ದಿನದ ಸುದ್ದಿ
ಜನವರಿ 6 ಕ್ಕೆ ಮಡಿವಾಳ ಜನಾಂಗದ ಜಾಗೃತಿ ಮಹಾ ಸಮ್ಮೇಳನ
ಸುದ್ದಿದಿನ ಡೆಸ್ಕ್ : ಮಡಿವಾಳ ಜನಾಂಗದ ಜಾಗೃತಿ ಮಹಾ ಸಮ್ಮೇಳನ ಶ್ರೀ ಮಾಚಿದೇವ ಮಹಾಸಂಸ್ಥಾನ ಮಠದ ಶಂಕುಸ್ಥಾಪನೆ ದಶಮಾನೋತ್ಸವ , ಶ್ರೀ ಬಸವ ಮಾಚಿದೇವ ಸ್ವಾಮೀಜಿಗಳವರ ಜಂಗಮದೀಕ್ಷಾ 29ನೇ ವಸಂತೋತ್ಸವ ಮತ್ತು ಶ್ರೀ ಬಸವ ಮಾಚಿದೇವ ಸ್ವಾಮೀಜಿಗಳವರ 38ನೇ ಜಯಂತ್ಯೋತ್ಸವ ” ಪರಮಪೂಜ್ಯ ಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳವರ ಪಟ್ಟಾಧಿಕಾರ ಮಹೋತ್ಸವ ದಿನಾಂಕ : 6 ಜನವರಿ 2019 , ಭಾನುವಾರ , ಸಮಯ ಬೆಳಗ್ಗೆ 10 . 00 ಗಂಟೆಗೆ ಸ್ಥಳ : ಚಿತ್ರದುರ್ಗ ಮಡಿವಾಳ ಸಮುದಾಯ ಇಡೀ ರಾಜ್ಯದಲ್ಲಿ ಸುಮಾರು 15 . 00 ಲಕ್ಷ ಜನಸಂಖ್ಯೆ ಇದ್ದು ಶೇ 99 % ರಷ್ಟು ತಮ್ಮ ಕುಲಕಸುಬು ಮತ್ತು ಕೂಲಿ – ನಾಲಿಯ ಆಧಾರದ ಮೇಲೆ ಜೀವನವನ್ನು ನಡೆಸುತ್ತಾ ಬಂದಿರುವಂತದ್ದಾಗಿದೆ.
ಸ್ವತಂತ್ರ ಬಂದು ಇಷ್ಟು ವರ್ಷಗಳಾದರೂ ಸರ್ಕಾರದ ಯಾವುದೇ ರೀತಿಯ ಸೌಕರ್ಯಗಳಿಂದ ವಂಚಿತರಾಗಿದ್ದಾರೆ . ಈ ಸಮುದಾಯ ಎಲ್ಲಾ ಸಮುದಾಯಗಳ ಜೊತೆಯಲ್ಲಿ ಮುಖ್ಯ ವಾಹಿನಿಗೆ ಬರಬೇಕಾದಂತಹ ಅನಿವಾರ್ಯತೆ ಇದೆ . ಇಂದಿಗೂ ಕೂಡ ಆರ್ಥಿಕ , ಶೈಕ್ಷಣಿಕ , ಸಾಮಾಜಿಕ ಮತ್ತು ರಾಜಕೀಯವಾಗಿ ಯಾವುದೇ ಪ್ರಾತಿನಿಧ್ಯಗಳು ಸಿಗದೆ ನಮ್ಮ ಹಕ್ಕುಗಳನ್ನು ಪಡೆಯಲಿಕ್ಕೆ ನಿರಂತರವಾದ ಹೋರಾಟವನ್ನ ನಡೆಸುವ ಕರ್ತವ್ಯ ನಮ್ಮದಾಗಿದೆ , ಪ್ರತಿಯೊಬ್ಬರಿಗೆ ಧಾರ್ಮಿಕ ಅರಿವು ಬಹಳ ಮುಖ್ಯ . ನಾಡಿನಲ್ಲಿ ಪ್ರತಿಷ್ಠಿತ ಮಠಗಳು ಇವೆ . ಅವುಗಳಿಂದ ಹೇಗೆ ಜನ ಪ್ರಜ್ಞಾವಂತರಾದರು , ವೈಯಕ್ತಿಕ ಹಾಗೂ ಸಾಮಾಜಿಕವಾಗಿ ಬೆಳವಣಿಗೆಯಾಗಿದ್ದಾರೆ ಎಂಬುದನ್ನು ನೋಡುತ್ತಿದ್ದೀರಿ . ಮಠಗಳು ಜನರ ಶಕ್ತಿಯ ಕೇಂದ್ರಗಳಾಗಿವೆ . ಬಹುಶಃ ಮಠಗಳು ಇರದಿದ್ದರೇ ಧಾರ್ಮಿಕ ವಂಚನೆಯನ್ನು ಅನುಭವಿಸಬೇಕಾಗಿತ್ತು . ಇಂದಿನ ಕಾಲಮಾನದಲ್ಲಿ ಮಠಗಳು ಅದನ್ನು ತಪ್ಪಿಸಿ ಪ್ರತಿಯೊಬ್ಬರನ್ನು ಪ್ರಜ್ಞಾವಂತರನ್ನಾಗಿಸಲು ಮತ್ತು ಸಾಮಾಜಿಕ ಜವಾಬ್ದಾರಿಯ ಜಾಗೃತಿ ಮೂಡಿಸಲು ಸಹಾಯಕವಾಗಿವೆ . ಎಲ್ಲರನ್ನು ಮೇಲೆತ್ತುವ ಕಾರ್ಯ ನಡೆದಿದೆ . – ಚಿತ್ರದುರ್ಗದ ಮುರುಘಾಮಠದ ಡಾ . ಶಿವಮೂರ್ತಿ ಮುರುಘಾ ಶರಣರ ದೂರದೃಷ್ಟಿಯಿಂದಾಗಿ ಹಿಂದುಳಿದ ಸಮಾಜಗಳಿಗೆ ಮಠಗಳನ್ನು ಸ್ಥಾಪಿಸಿ , ಅದೇ ಸಮಾಜದವರನ್ನು ಗುರುಗಳನ್ನಾಗಿ ಮಾಡಿ ( ದುರ್ಬಲ ) ಶಕ್ತಿಹೀನ ವರ್ಗಗಳಿಗೆ ಶಕ್ತಿ ತುಂಬಿದ್ದಾರೆ . ಅವರ ಪ್ರಗತಿಯ ಕನಸುಗಳ ಸಾಕಾರದಲ್ಲಿ ಚಿತ್ರದುರ್ಗದ ಶ್ರೀ ಮಾಚಿದೇವ ಮಹಾಸಂಸ್ಥಾನ ಮಠವೂ ಒಂದು ! ಚಿತ್ರದುರ್ಗದ ಶ್ರೀ ಮಾಚಿದೇವ ಮಹಾಸಂಸ್ಥಾನ ಮಠವು ಮಡಿವಾಳ ಜನಾಂಗದಲ್ಲಿ ಸಂಘಟನೆಯ ಕ್ರಾಂತಿ ಮಾಡಿ ಸಾಮಾಜಿಕ ಸಂಚಲನವನ್ನುಂಟು ಮಾಡಿದೆ . ಈ ದಶಮಾನ ಅನೇಕ ಅನುಭವಗಳನ್ನು ತಂದುಕೊಟ್ಟು ಸಾಧನೆಗಳಿಗೆ ಸಾಕ್ಷಿಯಾಗಿದೆ .
