ದಿನದ ಸುದ್ದಿ
ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ (AIBEA) 76ನೇ ಸ್ಥಾಪನಾ ದಿನಾಚರಣೆ
- ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್ ವತಿಯಿಂದ ಬ್ಯಾಂಕ್ ಗ್ರಾಹಕರಿಗೆ ಹಾಗೂ ಪುಟ್ಪಾತ್ ವ್ಯಾಪಾರಸ್ಥರಿಗೆ ಮಾಸ್ಕ್ ಹಾಗೂ ಸಾನಿಟೈಸರ್ ನೀಡುವ ಮೂಲಕ ಸ್ಥಾಪನಾ ದಿನದ ಆಚರಣೆ.
- ಎ.ಐ.ಬಿ.ಇ.ಎ. ಪ್ರತಿಯೊಬ್ಬ ಬ್ಯಾಂಕ್ ನೌಕರರ ಹೆಮ್ಮೆಯ ಸಂಘ
- ಎ.ಐ.ಬಿ.ಇ.ಎ. ದೇಶ ಪ್ರೇಮಿ ಸಂಘ
ಸುದ್ದಿದಿನ, ದಾವಣಗೆರೆ : ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ (AIBEA) 76 ನೇ ಸ್ಥಾಪನಾ ದಿನದ ಅಂಗವಾಗಿ ಇಂದು ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್ ವತಿಯಿಂದ ಕೆನರಾ ಬ್ಯಾಂಕ್ನ ಮಂಡಿಪೇಟೆ ಮತ್ತು ವಿದ್ಯಾನಗರ ಶಾಖೆಯಲ್ಲಿ ಬ್ಯಾಂಕ್ ಗ್ರಾಹಕರಿಗೆ ಹಾಗೂ ಪುಟ್ಪಾತ್ ವ್ಯಾಪಾರಿಗಳಿಗೆ ಮಾಸ್ಕ್ ಹಾಗೂ ಸಾನಿಟೈಸರ್ ನೀಡುವ ಮೂಲಕ ಹಾಗೂ ಕೊರೋನಾ ಸಾಂಕ್ರಾಮಿಕ ರೋಗದ ಬಗ್ಗೆ ತಿಳುವಳಿಕೆ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್ನ ರಾಜ್ಯ ಉಪಾಧ್ಯಕ್ಷ ಕೆ.ರಾಘವೇಂದ್ರ ನಾಯರಿ ಮಾತನಾಡಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘವು 1946 ರ ಎಪ್ರಿಲ್ 20 ರಂದು ಬ್ಯಾಂಕ್ ಉದ್ಯೋಗಿಗಳ ಪ್ರಪ್ರಥಮ ಸಂಘಟನೆಯಾಗಿ ಸ್ಥಾಪನೆಗೊಂಡಿತು. ಸ್ಥಾಪನೆಯಾದ ದಿನದಿಂದಲೂ ಬ್ಯಾಂಕ್ ಉದ್ಯೋಗಿಗಳ ಪರವಾಗಿ ಹೋರಾಟ ಮಾಡಿ ಬ್ಯಾಂಕ್ ನೌಕರರಿಗೆ ಅನೇಕ ಸೌಲಭ್ಯಗಳನ್ನು ನೀಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದೆ ಎಂದರು.
1960 ರ ದಶಕದಲ್ಲಿ ಬ್ಯಾಂಕ್ ರಾಷ್ಟ್ರೀಕರಣಕ್ಕಾಗಿ ಸುದೀರ್ಘವಾದ ಹೋರಾಟ ಮಾಡಿ 1969ರಲ್ಲಿ ಬ್ಯಾಂಕ್ ರಾಷ್ಟ್ರೀಕರಣಕ್ಕೆ ಕಾರಣವಾದ ಏಕೈಕ ಬ್ಯಾಂಕ್ ಸಂಘಟನೆ ಎಂಬ ಕೀರ್ತಿಗೆ ಭಾಜನವಾಯಿತು. ಬ್ಯಾಂಕ್ ರಾಷ್ಟ್ರೀಕರಣದ ಮೂಲಕ ಲಕ್ಷಾಂತರ ನಿರುದ್ಯೋಗಿಗಳಿಗೆ ಬ್ಯಾಂಕ್ ಉದ್ಯೋಗ ಹಾಗೂ ಕೊಟ್ಯಾಂತರ ನಿರುದ್ಯೋಗಿಗಳಿಗೆ ಬ್ಯಾಂಕ್ ಸಾಲವನ್ನು ನೀಡಿ ಸ್ವ ಉದ್ಯೋಗ ಮಾಡಲು ಅವಕಾಶ ಕಲ್ಪಿಸಲಾಯಿತು.
ಬ್ಯಾಂಕ್ನಲ್ಲಿ ಖಾಲಿಯಿರುವ ಅನೇಕ ಖಾಯಂ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಕೂಡ ಸಂಘದ ವತಿಯಿಂದ ಹೋರಾಟವನ್ನು ಮಾಡಲಾಯಿತು. ಬ್ಯಾಂಕ್ ಉದ್ಯೋಗಿಗಳ ಉದ್ಯೋಗ ಭದ್ರತೆಗೆ ಹೋರಾಡಿ ಜಯಗಳಿಸಿದ ಪರಿಣಾಮವಾಗಿ ಇಂದಿಗೂ ಅಸಂಖ್ಯಾತ ಯುವಕರು ತಾವು ಇಂಜಿನಿಯರಿಂಗ್, ಎಮ್.ಬಿ.ಎ., ಎಮ್.ಸಿ.ಎ., ಮೊದಲಾದ ಉನ್ನತ ಶಿಕ್ಷಣ ಪದವಿಯನ್ನು ಹೊಂದಿದ್ದರೂ ಸಹ ಬ್ಯಾಂಕ್ ಉದ್ಯೋಗಕ್ಕೆ ಭದ್ರತೆ ಇರುವ ಕಾರಣಕ್ಕಾಗಿ ಬ್ಯಾಂಕ್ ನೌಕರಿಯನ್ನೇ ಅರಸಿಕೊಂಡು ಬರುತ್ತಿದ್ದಾರೆ ಎಂದು ನುಡಿದರು.
1991 ರಲ್ಲಿ ಆರಂಭವಾದ ಖಾಸಗೀಕರಣ, ಜಾಗತೀಕರಣ ಮತ್ತು ಉದಾರೀಕರಣದ ನೀತಿಗಳ ವಿರುದ್ಧವೂ ನಿರಂತರವಾಗಿ ಹೋರಾಡಿದ ಶ್ರೇಯಸ್ಸು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘಕ್ಕೆ ಸಲ್ಲುತ್ತದೆ. ಬ್ಯಾಂಕ್ ನೌಕರರ ಶ್ರೇಯೋಭಿವೃದ್ಧಿಗಾಗಿ ಹೋರಾಡುವುದರ ಜೊತೆ ಜೊತೆಗೆ ಸಾರ್ವಜನಿಕ ಬ್ಯಾಂಕಿಂಗ್ ವ್ಯವಸ್ಥೆಯ ಉಳಿವಿಗಾಗಿ, ಅಸಂಘಟಿತ ವಲಯದ ನೌಕರರ ಹಕ್ಕಿಗಾಗಿ, ಬ್ಯಾಂಕ್ ಖಾಸಗಿಕರಣದ ವಿರುದ್ಧ, ವಿದೇಶೀ ನೇರ ಬಂಡವಾಳದ ಒಳ ಹರಿವಿನ ವಿರುದ್ದ, ಆಳುವ ಸರಕಾರಗಳ ಕಾರ್ಮಿಕ ವಿರೋಧಿ ಧೋರಣೆಗಳ ವಿರುದ್ಧ ಅವಿರತವಾಗಿ ಸಂಘವು ಹೋರಾಡಿದೆ ಎಂದು ಹೇಳಿದರು.
“ಬ್ಯಾಂಕಿಂಗ್ ಸೌಲಭ್ಯವು ಪ್ರತಿಯೊಬ್ಬ ಭಾರತೀಯನ ಮೂಲಭೂತ ಹಕ್ಕಾಗಬೇಕು ಮತ್ತು ಸಾರ್ವಜನಿಕ ವಲಯದ ಬ್ಯಾಂಕುಗಳು ಗಳಿಸುವ ಲಾಭವು ದೇಶದ ಜನರ ಕಲ್ಯಾಣಕ್ಕಾಗಿ ವಿನಿಯೋಗಿಸಬೇಕೇ ವಿನಹ ಖಾಸಗೀ ಬಂಡವಾಳಷಾಹಿಗಳ ಲೂಟಿಗಾಗಿ ಅಲ್ಲ” ಎನ್ನುವುದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಸ್ಪಷ್ಟವಾದ ನಿಲುವಾಗಿದೆ. ಇದಕ್ಕಾಗಿ ಸತತವಾಗಿ ಹೋರಾಟ ನಡೆಸಿಕೊಂಡು ಬರಲಾಗುತ್ತಿದೆ ಎಂದರು.
ಕಾಂII ಪ್ರಭಾತ್ಕರ್, ಕಾಂII ಹೆಚ್.ಎಲ್.ಪರ್ವಾನಾ, ಕಾಂII ಡಿ.ಪಿ.ಚಡ್ಡಾ, ಕಾಂII ತಾರಕೇಶ್ವರ್ ಚಕ್ರವರ್ತಿ, ಕಾಂII ಏಕನಾಥ್ ಪೈ, ಕಾಂII ಸಿ.ಸುಬ್ರಹ್ಮಣ್ಯನ್ ಮೊದಲಾದ ಮಹಾನ್ ನಾಯಕರುಗಳು ತಮ್ಮ ಜೀವನವನ್ನೇ ಬ್ಯಾಂಕ್ ನೌಕರರ ಸಂಘಟನೆಗಾಗಿ ಮುಡಿಪಾಗಿಟ್ಟ ಮಹಾನ್ ಚೇತನಗಳು. ಪ್ರಸ್ತುತ ಕಾಂII ಸಿ.ಹೆಚ್.ವೆಂಕಟಾಚಲಂ.
ಕಾಂII ಹೆಚ್.ವಸಂತ ರೈ, ಕಾಂII ಪಿ.ಸುಂದರೇಶನ್, ಕಾಂII ಅಜಯ್ ಮಾಂಜ್ರೇಕರ್, ಕಾಂII ಸಿ.ಎಸ್.ವೇಣುಗೋಪಾಲ್, ಕಾಂII ಪಿ.ಆರ್.ಕಾರಂತ್, ಕಾಂII ರಾಮಕೃಷ್ಣ ರೆಡ್ಡಿ, ಕಾಂII ಜಯನಾಥ್ ಮೊದಲಾದವರ ಸಾರಥ್ಯದಲ್ಲಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ಅತ್ಯಂತ ಸಮರ್ಥವಾಗಿ ಮುನ್ನಡೆಯುತ್ತಿದೆ.
ಕಳೆದ 75 ವರ್ಷಗಳ ಅವಧಿಯಲ್ಲಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ನೆರಳಿನಲ್ಲಿ ಲಕ್ಷಾಂತರ ಬ್ಯಾಂಕ್ ನೌಕರರು ನೆಮ್ಮದಿಯ ಹಾಗೂ ಸುಭದ್ರವಾದ ಜೀವನವನ್ನು ಕಂಡಿದ್ದಾರೆ. ಪ್ರತಿಯೊಬ್ಬ ಬ್ಯಾಂಕ್ ನೌಕರರು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘವನ್ನು ಅಭಿಮಾನದಿಂದ, ಹೆಮ್ಮೆಯಿಂದ “ಇದು ನಮ್ಮ ಸಂಘ” – “ಇದು ನಮ್ಮ ಎ.ಐ.ಬಿ.ಇ.ಎ.” ಎಂದು ಗರ್ವದಿಂದ ಹೇಳಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ಬಿ.ಆನಂದಮೂರ್ತಿ, ಕೆನರಾ ಬ್ಯಾಂಕ್ ವಿದ್ಯಾನಗರ ಶಾಖೆಯ ಮುಖ್ಯ ಪ್ರಬಂಧಕ ಆರ್.ಬಿ.ಸಂಜೀವಪ್ಪ, ಕೆನರಾ ಬ್ಯಾಂಕ್ ವರ್ಕಮೆನ್ ಎಂಪ್ಲಾಯೀಸ್ ಯೂನಿಯನ್ನ ಕೇಂದ್ರ ಸಮಿತಿ ಸದಸ್ಯ ಆರ್.ಆಂಜನೇಯ, ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್ನ ಪದಾಧಿಕಾರಿಗಳಾದ ಕೆ.ರಾಘವೇಂದ್ರ ನಾಯರಿ, ಕೆ.ವಿಶ್ವನಾಥ ಬಿಲ್ಲವ, ಸಿ.ಪರಶುರಾಮ ಹಾಗೂ ಕಾಡಜ್ಜಿ ಎನ್.ವೀರಪ್ಪ, ಕೆ.ಶಶಿಶೇಖರ್, ದಾದಾಪೀರ್. ಸಿದ್ದಲಿಂಗೇಶ್ ಕೋರಿ, ಕೆ.ಸುನಂದಮ್ಮ, ಡಿ.ಎಮ್.ಆನಂದಕುಮಾರ್, ಎಮ್. ಸಂದೀಪ್, ಡಿ.ಎ.ಸಾಕಮ್ಮ, ಬಿ.ಎನ್.ಶ್ವೇತಾ, ಆಶಾ ವಿದ್ಯಾಸಾಗರ್, ದರ್ಶನ್, ಡಿ.ಎ.ರವಿ, ಅಂಬರೀಶ್ ಮುಂತಾದವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ4 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

