Connect with us

ದಿನದ ಸುದ್ದಿ

ದೇಶದಲ್ಲಿರುವ ‘ಓಬಿಸಿಗಳಿಗೆ ಸಂವಿಧಾನದತ್ತ ಮೀಸಲಾತಿಯ’ ಮಹತ್ವದ ಅರಿವಿಲ್ಲ ; ಡಾ.ಶಿಲಾಧರ ಮುಗಳಿ

Published

on

ಸುದ್ದಿದಿನ,ಧಾರವಾಡ : ನಮ್ಮ ದೇಶದಲ್ಲಿರುವ ಇತರೆ ಹಿಂದುಳಿದ ವರ್ಗ(ಓಬಿಸಿ)ಗಳ ಹಿತರಕ್ಷಣೆಗಾಗಿ ಸೇರಿಸಲಾಗಿರುವ ಸಂವಿಧಾನದ ಆರ್ಟಿಕಲ್-340ರ ಮಹತ್ವ ಮತ್ತು ಅರಿವಿಲ್ಲದ ಓಬಿಸಿಗಳಿಗೆ ಬಾಬಾಸಾಹೇಬರು ನೀಡಿದ ಸಂವಿಧಾನದತ್ತ ಮೀಸಲಾತಿಯ ಕುರಿತು ತಿಳಿದುಕೊಳ್ಳದೆ ಹಿತಶತ್ರುಗಳ ಮಾತಿಗೆ ಮರುಳಾಗಿ ಸಂವಿಧಾನದ ಸವಲತ್ತುಗಳಿಂದ ವoಚಿತರಾಗಲು ತಮಗೆ ತಾವೇ ಕಾರಣರಾಗಿದ್ದಾರೆ ಎಂದು ಕವಿವಿ ಇತಿಹಾಸ ಪ್ರಾಧ್ಯಾಪಕ ಡಾ.ಶಿಲಾಧರ ಮುಗಳಿ ವಿಷಾದ ವ್ಯಕ್ತಪಡಿಸಿದರು.

