Connect with us

ಸಿನಿ ಸುದ್ದಿ

ಈ ಶತಮಾನದ ಮಾದರಿ ಹೆಣ್ಣು..!

Published

on

(ದಿ ಹಿಂದೂ ಪತ್ರಿಕೆ) ಫೋಟೋ : ಭಾಗ್ಯ ಪ್ರಕಾಶ್ ಕೆ

ಟಿವಿ9 ನ ‘ಮಾರುವೇಷ’ ಸರಣಿಯಲ್ಲಿ ಈಗಷ್ಟೇ ಒಂದು ಒಳ್ಳೆಯ ಕಾರ್ಯ ಕ್ರಮ ನೋಡಿದೆ…

ಅದು  ,ಒಂದು ಕಾಲದಲ್ಲಿ ಅತ್ಯುತ್ತಮ ನಟಿಯಾಗಿ 125ಕ್ಕೂ ಹೆಚ್ಚು ಚಿತ್ರದಲ್ಲಿ ನಟಿಸಿ,ಇದ್ದಕ್ಕಿದ್ದಂತೇ 1986ರಲ್ಲೇ ಬಣ್ಣದ ಬದುಕಿಗೆ ವಿದಾಯ ಹೇಳಿ,ನಿಜ ಬದುಕಿನಲ್ಲಿ ಸಾಮಾಜಿಕ ಕಳಕಳಿಯಿಂದ ಕೆರೆಯ ನೀರನ್ನು ಕೆರೆಗೆ ಚೆಲ್ಲುವಂತೆ ಸಂಪಾದಿಸಿದ್ದೆಲ್ಲವನ್ನೂ ಬಡವರ ಕಣ್ಣೀರೊರೆಸಲು ವಿನಿಯೋಗಿಸುತ್ತಿರುವ ಶ್ರೇಷ್ಠ ನಟಿ,ಅಭಿನೇತ್ರಿ ಆರತಿಯವರ ಸಾರ್ಥಕ ಬದುಕಿನ ಕತೆ..!!

ನಾಯಕಿ ನಟಿಯಾಗಿ ಜನಪ್ರಿಯತೆಯ ಉತ್ತುಂಗದಲ್ಲಿರುವಾಗಲೇ, ಸಿನಿಮಾದ ಆಕರ್ಷಕ ಬಣ್ಣದ ಲೋಕಕ್ಕೆ ವಿದಾಯ ಹೇಳುವುದು ಸುಲಭದ ಮಾತಲ್ಲ.ಪ್ರೀತಿಸಿ ಕೈ ಹಿಡಿದ ಪುಟ್ಟಣ್ಣ ಕಣಗಾಲರೂ ದೂರವಾಗಿದ್ದರು.ಮಗಳು ಯಶಸ್ವಿನಿಯನ್ನು ಆಯಾಳ ಕೈಗೊಪ್ಪಿಸಿ ದಿನಗಟ್ಟಲೆ ಶೂಟಿಂಗಿಗೆ ತೆರಳಬೇಕಾದ ಅನಿವಾರ್ಯತೆ. ಆದರೆ ಅದೊಂದು ದಿನ ತಡ ರಾತ್ರಿ ಶೂಟಿಂಗ್ ಮುಗಿಸಿ ಬಂದಾಗ, ಮಗಳ ಒಂಟಿತನದ ಆಕ್ರಂದನ ಅದೆಷ್ಟು ತೀವ್ರವಾಗಿ ಆ ತಾಯಿಯ ಕರುಳನ್ನು ಇರಿಯಿತೆಂದರೆ,ಆ ಕ್ಷಣದಲ್ಲಿ ಮಗಳ ತಲೆ ಮೇಲೆ ಕೈಯಿಟ್ಟು ಇನ್ನೆಂದೂ ಬಣ್ಣ ಹಚ್ಚುವುದಿಲ್ಲವೆಂದು ಪ್ರಮಾಣ ಮಾಡಿದರು..!!
ಪಡೆದಿದ್ದ ಎಲ್ಲ ಅಡ್ವಾನ್ಸ್ ಹಣವನ್ನೂ ನಿರ್ಮಾಪಕರಿಗೆ ಹಿಂತಿರುಗಿಸಿದರು..!!

ಬಣ್ಣದ ಬದುಕಿಂದ ದೂರವಾಗಿ ಸರಳ ಬದುಕನ್ನಪ್ಪಿಕೊಂಡು ಅಜ್ಞಾತವಾಗಿರಬಯಸಿದ ಆರತಿ ಸುಮ್ಮನೇ ಕೂರಲಿಲ್ಲ..ತಾನು ದುಡಿದ ಅಷ್ಟೂ ಹಣವನ್ನು ಸಮಾಜ ಸೇವೆಗೆ ವಿನಿಯೋಗಿಸಿದರು.
ಅದೇ ಸಮಯದಲ್ಲಿ ಪರಿಚಯವಾದ ಸೇವಾ ಮನೋಭಾವದ ಹಾರ್ಡ್ ವೇರ್ ಇಂಜಿನಿಯರ್ ಚಂದ್ರಶೇಖರ ದೇಸಾಯಿ ಗೌಡರ ರನ್ನು ಮದುವೆಯಾಗಿ ಅಮೇರಿಕಾದಲ್ಲಿದ್ದುಕೊಂಡೇ ತನ್ನ ಸಾಮಾಜಿಕ ಸೇವಾ ಕ್ಷೇತ್ರದ ವ್ಯಾಪ್ತಿಯನ್ನು ಇನ್ನಷ್ಟು ವಿಸ್ತರಿಸಿಕೊಂಡರು..!!

ಬೆಂಗಳೂರಿನಲ್ಲಿದ್ದ ತನ್ನ ಪ್ರೀತಿಯ ಬಂಗಲೆ “ಬೆಳ್ಳಿತೆರೆ”ಯನ್ನೂ ಮಾರಿ ಬಂದ 15 ಕೋಟಿ ರೂಪಾಯಿ ಅಷ್ಟನ್ನೂ ಸಮಾಜ ಸೇವೆಗೆ ವಿನಿಯೋಗಿಸಿದರು. ಆರತಿಯವರಿಗೆ ಸಮಾಜಸೇವೆಗೆ ಪ್ರೇರಣೆ ನೀಡಿದ್ದು ಚಾಮರಾಜನಗರದಲ್ಲಿ ಡಾ.ಜಿ.ಎಸ್.ಶಿವರುದ್ರಪ್ಪನವರ ಮಗ ಜಿ.ಎಸ್.ಜಯದೇವ ನಡೆಸುತ್ತಿರುವ ‘ದೀನಬಂಧು’ ಮಕ್ಕಳ ಮನೆ. ಆ ಅನಾಥಾಶ್ರಮಕ್ಕೆ ವಿಶಾಲ ಹಾಸ್ಟೆಲ್ ಕಟ್ಟಡ ಕಟ್ಟಿಸಿ ಕೊಟ್ಟಿದ್ದಲ್ಲದೆ, ಎರಡು ಕೋಟಿ ರೂ.ಠೇವಣಿಯಿರಿಸಿ ಅದರ ಬಡ್ಡಿಯನ್ನು ಬಡ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲು ವಿನಿಯೋಗಿಸುತ್ತಿದ್ದಾರೆ. ನಲುವತ್ತು ಶಾಲೆಗಳನ್ನು ದತ್ತು ಪಡೆದು ಅಷ್ಟೂ ಶಾಲೆಗಳ ಬಡ ಮಕ್ಕಳ ಖರ್ಚುವೆಚ್ಚ ಭರಿಸುತ್ತಿದ್ದಾರೆ..!!

ಆರತಿ-ಚಂದ್ರಶೇಖರ ದಂಪತಿಗಳ ಸೇವಾ ಕಾರ್ಯ ಇಷ್ಟಕ್ಕೇ ನಿಲ್ಲುವುದಿಲ್ಲ.ಉತ್ತರ ಕರ್ನಾಟಕದ 20 ಹಳ್ಳಿಗಳನ್ನು ದತ್ತು ಪಡೆದು ಆ ಹಳ್ಳಿಗೆ ಶೌಚಾಲಯ,ಆಸ್ಪತ್ರೆ,ಶಾಲೆ ಹೆಣ್ಣು ಮಕ್ಕಳಿಗೆ ಸ್ವಉದ್ಯೋಗ ತರಬೇತಿಯಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ..!!

ಚಿತ್ರರಂಗದಲ್ಲಿದ್ದಾಗಿನ ಅವರ ಸಹಜ ವೈವಾಹಿಕ, ಪ್ರೇಮ ಕತೆಗಳು ಏನಾದರೂ ಇರಲಿ.ನನಗೆ ಅಚ್ಚರಿಯೆನಿಸುವುದು ಅದಲ್ಲ..
ಇಷ್ಟೆಲ್ಲ ಕೋಟಿಗಟ್ಟಲೆ ಮೊತ್ತವನ್ನು ನಿಸ್ವಾರ್ಥ ಭಾವದಿಂದ ಸಾಮಾಜಿಕ ಸೇವೆಗಾಗಿ ವಿನಿಯೋಗಿಸುತ್ತಿದ್ದರೂ, ಯಾರ ಕಣ್ಣಿಗೂ ಬೀಳದೇ,ಸಾರ್ವಜನಿಕರು,ಪತ್ರಿಕೆಯವರು,ಕೊನೆಗೆ ತನ್ನನ್ನು ಬೆಳೆಸಿದ ಚಿತ್ರಂಗದವರಿಂದಲೂ ದೂರವಾಗಿ ಅಜ್ಞಾತರಾಗಿಯೇ ಉಳಿಯಬೇಕೆನ್ನುವ ಅವರ ದಿವ್ಯ ನಿರ್ಲಿಪ್ತ ಮನೋಭಾವ..!!

ಬಹುಶಃ ‘ದೀನಬಂಧು’ಮನೆಯ ಜಯದೇವರಲ್ಲದಿದ್ದರೆ ಆರತಿಯವರು ಯಾರ ಕಣ್ಣಿಗೂ ಕಾಣಿಸುತ್ತಿರಲಿಲ್ಲವೇನೋ.ಹತ್ತು ವರ್ಷಗಳ ಹಿಂದೆ ನಾನು ಚಾಮರಾಜನಗರದಲ್ಲಿ ಲೀಡ್ ಬ್ಯಾಂಕ್ ವ್ಯವಸ್ಥಾಪಕನಾಗಿದ್ದಾಗ ಜಯದೇವ್ ಅವರ ದೀನಬಂಧು ಮಕ್ಕಳ ಮನೆಯ ಜೊತೆ ನಿಕಟವಾಗಿದ್ದೆ. ಆಗ ಒಮ್ಮೆ ಜಯದೇವ್ ಅವರು ಆರತಿಯವರ ಸೇವಾ ಕಾರ್ಯದ ಬಗ್ಗೆ ಹೇಳಿದ್ದರು. ಮುಂದಿನ ಸಲ ಆರತಿಯವರು ಬಂದಾಗ ನಾನು ಭೇಟಿ ಮಾಡಬಹುದಾ ಅಂತ ಕೇಳಿದಾಗ ಆರತಿಯವರು ಯಾರನ್ನೂ ಭೇಟಿಯಾಗಲು ಇಷ್ಟ ಪಡುವುದಿಲ್ಲ ಎಂದರು..!! ಆದರೆ ಆಗಲೂ ನನಗೆ ಆರತಿಯವರ ವೈಯಕ್ತಿಕ ಬದುಕಿನ ಬಗೆಗಾಗಲಿ, ಸೇವಾಗಾತ್ರ ಇಷ್ಟೊಂದು ದೊಡ್ಡದಿದೆಯೆಂದಾಗಲಿ ಗೊತ್ತಿರಲಿಲ್ಲ..

