Connect with us

ಬಹಿರಂಗ

‘ಭೀಮ ಕೋರೆಗಾಂವ್ ದಂಗೆ’ಯ ಬಗ್ಗೆ ನೀವು ಓದಲೇ ಬೇಕಾದ ಲೇಖನ..!

Published

on

ಭೀಮ ಕೋರೆಗಾಂವ್ ದಂಗೆ : ಜನವರಿ – 1 , 1818 ( ಸಿಪಾಯಿ ದಂಗೆಗಿಂತ 40 ವರ್ಷಗಳ ಮೊದಲೇ ನಡೆದ ಅಸ್ಪಶ್ಯರ ಮಹಾದಂಗೆ )

ಯುದ್ಧದಲ್ಲಿ ಮಡಿದ ಅಸ್ಪಶ್ಯ ವೀರರು

1 . ಸಿದ್ದನಾಕ ಮಕಲನಾಕ ನಾಯಕ
2 . ರಾಮನಾಕ ಯಶನಾಕ ಸಿಪಾಯಿ
3 , ಗೋದನಾಕ ಮೋಡೆನಾಕ ಸಿಪಾಯಿ
4 , ರಾಮನಾಕ ಯಶನಾಕ ಸಿಪಾಯಿ
5 . ಭಾಗನಾಕ ಹರನಾಕ ಸಿಪಾಯಿ
6 . ಅಂಬನಾಕ ಕಾನನಾಕ ಸಿಪಾಯಿ
7 . ಗಣನಾಕ ಬಾಳನಾಕ ಸಿಪಾಯಿ
8 . ಬಾಳನಾಖ ದೊಂಡನಾಕ ಸಿಪಾಯಿ
9 , ರೂಪನಾಕ ಲಖನಾಕ ಸಿಪಾಯಿ
10 . ಬಾಲನಾಕ ರಾಮನಾಕ ಸಿಪಾಯಿ
11 . ವಟಿನಾಕ ಧಾನನಾಕ ಸಿಪಾಯಿ
12 . ಗಜನಾಕ ಗಣನಾಕ gಸಿಪಾಯಿ
13 . ಬಾಪನಾಕ ಹಬನಾಕ ಸಿಪಾಯಿ
14 . ಕೋನಾಕ ಜಾನನಾಕ ಸಿಪಾಯಿ
15 . ಸಮನಾಕ ಯಸನಾಕ ಸಿಪಾಯಿ
16 , ಗಣನಾಕ ಧರಮನಾಕ ಸಿಪಾಯಿ
17 . ದೇವನಾಕ ಅಂಕನಾಕ ಸಿಪಾಯಿ
18 . ಗೋಪಾಲನಾಕ ಬಾಲಿನಾಕ ಸಿಪಾಯಿ
19 , ಹರನಾಕ ಹರಿನಾಕ ಸಿಪಾಯಿ
20 . ಜೇಠನಾಕ ದೌನಾಕ ಸಿಪಾಯಿ
21 . ಗಣನಾಕ ಲಖನಾಕ ಸಿಪಾಯಿ
22 . ಸೀನನಾಕ ಮಕಲನಾಕ ಸಿಪಾಯಿ
ಅಸ್ಪಶ್ಯರನ್ನು ಗುರುತಿಸಲು ಅಂದು ಅವರ ಹೆಸರಿನ ಮುಂದೆ ನಾಕ ಎಂದು ಸೇರಿಸಲಾಗುತ್ತಿತ್ತು .

ಡಾ . ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಎಷ್ಟೇ ತುರ್ತು ಕೆಲಸಕಾರ್ಯಗಳಿದ್ದರೂ ಸಹ ಅವುಗಳೆಲ್ಲವನ್ನೂ ಬದಿಗಿರಿಸಿ , ಜಗತ್ತಿನ ಯಾವ ಮೂಲೆಯಲ್ಲಿದ್ದರೂ ಸಹ ಅಲ್ಲಿಂದ ಹೊರಟು ಜನವರಿ ಒಂದನೇ ತಾರೀಖಿನಂದು ‘ ಕೋರೆಗಾಂವ್ ‘ ಗೆ ತಮ್ಮ ಕುಟುಂಬ ಸಮೇತರಾಗಿ ಬಂದು , ಅಲ್ಲಿರುವ ಹುತಾತ್ಮ ಅಸ್ಪಶ್ಯ ಯೋಧರ ಸ್ಮಾರಕಕ್ಕೆ ( ವಿಜಯ ಸ್ಥಂಬಕ್ಕೆ ) ಶ್ರದ್ದಾಂಜಲಿ ಸಲ್ಲಿಸುತ್ತಿದ್ದ ಅವರು ಬದುಕಿರುವ ತನಕವೂ ಒಂದೇ ಒಂದು ವರ್ಷವೂ ಸಹ ಜನವರಿ 1ನೇ ತಾರೀಖು ಇಲ್ಲಿ ಬರುವುದನ್ನು ಬಾಬಾಸಾಹೇಬರು ತಪಿಸಲಿಲ್ಲ . ಪ್ರತಿವರ್ಷ ಜನವರಿ 1ನೇ ತಾರೀಖು ಜಗತ್ತಿಗೆ ಹೊಸವರ್ಷದ ಸಂಭ್ರಮದ ದಿನವಾದರೆ ಭಾರತದ ದಲಿತರ ಪಾಲಿಗೆ ಇದು ಅಸ್ಪೃಶ್ಯತೆಯ ವಿರುದ್ಧ ಬಂಡೆದ್ದ ಅಸ ಶರ ಗುಂಪೊಂದು ಮಹಾರಾಷ್ಟ್ರದ ಪೇಶ್ವಗಳ ವಿರುದ್ಧ ಕೆಚ್ಚೆದೆಯ ಹೋರಾಟ ನಡೆಸಿ ದಿಗ್ವಿಜಯ ಸಾಧಿಸಿದ ದಿನ , ಈ ದಿನ ಶೋಷಿತರ ಆತ್ಮಗೌರವ ತಲೆಯೆತ್ತಿದ ದಿನವೆಂದೇ ಪ್ರಸಿದ್ದ . ಈ ಘಟನೆ ಡಾ . ಅಂಬೇಡ್ಕರ್‌ರವರ ಹೋರಾಟಗಳ ಬದುಕಿನ ಪ್ರೇರಣೆಗಳಲ್ಲಿ ಒಂದೂ ಹೌದು . ಕ್ರಿ . ಶ . 1800ರಲ್ಲಿ ಮಹಾರಾಷ್ಟ್ರದಲ್ಲಿ ಪೇಶ್ವಗಳು ಆಡಳಿತ ನಡೆಸುತ್ತಿದ್ದರು . ಇವರ ಆಡಳಿತವು ಅಸಶರ ಪಾಲಿನ ಕರಾಳ ಚರಿತ್ರೆಯಾಗಿತ್ತು . ಅಸ್ಪಶ್ಯತೆ ಆಚರಣೆಯ ಕಠೋರತೆಯು ಅಮಾನುಷವಾಗಿತು .ಅಸ್ಪೃಶರ ನೆರಳು ಹಿಂದೂ ಸವರ್ಣಿಯ ಮೇಲೆ ಬಿದ್ದರೆ , ಹಿಂದೂ ಸವರ್ಣಿಯರಿಗೆ ಮೈಲಿಗೆಯಾಗುತ್ತದೆಂಬ ಕಾರಣಕ್ಕಾಗಿ ಸಾರ್ವಜನಿಕ ಸ್ಥಳಗಳಲ್ಲಿ ಅಸ್ಪಶ್ಯರಿಗೆ ಪ್ರವೇಶವನ್ನೇ ನಿಷೇಧಿಸಲಾಗಿತ್ತು . ಅಸ ಶ್ಯರು ಊರ ಮಧ್ಯೆ ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಮಾತ್ರ ನಡೆದುಕೊಂಡು ಹೋಗಬೇಕಾಗಿತ್ತು .

ಏಕೆಂದರೆ ಈ ಸಮಯದಲ್ಲಿ ಅವನ ನೆರಳು ಬೇರೆಕಡೆ ಬೀಳುವುದಿಲ್ಲ ಎನ್ನುವ ಕಾರಣಕ್ಕಾಗಿ . ಹೋಗುವಾಗ ಕುತ್ತಿಗೆಗೆ ಒಂದು ಮಣ್ಣಿನ ಮಡಿಕೆಯನ್ನು ನೇತು ಹಾಕಿಕೊಳ್ಳಬೇಕಾಗಿತ್ತು . ಏಕೆಂದರೆ ಅಸ್ಪಶ್ಯರು ನೆಲಕ್ಕೆ ಉಗುಳುವ ಹಾಗಿರಲಿಲ್ಲ . ಆ ಮಡಿಕೆಯಲ್ಲಿ ಉಗುಳಿಕೊಳ್ಳಬೇಕಾಗಿತ್ತು . ಅದೇ ರೀತಿ ಸೊಂಟಕ್ಕೆ ಒಂದು ಕಸಪೊರಕೆ ಕಟ್ಟಿಕೊಂಡು ತಾನು ನಡೆದ ದಾರಿಯನ್ನು ತಾನೇ ಗುಡಿಸಿಕೊಂಡು ಹೋಗಬೇಕಾಗಿತ್ತು . ಅಸ್ಪಶ್ಯರು ತಮ್ಮ ಗುರುತು ಪತ್ತೆಗಾಗಿ ತಮ್ಮ ಕುತ್ತಿಗೆ ಮತ್ತು ಮುಂಗೈಗೆ ದಪ್ಪದಾದ ಕಪ್ಪು ದಾರವನ್ನು ಕಡ್ಡಾಯವಾಗಿ ಕಟ್ಟಿಕೊಳ್ಳಬೇಕಾಗಿತ್ತು . ಊರಿನೊಳಗೆ ಸತ್ತ ದನಗಳನ್ನು ಊರಿನಿಂದ ಹೊರಗೆ ಹೊತ್ತುಕೊಂಡು ಹೋಗಿ ಅದರ ಮಾಂಸವನ್ನು ಬೇಯಿಸಿ ತಿನ್ನಬೇಕಾಗಿತ್ತು . ಅವರಿಗೆ ವಿದ್ಯೆ ಕಲಿಯುವ ಹಕ್ಕನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು . ಅಸ್ಪಶ್ಯ ಹೆಂಗಸರು ಚಿನ್ನ ಅಥವಾ ಬೆಳ್ಳಿಯ ಆಭರಣಗಳನ್ನು ತೊಡುವ ಹಾಗಿರಲಿಲ್ಲ . ಹಿಂದೂ ಸವರ್ಣಿಯರು ಮತ್ತು ಪೇಳ್ವೆ ಸೈನಿಕರು ಅಸ್ಪಶ್ಯ ಮಹಿಳೆಯರ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದರು . ಈ ಎಲ್ಲಾ ಅನ್ಯಾಯ ಮತ್ತು ದೌರ್ಜನ್ಯಗಳನ್ನು ನಿಲ್ಲಿಸಬೇಕೆಂದು ಅಸ್ಪೃಶ್ಯರು 1817ರಲ್ಲಿ ರಾಜ್ಯಭಾರ ನಡೆಸುತ್ತಿದ್ದ ಪೇಶ್ವಿರಾಜ ಎರಡನೇ ಬಾಜೀರಾಯನಲ್ಲಿ ವಿನಂತಿಸಿಕೊಂಡಾಗ ಎರಡನೇ ಬಾಜೀರಾಯನು “ ನೀವುಗಳು ಹುಟ್ಟಿರುವುದೇ ನಮ್ಮಗಳ ಸೇವೆ ಮಾಡಲಿಕ್ಕಾಗಿ & ನಿಮ್ಮ ಹೆಂಗಸರು ಇರುವುದೇ ನಮ್ಮನ್ನು ಸುಖಪಡಿಸಲಿಕ್ಕಾಗಿ , ಇದೇ ನಮ್ಮ ಮನು ಸಂವಿಧಾನ ” ಎಂದು ಅಸ್ಪೃಶ್ಯರಿಗೆ ಖಡಕ್ಕಾಗಿ ತಿಳಿಸಿದನು . ಇದರಿಂದ ಗಾಯಗೊಂಡ ವ್ಯಾಘ್ರಗಳಂತಾದ ಅಸ್ಪೃಶ್ಯರು ಸೇಡುತೀರಿಸಿಕೊಳ್ಳಲಿಕ್ಕಾಗಿ ಸಮಯ ಕಾಯತೊಡಗಿದರು . ಇದೇ ಸಮಯದಲ್ಲಿ ಸರಿಯಾಗಿ ಕೊಲ್ಕತ್ತಾವನ್ನು ರಾಜಧಾನಿಯನ್ನಾಗಿ ಮಾಡಿಕೊಂಡು ಬಹುತೇಕ ಉತ್ತರ ಭಾರತವನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡಿದ್ದ ಬ್ರಿಟಿಷರು ಮಹಾರಾಷ್ಟ್ರದ ಪೇಶ್ವ ರಾಜ ಎರಡನೇ ಬಾಜೀರಾಯನನ್ನು ಬಗ್ಗುಬಡಿದು ದಕ್ಷಿಣ ಭಾರತದಲ್ಲಿ ಅಮ್ಮಗಳ ಆಳ್ವಿಕೆಗೆ ವಿಸ್ತರಿಸಿಕೊಳ್ಳಲು ಸಮಯ ಕಾಯುತ್ತಿದ್ದರು .

ಪೇಶ್ವಗಳ ದೌರ್ಜನ್ಯ , ದಬ್ಬಾಳಿಕೆಗಳಿಂದ ಇನ್ನಿಲ್ಲದಂತೆ ರೋಸಿಹೋಗಿದ್ದ ಮಹಾರಾಷ್ಟ್ರದ ಅಸ್ಪ ಶ್ಯರು ಅದರಲ್ಲೂ ಅಸ್ಪಶ್ಯ ಯುವಕರು ಪೇಶ್ವಗಳ ಬಿಸಿ ರಕ್ತ ಕುಡಿಯಲು ಹಾತೊರೆಯುತ್ತಿದ್ದರು . ಇದನ್ನು ಗಮನಿಸಿದ ಚಾಣಾಕ್ಷ ಬ್ರಿಟೀಷರು ಪೇಶ್ವಗಳ ವಿರುದ್ಧ ಯುದ್ಧ ಮಾಡಲು ಅಸ್ಪಶ್ಯರನ್ನು ಕೋರಿಕೊಂಡರು , ತಮ್ಮಗಳ ಕಷ್ಟ – ಅಪಮಾನಗಳ ಪರಿಹಾರಕಾಗಿ ಒದಗಿ ಬಂದ ಈ ಸುವರ್ಣಾವಕಾಶವನ್ನು ಮನಃಪೂರ್ವಕವಾಗಿ ಸ್ವೀಕರಿಸಿದ ಅಸ್ಪಶ್ಯರು “ ಸಿದನಾಕ , ಎಂಬ ಅಸ್ಪಶ್ಯ ಯುವಕನ ನಾಯಕತ್ವದಲ್ಲಿ 500 ಜನ ಅಸ್ಪಶ್ಯ ಯುವಕರು ಪೇಶೆಗಳ ವಿರುದ ಯುದ್ಧ ಮಾಡಲು ಬ್ರಿಟೀಷರ ಕೋರಿಕೆಗೆ ಒಪ್ಪಿಕೊಂಡರು . ಕಡೆಗೂ ಆ ಐತಿಹಾಸಿಕ ಯುದ್ದದ ದಿನ ಬಂದೇ ಬಿಟ್ಟಿತು . ಅದೇ 1818ರ ಜನವರಿ 1ನೇ ತಾರೀಖು . ಬ್ರಿಟೀಷ್ ಕ್ಯಾಪನ್ ಎಸ್ . ಎಸ್ . ಸಂಡನ್ ನೇತೃತ್ವದಲ್ಲಿ ಸಿದ್ದನಾಕ ‘ ನ ನಾಯಕತ್ವದ 500 ಅಸ ಶ ಯೋಧರ ಪಡೆ ( ಈ ಎಲ್ಲಾ ಯೋಧರಿಗೆ ಬಂದೂಕು ಉಪಯೋಗಿಸುವ ತರಬೇತಿಯನು . ಬ್ರಿಟೀಷರು ಚೆನ್ನಾಗಿ ನೀಡಿರುತ್ತಾರೆ . ) 1817ರ ಡಿಸೆಂಬರ್ 31ನೇ ತಾರೀಖು ರಾತ್ರಿ ಸಿರೂರ್‌ನಿಂದ ಹೊರಡುತ್ತಾರೆ . ಆ ಇಡೀ ರಾತ್ರಿ ಸತತವಾಗಿ 27 ಕಿಲೋಮೀಟರ್ ನಡೆದು ಮಾರನೇ ದಿನ ಅಂದರೆ 1818ರ ಜನವರಿ 1ರಂದು ಪೂನಾ ನಗರದಿಂದ 15 ಕಿ . ಮೀ . ದೂರದಲ್ಲಿರುವ ಬೀಮಾ ನದಿ ತೀರದಲ್ಲಿರುವ ಕೋರೆಗಾಂವ್ ಎಂಬ ಸ್ಥಳವನ್ನು ಸಿದ್ಧನಾಕನ ಪಡೆ ತಲುಪುತ್ತದೆ . ಇಡೀ ರಾತ್ರಿ ನಿದ್ದೆಯಿಲ್ಲದೆ 27 ಕಿ . ಮೀ . ದೂರವನ್ನು ನಡೆದುಕೊಂಡು ಬಂದಿದ್ದ ಈ ಅಸ್ಪಶ್ಯ ಯೋಧರ ಪಡೆ ನಿದ್ದೆ , ಅನ್ನ – ನೀರು ಯಾವುದನ್ನೂ ಬಯಸದೆ ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಪೇಶ್ವ ಸೈನಿಕರ ಮೇಲೆ ಎರಗುತ್ತಾರೆ . 20 ಸಾವಿರ ಅಶ್ವದಳ , 8 ಸಾವಿರ ಕಾಲ್ದಳ ಸೇರಿ ಒಟ್ಟು 28 ಸಾವಿರ ಪೇಳ್ವೆ ಸೈನಿಕರು ಮೂರೂ ದಿಕ್ಕಿನಿಂದ ಅಸ್ಪಶ್ಯ ಯೋಧರಿಗೆ ಎದುರಾಗುತ್ತಾರೆ . ಬೆಳಿಗ್ಗೆ 9 ರಿಂದ ರಾತ್ರಿ 9ರ ವರೆಗೆ ಸತತ 12 ಗಂಟೆಗಳ ಕಾಲ ನಡೆದ ಈ ಘೋರ ಯುದ್ದದಲ್ಲಿ ಹಸಿದ ಹೆಬ್ಬುಲಿಗಳಂತಿದ್ದ ಅಸ್ಪಶ್ಯಯೋಧರು ಪೇಶ್ವ ಸೈನ್ಯವನ್ನು ಧೂಳಿಪಟ ಮಾಡುತ್ತಾರೆ . ಇಡೀ ಯುದ್ಧ ಭೂಮಿಯ ತುಂಬ ರಕ್ತದ ಕೋಡಿಯೇ ಹರಿಯುತ್ತದೆ . ಸಾವಿರಾರು ಸೈನಿಕರು ಯುದ್ಧಭೂಮಿಯಲ್ಲಿ ಸಾವನ್ನಪ್ಪುತ್ತಾರೆ .

ಬೃಹತ್ ಸಂಖ್ಯೆಯಲ್ಲಿದ್ದ ಅಂದರೆ ಅಸ್ಪಶ್ಯಯೋಧರಿಗಿಂತ 56 ಪಟ್ಟು ಹೆಚ್ಚು ಇದ್ದ ಪೇಶ್ವಗಳ ರಣಹೇಡಿ ಸೈನ್ಯ ಗಂಡು ಸಿಂಹಗಳಂತಿದ್ದ ಅಸ್ಪೃಶ್ಯ ಸೈನಿಕರ ಮುಂದೆ ನಿಲ್ಲಲಾಗದೆ ಕೊನೆಗೆ ಜೀವ ಉಳಿಸಿಕೊಳ್ಳಲು ದಿಕ್ಕಾಪಾಲಾಗಿ ಓಡತೊಡಗಿದರು . ಅಂತಿಮವಾಗಿ ಈ ಯುದ್ದದಲ್ಲಿ ಅಸ್ಪಶ್ಯ ಸೈನಿಕರು ಪ್ರಚಂಡ ಜಯ ಗಳಿಸುತ್ತಾರೆ . ಸತತ 12 ಗಂಟೆಗಳ ಕಾಲ ನಡೆದ ಈ ಘೋರ ಕಾಳಗದಲ್ಲಿ 5000ಕ್ಕೂ ಹೆಚ್ಚು ಪೇಳ್ವೆ ಸೈನಿಕರು ಯುದ್ಧ ಭೂಮಿಯಲ್ಲಿ ಸಾವನ್ನಪ್ಪಿದರೆ ಕೇವಲ 22 ಜನ ಅಸ ಶ್ಯಯೋಧರು ವೀರಮರಣವನ್ನಪ್ಪಿದರು . ( ಈ ಯುದ್ಧದಲ್ಲಿ ಒಬ್ಬೊಬ್ಬ ಅಸ್ಪಶ್ಯಯೋಧ ಸರಾಸರಿ ಕನಿಷ್ಠ 100ಜನ ಪೇಳ್ವೆ ಸೈನಿಕರನ್ನು ಕೊಂದುಹಾಕಿರುತ್ತಾನೆ . ಈ ಯುದ್ಧದಲ್ಲಿ ಅಸ್ಪಶ್ಯಯೋಧರ ಪಡೆಯ ನಾಯಕನಾಗಿದ್ದ ಸಿದ್ದನಾಕ ‘ ನು ಸಹ ವೀರಮರಣವನ್ನಪ್ಪುತ್ತಾನೆ . ಅಂದು ರಾತ್ರಿ 10 ಗಂಟೆಗೆ ಸರಿಯಾಗಿ ಬ್ರಿಟೀಷರು ಯುದ್ಧ ನಡೆದ ಆ ಸ್ಥಳದಲ್ಲಿ ( ಪೇಶ್ವಗಳ ಸಾಮ್ರಾಜ್ಯದಲ್ಲಿ ಬ್ರಿಟೀಷ್ ಬಾವುಟವನ್ನು ಹಾರಿಸುತ್ತಾರೆ . ವಿಜಯದ ಬಳಿಕ ಕ್ಯಾಪ್ಟನ್ ಸ್ಟಂಡನ್ ಗೆ ರೀತಿ ಹೇಳಿದನು . ನಿಮ್ಮ ಕೆಚ್ಚೆದೆಯ ಹೋರಾಟವು ನಾವು ಇಂಡಿಯಾದಲ್ಲಿ ಉಳಿಯಲು ಅಧಿಕಾರವನ್ನು ವಿಸ್ತರಿಸಲು ತುಂಬಾ ಸಹಾಯಕವಾಗಿದೆ ಬ್ರಿಟಿಷ್ ಸತ್ಕಾರವು ನಿಮಗೆ ಎಂದೂ ಮರೆಯಲಾಗದ ಕಾಣಿಕೆ ಬಹುಮಾನವನ್ನು ಉಡುಗೊರೆಯಾಗಿ ಮತ್ತು ಮಡದಿ ಮಹಾಯೋಧರ ವಿಜಯ ಸ್ತಂಭವನ್ನು ಸ್ಥಾಪಿಸುವುದರ ಮೂಲಕ ಗೌರವವನ್ನು ಸಲ್ಲಿಸುತ್ತದೆ . ಹಾಗೆಯೇ ನಿಮಗೆ ನಮ್ಮ ಬ್ರಿಟಿಷ್ ಸೈನ್ಯದಲ್ಲಿ ವಿಶೇಷ ಸ್ಥಾನವನ್ನು ಕಲ್ಪಿಸಿ ನಿಮ್ಮ ಕುಟುಂಬದವರಿಗೆ ಸಕಲ ಸೌಲಭ್ಯವನ್ನು ಒದಗಿಸುವ ಏರ್ಪಾಡು ಮಾಡುತ್ತದೆ . ( ಮಹಾರ್ ಸೈನಿಕರು ಸಂತೋಷದಿಂದ ‘ ಬ್ರಿಟೀಷ್ ಸತ್ಕಾರಕ್ಕೆ ಜಯವಾಗಲಿ ಮಹಾರ್ ಸೈನ್ಯ ಚಿರಾಯು ” ಎಂದು ಘೋಷಣೆ ಕೂಗಿದರು . ) ರಣರಂಗದಲ್ಲಿ ಬೃಹತ್ ಸಂಖ್ಯೆಯಲ್ಲಿದ್ದ ಪೇಶ್ವ ಸೈನಿಕರ ಜೊತೆ ವೀರಾವೇಶದಿಂದ ಹೋರಾಡಿ ಜಯ ತಂದುಕೊಟ್ಟು ಹುತಾತ್ಮರಾದ 22 ಅಸ್ಪಶ್ಯಯೋಧರ ನೆನಪಿಗಾಗಿ ಬ್ರಿಟೀಷರು 1921ರ ಮಾರ್ಚ್ 21ರಂದು ಯುದ್ಧ ನಡೆದ ಸ್ಥಳದಲ್ಲಿ ( ಕೋರೆಗಾಂವ್‌ನಲ್ಲಿ ) 65ಅಡಿ ಎತ್ತರದ ಭವ್ಯ ‘ ವಿಜಯ ಸ್ತಂಭ ‘ ವನ್ನು ನಿರ್ಮಿಸಿ , ಆ ಸ್ಥಂಬದ ಮೇಲೆ 22 ಹುತಾತ್ಮ ಯೋಧರ ಹೆಸರುಗಳನ್ನು ಕೆತ್ತಿಸಿದರು . ಆ ಭವ್ಯ ವಿಜಯ ಸಂಬಕ್ಕೆ ಅಡಿಗಲ್ಲು ಹಾಕುವ ಸಂದರ್ಭದಲ್ಲಿ ಬ್ರಿಟೀಷರು 22 ಸುತ್ತು ಕುಶಾಲ ತೋಪುಗಳನ್ನು ಹಾರಿಸುವ ಮೂಲಕ ಹುತಾತ್ಮರಿಗೆ ರಾಜ ಮರ್ಯಾದೆಯ ಶ್ರದ್ದಾಂಜಲಿ ಸಲ್ಲಿಸಿದ್ದರು . ಈ ವಿಜಯ ಸಂಬದ ಮೇಲೆ ಬ್ರಿಟಿಷರು “ One of the Proudest truimphs of the British Army in the East ” ( ಬ್ರಿಟೀಷ್ ಯೋಧರಿಗೆ ಭಾರತದ ಪೂರ್ವಭಾಗದಲ್ಲಿ ಸಿಕ್ಕಿದ ಹೆಮ್ಮೆಯ ವಿಜಯವಾಗಿದೆ ) ಎಂದೂ ಸಹ ಕೆತ್ತಿಸಿದರು . ಈ ವಿಜಯದ ನಂತರ ಬ್ರಿಟೀಷ್ ಬೋರ್ಡ್ ಆಫ್ ಕಂಟ್ರೋಲ್‌ನ ಅಧ್ಯಕ್ಷ ಜಾರ್ಜ್ ಕ್ಯಾನಿಂಗ್
ಈ ವಿಜಯದ ಬಗ್ಗೆ ಅಚ್ಚರಿ ವ್ಯಕ್ತ ಪಡಿಸುತ್ತಾ “ ಸಣ್ಣ ಸಂಖ್ಯೆಯ ಸೈನ್ಯವು ಒಂದು ಬಲಾಢ ಸಂಖ್ಯೆಯ ಸೈನ್ಯವನ್ನು ಮಣ್ಣು ಮುಕ್ಕಿಸಿದ ಉದಾಹರಣೆ ಚಿಕ್ಕ ಸಂಖ್ಯೆ ಹೊಂದಿರುವ ಎಲ್ಲಾ ಸೈನಿಕ ಬೆಟಾಲಿಯನ್‌ಗಳಿಗೂ ಅನುಕರಣೀಯವಾಗಿದೆ ” , ಎಂದು ಹೇಳಿದರು .

ಅದೇ ರೀತಿ ಜನರಲ್ ಸ್ಮಿತ್ ಕೂಡ ಈ ಗೆಲುವನ್ನು ಉತ್ಸಾಹಪೂರ್ವಕವಾಗಿ ಅಭಿನಂದಿಸಿ “ ಇಂಡಿಯಾದ ಬ್ರಿಟಿಷ್ ಸೇನಾ ಇತಿಹಾಸದಲ್ಲಿ ಕೋರೆಗಾಂವ್ ಯುದ್ಧದ ವಿಜಯವೆಂದರೆ ಶೌರ್ಯ ಮತ್ತು ಪರಾಕ್ರಮದ ಯಶೋಗಾಥೆಯೇ ಆಗಿದೆ ” ಎಂದು ಉದ್ದಾರವೆತ್ತಿದ್ದಾನೆ . ಈ ಯುದ್ದದ ಇತಿಹಾಸವನ್ನು ಬಗೆದು ಹೊರತೆಗೆದ ಡಾ . ಅಂಬೇಡ್ಕರ್ 1957ರಲ್ಲಿ ನಡೆದ ‘ ಸಿಪಾಯಿ ದಂಗೆ ‘ ಗಿಂತ ಸುಮಾರು 40 ವರ್ಷಗಳ ಹಿಂದೆಯೇ ನಡೆದ ಕೋರೆಗಾಂವ್ ದಂಗೆ ‘ ಯ ಬಗ್ಗೆ ಭಾರತದ ಮನುವಾದಿ ಲೇಖಕರು ಬೇಕೆಂತಲೇ ಬೆಳಕು ಚೆಲ್ಲಿರಲಿಲ್ಲ . ಈ ಯುದ್ಧದ ಇತಿಹಾಸವನ್ನು ಹೂತುಹಾಕಿದ್ದರು . ಹುತಾತ್ಮ ಯೋಧರ ನೆನಪಿಗಾಗಿ ಕೋರೆಗಾಂವ್‌ನಲ್ಲಿ ಆಲೀಷರು ನಿರ್ಮಿಸಿದ್ದ ‘ ವಿಜಯ ಸ್ಥಂಬ ‘ ವು ಯಾರ ಕಣ್ಣಿಗೂ ಬೀಳದ ರೀತಿಯಲ್ಲಿ ಆ ಸ್ಟಂಬದ ಸುತ್ತ ‘ ಗಳು ಬೆಳೆದುಕೊಂಡು ಅನಾಥವಾಗಿತ್ತು . ಡಾ . ಅಂಬೇಡ್ಕರ್‌ರವರು 1922ರಲ್ಲಿ ಬ್ರಿಟನ್‌ನಲ್ಲಿ
‘ ಬಾರ್ – ಅತ್ – ಲಾ ‘ ವ್ಯಾಸಂಗ ಮಾಡುತ್ತಿದ್ದ ಸಮಯದಲ್ಲಿ ಭಾರತದಲ್ಲಿ ಬ್ರಿಟೀಷರ ಆಳ್ವಿಕೆಯಲ್ಲಿ ನಡೆದ ಪ್ರಮುಖ ಘಟನಾವಳಿಗಳ ಬಗ್ಗೆ ಬ್ರಿಟಿಷ್ ಮ್ಯೂಸಿಯಂ ಲೈಬ್ರರಿಯಲ್ಲಿ ಇಟ್ಟಿದ್ದ ದಾಖಲೆಗಳನ್ನು ಅಧ್ಯಯನ ನಡೆಸುತ್ತಿದ್ದ ಸಂದರ್ಭದಲ್ಲಿ 1818ರಂದು ನಡೆದ ಕೋರೆಗಾಂವ್ ಯುದ್ದದ ಬಗ್ಗೆ ಪ್ರಥಮವಾಗಿ ಮಾಹಿತಿ ಸಿಕ್ಕಿತು . ಈ ಮಾಹಿತಿಯ ಆಧಾರದ ಮೇಲೆ ಕೋರೆಗಾಂವ್ ಯುದ್ದದ ಬಗ್ಗೆ ಸಂಪೂರ್ಣವಾಗಿ ಅಧ್ಯಯನ ನಡೆಸಲು ಪ್ರಾರಂಭಿಸಿದರು . ಕೊನೆಗೆ ಈ ಯುದ್ಧದ ಬಗ್ಗೆ ಸಂಪೂರ್ಣ ಮಾಹಿತಿಯನು ಕಲೆ ಹಾಕಿದರು , ನಂತರ ಮಹಾರಾಷ್ಟ್ರದ ಪೂನಾ ನಗರದಿಂದ 15 ಕಿ . ಮೀ . ದೂರದಲ್ಲಿರುವ ಕೋರೆಗಾಂವ್‌ಗೆ ( ಭೀಮಾನದಿ ತೀರದಲ್ಲಿದೆ ) ತೆರಳಿ ‘ ವಿಜಯಸ್ಥಂಬ ‘ ವನ್ನು ಪತ್ತೆ ಹಚ್ಚಿ ಆ ಸ್ಥಳವನ್ನು ಸ್ವಚ್ಛಗೊಳಿಸಿದರು . ಕೊನೆಗೆ ಯುದ್ಧ ನಡೆದು 109 ವರ್ಷಗಳ ನಂತರ ಅಂದರೆ 1927ರ ಜನವರಿ 1ನೇ ತಾರೀಖಿನಂದು ಡಾ . ಅಂಬೇಡ್ಕರ್‌ರವರು ತಮ್ಮ ಸಾವಿರಾರು ಅನುಯಾಯಿಗಳೊಂದಿಗೆ ಪ್ರಥಮ ಬಾರಿಗೆ ‘ ವಿಜಯ ಸ್ಟಂಬ ‘ ಕ್ಕೆ ದೀರ್ಘದಂಡ ನಮಸ್ಕಾರ ಮಾಡಿ ಶ್ರದ್ದಾಂಜಲಿ ಸಲ್ಲಿಸಿದರು . ಡಾ . ಅಂಬೇಡ್ಕರ್‌ರವರು ಪ್ರಥಮ ಬಾರಿಗೆ ( 1927ರ ಜನವರಿ 1 ) ಕೋರೆಗಾಂವ್‌ನಲ್ಲಿ ‘ ವಿಜಯ ಸ್ಥಂಬ ‘ ಕ್ಕೆ ಗೌರವ ವಂದನೆ ಸಲ್ಲಿಸಿದ ನಂತರ ನಡೆದ ಸಭೆಯಲ್ಲಿ ಮಾತನ್ನಾಡುತ್ತಾ ಈ ರೀತಿ ಹೇಳಿದರು . ಅಂದು ಬ್ರಿಟಿಷರ ಪರವಾಗಿ ಅಸ್ಪಶ್ಯಯೋಧರು ಯುದ್ಧ ಮಾಡಿದ್ದು ಅಭಿಮಾನ ಪಡುವ ಸಂಗತಿಯಲ್ಲದಿದ್ದರೂ , ಅಸ್ಪಶ್ಯಯೋಧರು ಬ್ರಿಟಿಷರ ಪರ ಯಾಕೆ ಹೋಗಬೇಕಾಯಿತು ಎಂಬ ಪ್ರಶ್ನೆ ಎಲ್ಲರ ಮನದಲ್ಲಿ ಮೂಡುವುದು ಸಹಜವೇ ಆಗಿದೆ . ಅಸ್ಪಶ್ಯರು ಮತ್ತೇನು ಮಾಡಲು ಸಾಧ್ಯವಿತ್ತು ? ಹಿಂದೂಗಳ ದಬ್ಬಾಳಿಕೆಯನ್ನು ಸುಮ್ಮನೆ ಸಹಿಸಿಕೊಂಡು ಜೀವನ ನಡೆಸಬೇಕಾಗಿತ್ತೆ ? ಹಿಂದೂಗಳು ಅವರನ್ನು ಕೀಳು ಎಂದು ಪರಿಗಣಿಸಿ ನಾಯಿ – ನರಿಗಳಿಗಿಂತಲೂ ಕೀಳಾಗಿ ಕಂಡಾಗ , ಇನ್ನಿಲ್ಲದಂತೆ ದಬ್ಬಾಳಿಕೆ ನಡೆಸಿದಾಗ , ಅಪಮಾನಿಸಿದಾಗ ಎಲ್ಲವನ್ನೂ ಸಹಿಸಿಕೊಂಡು ಎಷ್ಟು ದಿನ ಬದುಕಬೇಕಾಗಿತ್ತು ? ಸ್ವಾಭಿಮಾನದ ನೆಲೆಯಲ್ಲಿ ಮತ್ತು ಹೊಟ್ಟೆಗೆ ಅನ್ನ ದೊರಕಿಸಿಕೊಳ್ಳಲು ಅವರು ಅನಿವಾರ್ಯವಾಗಿ ಬ್ರಿಟೀಷರ ಪರವಾಗಿ ಯುದ್ದ ಮಾಡಿದರೆಂಬುದನ್ನು ಪ್ರತಿಯೊಬ್ಬರೂ ಲಕ್ಷ್ಮದಲ್ಲಿಡಬೇಕು . – ಗತಿಸಿದ ಕಾಲವೊಂದರಲ್ಲಿ ನಡೆದ ಈ ಘಟನೆಯಲ್ಲಿ ಅಸ್ಪಶ್ಯರು ಅನುಭವಿಸಿದ ಸೋಲು ಗೆಲುವಿನ ನಡುವೆ ಇಂಡಿಯಾದ ಸಾಮಾಜಿಕ ಬದುಕಿನ ಸತ್ಯಗಳನ್ನು ನೀವೇ ನೋಡಿದಿರ . ಇಂತಹ ಅದೆಷ್ಟೋ ಘಟನೆಗಳು ನಡೆದು ಈ ದೇಶದಲ್ಲಿ ಅಸ್ಪಶ್ಯರ ಕೌಶಲ್ಯ ಸಾಹಸ , ಮಾನವೀಯ ಮೌಲ್ಯಗಳು ಮಣ್ಣಲ್ಲಿ ಮುಚ್ಚಿ ಹೋಗಿವೆ.

ಅವುಗಳೆಲ್ಲವನೂ ನಾನು ಬಗೆದು ಹೊರತೆಗೆದೇ ತೀರುತ್ತೇನೆ . ( ಈ ಯುದ್ದವನ್ನಾಧರಿಸಿ ಶ್ರೀ ಅರುಣ್ ಶೌರಿಯವರು ತಮ್ಮ ‘ ವರ್ಷಿಪಿಂಗ್ ಫಾಲ್ಸ್ ಗಾಡ್ ಎಂಬ ಪುಸ್ತಕದಲ್ಲಿ “ ಅಸ್ಪ ಶ್ಯರು ಬ್ರಿಟೀಷರ ಪರವಾಗಿ ಹೋರಾಡಿ ಬ್ರಿಟಿಷರಿಗೆ ಗೆಲುವನ್ನು ಕೊಟ್ಟಿದ್ದಾರೆ , ಆ ಮೂಲಕ ಅವರು ಭಾರತದ ವಿರುದ್ದವೇ ಹೋರಾಡಿದಂತಾಗಿದೆ ” ಎಂದು ಬರೆದಿದ್ದಾರೆ.ಒಂದೆಡೆ ಅಸ್ಪ್ರಶ್ಯರು ಬ್ರಿಟೀಷರ ಪರ ಹೋರಾಡಲು ಕಾರಣಗಳೇನು ಎಂದು ಗೊತ್ತಿದ್ದರೂ ಸಹ ಆ ಪುಸ್ತಕದಲ್ಲಿ ಬರೆದಿಲ್ಲ . ) ಆ ಸಭೆಯಲ್ಲಿ ಡಾ . ಅಂಬೇಡ್ಕರ್‌ರವರು ಮುಂದುವರಿದು ಮಾತನಾಡುತ್ತಾ ಈ ರೀತಿ ಹೇಳಿದರು . “ ಯಾವ ಅಸ್ಪಶ್ಯ ಯೋಧರು ಹಲವಾರು ಯುದ್ಧಗಳಲ್ಲಿ ತಮ್ಮಗಳ ಪರಾಕ್ರಮದಿಂದ ಬ್ರಿಟೀಷರಿಗೆ ವಿಜಯ ತಂದುಕೊಟ್ಟರೋ , ಇಂದು ಅಂತಹ ವೀರತನವನ್ನೇ ಹೊಂದಿರುವ ಅಸ್ಪಶ್ಯ ಯುವಕರನ್ನು ಸೇವೆಗೆ ಸೇರಿಸಿಕೊಳ್ಳಲು ಬ್ರಿಟೀಷ್ ಸರ್ಕಾರ ನಿರ್ಬಂಧ ಹೇರಿದ್ದು ನಂಬಿಕೆ ದ್ರೋಹವೇ ಆಗಿದೆ . ಅಸ್ಪಶ್ಯ ಯುವಕರು ಸೇನೆ ಸೇರುವುದನ್ನು ನಿಷೇಧಿಸಿರುವ ಬ್ರಿಟೀಷ್ ಸರ್ಕಾರ ಅದನ್ನು ತಕ್ಷಣವೇ ಹಿಂಪಡೆದು ಅಸ್ಪಶ್ಯ ಯುವಕರು ಸೇವೆ ಸೇರಲು ಮುಕ್ತ ಅವಕಾಶ ಕಲ್ಪಿಸಿಕೊಡಬೇಕು . ಒಂದು ವೇಳೆ ಬ್ರಿಟೀಷ್ ಸರ್ಕಾರದ ವಿರುದ್ದ ಉಗ್ರ ಚಳುವಳಿಯನ್ನು ಮಾಡಬೇಕಾಗುತ್ತದೆ . ” ( 1892ರಿಂದ ಬ್ರಿಟೀಷ್ ಸರ್ಕಾರವು ಭಾರತದಲ್ಲಿ ಅಸ್ಪಶ್ಯರು ಸೇನೆ ಸೇರುವುದನ್ನು ಸಂಪೂರ್ಣವಾಗಿ ನಿಷೇಧಿಸಿದ್ದರು .

ಡಾ . ಅಂಬೇಡ್ಕರ್‌ರವರ ಸತತ ಹೋರಾಟದ ಫಲವಾಗಿ 1941ರಲ್ಲಿ ಈ ನಿಷೇಧವನ್ನು ತೆಗೆದುಹಾಕಲಾಯಿತು . ) 1927ರಿಂದ ಪ್ರಾರಂಭಿಸಿ ತಾವು ಬದುಕಿರುವವರೆಗೂ ಬಾಬಾ ಸಾಹೇಬ್ ಅಂಬೇಡ್ಕರ್‌ರವರು ಪ್ರತಿವರ್ಷ ಜನವರಿ 1ನೇ ತಾರೀಖಿನಂದು ತಮ್ಮ ಕುಟುಂಬ ಹಾಗೂ ತನ್ನ ಸಾವಿರಾರು ಅನುಯಾಯಿಗಳೊಂದಿಗೆ ಆ ಸ್ಥಳಕ್ಕೆ ಭೇಟಿ ನೀಡಿ ‘ ಹುತಾತ್ಮ ಯೋಧರಿಗೆ ಶ್ರದ್ದಾಂಜಲಿ ಸಲ್ಲಿಸುತ್ತಿದ್ದರು . ಈಗ ಪ್ರತಿವರ್ಷ ಜನವರಿ 1ನೇ ತಾರೀಖಿನಂದು ಭಾರತದ ಮೂಲೆ ಮೂಲೆಗಳಿಂದ ನಿವೃತ್ತಯೋಧರುಗಳು ಸೇರಿದಂತೆ ಲಕ್ಷಾಂತರ ಜನರು ಕೋರೆಗಾಂವ್‌ಗೆ ಭೇಟಿ ನೀಡಿ ‘ ವಿಜಯ ಸ್ಟಂಬ ‘ ಕ್ಕೆ ನಮಿಸಿ ಹುತಾತ್ಮ ಅಸ್ಪಶ್ಯ ಯೋಧರಿಗೆ ಶ್ರದ್ದಾಂಜಲಿ ಸಲ್ಲಿಸುತ್ತಾರೆ . ವರ್ಷದಿಂದ ವರ್ಷಕ್ಕೆ ಅಲ್ಲಿಗೆ ತೆರಳುವ ಜನರ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಜನವರಿ 1ನೇ ತಾರೀಖಿನಂದು ನಡೆಯುವ ಸ್ಥತಿ ದಿನ ಕಾರ್ಯಕ್ರಮವು ಸುವ್ಯವಸ್ಥಿತವಾಗಿ ನಡೆಯಲೆಂದು ಅದರ ಉಸ್ತುವಾರಿಗಾಗಿ ಒಂದು ಕಾರ್ಯಕಾರಿಣಿ ಮಂಡಳಿಯನ್ನು ಸ್ಥಾಪಿಸಲಾಗಿದೆ . “ ನನ್ನ ಜನರಿಗೆ ಆಯುಧ ಹಿಡಿಯುವ ಅಧಿಕಾರ ನೀಡಿದ್ದರೆ ಈ ದೇಶ ಎಂದೂ ತನ್ನ ಸ್ವಾತಂತ್ರ್ಯವನ್ನು ಕಳೆದುಕೊಳ್ಳುತ್ತಿರಲಿಲ್ಲ ಹಾಗೂ ನನ್ನ ಸಾಮಾಜಿಕ ತತ್ವವು ಮೂರು ಪದಗಳಲ್ಲಿ ಅಡಕವಾಗಿದೆ . ಅವುಗಳೆಂದರೆ ; ಸ್ವಾತಂತ್ರ್ಯ , ಸಮಾನತೆ ಮತ್ತು ಭ್ರಾತೃತ್ವ ಎಂದಿದ್ದಾರೆ ಡಾ . ಬಿ . ಆರ್ . ಅಂಬೇಡ್ಕರ್.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಮಾದಕ ವಸ್ತುಗಳಿಗೆ ಕಡಿವಾಣ ; ಸ್ವಾಸ್ಥ್ಯ ಬದುಕಿಗೆ ಸೋಪಾನ

Published

on

  • ಡಾ.ಗೀತಾ ಬಸವರಾಜು, ಉಪನ್ಯಾಸಕರು, ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ

ಗತ್ತಿನಲ್ಲಿರುವ 84 ಕೋಟಿ ಜೀವರಾಶಿಗಳಲ್ಲಿ ಮಾನವ ಶ್ರೇಷ್ಟ ಪ್ರಾಣಿ. ಏಕೆಂದರೆ ಮಾತನಾಡುವ, ಆಲೋಚಿಸುವ, ಭಾವನೆಗಳನ್ನು ಅಭಿವ್ಯಕ್ತಿಸುವ ವಿಶೇಷವಾದ ಸಾಮರ್ಥ್ಯ ಅವನಿಗಿದೆ.

ಈ ಶಕ್ತಿಯ ಮೂಲಕ ತುಂಬಾ ಶ್ರೇಷ್ಟನಾಗಬೇಕಾದ ಮಾನವ ನಗರೀಕರಣ, ಕೈಗಾರಿಕೀಕರಣ, ಪಾಶ್ಚಾತ್ಯೀಕರಣದ ಪ್ರಭಾವದಿಂದ ಪ್ರೇರಿತನಾಗಿ ಮೂಲ ಸಂಸ್ಕೃತಿಯನ್ನು ಮರೆತು ಮೃಗೀಯ ವರ್ತನೆಗೆ ದಾಸನಾಗಿದ್ದಾನೆ. ಪ್ರಸ್ತುತ ವೈಜ್ಞಾನಿಕವಾಗಿ, ತಾಂತ್ರಿಕವಾಗಿ ಎಷ್ಟೇ ಮುಂದುವರೆದಿದ್ದರೂ, 20ನೇ ಶತಮಾನದಿಂದೀಚೆಗೆ ಜಗತ್ತನ್ನೇ ತಲ್ಲಣಗೊಳಿಸುವ ಸಾಮಾಜಿಕ ಪಿಡುಗುಗಳಾದ ಬಡತನ, ಭಿಕ್ಷಾಟನೆ, ನಿರುದ್ಯೋಗ, ವರದಕ್ಷಿಣೆ, ಅಪರಾಧ ಮಾದಕ ವಸ್ತು ವ್ಯಸನವು ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿವೆ.

ಈ ಸಮಸ್ಯೆಗಳನ್ನು ಪರಿಹರಿಸಬೇಕಾಧ ಯುವಜನತೆ ಇಂತಹ ದುಶ್ಚಟಗಳ ಸೆಲೆಯಲ್ಲಿ ಸಿಕ್ಕು ತಮ್ಮ ಅಮೂಲ್ಯ ಬದುಕನ್ನು ಹಾಳು ಮಾಡಿಕೊಳ್ಳುತ್ತಿರುವುದು ಆತಂಕಕಾರಿ.
ಯುವಶಕ್ತಿಯೇ ದೇಶದ ಶಕ್ತಿಯಾಗಿದ್ದು ಭವ್ಯಭಾರತ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಬೇಕಾದ ಯುವಜನತೆ ಮಾದಕ ವಸ್ತುಗಳ ದುಶ್ಚಟಕ್ಕೆ ಒಳಗಾಗಿ ಮಾನವೀಯ ಮೌಲ್ಯಗಳನ್ನು ಕಳೆದುಕೊಂಡು ಅಂಧಕಾರದಲ್ಲಿ ಜೀವನ ನಡೆಸುತ್ತ ಚಿಕ್ಕ ವಯಸ್ಸಿನಲ್ಲಿಯೇ ಮರಣ ಹೊಂದುತ್ತಿರುವುದು ಆಘಾತದ ವಿಷಯ.

ಜೋಸೆಫ್ ಜ್ಯೂಲಿಯನ್ ರವರ ಪ್ರಕಾರ ಮಾದಕ ವಸ್ತುಗಳೆಂದರೆ ಯಾವುದೇ ರಾಸಾಯನಿಕ ವಸ್ತುವಾಗಿದ್ದು ಅದರ ಸೇವನೆಯಿಂದ ದೈಹಿಕ ಕಾರ್ಯ, ಮನಸ್ಥಿತಿ, ಗ್ರಹಣ ಶಕ್ತಿಯ ಮೇಲೆ ಪರಿಣಾಮ ಬೀರುತ್ತದೆ. ಇದನ್ನು ಪದೇ ಪದೇ ಬಳಸುವುದರಿಂದ ವ್ಯಕ್ತಿ ಮಾದಕ ವಸ್ತು ವ್ಯಸನಿಯಾಗುತ್ತಾನೆ. ಮಾದಕ ವಸ್ತುವು ಮನಸ್ಸಿಗೆ ಗೊಂದಲವನ್ನು ತರುವ ಪದಾರ್ಥವಾಗಿದ್ದು ಅಮಲು ರೋಗವಾಗಿದೆ. ಭಾರತದ ನಗರ ಪ್ರದೇಶಗಳಲ್ಲಷ್ಟೇ ಅಲ್ಲದೆ ಹಳ್ಳಿ ಹಳ್ಳಿಗಳಲ್ಲಿಯೂ ಇದರ ಬಳಕೆ ಕಂಡುಬರುತ್ತದೆ. ಶ್ರೀಮಂತರು, ಮಧ್ಯಮ ವರ್ಗದವರು, ವಿದ್ಯಾವಂತರು, ಯುವಕರು, ಮಹಿಳೆಯರು ಎಂಬ ಭೇದವಿಲ್ಲದೆ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಆರೋಗ್ಯವನ್ನು ಕಳೆದುಕೊಳ್ಳುತ್ತಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯವರು ನಡೆಸಿದ ಸಮೀಕ್ಷೆಯ ಪ್ರಕಾರ ಭಾರತದ ವಿದ್ಯಾರ್ಥಿಗಳಲ್ಲಿ ಶೇ 10 ರಷ್ಟು ಒಂದಿಲ್ಲೊAದು ದುಶ್ಚಟಕ್ಕೆ ಒಳಗಾಗಿದ್ದು ಅದರಲ್ಲಿ 14 ರಿಂದ 22 ರ ವಯೋಮಾನದವರು ಹೆಚ್ಚಿದ್ದಾರೆ. ಸ್ವಾತಂತ್ಯç ಪೂರ್ವದಲ್ಲಿ ಶೇ 2 ರಷ್ಟಿದ್ದ ವ್ಯಸನಿಗಳು ಪ್ರಸ್ತುತ ಶೇ 30 ಕ್ಕಿಂತ ಹೆಚ್ಚಿದ್ದಾರೆ. ಜಗತ್ತಿನ ಸುಮಾರು 20 ಕೋಟಿಯಷ್ಟು ಇರುವ ಮಾದಕ ವ್ಯಸನಿಗಳಲ್ಲಿ ಭಾರತದಲ್ಲಿ ಶೇ 7.5 ಕೋಟಿ ವ್ಯಸನಿಗಳಿದ್ದಾರೆಂದು ಅಂದಾಜಿಸಲಾಗಿದೆ.

ನಶೆಯ ಅಲೆ ಸಾವಿನ ಬಲೆಯಾಗುತ್ತಿದ್ದರೂ ಕೂಡ ಈ ದೇಶದಲ್ಲಿ ಊಟವಿಲ್ಲದೆ ಸಾಯುವವರ ಸಂಖ್ಯೆಗಿAತಲೂ ಚಟವನ್ನು ಬೆಳೆಸಿಕೊಂಡು ಸಾಯುವವರು ಹೆಚ್ಚಾಗಿದ್ದಾರೆ.
ಮಾದಕ ವಸ್ತು ಬಳಸುವ ಆತಂಕದ ರಾಷ್ಟçಗಳಲ್ಲಿ ಭಾರತ ಪ್ರಥಮ ಸ್ಥಾನದಲ್ಲಿದೆ. ಅಮಲು ಪದಾರ್ಥಗಳಿಗೆ ಬಲಿಯಾಗುತ್ತಿರುವವರಲ್ಲಿ ವಿದ್ಯಾರ್ಥಿಗಳನ್ನೂ ಒಳಗೊಂಡAತೆ ಯುವಜನತೆ ಹೆಚ್ಚಾಗಿದ್ದು ಇದು ದೇಶದ ಭವಿಷ್ಯಕ್ಕೆ ಮಾರಕವಾಗಿದೆ.

ಡಾ.ಗೀತಾ ಬಸವರಾಜು, ಉಪನ್ಯಾಸಕರು,
ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ

ದುಶ್ಚಟಗಳ ಆರಂಭಕ್ಕೆ ಕಾರಣಗಳು

• ಕ್ಷಣಕಾಲ ಸುಖ ಅನಂತಕಾಲ ದು:ಖಕ್ಕೆ ಕಾರಣ ಎನ್ನುವುದು ಗೊತ್ತಿದ್ದೂ ಅಫೀಮು, ಹೆರಾಯಿನ್, ಬೀಡಿ, ಸಿಗರೇಟು, ಮದ್ಯಪಾನ ಮುಂತಾದ ದುಶ್ಚಟಗಳಿಗೆ ವಿದ್ಯಾವಂತ ಯುವಕರೇ ಬಲಿಯಾಗುತ್ತಿದ್ದಾರೆ.
• ಉಲ್ಲಾಸಕ್ಕಾಗಿ, ಫ್ಯಾಷನ್‌ಗಾಗಿ, ದುರ್ಬಲ ಮನಸ್ಸು, ಏಕಾಂಗಿತನ, ಒತ್ತಡ ನಿವಾರಣೆ ಮಾಡಿಕೊಳ್ಳಲು
• ನೋವು, ದು:ಖಕ್ಕೆ ಪರಿಹಾರವೆಂಬ ಭ್ರಮೆಗೆ ಒಳಗಾಗಿ ತನಗೆ ಅರಿವಿಲ್ಲದಂತೆ ದೊಡ್ಡ ಕಂದಕಕ್ಕೆ ಬಿದ್ದು ನರಳಾಡುವಂತ ಸಂದರ್ಭ ತಂದುಕೊಂಡು ಮಾದಕ ವಸ್ತುಗಳ ಮಾಯಾಜಾಲಕ್ಕೆ ಒಳಗಾಗುತ್ತಿದ್ದಾರೆ. ತೆರಣಿಯ ಹುಳು ತಾನು ಸುತ್ತಿದ ಬಲೆಯಲ್ಲಿ ತಾನೇ ಬಿದ್ದು ಹೊರಳಾಡುವಂತೆ ಅವರ ಪರಿಸ್ಥಿತಿಯಾಗಿದೆ.

ದುಶ್ಚಟಗಳಿಂದಾಗುವ ಪರಿಣಾಮಗಳು

• ದೇಹ ಮತ್ತು ಮನಸ್ಸಿನ ಸಮತೋಲನ ಕಳೆದುಕೊಳ್ಳುವುದು.
• ವ್ಯಕ್ತಿ ತನ್ನನ್ನು ದಹಿಸಿಕೊಳ್ಳುವುದರ ಜೊತೆಗೆ ಕುಟುಂಬದ ನೆಮ್ಮದಿಗಿ ಭಂಗ ತರುತ್ತಾನೆ.
• ಕುಟುಂಬ, ಸಮಾಜದಿಂದ ನಿಂದನೆಗೆ ಒಳಗಾಗುವನು.
• ಜ್ಞಾನೇಂದ್ರಿಯಗಳ ಮೇಲೆ ಹತೋಟಿ ಕಳೆದುಕೊಳ್ಳುವನು
• ಸಮಾಜಬಾಹಿರ ಚಟುವಟಿಕೆಗಳಾದ ಕಳ್ಳತನ, ಅತ್ಯಾಚಾರ, ಕೊಲೆ ಇಂತಹ ದುಷ್ಕೃತ್ಯಗಳನ್ನು ಮಾಡುವನು.
• ದಾಂಪತ್ಯದಲ್ಲಿ ವಿರಸವುಂಟಾಗಿ ವಿಚ್ಚೇದನಗಳಾಗುವ ಸಾಧ್ಯತೆ.
• ರಸ್ತೆ ಅಪಘಾತಗಳಲ್ಲಿ ಶೇ 1/3 ರಷ್ಟು ಮದ್ಯಪಾನ ಮತ್ತು ಮಾದಕ ವಸ್ತು ಸೇವನೆಯಿಂದಾಗುತ್ತದೆ. ಈ ಹಿನ್ನೆಲೆಯಲ್ಲಿ ಮಹಾತ್ಮ ಗಾಂಧೀಜಿಯವರು ಬೆಂಕಿ ದೇಹವನ್ನು ನಾಶ ಮಾಡಿದರೆ ಕುಡಿತ ದೇಹ ಮತ್ತು ಆತ್ಮಗಳೆರಡನ್ನೂ ನಾಶ ಮಾಡುತ್ತದೆ ಎಂದಿದ್ದಾರೆ.

ಪರಿಹಾರ ಕ್ರಮಗಳು

• ಮಾದಕ ವಸ್ತುಗಳ ಹಿಡಿತಕ್ಕೆ ಸಿಲುಕದೆ ಅದರಿಂದ ದೂರವಿರುವುದು.
• ಮಾದಕ ವಸ್ತು ಸೇವಿಸುವುದಿಲ್ಲವೆಂದು ಪ್ರತಿಜ್ಞೆ ಮಾಡುವುದು.
• ಸಹೋದ್ಯೋಗಿ, ಸ್ನೇಹಿತರಿಗೆ ತಿಳುವಳಿಕೆ ನೀಡುವುದು.
• 18 ವರ್ಷ ವಯಸ್ಸಿನವರೆಗೂ ಪೋಷಕರು ಮಕ್ಕಳ ಬಗ್ಗೆ ಗಮನ ನೀಡಿ ಮಾರ್ಗದರ್ಶನ ಮಾಡುವುದು.
• ಶಾಲೆ ಕಾಲೇಜುಗಳಲ್ಲಿ ಶಿಕ್ಷಕರು ಮಕ್ಳಳಲ್ಲಿ ಜೀವನ ಕೌಶಲಗಳನ್ನು ಬೆಳೆಸುವ ರಾಯಭಾರಿಗಳಾಗಿ ಕಾರ್ಯನಿರ್ವಹಿಸುವುದು.
• ವಿದ್ಯಾರ್ಥಿಗಳನ್ನು ಸಹಪಠ್ಯ ಚಟುವಟಿಕೆಗಳಲ್ಲಿ ತೊಡಗಿಸಿ ಆರೋಗ್ಯಕರವಾದ ಹವ್ಯಾಸಗಳನ್ನು ಬೆಳೆಸುವುದು.

ಭಾರತ ಸರ್ಕಾರವು 1951ರಲ್ಲಿ ಅಪಾಯಕಾರಿ ವಸ್ತುಗಳ ಕಾಯ್ದೆಯನ್ನು ಜಾರಿಗೆ ತಂದಿತು. ಈ ಕಾಯ್ದೆ ಮಾದಕ ವಸ್ತು ತಯಾರಿಕೆ, ಸಾಗಾಣಿಕೆ, ಮಾರಾಟ ಮತ್ತು ಬಳಕೆಯ ಮೇಲೆ ನಿರ್ಬಂಧ ಹೇರಿದೆ. 1985 ರಲ್ಲಿ ಡ್ರಗ್ಸ್ ಆಕ್ಟ್ ಜಾರಿಗೊಳಿಸಿದೆ. ಈ ಕಾಯ್ದೆ ಮಾದಕ ವಸ್ತುಗಳ ಕಳ್ಳ ವ್ಯಾಪಾರದಲ್ಲಿ ತೊಡಗಿದ ಅಪರಾಧಿಗಳಿಗೆ ಕನಿಷ್ಠ 10 ರಿಂದ 20 ವರ್ಷ ಕಠಿಣ ಶಿಕ್ಷೆ, 1 ರಿಂದ 2 ಲಕ್ಷದವರೆಗೆ ದಂಡ ಘೋಷಿಸಿದೆ.

ಡಿಸೆಂಬರ್-7 1987 ರ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾದಕ ವಸ್ತುಗಳ ದುರ್ಬಳಕೆಯನ್ನು ತಡೆಗಟ್ಟುವ ನಿಯಮಾವಳಿಗಳ ಅಂಗೀಕಾರವನ್ನು ಹಲವಾರು ರಾಷ್ಟçಗಳು ಒಪ್ಪಿಕೊಂಡು ವಿಶ್ವದಾದ್ಯಂತ ಮಾದಕ ವಸ್ತುಗಳ ದುರ್ಬಳಕೆ ನಿಯಂತ್ರಿಸುವ ತೀರ್ಮಾನವನ್ನು ಮಾಡಿದವು.

ಜೂನ್-26 ವಿಶ್ವಸಂಸ್ಥೆಯು ಮಾದಕ ವಸ್ತು ದುರ್ಬಳಕೆ ಮತ್ತು ಕಳ್ಳಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನವನ್ನು ಆಚರಿಸಿ ಈ ಸಮಸ್ಯೆಯ ನಿಯಂತ್ರಣ ಮತ್ತು ಪರಿಹಾರದ ಕುರಿತು ನಿವಾರಣೆಯಲ್ಲಿ ಸಮುದಾಯ, ಸಮವಯಸ್ಕರು, ಕುಟುಂಬ, ಸಂಘ ಸಂಸ್ಥೆಗಳವರು ಪ್ರಮುಖ ಪಾತ್ರ ವಹಿಸಬೇಕಾಗಿದೆಎಂದು ಮನವರಿಕೆ ಮಾಡಿತು. ಮಾದಕ ವಸ್ತು ದುರ್ಬಳಕೆ ಒಂದು ಮಾನಸಿಕ, ಸಾಮಾಜಿಕ ಸಮಸ್ಯೆಯಾಗಿದ್ದು ಇಡೀ ಸಮುದಾಯವೇ ಇದರ ನಿವಾರಣೋಪಾಯದಲ್ಲಿ ಪಾಲ್ಗೊಳ್ಳಬೇಕೆಂದು ಸೂಚಿಸಿತು.

ವ್ಯಕ್ತಿ ಒಮ್ಮೆ ಈ ಚಕ್ರವ್ಯೂಹದಲ್ಲಿ ಸಿಲುಕಿಕೊಂಡರೆ ಹೊರಬರುವುದು ಕಷ್ಟಸಾಧ್ಯ. ಆರೋಗ್ಯ ಜೀವನ ನಡೆಸಲು ಮಾದಕ ವಸ್ತುಗಳನ್ನು ತ್ಯಜಿಸಿ ಸುಂದರ ಜೀವನ ನಡೆಸಿ ಎಂಬ ಸಂದೇಶ ಸಾರುತ್ತ ನಾವೆಲ್ಲರೂ ಸಂಘಟಿತರಾಗಿ ಸಮಾಜದಲ್ಲಿ ಜಾಗೃತಿ ಮೂಡಿಸಿದಾಗ ದುಶ್ಚಟಮುಕ್ತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. (ಜೂನ್-26 ರಂದು ಅಂತರರಾಷ್ಟೀಯ ಮಾದಕ ವಸ್ತುಗಳ ದುರ್ಬಳಕೆ ವಿರೋಧಿ ದಿನ ತನ್ನಿಮಿತ್ತ ಈ ಲೇಖನ – ಡಾ. ಗೀತಾ ಬಸವರಾಜು,ಉಪನ್ಯಾಸಕರು,ಎ.ವಿ.ಕೆ ಮಹಿಳಾ ಕಾಲೇಜು,ದಾವಣಗೆರೆ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರೇಣುಕಾಸ್ವಾಮಿ ಕೊಲೆ ಮತ್ತು ಗಂಡುಹೆಣ್ಣಿನ ನಡುವಿನ ಸಂಬಂಧ

Published

on

  • ರಾಜೇಂದ್ರ ಬುರಡಿಕಟ್ಟಿ

ರೇಣುಕಾಸ್ವಾಮಿ ಕೊಲೆ ಕೇಸನ್ನು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚಿಸುವ ಅನೇಕ ಸ್ನೇಹಿತರು ಈ ಕೇಸಿನಲ್ಲಿ ಮೊದಲನೆಯ ಮತ್ತು ಎರಡನೆಯ ಆರೋಪಿಗಳೆಂದು ಹೆಸರಿಸಲ್ಪಟ್ಟ ದರ್ಶನ್ ಮತ್ತು ಪವಿತ್ರ ಗೌಡ ಅವರ ನಡುವಿನ ಸಂಬಂಧದ ಬಗ್ಗೆ ಅನಗತ್ಯವಾಗಿ ಚರ್ಚಿಸಿ ಪವಿತ್ರಗೌಡ ಅವರನ್ನು ‘ಇಟ್ಟುಕೊಂಡವಳು’ ಇತ್ಯದಿ ಪದಬಳಸಿ ಹಿಯ್ಯಾಳಿಸಿದ್ದಾರೆ.

ಒಂದು ಟಿವಿ ಚಾನೆಲ್ ನವರು ಅವರನ್ನು ‘ಸೆಕೆಂಡ್ ಹ್ಯಾಂಡ್ ಸುಂದರಿ’ ಎಂದೂ ಕರೆದದ್ದು ವರದಿಯಾಗಿದೆ. ಇದನ್ನು ಮಾಡುವ ಹಕ್ಕು ಯಾರಿಗೂ ಇಲ್ಲ. ನಮ್ಮ ವಿರೋಧ ಇರಬೇಕಾದದ್ದು ಅವರು ರೂಪಿಸಿದ್ದಾರೆ ಎನ್ನಲಾದ ಕೊಲೆಯ ಕೇಸಿನ ಬಗ್ಗೆಯೇ ಹೊರತು ಅವರಿಬ್ಬರ ನಡುವಿನ ವೈಯಕ್ತಿಕ ಸಂಬಂಧದ ಬಗ್ಗೆ ಅಲ್ಲ.

ಗಂಡು ಹೆಣ್ಣಿನ ನಡುವಿನ ಸಂಬಂಧ ಎಂಬುದು ಅತ್ಯಂತ ಸಹಜವಾದದ್ದು. ಯಾರಿಗೆ ಯಾರ ಮೇಲೆ ಯಾವಾಗ ಆಕರ್ಷಣೆ ಉಂಟಾಗಿ ಸಂಬಂಧಗಳು ಬೆಸೆದುಕೊಳ್ಳುತ್ತವೆ ಎಂಬುದನ್ನು ಹೇಳಲಾಗದು. ಇದಕ್ಕೆ ‘ನೈತಿಕ’ ‘ಅನೈತಿಕ’ ಎಂಬ ಹಣೆಪಟ್ಟಿ ಹಚ್ಚಿ ಗೌರವಿಸುವ ಅಥವಾ ಅವಹೇಳನ ಮಾಡುವ ಕ್ರಮ ಸರಿಯಾದದ್ದಲ್ಲ. ಪ್ರತಿಯೊಬ್ಬರಿಗೂ ಆಯ್ಕೆಗಳಿರುತ್ತವೆ. ತಮಗೆ ಬೇಕಾದ ಗಂಡನ್ನು ಅಥವಾ ಹೆಣ್ಣನ್ನು ಆಯ್ದುಕೊಳ್ಳುವ ಅವರೊಡನೆ ಲೈಂಗಿಕ ಸಂಬಂಧವನ್ನು ಇಟ್ಟುಕೊಳ್ಳುವ ಸ್ವಾತಂತ್ರ್ಯವಿದೆ. ಎಲ್ಲರಿಗೂ ಇದೆ. ಅದನ್ನು ಪ್ರಶ್ನಿಸುವ ಹಕ್ಕು ಇತರರಿಗೆ ಇಲ್ಲ. ಪರಸ್ಪರ ಒಪ್ಪಿತ ಲೈಂಗಿಕ ಸಂಬಂಧವು ದೇಶದ ಕಾನೂನಿನ ಪ್ರಕಾರವೂ ಅಪರಾಧವಲ್ಲ.

ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ತಂದುಕೊಟ್ಟ ಹಿರಿಯ ಸಾಹಿತಿ ಡಾ. ಶಿವರಾಮ ಕಾರಂತರು ತಮ್ಮ ಅನೇಕ ಕಾದಂಬರಿಗಳ ಮೂಲಕ ಇದಕ್ಕೆ ಸಂಬಂಧಿಸಿದಂತೆ ಒಂದು ತಾತ್ವಿಕತೆಯನ್ನು ನಮಗೆ ರೂಪಿಸಿಕೊಡುತ್ತಾರೆ. ಅದೆಂದರೆ ‘ಲೈಂಗಿಕ ಸುಖ ಎನ್ನುವುದು ಮನುಷ್ಯನ ಬದುಕು ಮನುಷ್ಯನಿಗೆ ನೀಡುವ ಅತ್ಯಂತ ಸುಖದ ಸಂಗತಿಗಳಲ್ಲಿ ಒಂದು. ಅದರಿಂದ ಯಾರೂ ವಂಚಿತರಾಗಬಾರದು. ಪರಸ್ಪರ ಒಪ್ಪಿಕೊಂಡ ಗಂಡು ಹೆಣ್ಣುಗಳ ನಡುವಿನ ಲೈಂಗಿಕ ಸಂಬಂಧದಲ್ಲಿ ಒಂದು ಚೆಲುವು ಇರುತ್ತದೆ. ಇಂತಹ ಒಂದು ಒಳ್ಳೆಯ ಸಂಬಂಧಕ್ಕೆ ಮದುವೆ ಎಂಬುದು ಒಂದು ‘ಪೂರ್ವಾಗತ್ಯ’ವಾಗಬೇಕಿಲ್ಲ. ಗಂಡುಹೆಣ್ಣಿನ ನಡುವಿನ ಒಂದು ಒಳ್ಳೆಯ ಸಂಬಂಧವು ವಿವಾಹದ ಒಳಗೂ ಇರಬಹುದು; ಹೊರಗೂ ಇರಬಹುದು. ಅದೇ ರೀತಿ ಒಂದು ಕೆಟ್ಟ ಸಂಬಂಧವು ವಿವಾಹದ ಒಳಗೂ ಇರಬಹುದು ಹೊರಗೂ ಇರಬಹುದು. ವಿವಾಹದ ಚೌಕಟ್ಟಿನ ಒಳಗಿನ ಒಂದು ಕೆಟ್ಟ ಸಂಬಂಧಕ್ಕಿಂತ ವಿವಾಹದ ಚೌಕಟ್ಟಿನ ಹೊರಗಿನ ಒಳ್ಳೆಯ ಸಂಬಂಧ ಬೆಲೆಯುಳ್ಳದ್ದು.

ಹೀಗಾಗಿ ಯಾರೊಡನೆ ಎಂತಹ ಸಂಬಂಧ ಇಟ್ಟುಕೊಳ್ಳಬೇಕು ಎಂಬುದು ಅವರವರ ವೈಯಕ್ತಿಕ ವಿಚಾರ. ಅದರಲ್ಲಿ ಇತರರು ತಲೆಹಾಕುವುದು ಅವಿವೇಕತನ. ‘ಮದುವೆ ಎಂಬುದು ಏಳೇಳು ಜನ್ಮಗಳ ಸಂಬಂಧ’ ಏನೇ ಆದರೂ ಅದರ ಗೆರೆದಾಟಿ ಬೇರೆಯವರೊಡನೆ ಲೈಂಗಿಕ ಸಂಬಂಧ ಇಟ್ಟುಕೊಳ್ಳಬಾರದು’ ಎನ್ನುವವರು ಹಾಗೆಯೇ ಇರಬಹುದು. ಅದಕ್ಕೂ ಅವರಿಗೆ ಸ್ವಾತಂತ್ರ್ಯವಿದೆ. ಆದರೆ ಮದುವೆಯ ಚೌಕಟ್ಟಿನ ಹೊರಗಿನ ಸಂಬಂಧಗಳನ್ನು ಟೀಕಿಸುವ ಸ್ವಾತಂತ್ರ್ಯ ಹಕ್ಕು ಅವರಿಗಿಲ್ಲ. ಈ ವಿಷಯದಲ್ಲಿ ನಮ್ಮ ಆಲೋಚನಾ ಕ್ರಮ ಸಾಕಷ್ಟು ಬದಲಾಗಬೇಕಿದೆ. ಒಂದು ಗಂಡು ಮತ್ತು ಒಂದು ಹೆಣ್ಣಿನ ನಡುವಿನ ಸಂಬಂಧ ಎಂಥದ್ದೇ ಇರಲಿ ಅದು ಅವರಿಬ್ಬರಿಗೂ ಸಂತೋಷವನ್ನು ಕೊಡುತ್ತಿದ್ದರೆ ಅದನ್ನು ಕಂಡು ನಾವು ಸಂತೋಷ ಪಡಬೇಕೆ ಹೊರತು ಹೊಟ್ಟೆಕಿಚ್ಚು ಪಡಬಾರದು. ಅದನ್ನು ಗೌರವಿಸುವುದನ್ನು ನಾವು ಮೊದಲು ಕಲಿಯಬೇಕು. ಈ ಹಿನ್ನಲೆಯಲ್ಲಿ ನಮ್ಮ ವಿರೋಧವಿರಬೇಕಾದದ್ದು ಅವರಿಬ್ಬರು ಸೇರಿ ವ್ಯಕ್ತಿಯೊಬ್ಬರ ಕೊಲೆಮಾಡಿದ್ದಾರೆ ಎನ್ನಲಾದ ವಿಚಾರಕ್ಕೆ ಹೊರತು ಅವರ ನಡುವಿನ ವೈಯಕ್ತಿಕ ಸಂಬಂಧದ ಬಗ್ಗೆ ಅಲ್ಲ. ಇಂತದ್ದೇ ವಿಚಾರವನ್ನು ಬೇರೆ ರೀತಿಯಲ್ಲಿ ಹೇಳಿರುವ ಸುಹಾಸಿನಿ ಶ್ರೀ Suhasini Shree ಅವರ ಒಂದು ಪೋಸ್ಟನ್ನೂ ಆಸಕ್ತಿ ಇರುವವರು ಗಮನಿಸಬಹುದು.(ರಾಬು (23-06-2024)
(ರಾಜೇಂದ್ರ ಬುರಡಿಕಟ್ಟಿ ಅವರ ಫೇಸ್ ಬುಕ್ ಬರೆಹ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇವರೇ ನೋಡಿ ಟ್ವೀಟ್ಟರ್, ಪೇಸ್ಬುಕ್ ಮೀಮ್ಸ್ ಸ್ಟಾರ್ ಕ್ಸೇವಿಯರ್ ಉರ್ಫ್ ಓಂಪ್ರಕಾಶ್

Published

on

  • ~ ಸಿದ್ದು ಸತ್ಯಣ್ಣನವರ್

ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿದ್ದವರಿಗೆ ನೋಡಿದ ಕೂಡಲೇ ನಗು ಉಕ್ಕಿಸಿ, ಉಲ್ಲಸಿತಗೊಳಿಸುವ ಕ್ಸೇವಿಯರ್ ಮೀಮ್ಸ್ ಗಳ ಪರಿಚಯ ಇದ್ದೇ ಇರುತ್ತದೆ. ಕ್ಸೇವಿಯರ್ ಎಂದರೆ ಯಾರು? ಎಂದು ಹೆಸರೇಳಿದರೆ ಗೊತ್ತಾಗದಿರುವವರು ಅವರ ಫೋಟೊ ನೋಡಿದರೆ ಕೂಡಲೇ ಮುಖದ ಮೇಲೆ ನಗು ಮೂಡಿರುತ್ತದೆ.

ತುಂಟ ಕಾಮೆಂಟ್ ಹಾಗೂ ಹಾಸ್ಯದ ತಿರುಳುಗಳ ಪೋಸ್ಟ್ ಮೂಲಕ ಗಮನ ಸೆಳೆಯುವ‌ ಕ್ಸೇವಿಯರ್ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಹಾಸ್ಯಪ್ರಜ್ಞೆಯಿಂದ ಸಾಕಷ್ಟು ಪ್ರಸಿದ್ಧ. ಕ್ಸೇವಿಯರ್ ಹೆಸರಿನಿಂದ ಜನಪ್ರಿಯರಾದ ಇವರ ನಿಜವಾದ ಹೆಸರು ಓಂಪ್ರಕಾಶ್. ಅಸಂಖ್ಯ ಟ್ವೀಟರ್, ಫೇಸ್ಬುಕ್ ಪ್ರೋಫೈಲ್ ಗಳಲ್ಲಿ ಓಂಪ್ರಕಾಶ್ ಅವರ ಫೋಟೊ ಕ್ಸೇವಿಯರ್ ಎಂದೇ ಹಂಚಲ್ಪಟ್ಟಿದೆ.

ಮೀಮ್ಸ್ ಸ್ಟಾರ್ ಎಂದೇ ಪ್ರಖ್ಯಾತರಾಗಿರುವ ಇವರು ಮಧ್ಯವಯಸ್ಕ ಭಾರತೀಯರು ಹೆಚ್ಚಾಗಿ ಇಷ್ಟಪಡುವ ದಪ್ಪಮೀಸೆಯ ಫೋಟೊ ಹೊಂದಿರುವ ಪ್ರೋಫೈಲ್ ಮೂಲಕ ಟ್ವೀಟ್ಟರ್ ಮತ್ತು ಫೇಸ್ಬುಕ್ಕಿನ ಸಾಕಷ್ಟು ಟ್ರೋಲ್, ಮೀಮ್ ಪೇಜುಗಳಲ್ಲಿ ಕಾಣಸಿಗುತ್ತಾರೆ. ಕ್ಸೇವಿಯರ್ ಅಂಕಲ್, ಕ್ಸೇವಿಯರ್ ಮೀಮ್ಸ್, ಕ್ಸೇವಿಯರ್ ಪಾಂಡಾ, ಕ್ಸೇವಿಯರ್ ಮಿಮ್ ಬಾಯ್ ಹೀಗೆ ಇವರ ಹೆಸರಿನ ಮೂಲಕ ಸಾವಿರಾರು ಮೀಮ್ಸ್ ಮೇಕಿಂಗ್ ಪ್ರೋಫೈಲ್ ಗಳು ಲಕ್ಷಾಂತರ ಹಿಂಬಾಲಕರನ್ನು ಹೊಂದಿವೆ. ಮೀಮ್ಸ್ ಗಾಗಿಯೇ ವಿನ್ಯಾಸಗೊಳಿಸಲಾಗಿರುವ, ವಿದೇಶಗಳಲ್ಲೂ ಕೋಟ್ಯಂತರ ಜನರು ಹಿಂಬಾಲಿಸುವ 9gag ಎಂಬ ವೆಬ್ಸೈಟಿನಲ್ಲಿ ಇವರ ಸಾಕಷ್ಟು ಮೀಮ್ಸ್ ಗಳು ಜನಪ್ರಿಯವಾಗಿವೆ. ಫೇಸ್ಬುಕ್, ಟ್ವಿಟ್ಟರ್ ಬಳಸುವವರಿಗೆ ಕ್ಸೇವಿಯರ್ ಹಾಸ್ಯಪ್ರಜ್ಞೆ ಎಂಥದ್ದು ಎಂಬುದನ್ನ ಕೇಳಿದರೆ ನಗುವೇ ಅವರ ಉತ್ತರವಾಗಿರುತ್ತದೆ ಎಂಬುದಕ್ಕೆ ಸಹ ಚೆಂದದ ಮೀಮ್ ಒಂದಿದೆ.

ಕಾನ್ಪುರ ಐಐಟಿ ಸಿಬ್ಬಂದಿಯಾದ ಓಂಪ್ರಕಾಶ್ ಅವರು ಅಲ್ಲಿನ ಭೌತಶಾಸ್ತ್ರ ವಿಭಾಗದ ತಾಂತ್ರಿಕ ಮೇಲ್ವಿಚಾರಕ ಹುದ್ದೆಯಲ್ಲಿದ್ದಾರೆ. ಕ್ಸೇವಿಯರ್ ಎಂದು ಅವರು ಪ್ರಸಿದ್ಧರಾಗಲು ಕಾರಣ ಅವರ ಅಪರಿಮಿತ ಹಾಸ್ಯಪ್ರಜ್ಞೆಯ ‘ಪಕಾಲು ಪಾಪಿಟೋ’ ಎಂಬ ಕಾಲ್ಪನಿಕ ಗುಮಾಸ್ತನ ಪಾತ್ರವನ್ನು ಸೃಷ್ಟಿಸಿದ್ದಕ್ಕಾಗಿ. ಆ ಗುಮಾಸ್ತನ ಮೊದಲ ಟ್ವೀಟ್ ಟ್ವೀಟ್ಟರಿನಲ್ಲಿ ಹೆಚ್ಚುಕಡಿಮೆ 18 ಸಾವಿರ ರೀಟ್ವೀಟ್ ಆಗಿತ್ತು.

ಟ್ವೀಟ್ಟರ್ ನಿಯಮಗಳ ತಾಂತ್ರಿಕ ಕಾರಣಗಳಿಂದ ಸುಮಾರು ಲಕ್ಷ ಹಿಂಬಾಲಕರಿದ್ದ ಈ ಅಕೌಂಟ್ ಸ್ಥಗಿತಗೊಂಡಿತು. ನಂತರ ಕಾಮಿಕ್ ಮೀಮ್ ಗಳಿಂದ ಆರಂಭದಲ್ಲಿ ಪ್ರಸಿದ್ಧರಾಗಿದ್ದ ಓಂಪ್ರಕಾಶ್ ಅವರು ಕೊನೆಗೆ ಕ್ಸೇವಿಯರ್ ಹೆಸರಿನ ಮೂಲಕ ಮೀಮ್ ಪ್ರಿಯರಿಗೆ ಮನೆಮಾತಾದರು. ಓಂಪ್ರಕಾಶ್ ಅವರು ಫೇಸ್ಬುಕ್ ಮತ್ತು ಟ್ವಿಟ್ಟರ್ ನಲ್ಲಿ ಕ್ರಮವಾಗಿ 1.4 ಮಿಲಿಯನ್ ಹಾಗೂ 3 ಲಕ್ಷ ಹಿಂಬಾಲಕರನ್ನು ಹೊಂದಿದ್ದಾರೆ. ‘ಪಕಾಲು ಪಾಪಿಟೋ’ ಅಕೌಂಟ್ ತಾಂತ್ರಿಕವಾಗಿ ಸ್ಥಗಿತಗೊಂಡ ಕಾರಣ ಕ್ಸೇವಿಯರ್ ಎಂಬ ಹೆಸರಿನ ತಮಾಷೆಯ ಮೀಮ್ಸ್ ಮೂಲಕ ಇನ್ಸ್ಟಾಗ್ರಾಂ, ಫೇಸ್ಬುಕ್, ಟ್ವಿಟ್ಟರ್ ಎಲ್ಲ ಕಡೆಗಳಲ್ಲಿ ಕಾಣಿಸುತ್ತಾರೆ. ( ಸಿದ್ದು ಸತ್ಯಣ್ಣನವರ್ ಅವರ ಫೇಸ್ ಬುಕ್ ಪೇಜ್ ನಿಂದ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 hour ago

ಮಾದಕ ವಸ್ತುಗಳಿಗೆ ಕಡಿವಾಣ ; ಸ್ವಾಸ್ಥ್ಯ ಬದುಕಿಗೆ ಸೋಪಾನ

ಡಾ.ಗೀತಾ ಬಸವರಾಜು, ಉಪನ್ಯಾಸಕರು, ಎ.ವಿ.ಕೆ ಮಹಿಳಾ ಕಾಲೇಜು, ದಾವಣಗೆರೆ ಜಗತ್ತಿನಲ್ಲಿರುವ 84 ಕೋಟಿ ಜೀವರಾಶಿಗಳಲ್ಲಿ ಮಾನವ ಶ್ರೇಷ್ಟ ಪ್ರಾಣಿ. ಏಕೆಂದರೆ ಮಾತನಾಡುವ, ಆಲೋಚಿಸುವ, ಭಾವನೆಗಳನ್ನು ಅಭಿವ್ಯಕ್ತಿಸುವ ವಿಶೇಷವಾದ...

ದಿನದ ಸುದ್ದಿ3 hours ago

ನಿರುದ್ಯೋಗಿಗಳಿಗೆ ಸಿಹಿ ಸುದ್ದಿ

ಸುದ್ದಿದಿನ,ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂ. 29 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ....

ದಿನದ ಸುದ್ದಿ5 hours ago

ಟಿಇಟಿ ಪರೀಕ್ಷೆಗೆ ಸಕಲ ಸಿದ್ಧತೆ

ಸುದ್ದಿದಿನ,ದಾವಣಗೆರೆ:ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಟಿಇಟಿ ಜೂನ್ 30 ರಂದು ರಾಜ್ಯಾದ್ಯಂತ ನಡೆಯಲಿದ್ದು ದಾವಣಗೆರೆ ನಗರದ 19 ಕೇಂದ್ರಗಳಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ ತಿಳಿಸಿದರು....

ದಿನದ ಸುದ್ದಿ17 hours ago

ವಿದ್ಯಾರ್ಥಿನಿಲಯಗಳಿಗೆ ಬಾಡಿಗೆ ಕಟ್ಟಡಗಳು ಬೇಕಾಗಿದೆ ; ಸಂಪರ್ಕಿಸಿ

ಸುದ್ದಿದಿನ,ದಾವಣಗೆರೆ:ನಗರ ವ್ಯಾಪ್ತಿಯಲ್ಲಿ ಹೊಸದಾಗಿ ಮಂಜೂರಾಗಿರುವ 8 ಮೆಟ್ರಿಕ್ ನಂತರ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ನಗರದಲ್ಲಿ ವಿದ್ಯಾರ್ಥಿನಿಲಯಗಳನ್ನು ನಡೆಸಲು ಕನಿಷ್ಠ 900 ಚದರ ಮೀಟರ್ ವಿಸ್ತಿರ್ಣವುಳ್ಳ ಸುಸಜ್ಜಿತವಾದ...

ದಿನದ ಸುದ್ದಿ17 hours ago

ನೀಟ್ ಅಕ್ರಮ ಶಿಕ್ಷಣ ಕ್ಷೇತ್ರಕ್ಕೆ ಬಹುದೊಡ್ಡ ಕಳಂಕ : ಸಾಬೀರ್ ಜಯಸಿಂಹ

ಸುದ್ದಿದಿನ,ದಾವಣಗೆರೆ:ದೇಶದ ಅತ್ಯಂತ ಕಠಿಣಾತಿ ಕಠಿಣ ಪರೀಕ್ಷೆ ನೀಟ್​​​ನಲ್ಲೂ ಗೋಲ್​​ಮಾಲ್ ನಡೆದಿದೆ. ಬಳಿಕ ನೆಟ್​​​ಪರೀಕ್ಷೆಗೂ ಅಕ್ರಮದ ವಾಸನೆ ಬಡಿದಿದ್ದರಿಂದ ಪರೀಕ್ಷೆ ರದ್ದಾಗಿದೆ. ಪರೀಕ್ಷೆಗಳ ಅಕ್ರಮದ ವಿರುದ್ಧ ದೇಶಾದ್ಯಂತ ಆಕ್ರೋಶ...

ದಿನದ ಸುದ್ದಿ18 hours ago

ಹಿರಿಯ ನಾಗರಿಕರಿಗಿರುವ ಸರ್ಕಾರಿ ಸೌಲಭ್ಯಗಳೇನು..? ; ಮಾಹಿತಿಗೆ ಸಂಪರ್ಕಿಸಿ

ಸುದ್ದಿದಿನ,ದಾವಣಗೆರೆ:ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆಯ ವತಿಯಿಂದ ಹಾಗೂ ಇತರೆ ಇಲಾಖೆಗಳಿಂದ ಹಿರಿಯ ನಾಗರಿಕರಿಗೆ ದೊರೆಯುತ್ತಿರುವ ಸೌಲಭ್ಯಗಳ ಅರಿವು ಮೂಡಿಸುವ ಮತ್ತು ಸೌಲಭ್ಯಗಳನ್ನು ಪಡೆಯಲು ಸಹಾಯ ಮಾಡುವ...

ದಿನದ ಸುದ್ದಿ1 day ago

ಇನ್ನು ಜನನ-ಮರಣ ಪ್ರಮಾಣ ಪತ್ರ ಕೊಡುವ ಅಧಿಕಾರ ಗ್ರಾಮ ಪಂಚಾಯತಿಗೆ

ಸುದ್ದಿದಿನಡೆಸ್ಕ್:ರಾಜ್ಯದಲ್ಲಿ ಜನನ ಅಥವಾ ಮರಣ ನೋಂದಣಿ ಮಾಡಿ 30 ದಿನಗಳ ಒಳಗೆ ಪ್ರಮಾಣಪತ್ರ ವಿತರಿಸುವ ಅಧಿಕಾರವನ್ನು ಗ್ರಾಮ ಪಂಚಾಯಿತಿಗಳಿಗೆ ನೀಡಿ ಮುಖ್ಯ ನೋಂದಣಾಧಿಕಾರಿ ಸುತ್ತೊಲೆ ಹೊರಡಿಸಿದ್ದಾರೆ. ಇದು...

ದಿನದ ಸುದ್ದಿ1 day ago

ಅಂಗನವಾಡಿ ; ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭ : ಸಿಎಂ ಸೂಚನೆ

ಸುದ್ದಿದಿನಡೆಸ್ಕ್:ರಾಜ್ಯದ ಅಂಗನವಾಡಿಗಳಲ್ಲಿ, ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸುವ ಕುರಿತು ಅಧ್ಯಯನಕ್ಕೆ, ತ್ವರಿತವಾಗಿ ತಜ್ಞರ ಸಮಿತಿ ರಚಿಸಿ, ಎರಡು ತಿಂಗಳೊಳಗೆ ವರದಿ ಪಡೆಯುವಂತೆ, ಶಾಲಾ ಶಿಕ್ಷಣ ಖಾತೆ ಸಚಿವರಿಗೆ,...

ದಿನದ ಸುದ್ದಿ1 day ago

ಆರೋಗ್ಯ ಇಲಾಖೆ ನೇಮಕಾತಿ ; ಸಚಿವ ದಿನೇಶ್ ಗುಂಡೂರಾವ್ ರಿಂದ ಸಿಹಿ ಸುದ್ದಿ

ಸುದ್ದಿದಿನಡೆಸ್ಕ್:ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ವೈದ್ಯರು, ಸಿಬ್ಬಂದಿಗಳ ಕೊರತೆ ಇದ್ದು, ಹಂತ ಹಂತವಾಗಿ ವೈದ್ಯರ ನೇಮಕ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಡಿಕೇರಿಯಲ್ಲಿ ನಿನ್ನೆ ತಿಳಿಸಿದ್ದಾರೆ....

ದಿನದ ಸುದ್ದಿ1 day ago

ಜಿಎಸ್‌ಟಿ ಭಾರತೀಯರ ಜೀವನ ಸುಧಾರಿಸುವ ಸಾಧನ : ಪ್ರಧಾನಿ ಮೋದಿ

ಸುದ್ದಿದಿನಡೆಸ್ಕ್:ಸರಕು ಮತ್ತು ಸೇವಾ ತೆರಿಗೆ ಜಿಎಸ್‌ಟಿಗೆ ಏಳು ವರ್ಷ ತುಂಬಿದ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಜಿಎಸ್‌ಟಿ, 140 ಕೋಟಿ ಭಾರತೀಯರ ಜೀವನವನ್ನು ಸುಧಾರಿಸುವ...

Trending