ಅವರು ಧಾರವಾಡದಲ್ಲಿ ಗಣಕರಂಗ ಸಂಸ್ಥೆಯು (Nov.26) ಸಂವಿಧಾನ ದಿನಾಚರಣೆ ಅಂಗವಾಗಿ ಎರ್ಪಡಿಸಿದ್ದ 3ಬಿ ನೆನಪಿನ ಕವಿಗೋಷ್ಟಿಯ ಅಧ್ಯಕ್ಷತೆ ವಹಿಸಿಕೊಂಡು ಮಾತನಾಡುತ್ತಿದ್ದರು. ಬಹುಮುಖ ವ್ಯಕ್ತಿತ್ವದ ಬಾಬಾಸಾಹೇಬ ಡಾ.ಅಂಬೇಡ್ಕರ್ ಅವರು ಗುರುತಿಸಿರುವಂತೆ ಈ ದೇಶದಲ್ಲಿ ಆಚರಿಸಲಾಗುತ್ತಿರುವ ಅಸ್ಪøಶ್ಯತೆಯ ಮೂರು ಪ್ರಕಾರಗಳಾದ ಮುಟ್ಟಿಸಿಕೊಳ್ಳದ, ಸಂಪರ್ಕಿಸದ ಮತ್ತು ನೋಡಬಾರದ ಶೋಷಿತ ವರ್ಗಗಳ ಉದ್ಧಾರವನ್ನು ಗಮನದಲ್ಲಿಟ್ಟುಕೊಂಡು ವಿಶ್ವವೇ ಒಪ್ಪುವಂತಹ ಸಂವಿಧಾನ ರಚನೆ ಮಾಡಿದ್ದು ಈಗ ಇತಿಹಾಸ. ಮೊದಲು ಮತ್ತು ಅಂತಿಮವಾಗಿ ನಾವು ಭಾರತೀಯರು ಎಂದು ಪ್ರತಿಪಾಧಿಸಿದ ದೇಶಭಕ್ತ ಬಾಬಾಸಾಹೇಬ ಡಾ.ಅಂಬೇಡ್ಕರ ಅವರು ಕೊಡುಗೆಯಾಗಿ ಈ ದೇಶಕ್ಕೆ ನೀಡಿದ್ದು ರಾಜಕೀಯ ಮೀಸಲಾತಿ ಮತ್ತು ರಾಜಕೀಯೇತರ ಮೀಸಲಾತಿ ಎಂಬ ಎರಡು ಮೀಸಲಾತಿಗಳು ಮಾತ್ರ. ರಾಜಕೀಯ ದುರ್ಲಾಭಕ್ಕಾಗಿ ರಾಜಕೀಯ ಮೀಸಲಾತಿಯನ್ನು ಇಂದಿಗೂ ಮುಂದುವರೆಸಲಾಗುತ್ತಿದೆ. ರಾಜಕೀಯೇತರ ಮೀಸಲಾತಿಗೆ ಕೊನೆಯೆಂಬುದಿಲ್ಲ. ವಿವಿಧ ವಲಯಗಳಲ್ಲಿ ಅಂದರೆ ಭಾಷಾ ಮಾಧ್ಯಮ ಮೀಸಲಾತಿ, ಯೋಜನಾ ನಿರಾಶ್ರಿತರ ಮೀಸಲಾತಿ, ಮಹಿಳಾ ಮೀಸಲಾತಿ, ವಿಶೇಷ ವಲಯ ಮೀಸಲಾತಿ, ಕಾಶ್ಮೀರ ಪಂಡಿತರಿಗೆ ಮೀಸಲಾತಿ ಹೀಗೆ ಹಲವಾರು ರೀತಿಯ ಮೀಸಲಾತಿಗಳು ಜಾರಿಯಲಿದ್ದರೂ ಸಹ ಎಲ್ಲರ ಕಣ್ಣುಕಿಸುರಾಗುವುದು ಎಸ್ಸಿ-ಎಸ್ಟಿ ಅಂದರೆ ದಲಿತ-ದಮನಿತರ ಮೀಸಲಾತಿಯ ವಿಷಯದಲ್ಲಿ. ಆದರೆ ಇತ್ತೀಚಿನ ದಿನಗಳಲ್ಲಿ ಮೀಸಲಾತಿಯ ಸಂಪೂರ್ಣ ಅರಿವಿರದ ಕೆಲವು ಎಡಬಿಡಂಗಿಗಳು ದೇಶಬಾಂಧವರಲ್ಲಿ ತಪ್ಪು ತಿಳುವಳಿಕೆ, ಪರಸ್ಪರ ಅಪನಂಬಿಕೆ, ಅಸೂಯೆ, ವೈರತ್ವ ಮೂಡುವಂಥಹ ಸನ್ನಿವೇಶ ಸೃಷ್ಟಿಸುವ ಕುತಂತ್ರಗಳನ್ನು ಮಾಡುತ್ತಿದ್ದಾರೆ. ಈ ಕುರಿತು ಈ ದೇಶದ ಸಂವಿಧಾನದ ಸರ್ವ ಫಲಾನುಭವಿಗಳು ಅಂದರೆ ಜಾಗೃತ ದೇಶಬಾಂಧವರು ಎಚ್ಚರಿಕೆಯಿಂದ ಇರಬೇಕಾದುದು ಅವಶ್ಯ ಎಂದು ವಿವರಿಸಿದರು.

ಆಶಯ ನುಡಿಗಳನ್ನಾಡಿದ ಕವಿ ಡಾ.ಮಹೇಶ ರುದ್ರಕರ ಅವರು, ಸರ್ವ ಶೊಷಿತ ಸಮುದಾಯಗಳಷ್ಟೇ ಅಲ್ಲದೇ ಸರ್ವ ಪ್ರಜೆಗಳ ಕಲ್ಯಾಣವನ್ನು ಬಯಸುವ ವಿಶ್ವಶ್ರೇಷ್ಟ ಭಾರತದ ಸಂವಿಧಾನ ನೀಡುವ ಎಲ್ಲ ಸವಲತ್ತುಗಳನ್ನು ಪಡೆದುಕೊಳ್ಳಲು ಸಂವಿಧಾನದ ಕುರಿತಾದ ಅರಿವು, ತಿಳುವಳಿಕೆ ಮೂಡಿಸುವ ಕೆಲಸ ನಿರಂತರ ನಡೆಯಬೇಕಾಗಿದೆ. ಕೆಲವು ರೂಡಿಗತ ಸಂಪ್ರದಾಯವಾದಿಗಳು ಬಹುತ್ವದ ಭಾರತದ ಮುಗ್ದರನ್ನು ದುರೂಪಯೋಗಪಡಿಸಿಕೊಳ್ಳಲು ಇಲ್ಲದ ಕಥೆ, ಪುರಾಣಗಳನ್ನು ಕಟ್ಟಿ ದಾರಿ ತಪ್ಪಿಸುವ ಮೂಲಕ ತಮ್ಮ ಬೇಳೆ ಬೇಯಿಸಿಕೊಳ್ಳುವ ದುಷ್ಕøತ್ಯವನ್ನು ತಡೆಯುವುದು ಸುಶಿಕ್ಷಿತ ಸಮುದಾಯದ ಜವಾಬ್ದಾರಿಯಾಗಿದೆ ಎಂದು ಹೇಳುತ್ತಾ, ಕೊನೆಯಲ್ಲಿ ಸಂವಿಧಾನದ ಮಹತ್ವ ಸಾರುವ ಸ್ವರಚಿತ ಕವನ ವಾಚಿಸಿದರು.

ಜಗತ್ತಿನ ಶಾಂತಿ, ಮೈತ್ರಿಯ ಸಂದೇಶ ನೀಡಿದ ಬುದ್ಧ, ಕಾಯಕದ ಮಹತ್ವ ಸಾರಿದ ಬಸವಾದಿ ಶರಣರು ಮತ್ತು ಆಧುನಿಕ ಭಾರತಕ್ಕೆ ದಿಕ್ಸೂಚಿಯಾದ ವಿಶ್ವಶ್ರೇಷ್ಟ ಸಂವಿಧಾನ ನೀಡಿದ ಬಾಬಾಸಾಹೇಬ ಡಾ.ಅಂಬೇಡ್ಕರ ನೆನಪಿನ ಕವಿಗೋಷ್ಟಿ ಮತ್ತು ಸಂವಿಧಾನ ದಿನಾಚರಣೆ ಹೆಚ್ಚು ಸೂಕ್ತವಾಗಿದೆ. 3ಬಿ ನೆನಪಿನ ಕವಿಗೋಷ್ಟಿ ಹೆಚ್ಚು ಅರ್ಥಪೂರ್ಣವಾಗಿದೆ. ಎಲ್ಲಾ ರಂಗಗಳಲ್ಲಿ ಅಭಿವೃದ್ಧಿ ಕಾಣಬೇಕಾಗಿತ್ತು ಆದರೆ ಸಿನಿಕತನ ಹೆಚ್ಚಾಗುತ್ತಿರುವ ಇಂದಿನ ಸಾಮಾಜೀಕರಲ್ಲಿ ಸಾಮಾಜಿಕ ಜಾಗೃತಿ ಮೂಡಿಸಬೇಕಾದ ಅನಿವಾರ್ಯತೆ ತೀವ್ರವಾಗಿದೆ ಎಂದು ಅತಿಥಿಗಳಾಗಿ ಆಗಮಿಸಿದ್ದ ಕವಿ, ಕಥೆಗಾರ ಡಾ.ಬಸು ಬೇವಿನಗಿಡದ ಅಭಿಪ್ರಾಯ ವ್ಯಕ್ತಪಡಿಸಿದರು.

