Connect with us

ಸಿನಿ ಸುದ್ದಿ

ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಮೇಲೆ ದೂರು ದಾಖಲು

Published

on

ಸುದ್ದಿದಿನ ಡೆಸ್ಕ್ : ಖ್ಯಾತ ಕನ್ನಡ ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಮೇಲೆ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯರಾದ ವೆಂಕಟರಾಜು ಅವರಿಂದ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.

ಹಿರಿಯ ಪತ್ರಕರ್ತ ಬಿ.ಜಿ.ವೈಕುಂಠರಾಜು ರವರನ್ನ ವೈಯುಕ್ತಿಕವಾಗಿ ತೇಜೋವಧೆ ಮಾಡಿದ ನಿಟ್ಟಿನಲ್ಲಿ ಖಾಸಗಿ ದೂರು ದಾಖಲಾಗಿದ್ದು, 1 ಕೋಟಿಗೆ ಮಾನನಷ್ಟ ಪರಿಹಾರವಾಗಿ 8ನೇ ACMM ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಿಸಿದ್ದಾರೆ ವೆಂಕಟರಾಜು.

ಬಿ.ಜಿ.ವೈಕುಂಠರಾಜುರವರು ಕರ್ನಾಟಕ ನಾಟಕ ಹಾಗೂ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾಗಿದ್ದವರು, ನಾಗತಿಹಳ್ಳಿ ಚಂದ್ರಶೇಖರ್ ಮಾರ್ಗದರ್ಶನದಲ್ಲಿ ಪರಮೇಶ್ವರ್ ನಿರ್ದೇಶಿಸಿದ್ದ ಬಿ ಎಲ್ ವೇಣು ರವರ ಸಾಕ್ಷ್ಯಚಿತ್ರ ದಲ್ಲಿ ವೈಯಕ್ತಿಕ ತೇಜೋವಧೆ ಮಾಡಿರೋ ಆರೋಪ ಹಿನ್ನೆಲೆ ದೂರು ದಾಖಲಾಗಿದೆ.

ಸರ್ಕಾರದ ಬೆಳ್ಳಿಹೆಜ್ಜೆ ಕಾರ್ಯಕ್ರಮದಲ್ಲಿ ಸಾಕ್ಷ್ಯಚಿತ್ರ ಪ್ರಕಟಗೊಂಡಿತ್ತು. ಈ ನಿಟ್ಟಿನಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ವೆಂಕಟರಾಜು ಅವರಿಂದ ಖಾಸಗಿ ದೂರು ದಾಖಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ನಾಲ್ಕನೇ ಮದುವೆಗೆ ಸಜ್ಜಾದ್ರು ನಟಿ ವನಿತಾ ವಿಜಯಕುಮಾರ್

Published

on

ಸುದ್ದಿದಿನಡೆಸ್ಕ್:ಹಿರಿಯ ನಟ ವಿಜಯಕುಮಾರ್ ಮತ್ತು ಅವರ ಎರಡನೇ ಪತ್ನಿ ನಟಿ ಮಂಜುಳಾ ಅವರ ಹಿರಿಯ ಪುತ್ರಿ ವನಿತಾ ವಿಜಯಕುಮಾರ್. ತಮ್ಮ 15 ನೇ ವಯಸ್ಸಿನಲ್ಲಿಯೇ ತಮಿಳು ಸಿನಿಮಾದಲ್ಲಿ ನಾಯಕಿಯಾಗಿ ನಟಿಸುವ ಅವಕಾಶ ಪಡೆದರು.

ಆ ಸಾಲಿನಲ್ಲಿ ನಟ ವಿಜಯ್ ಜೊತೆಗೆ ವನಿತಾ ವಿಜಯಕುಮಾರ್ 1995 ರಲ್ಲಿ ನಟಿಸಿದ್ದ ‘ಚಂದ್ರಲೇಖಾ’ ಚಿತ್ರ ಮಿಶ್ರ ಪ್ರತಿಕ್ರಿಯೆ ಪಡೆದು ಸೋಲು ಕಂಡಿತು. ಇದಾದ ಬಳಿಕ ‘ಮಾಣಿಕ್ಯಂ’ ಚಿತ್ರದಲ್ಲಿ ನಟಿಸಿದ ವನಿತಾ ವಿಜಯಕುಮಾರ್, ತೆಲುಗು ಮತ್ತು ಮಲಯಾಳಂನಲ್ಲಿ ತಲಾ ಒಂದು ಚಿತ್ರದಲ್ಲಿ ಮಾತ್ರ ನಟಿಸಿದ್ದಾರೆ.

ಮೊದಲ ಪತಿಗೆ ವಿಚ್ಛೇದನ ನೀಡಿದ ಕೆಲವೇ ತಿಂಗಳಲ್ಲಿ ಆನಂದ್ ಜಯರಾಜನ್ ಎಂಬವರನ್ನು ಎರಡನೇ ಮದುವೆಯಾದರು ವನಿತಾ ವಿಜಯಕುಮಾರ್. ಎರಡನೇ ಪತಿಯ ಮೂಲಕ ಜಯನಿತಾ ಎಂಬ ಮಗಳು ವನಿತಾಗೆ ಜನಿಸಿದಳು. ಬಳಿಕ 2012 ರಲ್ಲಿ ಅವರಿಂದಲೂ ವಿಚ್ಛೇದನ ಪಡೆದರು. ಮತ್ತೆ ಸಿನಿಮಾದಲ್ಲಿ ನಟಿಸುತ್ತೇನೆ ಎಂದು ಹೇಳಿ.. ಅವರೇ ನಿರ್ಮಾಪಕರಾಗಿ ಕಣಕ್ಕಿಳಿದು ಮತ್ತೆ ಕಮ್ ಬ್ಯಾಕ್ ಕೊಟ್ಟ ಚಿತ್ರ ‘ಎಂಜಿಆರ್, ಶಿವಾಜಿ, ರಜನಿ, ಕಮಲ್’. ಈ ಚಿತ್ರವನ್ನು ನೃತ್ಯ ನಿರ್ದೇಶಕ ರಾಬರ್ಟ್ ಮಾಸ್ಟರ್ ನಿರ್ಮಿಸಿ ನಾಯಕನಾಗಿಯೂ ನಟಿಸಿದ್ದರು. ರಾಬರ್ಟ್‌ಗೆ ಜೋಡಿಯಾಗಿ ವನಿತಾ ನಟಿಸಿದ್ದರು.

ಈ ಪ್ರೇಮ ವಿವಾದ ವನಿತಾ ಅವರ ಜೀವನದಲ್ಲಿ ಅಂತ್ಯಗೊಂಡ ನಂತರ, ನಿಜ ಜೀವನದಲ್ಲಿ.. ಅವರ ಕುಟುಂಬದಿಂದಾಗಿ ಹಲವಾರು ಸಮಸ್ಯೆಗಳನ್ನು ಎದುರಿಸಬೇಕಾಯಿತು. ಆಸ್ತಿ ವಿಚಾರವಾಗಿ ನಡೆದ ಗಲಾಟೆ ವನಿತಾ ವಿಜಯಕುಮಾರ್ ಅವರನ್ನು ಕುಟುಂಬದಿಂದ ಸಂಪೂರ್ಣವಾಗಿ ದೂರ ಮಾಡಿತು. ಒಂದು ಹಂತದಲ್ಲಿ ಆರ್ಥಿಕವಾಗಿ ಹಲವು ಕಷ್ಟಗಳನ್ನು ಅನುಭವಿಸುತ್ತಿದ್ದ ವನಿತಾ ವಿಜಯಕುಮಾರ್ ಅವರಿಗೆ ಮತ್ತೆ ಬೆಳ್ಳಿತೆರೆಗೆ ಮರಳಲು ಅವಕಾಶ ಮಾಡಿಕೊಟ್ಟಿದ್ದು, ಬಿಗ್ ಬಾಸ್ ಕಾರ್ಯಕ್ರಮ.

ಈ ಚಾನೆಲ್ ಸಂಬಂಧ ಪೀಟರ್ ಪಾಲ್ ಎಂಬುವವರೊಂದಿಗೆ ಸ್ನೇಹ ಬೆಳೆಸಿದ್ದು, ಇಬ್ಬರ ನಡುವೆ ಮೂಡಿದ ಪ್ರೇಮ 2020 ರಲ್ಲಿ ಮದುವೆಯಲ್ಲಿ ಕೊನೆಗೊಂಡಿತು. ಕ್ರಿಶ್ಚಿಯನ್ ಸಂಪ್ರದಾಯದಂತೆ ಮನೆಯಲ್ಲೇ ನಡೆದ ಈ ಮದುವೆ ಸರಿಯಾಗಿ ನೋಂದಣಿಯಾಗಲಿಲ್ಲ. ಇನ್ನು ಪೀಟರ್ ಪಾಲ್ ಅವರ ಕುಡಿತದ ಚಟದಿಂದಾಗಿ ಮೂರೇ ತಿಂಗಳಲ್ಲಿ ವನಿತಾ ವಿಜಯಕುಮಾರ್ ಅವರಿಂದ ದೂರವಾದರು. ಇದಾದ ಬಳಿಕ ತಮ್ಮ ಸಿನಿಮಾ ಜೀವನದತ್ತಲೇ ಗಮನ ಹರಿಸಿರುವ ವನಿತಾ, ಸತತವಾಗಿ ಹಲವು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಪ್ರಶಾಂತ್ ನಟನೆಯ ‘ಅಂಧಗನ್’ ಚಿತ್ರದಲ್ಲಿಯೂ ಅವರ ಅಭಿನಯ ಮೆಚ್ಚುಗೆ ಗಳಿಸಿತು.

ವಿವಾದಗಳಿಗೆ ಹೆಸರಾಗಿರುವ ವನಿತಾ ವಿಜಯಕುಮಾರ್, ಈಗ ನಾಲ್ಕನೇ ಮದುವೆಗೆ ಸಿದ್ಧರಾಗಿದ್ದಾರಾ ಎಂಬ ಅನುಮಾನ ಮೂಡಿದೆ. ಅದೇನೆಂದರೆ ‘ಎಂಜಿಆರ್ ಶಿವಾಜಿ ರಜನಿ ಕಮಲ್’ ಚಿತ್ರದಲ್ಲಿ ನಟಿಸುವಾಗ ತಮ್ಮೊಂದಿಗೆ ಪ್ರೇಮ ಸುದ್ದಿಯಲ್ಲಿ ಸಿಲುಕಿಕೊಂಡಿದ್ದ ಬಿಗ್ ಬಾಸ್ ಸೆಲೆಬ್ರಿಟಿ ರಾಬರ್ಟ್ ಮಾಸ್ಟರ್‌ಗೆ.. ಬೀಚ್‌ನಲ್ಲಿ, ಬಿಕಿನಿ ತೊಟ್ಟು ಮಂಡಿಯೂರಿ ಪ್ರಪೋಸ್ ಮಾಡಿದ್ದಾರೆ. ಇದೇ ವೇಳೆ ಇದಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 5 ರಂದು ಮಹತ್ವದ ಮಾಹಿತಿ ಹೊರಬೀಳಲಿದೆ ಎನ್ನಲಾಗುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗನ್‌ ಮಿಸ್‌ ಫೈರ್‌ | ಬಾಲಿವುಡ್ ನಟ ಗೋವಿಂದ ಆಸ್ಪತ್ರೆಗೆ ದಾಖಲು

Published

on

ಸುದ್ದಿದಿನ,ಮುಂಬೈ:ಗನ್‌ ಮಿಸ್‌ ಫೈರ್‌ ಆದ ಕಾರಣ ಬಾಲಿವುಡ್‌ ನಟ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಇಂದು ಮುಂಜಾನೆ ನಡೆದಿದೆ. ಆದರೆ ಗುಂಡು ಗೋವಿಂದ ಅವರ ಕಾಲಿಗೆ ತಗುಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರಾಥಮಿಕ ವರದಿಯ ಪ್ರಕಾರ ತನ್ನದೇ ಗನ್‌ ಅನ್ನು ಸ್ವಚ್ಛಗೊಳಿಸುತ್ತಿದ್ದಾಗ ಈ ಅವಘಡ ನಡೆದಿದೆ. ಪೊಲೀಸರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಗೋವಿಂದ ಅವರ ಬಳಿಯಿದ್ದ ಗನ್‌ಗೆ ಪರವಾನಗಿ ಪಡೆದುಕೊಳ್ಳಲಾಗಿತ್ತು ಎಂದು ತಿಳಿಸಿದ್ದಾರೆ. ನಟ ಗೋವಿಂದ ಹಾಗೂ ಕುಟುಂಬಸ್ಥರು ಈ ಕುರಿತು ಇದುವರೆಗೂ ಯಾವುದೇ ಹೇಳಿಕೆ ನೀಡಿಲ್ಲ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಟ ದರ್ಶನ್‌ಗೆ ರಾಜಾತಿಥ್ಯ ; ಏಳು ಮಂದಿ ಜೈಲು ಅಧಿಕಾರಿ, ಸಿಬ್ಬಂದಿ ಅಮಾನತು

Published

on

ಸುದ್ದಿದಿನಡೆಸ್ಕ್:ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಏಳುಮಂದಿ ಜೈಲು ಅಧಿಕಾರಿ, ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈಲರ್ ಶರಣಬಸವ ಅಮೀನಗಢ, ಸಹಾಯಕ ಜೈಲರ್ ಪುಟ್ಟಸ್ವಾಮಿ, ಜೈಲ್ ಹೆಡ್ ವಾರ್ಡರ್‌ಗಳಾದ ವೆಂಕಪ್ಪ, ಸಂಪತ್, ವಾರ್ಡರ್‌ಗಳಾದ ಬಸಪ್ಪ, ಪ್ರಭು, ಶ್ರೀಕಾಂತ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಘಟನೆ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ವಿರುದ್ಧವೂ ಸಹ ತನಿಖೆ ನಡೆಯುತ್ತಿದೆ. ಮುಂದೆ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು.

ಇನ್ನೊಂದೆಡೆ, ಜೈಲಿನಲ್ಲಿ ನಟ ದರ್ಶನ್ ಹಾಗೂ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ನಿರ್ದೇಶಿಸಿದ್ದಾರೆ. ಅಲ್ಲದೆ, ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ13 hours ago

ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ : ಸಿಎಂ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ರಾಜ್ಯದ ಎಲ್ಲ ಪರಿಶ್ಟಿಷ್ಟ ವರ್ಗದ ವಸತಿ ಶಾಲೆಗಳಿಗೆ ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನಸೌಧ ಮುಂಭಾಗದಲ್ಲಿರುವ ವಾಲ್ಮೀಕಿ...

ದಿನದ ಸುದ್ದಿ18 hours ago

ಕರ್ನಾಟಕದಲ್ಲಿ ವಿವಿಧ ಕ್ಷೇತ್ರಗಳ ಐವರು ಸಾಧಕರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ

ಸುದ್ದಿದಿನಡೆಸ್ಕ್:ರಾಮಾಯಣದ ಕರ್ತೃ ಮಹರ್ಷಿ ವಾಲ್ಮೀಕಿ ಜಯಂತಿ ಇಂದು. ಈ ಹಿನ್ನೆಲೆಯಲ್ಲಿ ವಿವಿಧೆಡೆ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದೆ. ಮಹರ್ಷಿ ವಾಲ್ಮೀಕಿಯನ್ನು ’ಆದಿ ಕವಿ’ ಅಥವಾ ಸಂಸ್ಕೃತ ಭಾಷೆಯ ಮೊದಲ...

ದಿನದ ಸುದ್ದಿ2 days ago

ಜಾತಿ ಪ್ರಮಾಣಪತ್ರ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಸುದ್ದಿದಿನಡೆಸ್ಕ್:ಜಾತಿ ಪ್ರಮಾಣ ಪತ್ರದ ಬಗೆಗಿನ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ...

ದಿನದ ಸುದ್ದಿ2 days ago

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ

ಸುದ್ದಿದಿನಡೆಸ್ಕ್:ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ದೆಹಲಿಯಲ್ಲಿಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಶಿಗ್ಗಾಂವಿ, ಚನ್ನಪಟ್ಟಣ ಮತ್ತು ಸಂಡೂರು ವಿಧಾನಸಭಾ...

ದಿನದ ಸುದ್ದಿ3 days ago

ಅಕ್ಟೋಬರ್ 20 ರಂದು ಬೃಹತ್ ಉದ್ಯೋಗ ಮೇಳ

ಸುದ್ದಿದಿನ,ದಾವಣಗೆರೆ:ಎನ್‍ಐಇಎಲ್‍ಟಿ ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಸಹಕಾರದೊಂದಿಗೆ ಅಕ್ಟೋಬರ್ 20 ರಂದು ಬೆಂಗಳೂರು ನಗರ ಜಿಲ್ಲೆಯ ಕೆಎಲ್‍ಎಫ್ ಸಂಸ್ಥೆಯ ಎಸ್.ನಿಜಲಿಂಗಪ್ಪ ಮಹಾವಿದ್ಯಾಲಯ, #1040, 28ನೇ ಕ್ರಾಸ್...

ದಿನದ ಸುದ್ದಿ4 days ago

ಯಲ್ಲಮ್ಮನ ಸವದತ್ತಿ ಕ್ಷೇತ್ರಾಭಿವೃದ್ಧಿಗೆ ಆದ್ಯತೆ : ಸಿಎಂ ಸಿದ್ದರಾಮಯ್ಯ ಭರವಸೆ

ಸುದ್ದಿದಿನಡೆಸ್ಕ್:ಯಲ್ಲಮ್ಮನ ಗುಡ್ಡವಿರುವ ಸವದತ್ತಿ ಕ್ಷೇತ್ರಕ್ಕೆ ಪ್ರತಿವರ್ಷ ಕೋಟ್ಯಾಂತರ ಭಕ್ತಾದಿಗಳು ಭೇಟಿ ನೀಡುತ್ತಾರೆ. ಅವರಿಗೆ ಉತ್ತಮ ವಸತಿ ಹಾಗೂ ಸುಗಮ ದರ್ಶನಕ್ಕೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ...

ದಿನದ ಸುದ್ದಿ6 days ago

ತೆರಿಗೆ ಹಂಚಿಕೆಯಲ್ಲಿ ಕೇಂದ್ರದ ತಾರತಮ್ಯ ನೀತಿ ವಿರುದ್ಧ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ : ಡಿಸಿಎಂ ಡಿ.ಕೆ.ಶಿವಕುಮಾರ್

ಸುದ್ದಿದಿನ,ಬೆಂಗಳೂರು:ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ತಾರತಮ್ಯವಾಗಿದ್ದು ತೆರಿಗೆ ತಾರತಮ್ಯ ಖಂಡಿಸಿ “ನಮ್ಮ ತೆರಿಗೆ ನಮ್ಮ ಹಕ್ಕು” ಎಂದು ಪ್ರತಿಭಟನೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ...

ದಿನದ ಸುದ್ದಿ6 days ago

ಮೈಸೂರು ದಸರಾ | ಅಂಬಾರಿ ಹೊತ್ತ ಅಭಿಮನ್ಯು ಜಂಬೂ ಸವಾರಿ

ಸುದ್ದಿದಿನಡೆಸ್ಕ್:ಮೈಸೂರು ದಸರಾ ಅಂಗವಾಗಿ ಶನಿವಾರ ವಿಜಯದಶಮಿಯಂದು ಅದ್ಧೂರಿ ಜಂಬೂ ಸವಾರಿ ನಡೆಯಿತು. ಅಕ್ಟೋಬರ್ 3 ರಂದು ದಸರಾ ಉದ್ಘಾಟನೆಯಾದಾಗಿನಿಂದ ಮೈಸೂರು ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಿದೆ. ಮೈಸೂರಿನ ಜಂಬೂಸವಾರಿಯಲ್ಲಿ...

ದಿನದ ಸುದ್ದಿ6 days ago

ಇಂದಿನಿಂದ ಒಂದು ವಾರ ರಾಜ್ಯದಲ್ಲಿ ಭಾರೀ‌ ಮಳೆ

ಸುದ್ದಿದಿನಡೆಸ್ಕ್:ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ವ್ಯಾಪಕ ಮಳೆಯಾಗಲಿದೆ. ಇಂದು ಮಧ್ಯಾಹ್ನದಿಂದಲೇ ನಗರದ ಹಲವೆಡೆ ಜಿಟಿಜಿಟಿ ಮಳೆ ಶುರುವಾಗಿದೆ. ಜೊತೆಗೆ ಮುಂದಿನ 7...

ದಿನದ ಸುದ್ದಿ7 days ago

ನಾಡಿನೆಲ್ಲೆಡೆ ಆಯುಧಪೂಜೆ ಸಡಗರ; ಮೈಸೂರು ಅರಮನೆಯಲ್ಲಿ ಪಟ್ಟದ ಹಸು, ಆನೆ, ಆಯುಧಗಳಿಗೆ ಯದುವೀರ್ ಒಡೆಯರ್ ಪೂಜೆ

ಸುದ್ದಿದಿನಡೆಸ್ಕ್:ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಮೈಸೂರು ಅರಮನೆಯಲ್ಲಿ ಶರನ್ನವರಾತ್ರಿಯ 9ನೇ ದಿನವಾದ ಇಂದು ಸಾಂಪ್ರದಾಯಿಕವಾಗಿ ಆಯುಧಪೂಜೆ ನೆರವೇರಿತು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ...

Trending