಿ ಜತೆ ಬಹಳಷ್ಟು ಮಹಿಳೆಯರಿದ್ದರು. ಮೊದಲಿಗೆ ನನ್ನ ಮೈ ಸ್ಪರ್ಶಿಸಿ ಕಾಮ ಪ್ರಚೋದನೆಗೆ ಸ್ವಾಮೀಜಿ ಮುಂದಾದ ನಾನು ಒಲ್ಲೆ ಎಂದಾಗ ನನ್ನ ಮೇಲೆ ಅತ್ಯಾಚಾರ ಎಸಗಿದ. ಸ್ವಾಮೀಜಿ ನಂತರ ಆತನ ಇಬ್ಬರು ಶಿಷ್ಯಂದಿರೂ ಕೂಡ ರೇಪ್ ಮಾಡಿದರು,’ ಎಂದು ಯುವತಿಯು ವಿವರಿಸಿದ್ದಾಳೆ.
ದಿಲ್ಲಿ ಮತ್ತು ರಾಜಸ್ಥಾನದ ಆಶ್ರಮಗಳಲ್ಲಿ ನನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ತಿಳಿದುಬಂದಿದೆ. ವರದಿಗಳ ಪ್ರಕಾರ ಬಾಬಾ ಆಶ್ರಮದಲ್ಲಿ ಎರಡು ವರ್ಷಗಳ ಹಿಂದೆ ಈ ಯುವತಿ ತಪ್ಪಿಸಿಕೊಂಡಿದ್ದಳು. ಆ ನಂತರ ಖಿನ್ನತೆಗೆ ಒಳಗಾಗಿದ್ದಳು. ತನ್ನ ಮೇಲೆ ಅತ್ಯಾಚಾರ ನಡೆದಿರುವ ವಿಷಯವನ್ನು ಪೋಷಕರಿಗೆ ತಿಳಿಸದಾಗ ಅವರು ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.
ಈ ವಿಷಯ ಕುರಿತು ಪ್ರತಿಕ್ರಿಯಿಸಿರುವ ದಾತಿ ಸ್ವಾಮೀಜಿ ಆರೋಪ ಎಸಗಿರುವ ಯುವತಿಯು ತನ್ನ ಮಗಳಂತೆ ಎಂದು ಸ್ಪಷ್ಟನೆ ನೀಡಿದ್ದಾನೆ. ತಾನು ಯಾವುದೇ ಅಪರಾಧ ಎಸಗಿಲ್ಲ. ಪೊಲೀಸರು ನಡೆಸುವ ಎಲ್ಲ ತನಿಖೆಗಳಿಗೂ ಸಹಕರಿಸುತ್ತೇನೆ. ಈ ಆರೋಪಕ್ಕಾಗಿ ತನ್ನನ್ನು ಗಲ್ಲಿಗೇರಿಸಿದರೂ ದೂರು ನೀಡಿದವರನ್ನು ದೂಶಿಸುವುದಿಲ್ಲ ಎಂದು ಪ್ರಕಟಣೆಯಲ್ಲಿ ಹೇಳಿದ್ದಾನೆ.

ದಿನದ ಸುದ್ದಿ
ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ; ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತ ಪ್ರಯಾಣ

ಸುದ್ದಿದಿನ ಡೆಸ್ಕ್ : ಇದೇ 12 ರಿಂದ 19 ರವರೆಗೆ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. “ಪ್ರವೇಶ ಪತ್ರ” ತೋರಿಸಿ, ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕನ್ನಡ ಸಾಹಿತ್ಯ ಪರಿಷತ್ | ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟ

ಸುದ್ದಿದಿನ, ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ದತ್ತಿ ಪ್ರಶಸ್ತಿಗಳಲ್ಲಿ ಒಂದಾಗಿರುವ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟವಾಗಿದೆ.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು 2022ನೇ ಸಾಲಿನ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.
ಪ್ರಶಸ್ತಿಯು 51 ಸಾವಿರ ರೂಪಾಯಿ ನಗದು, ಸ್ಮರಣಿಕೆ ಹಾಗೂ ಫಲ ತಾಂಬೂಲಗಳನ್ನು ಒಳಗೊಂಡಿರುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮುಂಗಾರು ಹಂಗಾಮಿನ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ

ಸುದ್ದಿದಿನ ಡೆಸ್ಕ್ : 2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಕುರಿತ ಸಚಿವ ಸಮಿತಿ ಅನುಮೋದಿಸಿದೆ.
ಸಾಮಾನ್ಯ ದರ್ಜೆ ಭತ್ತಕ್ಕೆ ಕ್ವಿಂಟಲ್ಗೆ 2 ಸಾವಿರದ 40 ರೂಪಾಯಿಯಿಂದ 2ಸಾವಿರದ 183 ರೂಪಾಯಿಗೆ ಹಾಗೂ ’ಎ’ ದರ್ಜೆ ಭತ್ತಕ್ಕೆ 2 ಸಾವಿರದ 60 ರಿಂದ 2 ಸಾವಿರದ 203 ರೂಪಾಯಿಗೆ ಹೆಚ್ಚಿಸಲಾಗಿದೆ.
ರಾಗಿಗೆ ಪ್ರತಿ ಕ್ವಿಂಟಲ್ಗೆ 3 ಸಾವಿರದ 578 ರೂಪಾಯಿಯಿಂದ 3 ಸಾವಿರದ 846 ರೂಪಾಯಿಗೆ ಹೆಚ್ಚಿಸಲಾಗಿದೆ. ತೊಗರಿಗೆ ಪ್ರತಿ ಕ್ವಿಂಟಲ್ಗೆ 6 ಸಾವಿರದ 600 ರಿಂದ 7 ಸಾವಿರ ರೂಪಾಯಿಗೆ, ಹೆಸರು ಕಾಳಿಗೆ ಪ್ರತಿ ಕ್ವಿಂಟಲ್ಗೆ 7 ಸಾವಿರದ 755 ರಿಂದ 8 ಸಾವಿರದ 558 ರೂಪಾಯಿಗೆ, ಪ್ರತಿ ಕ್ವಿಂಟಲ್ ಉದ್ದಿಗೆ 6 ಸಾವಿರದ 600 ರಿಂದ 6 ಸಾವಿರದ 950 ರೂಪಾಯಿಗೆ ಹೆಚ್ಚಿಸಲಾಗಿದೆ.
ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪಿಯೂಷ್ ಗೋಯಲ್ 2022-23ನೇ ಸಾಲಿಗೆ 330.5 ದಶಲಕ್ಷ ಟನ್ನಷ್ಟು ಆಹಾರ ಧಾನ್ಯ ಉತ್ಪಾದನೆ ಅಂದಾಜಿಸಲಾಗದೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಇಲ್ಲಿದೆ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕಂಪ್ಲೀಟ್ ಡೀಟೆಲ್ಸ್
-
ದಿನದ ಸುದ್ದಿ6 days ago
ಐದು ಗ್ಯಾರಂಟಿ | ಫಲಾನುಭವಿಗಳ ಆಯ್ಕೆ ಮಾನದಂಡ
-
ಲೈಫ್ ಸ್ಟೈಲ್4 days ago
ರಣ ಬೇಟೆಗಾರ ‘ಕೆನ್ನಾಯಿ’ ವಿನಾಶವಾದ ಕತೆ..!
-
ದಿನದ ಸುದ್ದಿ6 days ago
ಈ ವರ್ಷವೇ ಚಿತ್ರದುರ್ಗದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಚಿಂತನೆ : ಕೇಂದ್ರ ಸಚಿವ ಎ.ನಾರಾಯಣಸ್ವಾಮಿ
-
ದಿನದ ಸುದ್ದಿ6 days ago
ಮುಂಗಾರು ಹಂಗಾಮಿನಲ್ಲಿ ರಸಗೊಬ್ಬರ ಬಿತ್ತನೆ ಬೀಜ ಕೊರತೆಯಾಗದಂತೆ ರಾಜ್ಯಾದ್ಯಂತ ಕ್ರಮ
-
ದಿನದ ಸುದ್ದಿ6 days ago
ಡಿ.ಇ.ಎಲ್.ಇ.ಡಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ4 days ago
ನಾಳೆ ದಾವಣಗೆರೆಗೆ ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ4 days ago
ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರ