Connect with us

ದಿನದ ಸುದ್ದಿ

75ನೇ ವರ್ಷದ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸ್ಪರ್ಧೆ | ಗಮನ ಸೆಳೆದ ‘ಭಾರತ ಮಾತಾಕಿ ಜೈ ಬೀದಿನಾಟಕ’- ರಂಗೋಲಿಯಲ್ಲಿ ಜೀವತಳೆದ ಮೈಲಾರ ಮಹಾದೇವಪ್ಪ

Published

on

ಸುದ್ದಿದಿನ,ಹಾವೇರಿ: 75ನೇ ವರ್ಷದ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ ಆಯೋಜಿಸಿದ ‘ಭಾರತ ಮಾತಾಕಿ ಜೈ’ ಬೀದಿನಾಟಕ ಹಾಗೂ ರಂಗೋಲಿ ಸ್ಪರ್ಧೆ, ದೇಶ ಭಕ್ತಿ ಗೀತೆಗಳ ನೃತ್ಯ ಕಾರ್ಯಕ್ರಮ ಎಲ್ಲರ ಗಮನ ಸೆಳೆದವು.

ನಗರದ ಹುತಾತ್ಮ ಮೈಲಾರ ಮಹಾದೇವಪ್ಪನವರ ಸಾಂಸ್ಕøತಿಕ ಭವನದಲ್ಲಿ ಮಂಗಳವಾರ ಜರುಗಿದ 75ನೇ ಭಾರತದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಸೈಕಲ್ ರ್ಯಾಲಿ, ಬೀದಿನಾಟಕ, ರಂಗೋಲಿ ಸ್ಪರ್ಧೆ, ದೇಶಭಕ್ತಿ ಗೀತೆ ನೃತ್ಯ, ದೇಶಭಕ್ತಿಗೀತೆಗಳ ಗಾಯನ, ಚಿತ್ರಕಲಾ ಸ್ಪರ್ಧೆ, ಸಾವಯವ ಕೃಷಿ ಪ್ರದರ್ಶನ ಹಾಗೂ ತೋಟಗಾರಿಕೆ ಉತ್ಪನ್ನಗಳ ಪ್ರದರ್ಶನ ಹಾಗೂ ಯೋಗ ಪ್ರದರ್ಶನ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಸಾಹಿತಿ ಸತೀಶ ಕುಲಕರ್ಣಿ ಅವರ ಪರಿಕಲ್ಪನೆ ಹಾಗೂ ನಿರ್ದೇಶನದಲ್ಲಿ ಪ್ರದರ್ಶಿಸಲ್ಪಟ್ಟ ‘ಭಾರತ ಮಾತಾಕಿ ಜೈ’ ಬೀದಿ ನಾಟಕ ಜನಸಾಮಾನ್ಯರಲ್ಲಿ ದೇಶಪ್ರೇಮದ ಕಿಚ್ಚನ್ನು ಬಿಂಬಿಸುವಲ್ಲಿ ಯಶಸ್ವಿಯಾಯಿತು. ಸಾಹಿತಿ ಕಲಾವಿದರ ಬಳಗದ ತಂಡದ ಕಲಾವಿದರ ಅಭಿನಯ ನೋಡುಗರನ್ನು ಸ್ವಾತಂತ್ರ್ಯ ಹೋರಾಟದ ಸಂದರ್ಭದ ಕಾಲಘಟ್ಟಕ್ಕೆ ಕರೆದೊಯ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಇದನ್ನೂ ಓದಿ | ಹೋಳಿ ಸೀಮಿತ ಆಚರಣೆಗೆ ನಿರ್ಧಾರ : ಬಣ್ಣದ ಬಂಡಿ ಮೆರವಣಿಗೆ, ರೇನ್‍ಡ್ಯಾನ್ಸ್ ನಿಷೇಧ

ಸಾಂಸ್ಕøತಿಕ ಭವನದ ಮಹಡಿಯ ಸಭಾಂಗಣದಲ್ಲಿ ಆಯೋಜಿಸಲಾದ ರಂಗೋಲಿ ಸ್ಪರ್ಧೆಯಲ್ಲಿ ಬಿಡಿಸಿದ ವಿವಿಧ ಚಿತ್ತಾರದ ರಂಗೋಲಿಗಳು ಎಲ್ಲರ ಗಮನ ಸೆಳೆದವು. ವರ್ಣಮಯ ರಂಗೋಲಿಯ ಕೈಚಳಕದಲ್ಲಿ ಹುತಾತ್ಮ ಮೈಲಾರ ಮಹಾದೇವಪ್ಪ ಚಿತ್ರ ಮರುಜೀವ ಪಡೆದಂತೆ ಎಲ್ಲರ ಗಮನ ಸೆಳೆಯಿತು. ಇದರೊಂದಿಗೆ ತ್ರಿವರ್ಣಧ್ವಜ, ಒಂದೇ ಮಾತರಂ, ಜೈಹಿಂದ ಸಂದೇಶಗಳನ್ನು ಹೊತ್ತ ವಿವಿಧ ವರ್ಣಮಯ ರಂಗೋಲಿಗಳು ಗಮನ ಸೆಳೆದವು.

ಮೈಲಾರ ಮಹದೇವಪ್ಪ

ಚಿತ್ರಕಲಾವಿದ ಜೆ.ಜೆ.ಮೆಹಂದಳೆ ಅವರ ಕೈಚಳಕದಿಂದ ಮೂಡಿಬಂದ ಸ್ವಾತಂತ್ರ್ಯ ಹೋರಾಟಗಾರರ ಛಾಯಾಚಿತ್ರ ಪ್ರದರ್ಶನ ಹಾಗೂ ದೇಶಭಕ್ತಿಗೀತೆ ಗಾಯನ, ನೃತ್ಯ ಹಾಗೂ ಯೋಗ ಪ್ರದರ್ಶನ ಎಲ್ಲ ಮನಸೂರೆಗೊಂಡಿತು.
ತೋಟಗಾರಿಕೆ ಇಲಾಖೆಯಿಂದ ಆಯೋಜಿಸಿದ ಹಣ್ಣುಹಂಪಲು,ತರಕಾರಿ ಹಾಗೂ ಕೃಷಿ ಇಲಾಖೆಯಿಂದ ಸಾವಯವ ಉತ್ಪನ್ನಗಳ ಪ್ರದರ್ಶನ ಆಯೋಜಿಸಲಾಗಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

Published

on

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

Published

on

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್‌ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.

ಕೆಎಸ್‌ಆರ್‌ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

Published

on

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.

ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending