Connect with us

ಸಿನಿ ಸುದ್ದಿ

ಕೆಜಿಎಫ್ ಒಂದು ಅನನ್ಯ ಅನುಭವ..!

Published

on

ಕೆಜಿಎಫ್ ಬರಿಗಣ್ಣಿಗೆ ಮಾತ್ರ ಕಾಣುವ, ಕಿವಿಗಳಿಗೆ ಮಾತ್ರ ಕೇಳಿಸುವ ಸಿನಿಮಾ ಅಲ್ಲ. ಕೆಜಿಎಫ್ ಒಂದು ಅನನ್ಯ ಅನುಭವ. ಅದು ಬೇರೆ ಬೇರೆ ರೂಪಗಳಲ್ಲಿ‌ ನಿಮ್ಮನ್ನು ಮುಟ್ಟುತ್ತಿರುತ್ತದೆ, ಒಳಗೊಳಗೆ ಪ್ರವಹಿಸುತ್ತಿರುತ್ತದೆ. ನಿಸ್ಸಂಶಯವಾಗಿ ಕೆಜಿಎಫ್ ಒಂದು ಮಹಾಕಾವ್ಯ. ಪ್ರಶಾಂತ್ ನೀಲ್ ಹೊಸದೇನನ್ನೋ ಮಾಡಿದ್ದಾರೆ, ಅದನ್ನು‌‌ ನೀವು ನಿಮಗೆ ಸಮಾಧಾನವಾಗುವಂತೆ ವಿವರಿಸಲಾರಿರಿ. ಮೊದಲೇ ಹೇಳಿದಂತೆ ಇದೊಂದು ಅನುಭವ, ಅನುಭವಿಸಿಯೇ ತೀರಬೇಕು.

ಯಶ್ ಈ ಇಡಿ ಸಿನಿಮಾವನ್ನು ತಮ್ಮ ಭುಜದ ಮೇಲೆ ಹೊತ್ತು ಸಾಗಿದ್ದಾರೆ. ಅವರು ಪ್ರತಿಫ್ರೇಮ್ ನಲ್ಲೂ ಕಣ್ಣಿಗೆ ಹಬ್ಬ. ಆಗಾಗ ನಿಮ್ಮ ಕೈಗಳ ಮೇಲಿನ ರೋಮಗಳು ಎದ್ದುನಿಂತರೆ ಅದಕ್ಕೆ ಯಶ್ ಕಾರಣ. ಈ ಸಿನಿಮಾದಲ್ಲಿ ಯಶ್ ಹೊರತಾಗಿ ಇನ್ನೊಬ್ಬರನ್ನು ಆ ಪಾತ್ರದಲ್ಲಿ ಕಲ್ಪಿಸಿಕೊಳ್ಳಲಾಗದು. ಯಶ್ ಈ ಸಿನಿಮಾಗಾಗಿಯೇ ಕಡೆದಿಟ್ಟ ವಿಗ್ರಹ. ಅವರು ಇಲ್ಲಿ ಬರಿಯ ಹೀರೋ ಮಾತ್ರವಲ್ಲ ಸೂಪರ್ ಹೀರೋ, ಥೇಟ್ ನಮ್ಮ ಸ್ಪೈಡರ್ ಮ್ಯಾನ್, ಸೂಪರ್ ಮ್ಯಾನ್ ಗಳ ಹಾಗೆ. ಸೂಪರ್ ಹೀರೋಗಳಿಗಾದರೂ ನಾಲ್ಕು ಏಟು ಬೀಳಬಹುದು, ಕೆಳಗೆ ಬೀಳಬಹುದು. ರಾಕಿ ಭಾಯ್ ನಮ್ಮ ಫ್ಯಾಂಟಸಿ ಜಗತ್ತಿನ ದೊರೆ, ಅವನಿಂದ ಅಸಾಧ್ಯವಾದದ್ದು ಏನೂ ಇಲ್ಲ, ಅವನನ್ನು ಯಾರಿಂದಲೂ ಮಣಿಸಲಾಗದು.

ಪ್ರಶಾಂತ್ ನೀಲ್ ಗೆ ಆಕ್ಷನ್ ಇಷ್ಟವಿರಬಹುದು. ಆದರೆ ತೆಲುಗು‌ ಸಿನಿಮಾಗಳ ಹಾಗೆ ಭೀಬತ್ಸ ದೃಶ್ಯಗಳು ಇಲ್ಲಿಲ್ಲ. ಕ್ರೌರ್ಯ ಕಣ್ಣಿಗೆ ರಾಚಿಸಿದರೂ ಅದು ನಮ್ಮ ಎದೆಗೆ ಇಳಿಯುವುದನ್ನು ತಡೆದುಬಿಡುತ್ತಾರೆ‌ ಪ್ರಶಾಂತ್. ಒಬ್ಬ ಸಣ್ಣ ಹುಡುಗನ ದಾರುಣ ಕೊಲೆಯೊಂದನ್ನು ಯಶ್ ಅವರ ಅದ್ಭುತ ರಿಯಾಕ್ಷನ್ ಮತ್ತು ಒಂದಿಡೀ ಸಮೂಹದ ದೊಡ್ಡ ನಿಟ್ಟುಸಿರಿನೊಂದಿಗೆಯೇ ತೋರಿಸಿಬಿಡುತ್ತಾರೆ ಅವರು. ನೋಡಿ ನಿಟ್ಟುಸಿರಾಗೋ ಸರದಿ ನಮ್ಮದಷ್ಟೆ. ನಿರ್ದೇಶಕರ ತಂಡ ಅಸಾಧ್ಯ ಕೆಲಸಗಳನ್ನು ಮಾಡಿದೆ. ಕಥೆಗೆ ಸಂಬಂಧಿಸಿದ ರಿಸರ್ಚ್ ಗಳಿಂದ ಹಿಡಿದು ಒಂದೇ ಒಂದು ದೃಶ್ಯವೂ ತರ್ಕಹೀನವಾಗದಂತೆ, ಬಾಲಿಷ‌ ಎನಿಸದಂತೆ, ಕ್ಲೀಷೆಯಾಗದಂತೆ ಈ ತಂಡ ಪರಿಶ್ರಮ ವಹಿಸಿದೆ.

ಸಿನಿಮಾದ ಸ್ಕ್ರೀನ್ ಪ್ಲೇ ಈ ಹೊತ್ತಿನವರೆಗಿನ ಅದ್ಭುತ ಪ್ರಯೋಗಗಳಲ್ಲಿ ಒಂದು. ಪ್ರಶಾಂತ್ ನೀಲ್ ಕಸುಬುದಾರಿಕೆಗೆ ಜವಾಬೇ ಇಲ್ಲ. ಈ ಸ್ಕ್ರೀನ್ ಪ್ಲೇಗೆ ನಿಜವಾದ ಆತ್ಮವನ್ನು ತುಂಬಿರುವ ಸಂಕಲನಕಾರ ಶ್ರೀಕಾಂತ್ ತನ್ನ ಕತ್ತರಿಯನ್ನೂ ಒಂದು ಪಾತ್ರವಾಗಿಸಿದ್ದಾನೆ. ಎರಡನೇ ಚಾಪ್ಟರಿನ ಒಂದೆರಡು ಸೀನ್ ಗಳನ್ನು ಕ್ಲೈಮಾಕ್ಸ್ ಗೂ ಮುನ್ನ ಕಾಣಿಸುವ ಎದೆಗಾರಿಕೆ ಇಲ್ಲಿ ಪ್ರದರ್ಶನಗೊಂಡಿದೆ. ಒಂದೇ ಒಂದು ಕ್ಷಣ ನೀವು ಅತ್ತಿತ್ತ ತಿರುಗದಂತೆ ಮಾಡುವ ಕಲೆಗಾರಿಕೆ ಇಲ್ಲಿ ಸಿದ್ಧಿಸಿದೆ.‌

ಸಿನಿಮಾದ ಛಾಯಾಗ್ರಹಣ ಈ ದೇಶಕ್ಕೇ ಅಪರೂಪದ್ದು. ದೃಶ್ಯಗಳನ್ನು ನ ಭೂತೋ ಎನ್ನುವಂತೆ ಕಟ್ಟಿಕೊಡುವಲ್ಲಿ ಭುವನ್ ಗೌಡ ಅವರಿಗಿರುವ ರಾಕ್ಷಸ ಹಸಿವು ಎದ್ದುಕಾಣುತ್ತದೆ. ಪ್ರತಿಯೊಂದು ಫ್ರೇಮನ್ನೂ ಅವರು ತಾವೇ ಬರೆದ ಚಿತ್ರದಂತೆ ಸೆರೆಹಿಡಿದಿದ್ದಾರೆ. ಸೆಕೆಂಡ್ ಹಾಫ್ ನ ಪ್ರತಿಯೊಂದು ದೃಶ್ಯವೂ ದೃಶ್ಯಕಾವ್ಯಗಳೇ. ಪ್ರತಿ ಫ್ರೇಮ್ ನಿಮ್ಮ ಜತೆ ಮಾತಿಗೆ ಇಳಿಯುತ್ತದೆ.

ರವಿ ಬಸ್ರೂರು ಕೆಜಿಎಫ್ ನ ಮತ್ತೊಬ್ಬ ಹೀರೋ. ಅವರ ಹಿನ್ನೆಲೆ ಸಂಗೀತ ಸಿನಿಮಾದಿಂದ ಒಂದು ಮಿಲಿಮೀಟರ್ ಕೂಡ ಆಚೆ ಹೋಗಿ ನಿಲ್ಲುವುದಿಲ್ಲ. ಪ್ರತಿ ದೃಶ್ಯಗಳ ಜತೆ ಬ್ಲೆಂಡ್ ಆಗಿ ವಿಶೇಷ ಅನುಭೂತಿ ಉಕ್ಕಿಸುತ್ತದೆ. ಹಾಡುಗಳಿಗೂ ಇದೇ ಮಾತು ಹೇಳಬೇಕು.

ಶಿವು ಕುಮಾರ್ ಎಂಬ ಆರ್ಟ್ ಡೈರೆಕ್ಟರ್ ಬಗ್ಗೆ ಏನು ಹೇಳಿದರೂ ಕಡಿಮೆಯೇ. ಸೆಕೆಂಡ್ ಹಾಫ್ ನಲ್ಲಿ ಅವರು ಹಾಕಿರುವ ಸೆಟ್ ಗಳನ್ನು ನೋಡಿ ಬೇರೆ ಸಿನಿಮಾ ನಿರ್ಮಾಪಕದ ಎದೆ ನಡುಗಿ ಹೋಗಿರಬಹುದು. ಮಾರಿ ಪೂಜೆಯ ಸೆಟ್ ಅಂತೂ ಅಸಾಧಾರಣ. ಒಮ್ಮೆ ಎದ್ದು ನಿಂತು ಕ್ಲಾಪ್ ಮಾಡಬೇಕೆನಿಸುತ್ತದೆ‌. ಶಿವು ಮತ್ತು ಅವರ ಹುಡುಗರ ತಂಡ ಕೆಜಿಎಫ್ ಕನಸಿನ ಬಹುಮಖ್ಯ ಪಾತ್ರಧಾರಿಗಳು.

ಯಶ್ ಹೊರತಾಗಿ ಈ ಸಿನಿಮಾದಲ್ಲಿ ಸಾಕಷ್ಟು ಪಾತ್ರಗಳು ತೆರೆಯ ಮೇಲೆ ಅಪ್ಪಳಿಸುತ್ತವೆ. ಅವುಗಳಲ್ಲಿ‌ ಕೆಲವು ಮುಂದಿನ ಚಾಪ್ಟರ್ ಗೆಂದೇ ಮೀಸಲಾಗಿಟ್ಟ ಟ್ರೇಲರ್ ಗಳು! ಎಲ್ಲರೂ ನಿರ್ದೇಶಕರ ನಟರುಗಳೇ! ನಿಮ್ಮ ಕಣ್ಣುಗಳಿಂದಲೇ ಹೆಚ್ಚು ಮಾತಾಡಿ‌ ಎಂದು ಪ್ರಶಾಂತ್ ನೀಲ್ ಈ ಪಾತ್ರಗಳಿಗೆ ಹೇಳಿದಂತಿದೆ. ಆ ಪಾತ್ರಗಳು ಚಾಚೂ ತಪ್ಪದೆ ಹಾಗೇ ಮಾಡಿವೆ. ಹಿರಿಯ ನಟ ಅನಂತ್ ನಾಗ್ ಸಿನಿಮಾದ ಘನತೆಯನ್ನು ಹೆಚ್ಚಿಸಿದ್ದಾರೆ. ಪ್ರಶಾಂತ್ ಹೆಚ್ಚುಗಾರಿಕೆ ಏನೆಂದರೆ ಸಾವಿರಾರು ಜೂನಿಯರ್ ಆಕ್ಟರ್ ಗಳಿಂದಲೂ ಅವರು ಆಕ್ಟಿಂಗ್ ಮಾಡಿಸಿದ್ದಾರೆ. ಜೂನಿಯರ್ ಗಳೂ ಪಳಗಿದ ನಟರಂತೆಯೇ ನಟಿಸಿದ್ದಾರೆ.

ಅತ್ಯುತ್ತಮ ಸಿನಿಮಾ, ನಿರ್ದೇಶನ, ಹೀರೋ, ಸಂಗೀತ, ಕಲಾ ನಿರ್ದೇಶನ, ಸಂಕಲನ ಹೀಗೆ ಕನಿಷ್ಠ 6 ವಿಭಾಗಗಳಲ್ಲಾದರೂ ಕೆಜಿಎಫ್ ಗೆ ಆಸ್ಕರ್ ಪ್ರಶಸ್ತಿ ಬರಲೇಬೇಕು. ಯಾಕೆಂದರೆ ಈ‌ ಸಿನಿಮಾ ಸ್ಪರ್ಧೆ ನೀಡುತ್ತಿರುವುದು ಭಾರತೀಯ ಸಿನಿಮಾಗಳ ಜತೆಯಲ್ಲ, ಹಾಲಿವುಡ್ ಸಿನಿಮಾಗಳ ಜತೆ. ಸಿನಿಮಾದ ಕ್ರಾಫ್ಟ್ ಹಾಗಿದೆ. ಇದು ಬಾಹುಬಲಿಯನ್ನು ಮೀರಿಸುವ ಸಿನಿಮಾವೇ ಎಂದು ಯಾರಾದರೂ ಕೇಳಿದರೆ ನನ್ನ ಉತ್ತರ ಹೌದು ಎಂಬುದೇ ಆಗಿರುತ್ತದೆ.

ಕೆಜಿಎಫ್ ಗಿಂತ ಅದ್ಭುತವಾದ ಕನ್ನಡ ಅಥವಾ ಭಾರತೀಯ ಸಿನಿಮಾ ಬಂದಿಲ್ಲವೆಂದಲ್ಲ, ಬಂದಿವೆ. ಆದರೆ ಕೆಜಿಎಫ್ ಸಿನಿಮಾದ ಕ್ರಾಫ್ಟ್ ಹಿಂದೆಂದೂ ಬಂದಿರಲು ಸಾಧ್ಯವಿಲ್ಲ. ಇಷ್ಟೊಂದು ಪರಿಶ್ರಮ ಮತ್ತು ಕನಸುಗಳನ್ನು ತೊಡಗಿಸಿ ಮಾಡಿದ ಸಿನಿಮಾ ಇನ್ನೊಂದಿರಲು ಸಾಧ್ಯವಿಲ್ಲ. ಇಡೀ ತಂಡ ಸಿನಿಮಾವನ್ನು ಜೀವಿಸಿಬಿಟ್ಟಿದೆ ಎಂದರೆ ಅದು ಅತಿಶಯೋಕ್ತಿ ಅಲ್ಲ. ಕನ್ನಡ ಚಿತ್ರರಂಗವನ್ನು ಹೊಸ ದಾರಿಗೆ ಎಳೆದೊಯ್ದಿದ್ದಾರೆ ಪ್ರಶಾಂತ್ ಮತ್ತು ಯಶ್ ಜೋಡಿ. ಅವರೇ ಹೇಳಿದಂತೆ ಇದು ಅವರ ಕನಸು ಮಾತ್ರವಲ್ಲ, ನಮ್ಮೆಲ್ಲರ ಕನಸು. ನಮ್ಮ ಕನಸನ್ನು ಅವರು ನಿಜವಾಗಿಸಿದ್ದಾರೆ.

ಚಿತ್ರ‌ನಿರ್ಮಾಪಕ ವಿಜಯ್ ಕಿರಗಂದೂರು ಎಂಬ ಮಹಾಸಾಹಸಿಗೆ ಕೋಟಿಗಳಂತೂ ಹರಿದುಬರಲಿವೆ. ಆದರೆ ನಮ್ಮ ಕೋಟಿ ಕೋಟಿ ಚಪ್ಪಾಳೆಗಳು ಸಲ್ಲಲೇಬೇಕು.

ಸಿನಿಮಾ ಕಥೆ, ಸಂಭಾಷಣೆ, ಹೂರಣದ ಬಗ್ಗೆ ಏನನ್ನೂ ಹೇಳಿಲ್ಲ. ಹೇಳಬಾರದು ಕೂಡ. ಯಾಕೆಂದರೆ ಇಂಥ ಸಿನಿಮಾಗಳನ್ನು ಯಾವ ರಿವ್ಯೂ ಕೂಡ ಕೇಳದೇ ಹೋಗಿನೋಡಬೇಕು.

ದಿನೇಶ್ ಕುಮಾರ್ ಎಸ್.ಸಿ. (ದಿನೂ)

ದಿನದ ಸುದ್ದಿ

ರೇಣುಕಾಸ್ವಾಮಿ ಕೊಲೆ ಮತ್ತು ಗಂಡುಹೆಣ್ಣಿನ ನಡುವಿನ ಸಂಬಂಧ

Published

on

  • ರಾಜೇಂದ್ರ ಬುರಡಿಕಟ್ಟಿ

ರೇಣುಕಾಸ್ವಾಮಿ ಕೊಲೆ ಕೇಸನ್ನು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚಿಸುವ ಅನೇಕ ಸ್ನೇಹಿತರು ಈ ಕೇಸಿನಲ್ಲಿ ಮೊದಲನೆಯ ಮತ್ತು ಎರಡನೆಯ ಆರೋಪಿಗಳೆಂದು ಹೆಸರಿಸಲ್ಪಟ್ಟ ದರ್ಶನ್ ಮತ್ತು ಪವಿತ್ರ ಗೌಡ ಅವರ ನಡುವಿನ ಸಂಬಂಧದ ಬಗ್ಗೆ ಅನಗತ್ಯವಾಗಿ ಚರ್ಚಿಸಿ ಪವಿತ್ರಗೌಡ ಅವರನ್ನು ‘ಇಟ್ಟುಕೊಂಡವಳು’ ಇತ್ಯದಿ ಪದಬಳಸಿ ಹಿಯ್ಯಾಳಿಸಿದ್ದಾರೆ.

ಒಂದು ಟಿವಿ ಚಾನೆಲ್ ನವರು ಅವರನ್ನು ‘ಸೆಕೆಂಡ್ ಹ್ಯಾಂಡ್ ಸುಂದರಿ’ ಎಂದೂ ಕರೆದದ್ದು ವರದಿಯಾಗಿದೆ. ಇದನ್ನು ಮಾಡುವ ಹಕ್ಕು ಯಾರಿಗೂ ಇಲ್ಲ. ನಮ್ಮ ವಿರೋಧ ಇರಬೇಕಾದದ್ದು ಅವರು ರೂಪಿಸಿದ್ದಾರೆ ಎನ್ನಲಾದ ಕೊಲೆಯ ಕೇಸಿನ ಬಗ್ಗೆಯೇ ಹೊರತು ಅವರಿಬ್ಬರ ನಡುವಿನ ವೈಯಕ್ತಿಕ ಸಂಬಂಧದ ಬಗ್ಗೆ ಅಲ್ಲ.

ಗಂಡು ಹೆಣ್ಣಿನ ನಡುವಿನ ಸಂಬಂಧ ಎಂಬುದು ಅತ್ಯಂತ ಸಹಜವಾದದ್ದು. ಯಾರಿಗೆ ಯಾರ ಮೇಲೆ ಯಾವಾಗ ಆಕರ್ಷಣೆ ಉಂಟಾಗಿ ಸಂಬಂಧಗಳು ಬೆಸೆದುಕೊಳ್ಳುತ್ತವೆ ಎಂಬುದನ್ನು ಹೇಳಲಾಗದು. ಇದಕ್ಕೆ ‘ನೈತಿಕ’ ‘ಅನೈತಿಕ’ ಎಂಬ ಹಣೆಪಟ್ಟಿ ಹಚ್ಚಿ ಗೌರವಿಸುವ ಅಥವಾ ಅವಹೇಳನ ಮಾಡುವ ಕ್ರಮ ಸರಿಯಾದದ್ದಲ್ಲ. ಪ್ರತಿಯೊಬ್ಬರಿಗೂ ಆಯ್ಕೆಗಳಿರುತ್ತವೆ. ತಮಗೆ ಬೇಕಾದ ಗಂಡನ್ನು ಅಥವಾ ಹೆಣ್ಣನ್ನು ಆಯ್ದುಕೊಳ್ಳುವ ಅವರೊಡನೆ ಲೈಂಗಿಕ ಸಂಬಂಧವನ್ನು ಇಟ್ಟುಕೊಳ್ಳುವ ಸ್ವಾತಂತ್ರ್ಯವಿದೆ. ಎಲ್ಲರಿಗೂ ಇದೆ. ಅದನ್ನು ಪ್ರಶ್ನಿಸುವ ಹಕ್ಕು ಇತರರಿಗೆ ಇಲ್ಲ. ಪರಸ್ಪರ ಒಪ್ಪಿತ ಲೈಂಗಿಕ ಸಂಬಂಧವು ದೇಶದ ಕಾನೂನಿನ ಪ್ರಕಾರವೂ ಅಪರಾಧವಲ್ಲ.

ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಹಿರಿಯ ಸಾಹಿತಿ ಡಾ. ಶಿವರಾಮ ಕಾರಂತರು ತಮ್ಮ ಅನೇಕ ಕಾದಂಬರಿಗಳ ಮೂಲಕ ಇದಕ್ಕೆ ಸಂಬಂಧಿಸಿದಂತೆ ಒಂದು ತಾತ್ವಿಕತೆಯನ್ನು ನಮಗೆ ರೂಪಿಸಿಕೊಡುತ್ತಾರೆ. ಅದೆಂದರೆ ‘ಲೈಂಗಿಕ ಸುಖ ಎನ್ನುವುದು ಮನುಷ್ಯನ ಬದುಕು ಮನುಷ್ಯನಿಗೆ ನೀಡುವ ಅತ್ಯಂತ ಸುಖದ ಸಂಗತಿಗಳಲ್ಲಿ ಒಂದು. ಅದರಿಂದ ಯಾರೂ ವಂಚಿತರಾಗಬಾರದು. ಪರಸ್ಪರ ಒಪ್ಪಿಕೊಂಡ ಗಂಡು ಹೆಣ್ಣುಗಳ ನಡುವಿನ ಲೈಂಗಿಕ ಸಂಬಂಧದಲ್ಲಿ ಒಂದು ಚೆಲುವು ಇರುತ್ತದೆ. ಇಂತಹ ಒಂದು ಒಳ್ಳೆಯ ಸಂಬಂಧಕ್ಕೆ ಮದುವೆ ಎಂಬುದು ಒಂದು ‘ಪೂರ್ವಾಗತ್ಯ’ವಾಗಬೇಕಿಲ್ಲ. ಗಂಡುಹೆಣ್ಣಿನ ನಡುವಿನ ಒಂದು ಒಳ್ಳೆಯ ಸಂಬಂಧವು ವಿವಾಹದ ಒಳಗೂ ಇರಬಹುದು; ಹೊರಗೂ ಇರಬಹುದು. ಅದೇ ರೀತಿ ಒಂದು ಕೆಟ್ಟ ಸಂಬಂಧವು ವಿವಾಹದ ಒಳಗೂ ಇರಬಹುದು ಹೊರಗೂ ಇರಬಹುದು. ವಿವಾಹದ ಚೌಕಟ್ಟಿನ ಒಳಗಿನ ಒಂದು ಕೆಟ್ಟ ಸಂಬಂಧಕ್ಕಿಂತ ವಿವಾಹದ ಚೌಕಟ್ಟಿನ ಹೊರಗಿನ ಒಳ್ಳೆಯ ಸಂಬಂಧ ಬೆಲೆಯುಳ್ಳದ್ದು.

ಹೀಗಾಗಿ ಯಾರೊಡನೆ ಎಂತಹ ಸಂಬಂಧ ಇಟ್ಟುಕೊಳ್ಳಬೇಕು ಎಂಬುದು ಅವರವರ ವೈಯಕ್ತಿಕ ವಿಚಾರ. ಅದರಲ್ಲಿ ಇತರರು ತಲೆಹಾಕುವುದು ಅವಿವೇಕತನ. ‘ಮದುವೆ ಎಂಬುದು ಏಳೇಳು ಜನ್ಮಗಳ ಸಂಬಂಧ’ ಏನೇ ಆದರೂ ಅದರ ಗೆರೆದಾಟಿ ಬೇರೆಯವರೊಡನೆ ಲೈಂಗಿಕ ಸಂಬಂಧ ಇಟ್ಟುಕೊಳ್ಳಬಾರದು’ ಎನ್ನುವವರು ಹಾಗೆಯೇ ಇರಬಹುದು. ಅದಕ್ಕೂ ಅವರಿಗೆ ಸ್ವಾತಂತ್ರ್ಯವಿದೆ. ಆದರೆ ಮದುವೆಯ ಚೌಕಟ್ಟಿನ ಹೊರಗಿನ ಸಂಬಂಧಗಳನ್ನು ಟೀಕಿಸುವ ಸ್ವಾತಂತ್ರ್ಯ ಹಕ್ಕು ಅವರಿಗಿಲ್ಲ. ಈ ವಿಷಯದಲ್ಲಿ ನಮ್ಮ ಆಲೋಚನಾ ಕ್ರಮ ಸಾಕಷ್ಟು ಬದಲಾಗಬೇಕಿದೆ. ಒಂದು ಗಂಡು ಮತ್ತು ಒಂದು ಹೆಣ್ಣಿನ ನಡುವಿನ ಸಂಬಂಧ ಎಂಥದ್ದೇ ಇರಲಿ ಅದು ಅವರಿಬ್ಬರಿಗೂ ಸಂತೋಷವನ್ನು ಕೊಡುತ್ತಿದ್ದರೆ ಅದನ್ನು ಕಂಡು ನಾವು ಸಂತೋಷ ಪಡಬೇಕೆ ಹೊರತು ಹೊಟ್ಟೆಕಿಚ್ಚು ಪಡಬಾರದು. ಅದನ್ನು ಗೌರವಿಸುವುದನ್ನು ನಾವು ಮೊದಲು ಕಲಿಯಬೇಕು. ಈ ಹಿನ್ನಲೆಯಲ್ಲಿ ನಮ್ಮ ವಿರೋಧವಿರಬೇಕಾದದ್ದು ಅವರಿಬ್ಬರು ಸೇರಿ ವ್ಯಕ್ತಿಯೊಬ್ಬರ ಕೊಲೆಮಾಡಿದ್ದಾರೆ ಎನ್ನಲಾದ ವಿಚಾರಕ್ಕೆ ಹೊರತು ಅವರ ನಡುವಿನ ವೈಯಕ್ತಿಕ ಸಂಬಂಧದ ಬಗ್ಗೆ ಅಲ್ಲ. ಇಂತದ್ದೇ ವಿಚಾರವನ್ನು ಬೇರೆ ರೀತಿಯಲ್ಲಿ ಹೇಳಿರುವ ಸುಹಾಸಿನಿ ಶ್ರೀ Suhasini Shree ಅವರ ಒಂದು ಪೋಸ್ಟನ್ನೂ ಆಸಕ್ತಿ ಇರುವವರು ಗಮನಿಸಬಹುದು.(ರಾಬು (23-06-2024)
(ರಾಜೇಂದ್ರ ಬುರಡಿಕಟ್ಟಿ ಅವರ ಫೇಸ್ ಬುಕ್ ಬರೆಹ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಟ ದರ್ಶನ್ ಪರಪ್ಪನ ಆಗ್ರಹಾರ ಜೈಲು ಪಾಲು

Published

on

ಸುದ್ದಿದಿನಡೆಸ್ಕ್:ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ಇತರೆ ಆರೋಪಿಗಳಾದ ವಿನಯ್, ಪ್ರದೋಷ್, ಧನರಾಜ್‌ಗೆ 13 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವಿಚಾರಣೆ ನಡೆಸಿದ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಜುಲೈ 4 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಹಿನ್ನೆಲೆಯಲ್ಲಿ 2ನೇ ಆರೋಪಿ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳು ಪರಪ್ಪನ ಆಗ್ರಹಾರ ಜೈಲು ಪಾಲಾಗಿದ್ದಾರೆ. ಇದೇ ಪ್ರಕರಣದಲ್ಲಿ ಆರೋಪಿಗಳಾದ ಪವಿತ್ರಾ ಹಾಗೂ ಇತರರಿಗೆ 2 ದಿನಗಳ ಹಿಂದೆಯೇ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಈ ಕ್ಷಣದ ಪ್ರಮುಖ ಸುದ್ದಿಗಳು

Published

on

ರಾಜ್ಯದಲ್ಲಿ ಜರುಗಿದ ಈ ಕ್ಷಣದ ಕೆಲವು ಸುದ್ದಿಗಳ ಪ್ರಮುಖಾಂಶಗಳು ( ಕನ್ನಡ ನ್ಯೂಸ್; ಕನ್ನಡ ಸುದ್ದಿ)

  1. ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ವಹಿಸದಿದ್ದರೆ ಕುಡಿಯುವ ನೀರು ಕಲುಷಿತಗೊಳ್ಳುವ ಪ್ರಕರಣ ಹೆಚ್ಚಾಗುವ ಸಾಧ್ಯತೆಯಿದೆ. ಹಾಗಾಗಿ ಗ್ರಾಮೀಣ ನೀರು ಸರಬರಾಜು ಇಲಾಖೆಯ ಇಂಜಿನಿಯರ್‌ಗಳು ಕಟ್ಟೆಚ್ಚರ ವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ.
  2. ಪೆಟ್ರೋಲ್ ಹಾಗೂ ಡೀಸೆಲ್ ಮಾರಾಟ ತೆರಿಗೆ ಏರಿಕೆ ಹಾಗೂ ಇತರ ಬೆಲೆ ಏರಿಕೆ ನೀತಿ ವಿರೋಧಿಸಿ ಬಿಜೆಪಿ ಬೆಂಗಳೂರಿನಲ್ಲಿಂದು ವಿಧಾನಸೌಧದವರೆಗೆ ಸೈಕಲ್ ಜಾಥಾ ನಡೆಸಿತು. ಪಕ್ಷದ ಕಚೇರಿಯಿಂದ ವಿಧಾನಸೌಧದವರೆಗೆ ಜಾಥಾದಲ್ಲಿ ಹೊರಟ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು.
  3. ಪ್ರತಿಯೊಂದು ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆಯಡಿ ನಮೂದಿಸಿರುವ ಮಾನದಂಡದಂತೆ ಎಲ್‌ಇಡಿ ದೀಪಗಳನ್ನು ಅಳವಡಿಸದಿದ್ದರೆ ವಾಹನಗಳ ಸವಾರರುಗಳ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ತಿಳಿಸಿದ್ದಾರೆ.
  4. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಶುಭ ಕೋರಿದ್ದಾರೆ. ಪ್ರಧಾನಿ ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ದೇಶಕ್ಕಾಗಿ ಅಪ್ರತಿಮ ಸೇವೆಯನ್ನು ಸಲ್ಲಿಸುತ್ತಿದ್ದು, ನಮಗೆಲ್ಲರಿಗೂ ಸ್ಫೂರ್ತಿಯಾಗಿದ್ದಾರೆ ಎಂದು ಹೇಳಿದ್ದಾರೆ.
  5. ತಮಿಳುನಾಡಿನ ಕಲ್ಲಕುರಿಚಿಯಲ್ಲಿ ನಡೆದ ಕಳ್ಳಬಟ್ಟಿ ಸರಾಯಿ ದುರಂತದಲ್ಲಿ 33 ಮಂದಿ ಮೃತಪಟ್ಟಿದ್ದು, 60ಕ್ಕೂ ಅಧಿಕ ಮಂದಿ ನಾನಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳ್ಳಬಟ್ಟಿ ಸರಾಯಿ ಸೇವಿಸಿ ಅಸ್ವಸ್ಥರಾಗಿದ್ದ ಜನರನ್ನು ಕಲ್ಲಕುರಿಚಿ, ಸೆಲಂ ಮತ್ತು ಪುದುಚೇರಿಯ ಜೆಐಪಿಎಂಇಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
  6. ಕೇಂದ್ರ ಸರ್ಕಾರದ ಆದೇಶದಂತೆ 2019ರ ಏಪ್ರಿಲ್‌ಗಿಂತ ಮುಂಚಿತವಾಗಿ ನೋಂದಣಿಯಾಗಿರುವ ವಾಹನಗಳಿಗೆ ಹೈಸೆಕ್ಯೂರಿಟಿ ನೋಂದಣಿ ಫಲಕ ಅಳವಡಿಕೆ ಗಡುವನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್ 15ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ3 hours ago

ಮಾದಕ ವಸ್ತುಗಳಿಗೆ ಕಡಿವಾಣ ; ಸ್ವಾಸ್ಥ್ಯ ಬದುಕಿಗೆ ಸೋಪಾನ

ಡಾ.ಗೀತಾ ಬಸವರಾಜು, ಉಪನ್ಯಾಸಕರು, ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ ಜಗತ್ತಿನಲ್ಲಿರುವ 84 ಕೋಟಿ ಜೀವರಾಶಿಗಳಲ್ಲಿ ಮಾನವ ಶ್ರೇಷ್ಟ ಪ್ರಾಣಿ. ಏಕೆಂದರೆ ಮಾತನಾಡುವ, ಆಲೋಚಿಸುವ, ಭಾವನೆಗಳನ್ನು ಅಭಿವ್ಯಕ್ತಿಸುವ ವಿಶೇಷವಾದ...

ದಿನದ ಸುದ್ದಿ5 hours ago

ನಿರುದ್ಯೋಗಿಗಳಿಗೆ ಸಿಹಿ ಸುದ್ದಿ

ಸುದ್ದಿದಿನ,ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂ. 29 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ....

ದಿನದ ಸುದ್ದಿ7 hours ago

ಟಿಇಟಿ ಪರೀಕ್ಷೆಗೆ ಸಕಲ ಸಿದ್ಧತೆ

ಸುದ್ದಿದಿನ,ದಾವಣಗೆರೆ:ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಟಿಇಟಿ ಜೂನ್ 30 ರಂದು ರಾಜ್ಯಾದ್ಯಂತ ನಡೆಯಲಿದ್ದು ದಾವಣಗೆರೆ ನಗರದ 19 ಕೇಂದ್ರಗಳಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದರು....

ದಿನದ ಸುದ್ದಿ18 hours ago

ವಿದ್ಯಾರ್ಥಿನಿಲಯಗಳಿಗೆ ಬಾಡಿಗೆ ಕಟ್ಟಡಗಳು ಬೇಕಾಗಿದೆ ; ಸಂಪರ್ಕಿಸಿ

ಸುದ್ದಿದಿನ,ದಾವಣಗೆರೆ:ನಗರ ವ್ಯಾಪ್ತಿಯಲ್ಲಿ ಹೊಸದಾಗಿ ಮಂಜೂರಾಗಿರುವ 8 ಮೆಟ್ರಿಕ್ ನಂತರ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ನಗರದಲ್ಲಿ ವಿದ್ಯಾರ್ಥಿನಿಲಯಗಳನ್ನು ನಡೆಸಲು ಕನಿಷ್ಠ 900 ಚದರ ಮೀಟರ್ ವಿಸ್ತಿರ್ಣವುಳ್ಳ ಸುಸಜ್ಜಿತವಾದ...

ದಿನದ ಸುದ್ದಿ19 hours ago

ನೀಟ್ ಅಕ್ರಮ ಶಿಕ್ಷಣ ಕ್ಷೇತ್ರಕ್ಕೆ ಬಹುದೊಡ್ಡ ಕಳಂಕ : ಸಾಬೀರ್ ಜಯಸಿಂಹ

ಸುದ್ದಿದಿನ,ದಾವಣಗೆರೆ:ದೇಶದ ಅತ್ಯಂತ ಕಠಿಣಾತಿ ಕಠಿಣ ಪರೀಕ್ಷೆ ನೀಟ್​​​ನಲ್ಲೂ ಗೋಲ್​​ಮಾಲ್ ನಡೆದಿದೆ. ಬಳಿಕ ನೆಟ್​​​ಪರೀಕ್ಷೆಗೂ ಅಕ್ರಮದ ವಾಸನೆ ಬಡಿದಿದ್ದರಿಂದ ಪರೀಕ್ಷೆ ರದ್ದಾಗಿದೆ. ಪರೀಕ್ಷೆಗಳ ಅಕ್ರಮದ ವಿರುದ್ಧ ದೇಶಾದ್ಯಂತ ಆಕ್ರೋಶ...

ದಿನದ ಸುದ್ದಿ20 hours ago

ಹಿರಿಯ ನಾಗರಿಕರಿಗಿರುವ ಸರ್ಕಾರಿ ಸೌಲಭ್ಯಗಳೇನು..? ; ಮಾಹಿತಿಗೆ ಸಂಪರ್ಕಿಸಿ

ಸುದ್ದಿದಿನ,ದಾವಣಗೆರೆ:ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆಯ ವತಿಯಿಂದ ಹಾಗೂ ಇತರೆ ಇಲಾಖೆಗಳಿಂದ ಹಿರಿಯ ನಾಗರಿಕರಿಗೆ ದೊರೆಯುತ್ತಿರುವ ಸೌಲಭ್ಯಗಳ ಅರಿವು ಮೂಡಿಸುವ ಮತ್ತು ಸೌಲಭ್ಯಗಳನ್ನು ಪಡೆಯಲು ಸಹಾಯ ಮಾಡುವ...

ದಿನದ ಸುದ್ದಿ1 day ago

ಇನ್ನು ಜನನ-ಮರಣ ಪ್ರಮಾಣ ಪತ್ರ ಕೊಡುವ ಅಧಿಕಾರ ಗ್ರಾಮ ಪಂಚಾಯತಿಗೆ

ಸುದ್ದಿದಿನಡೆಸ್ಕ್:ರಾಜ್ಯದಲ್ಲಿ ಜನನ ಅಥವಾ ಮರಣ ನೋಂದಣಿ ಮಾಡಿ 30 ದಿನಗಳ ಒಳಗೆ ಪ್ರಮಾಣಪತ್ರ ವಿತರಿಸುವ ಅಧಿಕಾರವನ್ನು ಗ್ರಾಮ ಪಂಚಾಯಿತಿಗಳಿಗೆ ನೀಡಿ ಮುಖ್ಯ ನೋಂದಣಾಧಿಕಾರಿ ಸುತ್ತೊಲೆ ಹೊರಡಿಸಿದ್ದಾರೆ. ಇದು...

ದಿನದ ಸುದ್ದಿ1 day ago

ಅಂಗನವಾಡಿ ; ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭ : ಸಿಎಂ ಸೂಚನೆ

ಸುದ್ದಿದಿನಡೆಸ್ಕ್:ರಾಜ್ಯದ ಅಂಗನವಾಡಿಗಳಲ್ಲಿ, ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸುವ ಕುರಿತು ಅಧ್ಯಯನಕ್ಕೆ, ತ್ವರಿತವಾಗಿ ತಜ್ಞರ ಸಮಿತಿ ರಚಿಸಿ, ಎರಡು ತಿಂಗಳೊಳಗೆ ವರದಿ ಪಡೆಯುವಂತೆ, ಶಾಲಾ ಶಿಕ್ಷಣ ಖಾತೆ ಸಚಿವರಿಗೆ,...

ದಿನದ ಸುದ್ದಿ1 day ago

ಆರೋಗ್ಯ ಇಲಾಖೆ ನೇಮಕಾತಿ ; ಸಚಿವ ದಿನೇಶ್ ಗುಂಡೂರಾವ್ ರಿಂದ ಸಿಹಿ ಸುದ್ದಿ

ಸುದ್ದಿದಿನಡೆಸ್ಕ್:ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ವೈದ್ಯರು, ಸಿಬ್ಬಂದಿಗಳ ಕೊರತೆ ಇದ್ದು, ಹಂತ ಹಂತವಾಗಿ ವೈದ್ಯರ ನೇಮಕ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಡಿಕೇರಿಯಲ್ಲಿ ನಿನ್ನೆ ತಿಳಿಸಿದ್ದಾರೆ....

ದಿನದ ಸುದ್ದಿ1 day ago

ಜಿಎಸ್‌ಟಿ ಭಾರತೀಯರ ಜೀವನ ಸುಧಾರಿಸುವ ಸಾಧನ : ಪ್ರಧಾನಿ ಮೋದಿ

ಸುದ್ದಿದಿನಡೆಸ್ಕ್:ಸರಕು ಮತ್ತು ಸೇವಾ ತೆರಿಗೆ ಜಿಎಸ್‌ಟಿಗೆ ಏಳು ವರ್ಷ ತುಂಬಿದ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಜಿಎಸ್‌ಟಿ, 140 ಕೋಟಿ ಭಾರತೀಯರ ಜೀವನವನ್ನು ಸುಧಾರಿಸುವ...

Trending