ಚಿಂತಕ ಲಕ್ಷ್ಮಣ ಬಕ್ಕಾಯಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮವನ್ನು ರಂಗಕರ್ಮಿ ಹಿಪ್ಪರಗಿ ಸಿದ್ಧರಾಮ ಅಚ್ಚುಕಟ್ಟಾಗಿ ನಿರ್ವಹಿಸಲು ನಿತಿನ್ ಗುಡಿಮನಿ ಸಹಕರಿಸಿದರು. ಕಾರ್ಯಕ್ರಮದ ಆರಂಭಕ್ಕೆ ಇತ್ತಿಚೆಗೆ ಅಗಲಿದ ಮಹಾನ್ ಚೇತನಗಳಾದ ಕನ್ನಡದ ಜಗದ್ಗುರು ಡಾ.ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳು, ಕಲಾವಿದ-ರಾಜಕಾರಣಿ ಡಾ.ಅಂಬರೀಷ ಮತ್ತು ಕವಿ-ರಾಜಕಾರಣಿ ಜಾಫರ್ ಶರೀಪ್ ಗೌರವಾರ್ಥ ಒಂದು ನಿಮಿಷದ ಮೌನಾಚರಣೆ ಮೂಲಕ ಗೌರವ ನಮನ ಸಲ್ಲಿಸಲಾಯಿತು. ನಂತರ ನಡೆದ ‘ನಮ್ಮ ಭಾರತದ ಸಂವಿಧಾನ’ ಶೀರ್ಷಿಕೆಯಡಿಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಂದೀಪ ಕುಲಕರ್ಣಿ, ಶ್ರೀಧರ ಗಸ್ತಿ, ಆನಂದ ಮಾಲಗಿತ್ತಿಮಠ, ಆನಂದ ಹಕ್ಕೇನ್ನವರ, ಅರುಣ ಮೂಡಿ, ಅರುಣ ಕೊಪ್ಪ, ಭಾಗ್ಯಶ್ರೀ ರಜಪೂತ, ಎನ್.ಆರ್.ಠಕ್ಕಾಯಿ, ಸಚಿನ್ ಮುಂದಿನಕೇರಿ, ವಿನೋದಾ ಕರಣಂ, ಸುಭಾಸ ಚವಾಣ್, ಶರಣಪ್ಪ ಗೊಲ್ಲರ, ಶಿವಾನಂದ ಚವಾರ, ಅನಿಲಕುಮಾರ ಉಮಚಗಿ ಮುಂತಾದ ಕವಿಗಳು ಸ್ವರಚಿತ ಕವನ ವಾಚಿಸಿದ ನಂತರ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮ ನಿರ್ವಾಹಕರು

9902674005 / 9845109480

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ10 hours ago

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ. ಆಸಕ್ತ...

ದಿನದ ಸುದ್ದಿ3 days ago

ವಸತಿ ಯೋಜನೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ. ಈ...

ದಿನದ ಸುದ್ದಿ4 days ago

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ...

ದಿನದ ಸುದ್ದಿ4 days ago

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ...

ದಿನದ ಸುದ್ದಿ4 days ago

ಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ 12 ದಿನಗಳ ಉಚಿತ ಕೋಳಿ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ....

ದಿನದ ಸುದ್ದಿ4 days ago

ಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕೃಷಿ ಇಲಾಖೆ ಹಾಗೂ ಆತ್ಮ (ATMA) ಯೋಜನೆಯಡಿ 2026-27ನೇ ಸಾಲಿನ ವಿವಿಧ ಕೃಷಿ ಪ್ರಶಸ್ತಿಗಳಿಗಾಗಿ ದಾವಣಗೆರೆ ಜಿಲ್ಲೆಯ ಅರ್ಹ ಹಾಗೂ ಆಸಕ್ತ ರೈತ ಮತ್ತು ರೈತ...

ಅಂಕಣ6 days ago

ಕವಿತೆ | ದೇವರ ಹೂವು

~ ಡಾ. ಸಿ.ಬಿ.ಐನಳ್ಳಿ ಊಟ ಮಾಟ ವೇಷ ಭಾಷೆ ಪ್ರಾರ್ಥನೆ ಬೇರೆ ಬೇರೆ ಪವಿತ್ರಪಠ್ಯ ಅವನದೊಂದು ನನ್ನದಿನ್ನೊಂದಂತೆ ನದಿ ದಂಡೆಯ ಮೇಲೆ ನೋಟ ಬೆರೆತು ಮಾತು ಮರೆತು...

ದಿನದ ಸುದ್ದಿ6 days ago

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ...

ದಿನದ ಸುದ್ದಿ6 days ago

ಆಶ್ರಯ ಯೋಜನೆ – ಆವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30...

ದಿನದ ಸುದ್ದಿ1 week ago

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

ಗಿರೀಶ್ ಮುತ್ತು ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು...

Trending