ಈ ಎಲ್ಲ ಸಾಧನೆಗಳು ನಮೊಂದಿಗೆ ನಿಮ್ಮೆಲ್ಲರ ತಂಡರೂಪದ ಶಮದಿಂದಲೇ ಆಗಿವೆ . ಮನಸು ಮಾಡಿದರೆ ಏನನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಕಳೆದ ಹತ್ತು ವರ್ಷಗಳ ಕಾಲವೇ ಜ್ವಲಂತ ನಿದರ್ಶನವಾಗಿದೆ . ಅದುವೇ ಸಾರ್ಥಕ ದಶಮಾನವಾಗಿದೆ . ಇದೊಂದು ಅಭೂತಪೂರ್ವವಾದ ದಶಮಾನ , ಈ ಸಮ್ಮೇಳನಕ್ಕೆ ನಾಡಿನ ಪ್ರಮುಖ ಮಠಾಧೀಶರು , ರಾಜಕಾರಣಿಗಳು , ಸಾಹಿತಿಗಳು ಮತ್ತು ಹೊರರಾಜ್ಯ ಸಮಾಜದ ಬಂದುಗಳು ಬರುವುದರಿಂದ ಈ ಕಾರ್ಯಕ್ರಮವನ್ನು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕಾಗಿ ವಿನಂತಿ ಉಜ್ವಲ ಭವಿಷ್ಯಕ್ಕಾಗಿ ನಿಮ್ಮ ದೇಣಿಗೆ # SRI MACHIDEVA MAT , STATE BANK OF INDIA ” CHITRASURGA ACCOUNT NO : 30110063927 , IFSC CODE : SBINO005618 ನಮೊಂದಿಗೆ ಕರ್ನಾಟಕ ರಾಜ್ಯ ಮಡಿವಾಳ ಸಂಘದ ಅಧ್ಯಕ್ಷರು , ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು , ಕರ್ನಾಟಕ ರಾಜ್ಯ ಮಹಿಳಾ ಘಟಕ ಮತ್ತು ಯುವ ಘಟಕದ ಅಧ್ಯಕ್ಷರು , ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಅಲ್ಲಾ , ತಾಲ್ಲೂಕು , ಮಡಿವಾಳ ಸಂಘಗಳ ಅಧ್ಯಕ್ಷರು , ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು , ಜಿಲ್ಲಾ ತಾಲ್ಲೂಕು ಮಹಿಳಾ ಮತ್ತು ಯುವ ಘಟಕದ ಅಧ್ಯಕ್ಷರು , ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು ಸಂಸ್ಥೆಗಳು ಆಪ್ಗಳು ಸಮಿತಿಗಳು ಒಕ್ಕೂಟಗಳು ಮತ್ತು ಮರಿ ಕಟ್ಟೆಗಳ ಅಧ್ಯಕ್ಷರು , ಕಾರ್ಯದರ್ಶಿ ಮತ್ತು ಪದಾಧಿಕಾರಿಗಳು ಹಾಗೂ ಸಮಾಜದ ಹಿರಿಯ ಮುಖಂಡರು , ಕುಲಬಂಧುಗಳು ಉತ್ಸಾಹಿ ಬಾಂಧವರೇ ಸಾಧನೆಯ ಸಾರ್ಥಕತೆಯನ್ನು ಸವಿಯಲು ಲಕ್ಷ ಲಕ್ಷ ಸಂಖ್ಯೆಯಲ್ಲಿ ಬನ್ನಿರಿ !
ಸಂಪರ್ಕಿಸಿ : ಜಗದ್ಗುರು ಶ್ರೀ ಮಾಚಿದೇವ ಮಹಾಸಂಸ್ಥಾನ ಮಠ ( ಮಡಿವಾಳ , ಗೋಧಿ , ಅಗಸ , ಪರೀಟ , ರಜಕ , ಚಾಕಲ , ಮಣ್ಣಿನ ಸಾಕಲ , ಮನ , ಪೆರೇಡಸ್ , ಸಾಕಲವಾಡು ಜನಾಂಗದ ಗುರುಪೀS ) ರಾಷ್ಟ್ರೀಯ ಹೆದ್ದಾರಿ 4 , ದಾವಣಗೆರೆ ರಸ್ತೆ , ಚಿತ್ರದುರ್ಗ – 577502 ದೂ : 9620839656 / 9448442512 ಇಮೇಲ್ : machidevarmatt9 @ gmail . com ವೆಬ್ಸೈಟ್ : www . machidevarmattin
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.
ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.
ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ
ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್, ಚೇತನ್ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.
ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.
ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.