ಟಿವಿ9 ಹೇಳಿದಂತೆ, ಕೆಲವು ವರ್ಷಗಳ ಹಿಂದೆ ಎಸ್.ಜಿ.ತುಂಗರೇಣುಕ ಅನ್ನುವ ಹಿರಿಯ ಪತ್ರಕರ್ತೆಯಿಂದಾಗಿ ಆರತಿಯವರ ಕುರಿತು ಮಾಹಿತಿ ದೊರೆಯುವಂತಾಯಿತು. ರೇಣುಕ ಅವರಿಗೂ ಆರತಿಯವರ ಭೇಟಿ ಅಷ್ಟು ಸುಲಭದಲ್ಲಿ ಸಿಗಲಿಲ್ಲ. ಜಯದೇವರ ಮೂಲಕ ಭೇಟಿಗೆ ಪ್ರಯತ್ನಿಸಿದರೂ ಆರತಿಯವರು ಭೇಟಿ ನಿರಾಕರಿಸಿದರು.ಕೊನೆಗೂ ಜಯದೇವರ ಒತ್ತಾಯಕ್ಕೆ ಮಣಿದು ಭೇಟಿಗೆ ಅವಕಾಶ ದೊರೆಯಿತು..!! ಬಹುಶಃ ಆ ಭೇಟಿಯಿಂದಾಗಿ ಆರತಿಯವರ ಅತ್ಯಂತ ಸರಳಬದುಕಿನ, ಆದರೆ ಸಮಾಜ ಸೇವೆಯ ಶ್ರೀಮಂತಿಕೆಯ ವಿವರಗಳು ಲಭ್ಯವಾದವು..!! ಆ ನಂತರವೂ ಅವರು ಯಾರಿಗೂ ಸಂದರ್ಶನ ಭೇಟಿಗೆ ಅವಕಾಶ ನೀಡಲಿಲ್ಲ..

ಇವತ್ತು ಕೋಟಿಗಟ್ಟಲೆ ದಾನ ಮಾಡುವ ಅನೇಕ ಸಂಸ್ಥೆಗಳು,ಶ್ರೀಮಂತ ವ್ಯಕ್ತಿಗಳು ಚಿತ್ರರಂಗದ ವರು ನೂರಾರು ಮಂದಿ ಇರಬಹುದು.ಆದರೆ ಎಲ್ಲ ಬಗೆಯ ಪ್ರಚಾರದಿಂದಲೂ ದೂರವಿದ್ದು, ತಾನು ಸಮಾಜದಿಂದ ಪಡೆದದ್ದೆಲ್ಲವನ್ನೂ ಮತ್ತೆ ಸಮಾಜಕ್ಕೆ ಮರಳಿಸುವ ಸರಳ,ನಿಸ್ರೃಹ ನಿಸ್ವಾರ್ಥ ಸೇವೆಗೆ ತಮ್ಮನ್ನು ಮುಡಿಪಾಗಿಸಿಕೊಂಡ ಆರತಿಯವರಂತಹ ವ್ಯಕ್ತಿಗಳು ಹೆಚ್ಚು ಮಂದಿ ಸಿಗುವುದಿಲ್ಲ..!! ಚಂದ್ರಶೇಖರರ ಹೆಸರಾದರೂ ಅವರ ಟ್ರಸ್ಟಿನಲ್ಲಿದೆ. ಆರತಿಯವರ ಹೆಸರು ಎಲ್ಲೂ ಕಾಣಿಸುವುದಿಲ್ಲ..!!

ನಿಜಕ್ಕೂ ಆರತಿಯವರು- ” ಈ ಶತಮಾನದ ಮಾದರಿ ಹೆಣ್ಣು..!!”
ಹ್ಯಾಟ್ಸಾಫ್ ಆರತಿಯವರೇ..

(ಲೇಖನ ಕೃಪೆ : ವಾಟ್ಸಾಪ್)

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಸಾಗರ | ಇಂದು ‘ಆರು ಲಘು ನಾಟಕಗಳು’ ಮತ್ತು ‘ಗುಚ್ಛ’ ಪುಸ್ತಕಗಳ ಬಿಡುಗಡೆ

Published

on

ಸುದ್ದಿದಿನ,ಸಾಗರ : ಅ.ರಾ.ಶ್ರೀನಿವಾಸರು ಬರೆದ ‘ಆರು ಲಘು ನಾಟಕಗಳು’ ಮತ್ತು ‘ಗುಚ್ಛ’ ಈ ಎರಡು ಪುಸ್ತಕಗಳ ಬಿಡುಗಡೆ ಕಾರ್ಯಕ್ರಮವನ್ನು ಇಂದು ಸಂಜೆ ಪಟ್ಟಣದ ಸಿಜಿಕೆ ಸಭಾಭವನದಲ್ಲಿ ಅಂತರಂಗ ಪ್ರಕಾಶನ ಹಮ್ಮಿಕೊಂಡಿದೆ.

ಪುಸ್ತಕಗಳ ಬಿಡುಗಡೆಯನ್ನು ರಂಗಕರ್ಮಿ, ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಎಂ.ವಿ ಮಾಡಲಿದ್ದು, ಅಧ್ಯಕ್ಷತೆಯನ್ನುನಿವೃತ್ತ ಪ್ರಾಂಶುಪಾಲರಾದ ಅ.ರಾ.ಲಂಬೋದರ ಅವರು ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ‘ಆರು ಲಘು ನಾಟಕಗಳು’ ಕುರಿತು ನಿವೃತ್ತ ಪ್ರಾಂಶುಪಾಲರು ಡಾ. ಜಯಪ್ರಕಾಶ್ ಮಾವಿನಕುಳಿ ಹಾಗೂ ‘ಗುಚ್ಛ’ ಕುರಿತು ಸಹಕಾರ ಸಂಘಗಳ ನಿವೃತ್ತ ಉಪ ನಿಬಂಧಕರು ಜಯಪ್ರಕಾಶ್ ತಲವಾಟ ಅವರು ಮಾತನಾಡಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್ ಇನ್ನಿಲ್ಲ

Published

on

ಸುದ್ದಿದಿನಡೆಸ್ಕ್: ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್(93) ಅವರು ಅನಾರೋಗ್ಯದಿಂದ ಮೈಸೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ ತಿಂಗಳಲ್ಲಿ ಕುಸಿದು ಬಿದ್ದಿರುವುದರಿಂದ ಅವರ ತೊಡೆ ಮೂಳೆ ಮುರಿದಿತ್ತು. ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಬೆಳಿಗ್ಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಶ್ರೇಷ್ಠ ಭಾರತೀಯ ಶಾಸ್ತ್ರೀಯ ಸಂಗೀತಗಾರ ಆಗಿರುವ ಅವರು ಸರೋದ್ ವಾದಕರೂ ಆಗಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೊಲೆ ಕೇಸ್ ; ನಾಳೆ ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಪ್ರತಿಭಟನೆ

Published

on

ಸುದ್ದಿದಿನಡೆಸ್ಕ್: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡದ ಚಲನಚಿತ್ರ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ.

ಈ ಸಂಬಂಧ ನಾಳೆ ಚಿತ್ರದುರ್ಗದಲ್ಲಿನ ವಿವಿಧ ಸಂಘಟನೆಗಳು ದರ್ಶನ್ ವಿರುದ್ಧ ಪ್ರತಿಭಟಿಸಿ ತನಿಖೆ ಪಾರದರ್ಶಕವಾಗಿರ ಬೇಕು ಹಾಗೂ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕೆಂದು ಡಿಸಿಗೆ ಮನವಿಯನ್ನು ಸಲ್ಲಿಸಲಿದ್ದಾರೆ.

ಮೈಸೂರಿನ ದರ್ಶನ್ ಒಡೆತನದ ಫಾರ್ಮ್ ಹೌಸ್‌ನಲ್ಲಿ ೧೦ ಮಂದಿಯನ್ನು ಬಂಧಿಸಲಾಗಿದೆ ಎಂದು ಸುದ್ದಿಸಂಸ್ಥೆ ತಿಳಿಸಿವೆ. ಹೆಚ್ಚಿನ ವಿಚಾರಣೆಗಾಗಿ ದರ್ಶನ್ ಅವರನ್ನು ಬೆಂಗಳೂರಿಗೆ ಕರೆತರಲಾಗಿದ್ದು, ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

ಬೆಂಗಳೂರಿನ ಸುಮನಹಳ್ಳಿ ಬಳಿಯ ವೃಷಭಾವತಿ ನಾಲೆಯಲ್ಲಿ ಅಪಾರ್ಟ್‌ಮೆಂಟ್ ಕಟ್ಟಡದ ಮುಂಭಾಗದಲ್ಲಿ ರೇಣುಕಾಸ್ವಾಮಿಯ ಶವ ಪತ್ತೆಯಾಗಿತ್ತು. ದರ್ಶನ್ ಚಿತ್ರದುರ್ಗ ಅಭಿಮಾನಿಗಳ ಸಂಘದ ಅಧ್ಯಕ್ಷರಿಗೆ ಕರೆ ಮಾಡಿ ರೇಣುಕಾಸ್ವಾಮಿ ಎಲ್ಲಿದ್ದಾರೆ ಎಂಬುದನ್ನು ಪತ್ತೆಮಾಡಿ ಬೆಂಗಳೂರಿಗೆ ಕರೆತರುವಂತೆ ಹೇಳಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 hours ago

ವಿಶ್ವ ಮೊಸಳೆಗಳ ದಿನ ; ಮೊಸಳೆ ಬಗ್ಗೆ ನಿಮಗಿಷ್ಟು ತಿಳಿದಿರಲಿ

ಸಂಜಯ್ ಹೊಯ್ಸಳ ಪ್ರತಿ ವರ್ಷದ ಜೂನ್ 17 ನ್ನು ವಿಶ್ವ ಮೊಸಳೆ ದಿನವನ್ನಾಗಿ ಆಚರಿಸಲಾಗುತ್ತದೆ. ವಿಶ್ವದಲ್ಲಿ ಪ್ರಮುಖವಾಗಿ 24 ಜಾತಿಯ ಮೊಸಳೆಗಳಿದ್ದು, ಭಾರತದಲ್ಲಿ ಸದ್ಯಕ್ಕೆ 3 ಪ್ರಬೇಧದ...

ದಿನದ ಸುದ್ದಿ5 hours ago

ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ

ಸುದ್ದಿದಿನಡೆಸ್ಕ್:ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಮರು ಪರಿಶೀಲಿಸುತ್ತಿಲ್ಲ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್...

ದಿನದ ಸುದ್ದಿ5 hours ago

ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ; ವ್ಯಾಪಕ ಟೀಕೆ

ಸುದ್ದಿದಿನಡೆಸ್ಕ್: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಟೀಕಿಸಿದ್ದಾರೆ....

ದಿನದ ಸುದ್ದಿ20 hours ago

ವಿಷಹಾರ | ಹೋಟೆಲ್, ರೆಸ್ಟೋರೆಂಟ್ ತಪಾಸಣೆಗೆ ಕ್ರಮ

ಸುದ್ದಿದಿನಡೆಸ್ಕ್: ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಉತ್ತಮ ಗುಣಮಟ್ಟ, ಸ್ವಚ್ಚತೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಹೋಟೇಲ್, ರೆಸ್ಟೋರೆಂಟ್ ಹಾಗೂ ಲಘು ಉಪಹಾರ ಕೇಂದ್ರಗಳಲ್ಲಿ The Food Safety and...

ದಿನದ ಸುದ್ದಿ21 hours ago

ವೆಂಕಟೇಶ್ ಜಿ.ಎಂ. ಅವರಿಗೆ ಪಿಎಚ್‌.ಡಿ ಪದವಿ

ಸುದ್ದಿದಿನ,ಬೆಂಗಳೂರು:ಗುಜ್ಜನಹಳ್ಳಿ ಗ್ರಾಮದ ವೆಂಕಟೇಶ್ ಜಿ.ಎಂ. ಅವರು ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಎಸ್. ಪುಟ್ಟಸ್ವಾಮಯ್ಯ ರವರ ಮಾರ್ಗದರ್ಶನದಲ್ಲಿ ಮಂಡಿಸಿರುವ “ಆನ್ ಎಕನಾಮಿಕ್ ಅನಾಲಿಸಿಸ್ ಆಫ್ ಆಗ್ರೋ-ಬೇಸ್ಡ್ ಇಂಡಸ್ಟ್ರೀಸ್...

ದಿನದ ಸುದ್ದಿ21 hours ago

ರೇಣುಕಸ್ವಾಮಿ ಕೊಲೆಗೈದ ಆರೋಪಿಗಳಿಗೆ ಶಿಕ್ಷೆಯಾಗಲಿ : ಜಂಗಮ ಸಮಾಜ ಪ್ರತಿಭಟನೆ

ಸುದ್ದಿದಿನ,ಮಸ್ಕಿ:ಪಟ್ಟಣದ ಗಚ್ಚಿನ ಹಿರೇಮಠದಲ್ಲಿ ಮಸ್ಕಿ ಜಂಗಮ ಸಮಾಜ ವತಿಯಿಂದ ನಮ್ಮ ಸಮುದಾಯದ ಚಿತ್ರದುರ್ಗದ ರೇಣುಕ ಸ್ವಾಮಿಯನ್ನು ಕೊಲೆಗೈದ ಕೊಲೆಗಡಕರಿಗೆ ಉಗ್ರ ಶಿಕ್ಷೆ ನೀಡಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು. ಗಚ್ಚಿನ...

ದಿನದ ಸುದ್ದಿ1 day ago

ಜಗಳೂರು | ವ್ಯಕ್ತಿ ಮೇಲೆ ನಾಲ್ಕು ಕರಡಿದಾಳಿ

ಸುದ್ದಿದಿನ,ಜಗಳೂರು : ಜಮೀನಿಗೆ ಹೋಗಿದ್ದ ವ್ಯಕ್ತಿ ಮೇಲೆ ನಾಲ್ಕು ಕರಡಿಗಳ ದಾಳಿ‌ ಮಾಡಿ ಹಿಗ್ಗಾಮುಗ್ಗಾ ಕಡಿದು ಗಂಭೀರ ಗಾಯಗೊಳಿಸಿರುವ ಘಟನೆ ಜಗಳೂರು ತಾಲೂಕಿನ ಬೈರನಾಯಕನಹಳ್ಳಿ ಗ್ರಾಮದಲ್ಲಿ ಶನಿವಾರ...

ದಿನದ ಸುದ್ದಿ1 day ago

ಶ್ರೀ ಉಚ್ಚಂಗೆಮ್ಮದೇವಿ ಸದ್ಭಕ್ತರಿಗೊಂದು ವಿಸ್ಮಯಕಾರಿ ಸುದ್ದಿ : ಉಚ್ಚಂಗಿದುರ್ಗ ಬೆಟ್ಟದ ಕುರಿತು ಹೊಸ ಹೊಳಹು ನೀಡಿದ ದಾವಣಗೆರೆ ಅರ್ಜುನ್

ಗಂಗಾಧರ ಬಿ ಎಲ್ ನಿಟ್ಟೂರ್ ಭಾರತ ದೇಶ ಹಲವು ಅಚ್ಚರಿ, ವಿಚಿತ್ರ, ವಿಸ್ಮಯಗಳ ತಾಣ. ಪ್ರಕೃತಿಯಲ್ಲಿ ಉಂಟಾಗುತ್ತಿರುವ ಬದಲಾವಣೆಯಿಂದ ಹಿಡಿದು, ಸೃಷ್ಟಿಕರ್ತನ ಕೈಚಳಕದ ಕುಲುಮೆಯಲ್ಲಿ ಅರಳಿರುವ ಹಲವು...

ಅಂತರಂಗ1 day ago

ಆತ್ಮಕತೆ | ಅಪ್ಪನ ಮೈಸೂರು ಭೇಟಿ ಸಾವು – ನೋವು

ರುದ್ರಪ್ಪ ಹನಗವಾಡಿ  ನಾನು ಮೈಸೂರಿನಲ್ಲಿ ಅಧ್ಯಾಪಕನಾಗಿ ಕೆಲಸ ನಿರ್ವಹಿಸುತ್ತಿರುವುದರ ಬಗ್ಗೆ ತಿಳಿದ ನಮ್ಮೂರಲ್ಲಿ ಎಲ್ಲರಿಗೂ ಸಂತೋಷವಾಗಿತ್ತು. ಅತ್ಯಂತ ಸಂತೋಷಗೊಂಡಿದ್ದ ಅಪ್ಪನನ್ನು ನಾನು ಮೈಸೂರಿಗೆ ಕರೆದುಕೊಂಡು ಬಂದು ಒಮ್ಮೆ...

ದಿನದ ಸುದ್ದಿ1 day ago

ಪಿಎಂ ಕಿಸಾನ್ ನಿಧಿ ಯೋಜನೆ | ರೈತರ ಖಾತೆಗಳಿಗೆ ಬರುವ ಮಂಗಳವಾರ ಹಣ ವರ್ಗಾವಣೆ

ಸುದ್ದಿದಿನಡೆಸ್ಕ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬರುವ ಮಂಗಳವಾರ 18 ರಂದು ’ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ಯೋಜನೆಯಡಿ 9 ಕೋಟಿ 3 ಲಕ್ಷ ರೈತರ ಖಾತೆಗೆ 20...

Trending