Connect with us

ದಿನದ ಸುದ್ದಿ

ಸಂತೆಬೆನ್ನೂರು ಪುಷ್ಕರಣಿ ಆವರಣದಲ್ಲಿ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

Published

on

ಸುದ್ದಿದಿನ,ದಾವಣಗೆರೆ : ಕರ್ನಾಟಕದಲ್ಲಿ ಸುಮಾರು ಮೂರು ಕೋಟಿಗಿಂತಲೂ ಹೆಚ್ಚು ಜನರು ಬಿಪಿ, ಶುಗರ್ ಕಾಯಿಲೆಗೆ ಔಷಧಿ ಸೇವಿಸುತ್ತಿದ್ದಾರೆ. ಔಷಧಿಗೆ ಹಾಕುವ ಹಣ ನಿಂತರೆ ಸಾಕು. ನಮ್ಮ ಆರ್ಥಿಕ ಸ್ಥಿತಿ ಸುಧಾರಣೆ ಆಗಲಿದೆ. ಈ ನಿಟ್ಟಿನಲ್ಲಿ ನಾವುಗಳು ನಿರೋಗಿಗಳಾಗಲು ಯೋಗಾಭ್ಯಾಸವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಂಸದ ಡಾ.ಜಿ.ಎಂ ಸಿದ್ದೇಶ್ವರ ಕರೆ ನೀಡಿದರು.

ಚನ್ನಗಿರಿ ತಾಲೂಕಿನ ಸಂತೇಬೆನ್ನೂರಿನ ಐತಿಹಾಸಿಕ ಸ್ಥಳವಾದ ಪುಷ್ಕರಣಿಯ ಆವರಣದಲ್ಲಿ ಜಿಲ್ಲಾಡಳಿತ, ಜಿ.ಪಂ,ಆಯುμï ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ‘ಮಾನವೀಯತೆಗಾಗಿ ಯೋಗ’ ಘೋಷವಾಕ್ಯದಡಿ ಆಯೋಜಿಸಿದ್ದ 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಯೋಗ ಎನ್ನುವುದು ಪುರಾತನ ಕಾಲದಿಂದ ಬಂದಿದ್ದು, ಸ್ವಾತಂತ್ರ ಬಂದ ನಂತರ ಇದನ್ನು ಕಡೆಗಣಿಸಿದ್ದರು ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಅವರ ನೇತೃತ್ವದಲ್ಲಿ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ನಡೆಸಿಕೊಂಡುಬರುತ್ತಿದ್ದಾರೆ ಇದನ್ನು ಸುಮಾರು 127 ದೇಶಗಳಲ್ಲಿ ಆಚರಣೆ ಮಾಡಲಾಗುತ್ತಿದೆ. ಸ್ವತಂತ್ರ ಅಮೃತಮಹೋತ್ಸವದ ಅಂಗವಾಗಿ ಭಾರತದಾದ್ಯಂತ 75 ವಿವಿಧ ಪ್ರಸಿದ್ಧ ಸ್ಥಳಗಳಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು.

ದೇಶದ ಎಲ್ಲಾ ರಾಜ್ಯ ಜಿಲ್ಲೆ ಹೋಬಳಿ ಗ್ರಾಮ ಮಟ್ಟಗಳಲ್ಲಿಯೂ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಮನುಷ್ಯನಿಗೆ ದೈಹಿಕ-ಮಾನಸಿಕ ಆರೋಗ್ಯ ಹಾಗೂ ಯೋಗಕ್ಷೇಮಕ್ಕೆ ಯೋಗವು ಅವಶ್ಯವಾಗಿದೆ. ಹಾಗಾಗಿ ಪಾಲಕರು ತಮ್ಮ ಮಕ್ಕಳಿಗೆ ಬಾಲ್ಯದಿಂದಲೇ ಯೋಗವನ್ನು ಕಲಿಸಬೇಕು ಇದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.

ಶಾಸಕ ಮಾಡಾಳು ವಿರೂಪಾಕ್ಷಪ್ಪ ಮಾತನಾಡಿ, ಆರುಸಾವಿರ ವರ್ಷದ ಹಿಂದೆಯೇ ಯೋಗ ಭಾರತದಲ್ಲಿ ಹುಟ್ಟಿತ್ತು ಅಂದಿನವರು ಶತಾಯುಷಿಗಳಾಗಿದ್ದರು, ಖುಷಿಮುನಿಗಳು ಯೋಗದ ಮೂಲಕ ಆರೋಗ್ಯವಂತರಾಗಿದ್ದರು. ಪ್ರಧಾನಿ ಮೋದಿಯವರು ಯೋಗದ ಮಹತ್ವವನ್ನು ಜಗತ್ತಿಗೆ ಸಾರಿದರು. ಯೋಗದ ಮೂಲಕ ನಾವು ಆರೋಗ್ಯ ಪಡೆಯೋಣ. ಪಾರಂಪರಿಕ ಸ್ಥಳವಾದ ಸಂತೇಬೆನ್ನೂರು ಪುಷ್ಕರಣಿಯಲ್ಲಿ ಯೋಗದಿನಾಚರಣೆ ಹಮ್ಮಿಕೊಂಡಿರುವುದು ಹಾಗೂ ಇಂತಹ ಸ್ಥಳಗಳ ಇತಿಹಾಸ ಪರಿಚಯ ಮಾಡಿರುವುದು ಉತ್ತಮಕಾರ್ಯ ಎಂದರು.

ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ಮಾತನಾಡಿ, ಸನಾತನ ಕಾಲದಿಂದಲೂ ದೇಶದಲ್ಲಿ ಯೋಗ ಇತ್ತು ಆ ದಿನಗಳು ಮತ್ತೆ ಮರುಕಳಿಸುತ್ತಿದೆ. ಆರೋಗ್ಯವೇ ದೇವರು ಯೋಗದಿಂದ ಆರೋಗ್ಯ ಸಾಧ್ಯ. ಇಂತಹ ಪುಣ್ಯನೆಲದಲ್ಲಿ ಜನ್ಮತಳೆದ ನಾವು ಇಂದು ತ್ಯಾಗ ಬಲಿದಾನಕ್ಕೆ ಹೆಸರಾಗಿರುವ ಚನ್ನಗಿರಿಯ ಐತಿಹಾಸಿಕ ಸ್ಥಳದಲ್ಲಿ ಯೋಗದಿನ ಆಚರಿಸುತ್ತಿರುವುದು ನಮ್ಮೆಲ್ಲರ ಪುಣ್ಯ. ಇಡೀ ಜಗತ್ತಿನಲ್ಲಿ ಶಾಂತಿ, ನೆಮ್ಮದಿ, ವೈಭವ ಹಣದಿಂದ ಸಿಗುವುದಿಲ್ಲ ಇದು ಯೋಗದಿಂದ ಮಾತ್ರ ಸಾಧ್ಯ ಎಂದರು.

ಇಂದು ನಾವು ಭಾರತೀಯತೆಯನ್ನು ಸಂಭ್ರಮಿಸಬೇಕಾದ ದಿನ ಇದಾಗಿದೆ. ಯೋಗವನ್ನು ಭಾರತೀಯರು ಹೊಸದಾಗಿ ನೀಡುತ್ತಿಲ್ಲ ನಮ್ಮ ಸನಾತನ ಪರಂಪರೆಯಲ್ಲಿ ಯೋಗವಿತ್ತು ಎಂದರು. ವಿಶ್ವದಲ್ಲೇ ಸುಮಾರು 200 ರಾಷ್ಟ್ರಗಳಲ್ಲಿ ಯೋಗದಿನ ಆಚರಿಸಲಾಗುತ್ತಿದೆ. ಜಗತ್ತಿಗೆ ಯೋಗದ ರಾಯಭಾರಿಯಾಗಿ ಪ್ರಧಾನಿ ನರೇಂದ್ರ ಮೋದಿಯವರು ನಮ್ಮ ಸಂಸ್ಕøತಿಯನ್ನು ಜಗತ್ತಿಗೆ ಸಾರಿದ್ದಾರೆ. ನಮ್ಮ ಪರಂಪರೆ, ಇತಿಹಾಸ, ಸಂಸ್ಕೃತಿ ಉಳಿಸಿ ಬೆಳೆಸಿಕೊಂಡರೆ ಅದೇ ನಾವು ನೀಡುವ ದೊಡ್ಡ ಕೊಡುಗೆ ಎಂದು ಹೇಳಿದರು.

ಜಿ.ಪಂ ಸಿಇಒ ಡಾ.ಎ.ಚನ್ನಪ್ಪ ಮಾತನಾಡಿ, ಯೋಗ ಯುಕ್ತ ರೋಗ ಮುಕ್ತ ಕಾರ್ಯಕ್ರಮ ಇದಾಗಿದೆ. ಯೋಗದ ಮೂಲಕ ನಾವು ಬದುಕೋಣ, ಬದುಕಲು ಕಲಿಸೋಣ ಎಂದರು.
ಈ ವೇಳೆ ಯೋಗಗುರು ವೈದ್ಯಶ್ರೀ ಚೆನ್ನಬಸವಣ್ಣ ಸ್ವಾಮಿ ಯೋಗದ ಮಹತ್ವ ಸಾರುವ ಮೂಲಕ ಯೋಗಾಸನದ ವಿವಿಧ ಭಂಗಿಗಳನ್ನು ಹೇಳಿಕೊಟ್ಟರು.

ಯೋಗ ಪ್ರಾತ್ಯಕ್ಷಿಕೆಯ ಪ್ರಾರ್ಥನಾ ನೃತ್ಯದೊಂದಿಗೆ ಅಂತರಾಷ್ಟ್ರೀಯ ಯೋಗಪಟು ಸೃಷ್ಠಿ ಸ್ವಾಗತಕೋರಿದರು. ಯೋಗ ಕಾರ್ಯಕ್ರಮಕ್ಕೆ ನುರಾರು ಯೋಗಾಸಕ್ತರು ದಾವಣಗೆರೆ ಸೇರಿದಂತೆ ಇತರೆ ಭಾಗಗಳಿಂದ ಆಗಮಿಸಿ ಯೋಗ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ಪೆÇೀಲೀಸ್ ವರಿಷ್ಟಾಧಿಕಾರಿ ಸಿ.ಬಿ ರಿಷ್ಯಂತ್ ಯೋಗ ದಿನಕ್ಕೆ ಶುಭ ಕೋರಿದರು. ವೇದಿಕೆಯಲ್ಲಿ ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ, ಆಯುಷ್ಯ ಇಲಾಖೆ ಜಿಲ್ಲಾಧಿಕಾರಿ ಡಾ.ಶಂಕರಗೌಡ, ದಾವಣಗೆರೆ ಜಿಲ್ಲಾ ಯೋಗ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವಾಸುದೇವ ರಾಯ್ಕರ್, ಎನ್.ಪರಶುರಾಮ, ದಾವಣಗೆರೆ ಪ್ರಜಾಪಿತ ಬ್ರಹ್ಮಕುಮಾರೀಸ್‍ನ ಲೀಲಾಕುಮಾರಿ, ಸಂತೇಬೆನ್ನೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಶಿಲ್ಪಾ ಮರುಳಸಿದ್ದಪ್ಪ, ಚನ್ನಗಿರಿ ಪುರಸಭಾ ಅಧ್ಯಕ್ಷೆ ಲಕ್ಷ್ಮೀದೇವಿ, ಬಿಜೆಪಿ ಮುಖಂಡ ಮಾಡಾಳು ಮಲ್ಲಿಕಾರ್ಜುನ, ಚನ್ನಗಿರಿ ತಹಶೀಲ್ದಾರ್ ಪಟ್ಟರಾಜು ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಯೋಗಪಟುಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending